Connect with us

    DAKSHINA KANNADA

    ಎಂ ಆರ್ ಎಫ್ ಘಟಕ ಸ್ಥಾಪನೆಗೆ ರಾಜ್ಯ ಸರಕಾರದ ಅನುಮೋದನೆ

    Published

    on

    ಮಂಗಳೂರು ; ಮಂಗಳೂರಿನ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಒಣ ತ್ಯಾಜ್ಯಗಳೆಲ್ಲವನ್ನು ಸಂಸ್ಕರಿಸಿ ವಿಲೇವಾರಿ ಮಾಡಲು ಮೆಟೀರಿಯಲ್ ರಿಕವರಿ ಫೆಸಿಲಿಟಿ (ಎಂ ಆರ್ ಎಫ್) ಘಟಕವ ಸ್ಥಾಪಿಸುವ ಸಲುವಾಗಿ ಮಹಾನಗರ ಪಾಲಿಕೆಯಿಂದ ಕಳುಹಿಸಲಾಗಿದ್ದ ಯೋಜನಾ ವರದಿಗೆ ರಾಜ್ಯ ಸರ್ಕಾರದಿಂದ ತಾಂತ್ರಿಕ ಅನುಮೋದನೆ ಲಭಿಸಿದೆ.

    ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್ ಗಳಲ್ಲಿ ವದಿನಂಪ್ರತಿ 330 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದ್ದು ಅದರಲ್ಲಿ 300 ಟನ್ ಗಳಷ್ಟು ಹಸಿ ಕಸ ಪ್ರತಿನಿತ್ಯ ಡಂಪಿಂಗ್ ಯಾರ್ಡ್ ಗೆ ಸೇರುತ್ತಿದೆ. ಶೇ.70 ರಷ್ಟು ಹಸಿ ಕಸ – ಶೇ, 30 ರಷ್ಟು ಒಣ ಕಸ ಎನ್ನುವುದಾಗಿ ವಿಭಜಿಸಲಾಯಿತು. ಒಣ ತ್ಯಾಜ್ಯವನ್ನು ಮಾತ್ರ ಸದ್ಯ ವಿಲೇವಾರಿ ಮಾಡಲಾಗುತ್ತಿದೆ. ಹಸಿ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸಿ ಅದರ ಮರು ಬಳಕೆ ಮಾಡಲಾಗುತ್ತಿದೆ.

    ಯೋಜನೆಗೆ ತಗುಲುವ ವೆಚ್ಚ 11.04 ಕೋ.ರೂ.

                          ತ್ಯಾಜ್ಯ ವಿಲೇವಾರಿಯು ಒಂದು ದೊಡ್ಡ ಸಮಸ್ಯೆಯಾಗಿ ನಮ್ಮ ಕಣ್ಣೆದುರು ಬಂದು ನಿಂತಿದೆ. ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು ಒಂದು ವೇಳೆ ಸದಿಯಾದ  ಇದ್ದಲ್ಲಿ ರಾಜ್ಯ ಸರ್ಕಾರದ ಮೆಲೆ ಕಠಿಣ ಕ್ರಮದೊಡನೆ ದಂಢ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಘಟಕ ನಿರ್ಮಾಣದ ಉದ್ದೇಶ ಮಂಗಳೂರಿನಲ್ಲಿ 11.04 ಕೋ.ರೂ. ಜೊತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪಾಲಿನ ಅನುದಾನ 5.10 ಕೋ. ಆಗಿದ್ದು ಬಾಕಿ ಉಳಿದ 5.94 ಕೋ. ಮಹಾನಗರ ಪಾಲಿಕೆ ಒದಗಿಸಬೇಕು. ಶೇ.30 ಹೊಂದಿಕೊಳ್ಳಲು ಅವಕಾಶವಿದೆ ಎನ್ನುತ್ತಾರೆ ಸುಧೀರ್ ಶೆಟ್ಟಿ ಕಣ್ಣೂರು.

    ಘಟಕ ನಿರ್ಮಾಣಕದ ಸಮಯ 6 ತಿಂಗಳು

                       ರಾಜ್ಯ ಸರ್ಕಾರ ಎಂ ಆರ್ ಎ‍ಫ್ ಘಟಕಗಳ ನಿರ್ಮಾಣಕ್ಕೆ ಈಗಾಗಲೇ ಸೂಚನೆಯನ್ನು ನೀಡಿದೆ. ಟೆಂಡರ್ ಬರಬೇಕಂದರೆ ಮೊದಲೇ ಮಂಜೂರಾತಿ ನೀಡಬೇಕು. ದೊಡ್ಡ ಮೊತ್ತದ ಯೋಜನೆಯಾಗಿರುವುದರಂದ ಇದರ ಪ್ರಕ್ರಿಯೆಯು  ರಾಜ್ಯ ಮಟ್ಟದಲ್ಲಿ ನಡೆಯಬೇಕು. ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ ಪಕ್ಷ 6 ತಿಂಗಳಾದರು ಬೆಕಾಗಬಹುದು ಎಂಬ ನಿರೀಕ್ಷೆ ಇದೆ. 109 ಟನ್ ತ್ಯಾಜ್ಯ ನಿರ್ವಹಣೆ ಸಾಮರ್ಥ್ಯ ಪಚ್ಚನಾಡಿಯಲ್ಲಿ ನಿರ್ಮಾಣವಾಗಲಿರುವ ಎಂ ಆರ್ ಎಫ್ ಘಟಕ ಹೊಂದಿದೆ. 11.04 ಕೋ.ರೂ ವೆಚ್ಚದಲ್ಲಿ 8.55 ಕೋ ಘಟಕದ ರಚನೆ ಹಾಗು ಸಿವಿಲ್ ಕೆಲಸಗಳಿಗೆ ಮೀಸಲಿಡಲಾಗಿದೆ. 2.49 ಕೋ. ಮೊತ್ತವನ್ನು ಘಟಕದಲ್ಲಿ ಕಾರ್ಯಾಚರಿಸುವ ವೇ ಬ್ರಿಡ್ಜ್, ಟ್ರೋಮೆಲ್ ಯಂತ್ರ, ಕನ್ವೇಯರ್, ಮ್ಯಾಗ್ನೇಟಿಕ್ ಸಪರೇಟರ್, ಏರ್ ಬ್ಲೋಮರ್, ಅಟೋಮ್ಯಾಟಿಕ್ ಹೊರಿಝಾಂಟಲ್ ಬೈಲಿಂಗ್ ಮಿಷನ್, ಶ್ರೇಡ್ಡರ್, ಸ್ಟೋರೇಜ್ ಬಿನ್, ವೀಲ್ ಬ್ಯಾರೋ, ಬೇಲರ್ ಯಂತ್ರ, ಅಗ್ನಿಶಮನ ಯಂತ್ರಗಳು, ಎಲೆಕ್ಟ್ರಿಕಲ್ ಉಪಕರಣ, ಲೋಡರ್ ಹೊಂದಿರುವ ಟ್ರ್ಯಾಕ್ಟರ್ ಮೊದಲಾದ ಯಂತ್ರಗಳ ಖರೀದಿಗೆ ಮೀಸಲಿರಿಸಲಾಗಿದೆ

    DAKSHINA KANNADA

    ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ

    Published

    on

    ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.

    ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

    ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.

    ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಂಗನ ಜ್ವರಕ್ಕೆ ವಿಶೇಷ ನಿಗಾ

    Published

    on

    ಮಂಗಳೂರು: ಮಂಗನ ಜ್ವರದ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷವಾಗಿ ನಿಪಾಹ್ ವೈರಸ್‌ನಿಂದಾಗಿ ಕೇರಳದಲ್ಲಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

    ಆಫ್ರಿಕನ್ ದೇಶಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಮಂಗನ ಜ್ವರ ಸ್ಥಳೀಯವಾಗಿ ಆತಂಕವನ್ನು ಉಂಟುಮಾಡಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಿಂದ ನಗರಕ್ಕೆ ಆಗಮಿಸುವ ಪ್ರಯಾಣಿಕರು ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ ಮತ್ತು ತುರ್ತು ಪರಿಸ್ಥಿತಿಗಳಿಗಾಗಿ ಮೀಸಲಾದ ಆಂಬ್ಯುಲೆನ್ಸ್ ಸಿದ್ಧವಾಗಿದೆ. ಮಂಗನ ಜ್ವರ ಪ್ರಕರಣಗಳ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಕೂಡ ಕಾಯ್ದಿರಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿ, ‘ಸದ್ಯ ಜಿಲ್ಲೆಯಲ್ಲಿ ಕೋತಿ ಜ್ವರದ ಪ್ರಕರಣಗಳು ವರದಿಯಾಗಿಲ್ಲ, ರಾಜ್ಯ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಸೂಚನೆ ಬಂದಿಲ್ಲ.ಆದರೆ, ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರುಗಳಿಗೆ ಆಗಮಿಸುವ ಪ್ರಯಾಣಿಕರು. ಮುನ್ನೆಚ್ಚರಿಕೆಯಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಆರು ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ, ಮುಂದಿನ ಕ್ರಮಗಳನ್ನು ಚರ್ಚಿಸಲು ನಾವು ಶೀಘ್ರದಲ್ಲೇ ವಿಶೇಷ ಸಭೆ ನಡೆಸುತ್ತೇವೆ ಎಂದರು.

    ‘ಇತ್ತೀಚೆಗೆ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ವೈರಲ್ ಸೋಂಕುಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ವಿವಿಧೆಡೆ ಕೆಮ್ಮು, ನೆಗಡಿ, ಗಂಟಲು ನೋವಿನ ಲಕ್ಷಣಗಳಿರುವ ಜ್ವರ ಕಾಣಿಸಿಕೊಂಡಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುವ ರೋಗಿಗಳ ಸಂಖ್ಯೆ ಹೆಚ್ಚಿದೆ. ವಿಶೇಷವಾಗಿ ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದು, ಕೆಲವು ಪ್ರದೇಶಗಳಲ್ಲಿ ರಾತ್ರಿ ವೇಳೆಯಲ್ಲಿ ತುಂತುರು ಮಳೆಯಾಗುತ್ತಿದ್ದು, ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

    Continue Reading

    DAKSHINA KANNADA

    ಆಂಧ್ರದಲ್ಲಿ ನಡೆದ ವಾಲಿಬಾಲ್ ಪಂದ್ಯಾಟ; ಚಿನ್ನದ ಪದಕ ಗೆದ್ದ ನಿತೀಶ್ ಕುಮಾರ್

    Published

    on

    ಮಂಗಳೂರು/ಹೆಬ್ರಿ : ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ನಿತೀಶ್ ಕುಮಾರ್ ಆಂಧ್ರಪ್ರದೇಶ ವಿಜಯವಾಡದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಕೂಟದಲ್ಲಿ ಭಾಗವಹಿಸಿ, ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

    ಮುಂದಿನ ತಿಂಗಳು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ವಿದ್ಯಾಭಾರತಿ ನಡೆಸುವ ರಾಷ್ಟ್ರಮಟ್ಟದ ಪಂದ್ಯಕೂಟದ ವಾಲಿಬಾಲ್ ತಂಡಕ್ಕೆ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ.

    ಇದನ್ನೂ ಓದಿ : ವೈಪರ್ ಕೈಕೊಟ್ಟು ಅವಘಡ; ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ತೂಫಾನ್

    ನಿತೀಶ್ ಕುಮಾರ್, ಪೆರುವಾಣಿ ಗ್ರಾಮದ ಸತ್ಯನಾರಾಯಣ ಮಣಿಯಣಿ ಮತ್ತು ಜ್ಯೋತಿ ಅವರ ಪುತ್ರನಾಗಿದ್ದು, ಅವರಿಗೆ ಅಮೃತ ಭಾರತಿ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ತರಬೇತಿ ನೀಡಿದ್ದರು.

    Continue Reading

    LATEST NEWS

    Trending