BANTWAL
ಅಶಕ್ತರ- ನೊಂದವರ ಬಾಳಿಗೆ ಬೆಳಕಾಗಿ ಮಾದರಿಯಾದ ‘ಶ್ರೀದೇವಿ ಟೈಗರ್ಸ್ ಕಲ್ಲೇಗ’
ಪುತ್ತೂರು : ಮೋಜಿಗಾಗಿ ವೇಷಗಳನ್ನು ಹಾಕಿ ಹಣ ಸಂಗ್ರಹಣೆ ಮಾಡುವರು ಹೆಚ್ಚಾಗುತ್ತಿರುವ ಈ ಕಾಲದಲ್ಲಿ ಒಂದು ಒಳ್ಳೇಯ ಸದುದ್ದೇಶವನ್ನು ಇಟ್ಟುಕೊಂಡು ಮಾಡುವವರು ಈ ಸಮಾಜದಲ್ಲಿದ್ದಾರೆ. ಇದರಲ್ಲಿ ಶ್ರೀದೇವಿ ಟೈಗರ್ಸ್ ಕಲ್ಲೇಗ ತಂಡವು ಒಂದಾಗಿದೆ.
ದಕ್ಷಿಣ ಕನ್ನಡ ಪುಣಚ ಗ್ರಾಮದ ತೋರಣಕಟ್ಟೆ ಚಂದ್ರಾವತಿ ಟಿ ತೀರ ಬಡತನದಲ್ಲಿರುವ ಇವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದಾರೆ ಒಬ್ಬ ಮಗನನ್ನು ಹೊಂದಿರುವ ಚಂದ್ರಾವತಿ ಅವರ ಮಗ ಹೋಟೆಲ್ನಲ್ಲಿ ಕಾರ್ಮಿಕ ವೃತ್ತಿ ಮಾಡಿ ಜೀವನ ಸಾಗಿಸುತ್ತಿದ್ದಾರೆ ಇವರ ಚಿಕತ್ಸೆಗೆ ಶ್ರೀ ದೇವಿ ಟೈಗರ್ಸ್ ಕಲ್ಲೇಗ ತಂಡವು ನೆರವಾಗಿದೆ.
ನೆಲ್ಲಿಗುಡ್ಡೆ ನವನಗರ ವಿಟ್ಲ ಕಸಬ ಗ್ರಾಮದ ಒಂದು ಮನೆಗೆ ಭೇಟಿ ನೀಡಿದ ಶ್ರೀದೇವಿ ಟೈಗರ್ಸ್ ಕಲ್ಲೇಗ ತಂಡ ಅವರ ಸಮಸ್ಯೆಯನ್ನು ತಿಳಿದು ಅವರ ಮಗಳ ಶಿಕ್ಷಣಕ್ಕೆ ನೆರವಾಗಿದೆ.
ಪುತ್ತೂರಿನ ಸೇಡ್ಯಾಪು ಬನ್ನೂರು ಗ್ರಾಮದ 13 ವರ್ಷದ ಕೃತಿ ಇವರು ಸ್ಪೈನಲ್ ಕಾರ್ಡ್ ಸಮಸ್ಯೆಯಿಂದ ಬಳಲುತ್ತಿದ್ದು ಸೊಂಟದ ಕೆಳಗೆ ಬಲ ಕಳೆದುಕೊಂಡಿದ್ದು ಈಕೆಗೂ ತಂಡ ಆರ್ಥಿಕ ಸಹಕಾರ ನೀಡಿದೆ.
ಹವ್ಯಾಸಿ ಕಲಾವಿದರಾದ ಯೋಗೀಶ್ ಕರ್ಮಲ ಇವರ ಪುತ್ರ 2 ವರ್ಷ ವಯಸ್ಸಿನ ಗೌರವ್ ಲ್ ಸಿ ಹೆಚ್ ಎಂಬ ಅಪರೂಪದ ಚರ್ಮ ರೋಗಕ್ಕೆ ತುತ್ತಾಗಿದ್ದಾರೆ ಈ ಪುಟ್ಟ ಕಂದಮ್ಮನ ನೆರವಿಗೂ ಶ್ರೀದೇವಿ ಟೈಗರ್ಸ್ ಕಲ್ಲೇಗ ತಂಡ ಧಾವಿಸಿದೆ.
ಪ್ರತಿದಿನ 250 ಕ್ಕೂ ಅಧಿಕ ಶ್ವಾನಗಳ ಹಸಿವು ನೀಗಿಸುತ್ತಿರುವ ಹಾಗೆಯೇ 40 ಶ್ವಾನಗಳನ್ನು ಮನೆಯಲ್ಲೇ ಸಾಕುತ್ತಿರುವ ಮಂಗಳೂರುಇ ಬಳ್ಳಾಲ್ ಭಾಗ್ನ ರಜನಿ ಶೆಟ್ಟಿಯ ಧರ್ಮ ದಾರಿಗೂ ಶ್ರೀದೇವಿ ಟೈಗರ್ಸ್ ಕಲ್ಲೇಗ ಕೈ ಜೋಡಿಸಿದೆ.
2022 ರಲ್ಲಿ ಪ್ರಥಮ ವರ್ಷದ ಹುಲಿವೇಷ ಪ್ರಾರಂಭಿಸಿರುವ ಈ ಯುವಕರ ತಂಡ ಒಂದು ಒಳ್ಳೆ ಉದ್ದೇಶದ ಚಿಂತನೆ ಅಳವಡಿಸಿಕೊಂಡು ಇತರರಿಗೆ ದಾರಿದೀಪವಾಗಿದೆ. ಸಮಾಜದಲ್ಲಿ ಅಸಹಾಯಕರಿಗೆ ನೆರವು ನೀಡುವುದು ಹಾಗೆ ಕಡುಬಡವರ ಕಲಿವ ಮಕ್ಕಳಿಗೆ ನೆರವಾಗುವುದು ಈ ತಂಡದ ಮೂಲ ಉದ್ದೇಶವಾಗಿದೆ. ಈ ಬಾರಿ 35 ಹುಲಿಗಳ ತಂಡವನ್ನು ಬೀದಿಗಿಳಿಸಿ ಆ ಮೂಲಕ ಸಂಗ್ರಹವಾದ ಮೊತ್ತವನ್ನು ಸಂಕಷ್ಟದಲ್ಲಿದದ್ದವರಿಗೆ ಹಂಚಿ ಮಾನವೀಯತೆ ಮೆರೆದಿದ್ದಾರೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ