Connect with us

DAKSHINA KANNADA

ಶ್ರೀನಗರದಿಂದ ಕನ್ಯಾಕುಮಾರಿಗೆ ಸೈಕಲ್ ರೈಡ್ ಹೊರಟ 64ರ ಗಟ್ಟಿಗಿತ್ತಿ ಕಮಲೇಶ್‌ ರಾಣಾಗೆ ಮಂಗ್ಳೂರಲ್ಲಿ ಅಪಘಾತ…!

Published

on

ಮಂಗಳೂರು: ಉತ್ತರದ ಶ್ರೀನಗರದಿಂದ ದಕ್ಷಿಣದ ಕನ್ಯಾಕುಮಾರಿ ತನಕ 4500 ಕಿ.ಮೀ. ಸೈಕಲ್‌ ಸಾಹಸ ಯಾತ್ರೆಯನ್ನು ಕೈಗೊಂಡಿರುವ ಹರ್ಯಾಣದ ರೋಹ್ಟಕ್‌ ನ  ಕಮಲೇಶ್‌ ರಾಣಾ (64) ಅವರು ಸುಮಾರು 3600 ಕಿ.ಮೀ. ಕ್ರಮಿಸಿ ಮಂಗಳೂರಿಗೆ ತಲಪುವಷ್ಟರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಆವರೀಗ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಸಪ್ಟೆಂಬರ್‌ 26 ರಂದು ಕಮಲೇಶ್‌ ರಾಣಾ ಅವರು ಶ್ರೀನಗರದಿಂದ ಸೈಕಲ್‌ ಯಾತ್ರೆ ಹೊರಟಿದ್ದು, ಸುಮಾರು 50 ಕಿ.ಮೀ. ದೂರ ಕ್ರಮಿಸುವಷ್ಟರಲ್ಲಿ ಉತ್ತರ ಪ್ರದೇಶದಲ್ಲಿ ಕನ್ಯಾಕುಮಾರಿಗೆ ಸೈಕಲ್‌ನಲ್ಲಿ ಯಾತ್ರೆ ಹೊರಟಿದ್ದ ಉತ್ತರ ಪ್ರದೇಶದ ಸಮಾಜ ಸೇವಾ ಕಾರ್ಯಕರ್ತ ಯುವಕ ವಿಕಾಸ್‌ ಜಯ್‌ ಜನಿಯಾ ಅವರು ಸಿಕ್ಕಿದ್ದು, ಆ ಬಳಿಕ ಇಬ್ಭರೂ ತಮ್ಮ ಯಾತ್ರೆಯನ್ನು ಮುಂದುವರಿಸಿದ್ದರು.

ಸೈಕಲ್‌ನಲ್ಲಿ ಅವರು ದಿನಕ್ಕೆ ಸರಾಸರಿ 140- 160 ಕಿ. ಮೀ. ಕ್ರಮಿಸುತ್ತಿದ್ದು, ಇದೇ ಡಿಸೆಂಬರ್‌ 19 ರಂದು ಸುರತ್ಕಲ್‌ನಲ್ಲಿ ಕಮಲೇಶ್‌ ರಾಣಾ ಅವರ ಸೈಕಲಿಗೆ ಬಸ್‌ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದ ಅವರನ್ನು ಬಸ್ಸಿನ ಸಿಬಂದಿ ಪಣಂಬೂರಿನ ಎನ್ಎಂಪಿಎ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚೆಕಿತ್ಸೆಗಾಗಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದರು.


ವೆನ್ಲಾಕ್‌ ಆಸ್ಪತ್ರೆಯಲ್ಲಿ ಆಕೆಯ ಕೈಗೆ ಶಸ್ತ್ರ ಕ್ರಿಯೆ ನಡೆಸಲಾಗಿದೆ. ಪ್ರಸ್ತುತ ಅವರಿಗೆ ಮಾಜಿ ಪತ್ರಕರ್ತ ಹಾಗೂ ಸಮಾಜ ಸೇವಾ ಕಾರ್ಯಕರ್ತ ನಂದ ಗೋಪಾಲ್‌ ಅವರು ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದಾರೆ.

ಗುರುವಾರ ಮಂಗಳೂರಿನ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಕಮಲೇಶ್ ರಾಣಾ ಮತ್ತು ವಿಕಾಸ್‌ ಅವರು ಭಾಗವಹಿಸಿ ತಮ್ಮ ಅನುಭವವನ್ನು ಹಂಚಿಕೊಂಡರು.


ಕಮಲೇಶ್‌ ಅವರ ಕೈಯ ಮಣಿಗಂಟಿಗೆ ಗಾಯಗಳಾಗಿದ್ದು, ಶೀಘ್ರ ಗುಣಮುಖ ಹೊಂದಿ ಯಾತ್ರೆಯನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ಸೈಕ್ಲಿಂಗ್‌ ಮಾಡುತ್ತಿರುವುದರಿಂದ ಇದೀಗ ತನ್ನ ಸಕ್ಕರೆ ಕಾಯಿಲೆ ಸಂಪೂರ್ಣ ದೂರವಾಗಿದೆ ಎಂದಿದ್ದಾರೆ.

ಕಮಲೇಶ್‌ ರಾಣಾ ಅವರನ್ನು ಈ ಸಂದರ್ಭದಲ್ಲಿ ಪ್ರೆಸ್‌ ಕ್ಲಬ್‌, ದಕ್ಷಿಣ ಕನ್ನಡ ಕಾರ್ಯನಿರತ ಪತ್ರ ಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್‌ ವತಿಯಿಂದ ಸನ್ಮಾನಿಸಲಾಯಿತು.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending