Connect with us

FILM

ಖ್ಯಾತ ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ….

Published

on

ಚೆನ್ನೈ : ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಆಗಸ್ಟ್​ 5ರಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಕೆಲ ದಿನಗಳ ಹಿಂದೆ ಚೇತರಿಕೆ ಕಂಡಿದ್ದರು. ಆದರೆ ಇಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಅವರ ಹೆಲ್ತ್​ ಬುಲೆಟಿನ್​ ನಲ್ಲಿ ಅವರ ಸ್ಥಿತಿ ಕೊಂಚ ಬಿಗಡಾಯಿಸಿದೆ ಎಂದು ತಿಳಿಸಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಅವರ ಚಿಕಿತ್ಸೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ ಎಂದು ಆಸ್ಪತ್ರೆ ತಿಳಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.


ಎಸ್​ಪಿಬಿ ಅವರಿಗೆ ಆಗಸ್ಟ್ 5 ರಂದು ಕರೊನಾ ಸೋಂಕು ದೃಢವಾಗಿತ್ತು. ಅದೇ ದಿನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್​ಪಿಬಿ ಗುಣಮುಖರಾಗಿ ಬರಲೆಂದು ಚಿತ್ರರಂಗ ಸೇರಿದಂತೆ ಅನೇಕರು ಪ್ರಾರ್ಥಿಸಿದ್ದರು.

Click to comment

Leave a Reply

Your email address will not be published. Required fields are marked *

FILM

ಹಿರಿಯ ನಟ ನಿರ್ಮಾಪಕ…ಕಳ್ಳ ‘ಕುಳ್ಳ’ ಖ್ಯಾತಿಯ ದ್ವಾರಕೀಶ್ ಇನ್ನಿಲ್ಲ

Published

on

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೇರು ನಟನಾಗಿ ಗುರುತಿಸಿಕೊಂಡಿದ್ದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81 ವ) ರವರು ಎ.16ರಂದು ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಕನ್ನಡದಲ್ಲಿ ಸಾಲು ಸಾಲು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ನಟಿಸಿದ್ದ ಇವರು ವಿಷ್ಣುವರ್ದನ್ ಜೊತೆ ನಡಿಸಿದ್ದ ಕಳ್ಳ-ಕುಳ್ಳ ಸಿನೆಮಾದಲ್ಲಿ ಇವರಿಬ್ಬರ ಜೋಡಿ ಬಹಳಷ್ಟು ಸದ್ದು ಮಾಡಿತ್ತು.

ರಾತ್ರಿ ಭೇದಿ ಆರಂಭ ಆಗಿದ್ದರಿಂದ ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ಮಲಗಿದ್ದವರು ಮತ್ತೆ ಏಳಲೇ ಇಲ್ಲ.  ಅವರಿಗೆ ಹೃದಯಾಘಾತ ಆಗಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ದ್ವಾರಕೀಶ್ ಸಾವಿನ ಸುಳ್ಳು ಸುದ್ದಿ ಹರಡಿತ್ತು…!
ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಸಂತಾಪ ಸೂಚಿಸುತ್ತಿದ್ದಾರೆ. ಈ ಹಿಂದೆ ದ್ವಾರಕೀಶ್ ಮರಣ ಫೇಕ್ ಸುದ್ದಿ ಹರಿದಾಡಿತ್ತು. ಇದೇ ರೀತಿ ಈ ಬಾರಿಯೂ ಆಗಿರಬಹುದು ಎಂದು ಹಲವರು ಭಾವಿಸಿದ್ದರು. ಇದೀಗ ದ್ವಾರಕೀಶ್ ರವರ ಕುಟುಂಬದವರು ಅವರ ನಿಧನ ಸುದ್ದಿಯನ್ನು ಖಚಿತಪಡಿಸಿದ್ದಾರೆ.

READ MORE..; ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

ರಾಜ್‌ಕುಮಾರ್, ವಿಷ್ಣವರ್ಧನ್, ಶ್ರೀನಾಥ್ ಸೇರಿದಂತೆ ಹಲವು ದಿಗ್ಗಜರೊಂದಿಗೆ ಸ್ಕ್ರೀನ್ ಹಂಚಿಕೊಂಡಿದ್ದರು. ಇವರ ಮಂಕು ತಿಮ್ಮ ಸಿನೆಮಾ ಸುಪರ್ ಹಿಟ್ ಆಗಿತ್ತು. ನಟಿ ಮಂಜುಳಾ ಜೊತೆ ಹಲವು ಸಿನೆಮಾದಲ್ಲಿ ನಟಿಸಿದ್ದರು. ನಟನಾಗಿ ನಿರ್ದೇಶನಕ್ಕೂ ಇಳಿದಿದ್ದ ಇವರು ಹಲವು ಹಿಟ್ ಸಿನೆಮಾಗಳನ್ನು ನೀಡಿದ್ದಾರೆ. ಮಮತೆಯ ಬಂಧನ ಇವರ ಮೊದಲ ನಿರ್ಮಾಣದ ಚಿತ್ರವಾಗಿದ್ದು, ‘ವೀರ ಸಂಕಲ್ಪ’ ಅವರು ನಟಿಸಿರುವ ಕೊನೆಯ ಚಿತ್ರವಾಗಿದೆ.

 

Continue Reading

FILM

ಮೂಗುತಿ ಸುಂದರಿ ಮೇಲೆ ತೆಲುಗು ಹೀರೋ ಕಣ್ಣು…!

Published

on

ಮಂಗಳೂರು ( ಸ್ಯಾಂಡಲ್‌ವುಡ್‌ ) : ಸುಪರ್ ಹಿಟ್ ಕಾಂತಾರದ ಮೂಲಕ ಮೂಗುತಿ ಸುಂದರಿ ಅಂತ ಫೇಮಸ್ ಆಗಿದ್ದ ಸಪ್ತಮಿ ಗೌಡ ಮೇಲೆ ತೆಲುಗು ನಿರ್ಮಾಪಕರ ಕಣ್ಣು ಬಿದ್ದಿದೆ. ಹೀಗಾಗಿ ಸಪ್ತಮಿ ಗೌಡಗೆ ತೆಲುಗು ಸಿನೆಮಾದಲ್ಲಿ ಉತ್ತಮ ಅವಕಾಶ ನೀಡಿ ಕರೆಸಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕದ ಮೂಗುತಿ ಸುಂದರಿ ಸಪ್ತಮಿ ಗೌಡ ತೆಲುಗಿನ ‘ತಮ್ಮುಡು’ ಸಿನೆಮಾದಲ್ಲಿ ಹೀರೋ ನಿತಿನ್ ಜೊತೆ ನಟಿಸಲಿದ್ದಾರೆ.

ಕೆಲ ನಟಿಯರು ಇರೋ ಉದ್ಯಮದಲ್ಲಿ ಏನಾದರೂ ಸಾಧಿಸಿ ಬೇರೆ ಭಾಷೆಯತ್ತ ಮುಖ ಮಾಡ್ತಾರೆ. ಇನ್ನು ಕೆಲ ನಟಿಯರು ಏನಾದರೂ ಸಾಧಿಸಲೆಬೇಕು ಅಂತ ಪಕ್ಕದ ಮನೆಗಳತ್ತ ಮುಖ ಮಾಡ್ತಾರೆ. ಇದಕ್ಕೆ ಸಪ್ತಮಿಗೌಡ ಅತ್ಯುತ್ತಮ ಉದಾಹರಣೆ.ಹೌದು. ಕಾಂತಾರ ಮೂಲಕ ಭಾಷೆಯ ಭೇದ ಭಾವ ಇಲ್ಲದೇ, ಎಲ್ಲ ವರ್ಗದ ಜನರ ಹೃದಯವನ್ನ ಗೆದ್ದ ಸಪ್ತಮಿಗೌಡ ‘ಯುವ’ದಲ್ಲಿಯೂ ತಮ್ಮ ಛಾಪು ಮೂಡಿಸಿದರು. ಕಳೆದ ನಾಲ್ಕು ವರ್ಷದಲ್ಲಿ ಪಾಪ್‌ ಕಾರ್ನ್ ಮಂಕಿ ಟೈಗರ್, ಕಾಂತಾರ, ಯುವ ಹೀಗೆ ಮೂರು ಕನ್ನಡ ಸಿನಿಮಾಗಳನ್ನ ಮಾಡಿರುವ ಸಪ್ತಮಿ ಗೌಡ, ಇದೀಗ ತೆಲುಗು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. `ಜಯಂ’ ಸಿನಿಮಾ ಹೀರೊ ನಿತಿನ್‌ ಅವರ ಮುಂದಿನ ಚಿತ್ರ ʻತಮ್ಮುಡುʼದಲ್ಲಿ ಸಪ್ತಮಿ ಗೌಡ ಹೀರೊಯಿನ್.

ತಮ್ಮುಡು ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಲು ಸಪ್ತಮಿ ಗೌಡ ತೂಕ ಇಳಿಸಿಕೊಂಡಿದ್ದಾರೆ. ಸ್ಲಿಮ್ ಆಗಿದ್ದಾರೆ. ಇನ್ನೂ ರೇಸ್‌ ಕೋರ್ಸ್ ಮೈದಾನದಲ್ಲಿನ ಜಾಕಿಗಳಿಗೂ ಸೆಡ್ಡು ಹೊಡೆಯುವಂತೆ ಸಪ್ತಮಿ ಗೌಡ ಈ ಚಿತ್ರಕ್ಕೆ ಕುದುರೆ ಸವಾರಿಯನ್ನ ಕಲಿತಿದ್ದಾರೆ.

ಇನ್ನೂ ತಮ್ಮ ಮೊದಲ ತೆಲುಗು ಚಿತ್ರದಲ್ಲಿಯೇ ನಿತಿನ್ ಅವರಂತಹ ಪ್ರತಿಭಾವಂತ ನಟನ ಜೊತೆ ತೆರೆಹಂಚಿಕೊಳ್ಳುತ್ತಿರುವುದಕ್ಕೆ ಸಪ್ತಮಿಗೌಡ ಅವರಿಗೆ ಸಿಕ್ಕಾಪಟ್ಟೆ ಖುಷಿ ಇದೆ. ಸೋನೆ ಪೆ ಸುಹಾಗ ಅನ್ನುವಂತೆ ವಕೀಲ್ ಸಾಬ್ ಅಂತಹ ಚಿತ್ರವನ್ನ ನಿರ್ದೇಶಿಸಿರುವ ವೇಣು ಶ್ರೀರಾಮ್ ಈ ಚಿತ್ರವನ್ನ ನಿರ್ದೇಶಿಸುತ್ತಿದ್ದಾರೆ. ಟಾಲಿವುಡ್‌ನ ಖ್ಯಾತ ನಿರ್ಮಾಪಕ ದಿಲ್ ರಾಜು ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇವೆಲ್ಲ ಕಾರಣಗಳಿಂದ ಸಪ್ತಮಿ ಗೌಡ ಸದ್ಯಕ್ಕೆ ಕ್ಲೌಡ್ ನೈನ್‌ ನಲ್ಲಿದ್ದಾರೆ. ಒಟ್ನಲ್ಲಿ ಕನ್ನಡದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ, ಕನ್ನಡಿಗರ ಮನಗೆದ್ದ ಸಪ್ತಮಿ ಗೌಡ ಈಗ ಬಾಲಿವುಡ್‌ ನಂತರ ಟಾಲಿವುಡ್‌ ಕಡೆ ಹೊರಟಿದ್ದಾರೆ.

Continue Reading

FILM

45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ

Published

on

ಮಂಗಳೂರು(ಮುಂಬೈ): ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಮುಂಬೈನಲ್ಲಿ ನಟಿ ಲಕ್ಷುರಿ ಮನೆಯೊಂದನ್ನು ಖರೀದಿಸಿದ್ದಾರೆ. ಐಷಾರಾಮಿ ಮನೆ ಖರೀದಿ ಮಾಡಿರುವ ನಟಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.

ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಮನೆ ಖರೀದಿ ಮಾಡಿದ್ದಾರೆ. ಮನೆಯ ವಿಸ್ತೀರ್ಣ 4000 ಚದರ ಅಡಿ ಎಂದು ಹೇಳಲಾಗ್ತಿದೆ. ಬಾಲಿವುಡ್ ಸ್ಟಾರ್ ನಟಿ- ನಟಿಯರು ವಾಸಿಸುವ ಏರಿಯಾದಲ್ಲಿಯೇ ಮನೆ ಖರೀದಿ ಮಾಡಿದ್ದಾರೆ.

ಟಾಲಿವುಡ್‌ನಲ್ಲಿ ರಶ್ಮಿಕಾ, ಶ್ರೀಲೀಲಾ ಹವಾ ಜಾಸ್ತಿ ಆದ್ಮೇಲೆ ಬಾಲಿವುಡ್‌ನತ್ತ ನಟಿ ಮುಖ ಮಾಡಿದ್ದರು. ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರುತ್ತಿದ್ದಂತೆ ಈಗ ತೆಲುಗಿನಲ್ಲಿಯೂ ನಟಿಗೆ ಕರೆ ಬರುತ್ತಿದೆ.

ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್ ಮಾಡುತ್ತಿದ್ದಾರೆ. ನಾಗಚೈತನ್ಯ ಮುಂಬರುವ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ. ನಾನಿ ಜೊತೆ ನಟಿಸುವ ಅವಕಾಶ ಕೂಡ ಸಿಕ್ಕಿದೆ.

Continue Reading

LATEST NEWS

Trending