Connect with us

LATEST NEWS

SSLC ಫಲಿತಾಂಶ ಪ್ರಕಟಿಸಲು ದಿನಾಂಕ ನಿಗದಿ; ಯಾವಾಗ?

Published

on

ಬೆಂಗಳೂರು: 2023-24ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಾರವೇ ರಾಜ್ಯದಲ್ಲಿ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

2023-24ನೇ ಸಾಲಿನ SSLC ಪರೀಕ್ಷೆ-1 ಕಳೆದ ಮಾರ್ಚ್‌ 25 ರಿಂದ ಏಪ್ರಿಲ್ 6, 2024ರವರೆಗೆ ನಡೆದಿತ್ತು. ಪರೀಕ್ಷೆ-1 ಬರೆದಿರುವ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಕೊನೆಗೂ ಕಾಯುವಿಕೆಯ ಸಮಯ ಕೊನೆಯಾಗುತ್ತಿದೆ.

ಈ ಬಾರಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗುವುದು ತಡವಾಗಿದೆ. SSLC ಮೌಲ್ಯಮಾಪನ ಈಗಾಗಲೇ ಸಂಪೂರ್ಣವಾಗಿದ್ದು, ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ.

ನಾಳೆ ಅಂದ್ರೆ ಮೇ 7ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮತದಾನ ಮುಗಿದ ಎರಡು ದಿನದಲ್ಲಿ SSLC ಫಲಿತಾಂಶ ಪ್ರಕಟಿಸಲು ಪರೀಕ್ಷಾ ಮಂಡಳಿ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿದೆ. ಇದೇ ಮೇ 8 ಬುಧವಾರ ಇಲ್ಲವೇ ಮೇ 9ರ ಗುರುವಾರ SSLC ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಮೇ 10 ಬಸವ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ಮೇ 9ರೊಳಗೆ SSLC ಫಲಿತಾಂಶ ಪ್ರಕಟ ಮಾಡಲು ಪರೀಕ್ಷಾ ಮಂಡಳಿ ಮೂಲಗಳಿಂದ ಖಚಿತ ಮಾಹಿತಿ ಸಿಕ್ಕಿದೆ.

BELTHANGADY

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬಂಧನ..! ಶಾಸಕ ಪೂಂಜಾ ಪ್ರತಿಭಟನೆ

Published

on

ಬೆಳ್ತಂಗಡಿ : ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ರಾತೋರಾತ್ರಿ ಬಂಧಿಸಿದ್ದಾರೆ. ಆದ್ರೆ, ಈ ಬಂಧನವನ್ನು ವಿರೋಧಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಡೀ ರಾತ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಬೆಳ್ತಂಗಡಿಯ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗಕ್ಕೆ ಮೇ 18 ರ ಸಂಜೆ ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಅಕ್ರಮ ಗಣಿಗಾರಿಕೆಯ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರ ಜೊತೆಯಲ್ಲಿ ದಾಳಿಯನ್ನು ನಡೆಸಲಾಗಿತ್ತು. ಈ ವೇಳೆ ಸ್ಥಳದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದ್ದು, ಸ್ಥಳದಿಂದ ಒಂದು ಹಿಟಾಚಿ, ಕಂಪ್ರೆಸರ್, ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು. ವಿಚಾರಣೆಯ ವೇಳೆ ಈ ಅಕ್ರಮ ಗಣಿಗಾರಿಕೆ ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರದ್ದು ಎಂದು ಗೊತ್ತಾಗಿತ್ತು.

ಅಕ್ರಮ ಗಣಿಗಾರಿಕೆ ಸಾಬೀತಾದ ಹಿನ್ನೆಲೆಯಲ್ಲಿ ರಾತೋ ರಾತ್ರಿ ಶಶಿರಾಜ್ ಶೆಟ್ಟಿ ಅವರ ಮನೆಗೆ ನುಗ್ಗಿ ಅವರನ್ನು ಬಂಧಿಸಿದ್ದರು. ಈ ವಿಚಾರ ತಿಳಿದು ಠಾಣೆಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಶಶಿರಾಜ್ ಶೆಟ್ಟಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ರು. ಆದ್ರೆ, ಶಾಸಕರ ಮಾತಿಗೆ ಒಪ್ಪದ ಪೊಲೀಸರು ಆರೋಪಿಯ ವಿರುದ್ಧ ಎಫ್‌ ಐ ಆರ್ ದಾಖಲಿಸಿಕೊಂಡಿದ್ದಾರೆ. ಇದರಿಂದ ಆಕ್ರೋಶಿತರಾದ ಶಾಸಕ ಪೂಂಜಾ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

ಪೊಲೀಸರ ಮೇಲೆ ಕಾಂಗ್ರೆಸ್ ಏಜೆಂಟರ ಆರೋಪ :

ರಾತೋರಾತ್ರಿ ಮನೆಗೆ ನುಗ್ಗಿದ ಪೊಲೀಸರು ಅಕ್ರಮದಲ್ಲಿ ಭಾಗಿಯಾದ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ ಅಂತ ಶಾಸಕ ಪೂಂಜಾ ಆರೋಪಿಸಿದ್ದಾರೆ. ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಸರ್ಕಾರ ಬಂದಾಗ ನೋಡಿಕೊಳ್ಳುವುದಾಗಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ.

Continue Reading

LATEST NEWS

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹ*ತ್ಯೆಗೆ ಯತ್ನ

Published

on

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಆಕೆಯ ತಂಗಿ ಯಶೋಧಾ ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮನೆಯಲ್ಲಿ ಫಿನಾಯಲ್ ಸೇವಿಸಿ ಜೀವಾಂತ್ಯಗೊಳಿಸಲು ಯತ್ನಿಸಿದ ಆಕೆಯನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಯಿತು. ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಕೊಲೆಗೀಡಾದ ಅಂಜಲಿ
ಅಂಜಲಿ ಅಂಬಿಗೇರ ಹ*ತ್ಯೆ ಖಂಡಿಸಿ ಶನಿವಾರ (ಮೇ 18) ರಂದು ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಯಶೋಧಾ ಕೂಡ ಭಾಗಿಯಾಗಿದ್ದಳು.

ಪ್ರತಿಭಟನೆ ವೇಳೆ ಯಶೋಧಾ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ರಾತ್ರಿ ಪಿನಾಯಲ್​ ಸೇವಿಸಿ ಜೀವಾಂತ್ಯಗೊಳಿಸಲು ಯತ್ನಿಸಿದ್ದಾಳೆ. ಅಕ್ಕನ ಸಾ*ವಿನಿಂದ ಮನನೊಂದಿದ್ದ ಯಶೋಧಾ ಆತ್ಮಹ*ತ್ಯೆಗೆ ಯತ್ನಿಸಿದ್ದಾಳೆ.

ಇದನ್ನೂ ಓದಿ : KARKALA: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಸಾ*ವು

ಏನಿದು ಪ್ರಕರಣ ?

ಮೇ 15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬೆಳ್ಳಂಬೆಳಗ್ಗೆ ಯುವತಿಯ ಭೀಕರ ಹ*ತ್ಯೆ ನಡೆದಿತ್ತು. ಅಂಜಲಿ ಅಂಬಿಗೇರ (21) ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಏಕಾಏಕಿ ಮನೆಗೆ ನುಗ್ಗಿದ್ದ. ಬಳಿಕ ಆಕೆಯ ಮನೆಯವರ ಎದುರೇ ಅಂಜಲಿಯನ್ನ ಭೀಕರವಾಗಿ ಹ*ತ್ಯೆಗೈದಿದ್ದ. ಪರಾರಿಯಾಗಿದ್ದ ಆರೋಪಿಯನ್ನು ಈಗಾಗಲೇ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

Continue Reading

DAKSHINA KANNADA

‘ಆರ್‌ಸಿಬಿ’ ಸೂಪರ್‌ ಕಮ್‌ಬ್ಯಾಕ್..! ಕ್ರೀಡಾಂಗಣದಲ್ಲಿ ಸ್ಟಾರ್ಸ್‌ ಕಲರವ

Published

on

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ಕಡೆ ಮಳೆಯ ಆರ್ಭಟ. ಇನ್ನೊಂದು ಕಡೆ ಸತತ 7 ಪಂದ್ಯಗಳಲ್ಲಿ ಸೋತು ಪ್ಲೇ ಆಫ್ ಕನಸಲ್ಲಿದ್ದ ತಂಡಕ್ಕೆ ಈ ಪದ್ಯ ಅದೃಷ್ಟವನ್ನು ತಂದುಕೊಟ್ಟಿದೆ. ಒಂದು ಕಡೆ ಪ್ಲೇ ಆಫ್ ಗೆ ಹೋಗಲು ರನ್ ಮಾತ್ರ ಅಲ್ಲ, ನಿಗದಿತ ರನ್ನಿನ ಒಳಗಡೆ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಕಟ್ಟಿ ಹಾಕಬೇಕಿತ್ತು.

 

ಅದೃಷ್ಟ ಹೊತ್ತು ತಂದ ಮಳೆರಾಯ

ಇನ್ನು ವಿಶೇಷ ಅಂದ್ರೆ ಬೆಂಗಳೂರಿನ ಹಲವು ಕಡೆ ಮಳೆರಾಯನ ಆರ್ಭಟ ಜೋರಾಗಿತ್ತು. ಎಡೆಬಿಡದೆ ಸುರಿದ ಮಳೆಯಿಂದ ಸಂಚಾರಕ್ಕೂ ಅಡ್ಡಿ ಉಂಟಾಗಿತ್ತು.  ಅದೃಷ್ಟ ಅಂದ್ರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಲ್ಪ ಹೊತ್ತಷ್ಟೇ ಮಳೆ ಸುರಿದಿದೆ. ಇದು ಮಳೆರಾಯನ ಕೃಪೆಯೆಂದೇ ನೆಟ್ಟಿಗರು ಹೇಳುತ್ತಿದ್ದಾರೆ. ಒಂದು ವೇಳೆ ಮಳೆಯಬ್ಬರ ಜೋರಾಗಿದ್ದು ಪಂದ್ಯ ಮಳೆಗೆ ಆಹುತಿಯಾಗಿದ್ದರೆ ಆರ್‌ಸಿಬಿ ಒಂದು ಆಂಕ ಪಡೆದು ಪಂದ್ಯಕೂಟದಿಂದ ನಿರ್ಗಮಿಸಬೇಕಾಗಿತ್ತು.

ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್​ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ. ಆರ್ಸಿಬಿ ಫ್ಯಾನ್ಸ್ ಗಳ ಹರ್ಷ ಹೇಳತೀರದು. ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಟಾರ್ಸ್‌ ಕಲರವ

ಇನ್ನೂ ಈ ರೋಚಕ ಪಂದ್ಯ ವನ್ನು ವೀಕ್ಷಿಸಲು ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್, ಕಾಂತಾರ ಸಿನೆಮಾ ರಿಷಬ್ ಶೆಟ್ಟಿ ಭಾಗಿಯಾಗಿದ್ದರು. ಇನ್ನೂ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡು ಚಿಯರ್‌ ಅಪ್ ಮಾಡಿದ್ದು, ಕ್ಯಾಮೆರಾ ಕಣ್ಣಿಗೆ ಇಬ್ಬರೂ ಪೋಸ್ ನೀಡಿದ್ದಾರೆ. ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಆರ್‌ಸಿಬಿ ಫ್ಯಾನ್‌ ಆಗಿದ್ದು ನಿನ್ನೆಯ ಪಂದ್ಯ ವನ್ನು ವೀಕ್ಷಣೆ ಮಾಡಿದ್ದಾರೆ.

ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ ನ ಮಹಿಳಾ ತಂಡ ಈ ಬಾರಿಯ ಟ್ರೋಫಿಯನ್ನು ತಂದುಕೊಟ್ಟಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಮಹಿಳಾ ತಂಡ ಜರ್ಸಿಯನ್ನು ತೊಟ್ಟು ಚಿಯರ್ ಅಪ್ ಮಾಡಿದ್ದಾರೆ.

ಇನ್ನು ಎಲಿಮಿನೇಟರ್​ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್​ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಜಯ ಗಳಿಸಿದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆಯಾ ಎಂದು ಕಾದು ನೋಡಬೇಕಿದೆ.

Continue Reading

LATEST NEWS

Trending