BELTHANGADY
ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!
ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.
ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.
ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವಂತಹ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ.
ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ವರ್ಷದ ಕಡವೆ ಇದಾಗಿದ್ದು, ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್ಪೋಸ್ಟ್ ಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
BELTHANGADY
ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ
ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.
ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.
BELTHANGADY
ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.
Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ
ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
BELTHANGADY
ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.
ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.
ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ
ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
- DAKSHINA KANNADA5 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!