LATEST NEWS
ಜು.15ರಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ
ಬೆಂಗಳೂರು : ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನವನ್ನು ಜು.15ರಿಂದ 26ರವರೆಗೆ ಕರೆಯಲು ರಾಜ್ಯಪಾಲರಿಗೆ ರಾಜ್ಯ ಸರಕಾರ ಶಿಫಾರಸ್ಸು ಮಾಡಿದೆ.
ಜೂ.20ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರ ನೀಡಲಾಗಿತ್ತು. ಅದರಂತೆ, ಮುಖ್ಯಮಂತ್ರಿ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಿದ್ದು, ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ.
LATEST NEWS
ಬಾಡಿಗೆ ಗೆಳತಿ ಜೊತೆ ಡೇಟಿಂಗ್..! ದುಬಾರಿ ಬಿಲ್ ನೋಡಿ ಯುವಕ ಶಾ*ಕ್..!
ಮಂಗಳೂರು : ಡೇಟಿಂಗ್ ಅನ್ನೋದು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಯಾಗ್ತಾ ಇದ್ದು, ಒಂದು ರೀತಿಯ ಟ್ರೆಂಡಿಂಗ್ ಕೂಡಾ ಆಗಿದೆ. ಹಾಗಂತ ಡೇಟಿಂಗ್ ಮಾಡಲು ಜೊತೆ ಇಲ್ಲಾ ಅಂದ್ರೆ, ಬಾಡಿಗೆ ಜೊತೆಗಾರ ಅಥವಾ ಜೊತೆಗಾತಿಯನ್ನು ನೀಡುವ ಅ್ಯಪ್ಗಳೂ ಕೂಡಾ ಬಂದಿವೆ. ಇದರ ಮೂಲಕ ತಮಗೆ ಇಷ್ಟವಾದವರ ಜೊತೆ ಡೇಟಿಂಗ್ ನಡೆಸೋದು ಕೂಡಾ ಈಗ ಜೋರಾಗಿ ನಡಿತಾ ಇದೆ. ಹೀಗೆ ಅ್ಯಪ್ ಮೂಲಕ ಜೊತೆಗಾತಿಯನ್ನು ಸಂಪಾದಿಸಿದ ಯುವಕ ಆಕೆಯ ಜೊತೆ ಡೇಟಿಂಗ್ ಮಾಡಿ ಪೇಚಿಗೆ ಸಿಲುಕಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಶಾ*ಕ್ ಕೊಟ್ಟ ಬಿಲ್ :
ಟಿಂಡರ್ ಅ್ಯಪ್ ಅನ್ನೋ ಆನ್ಲೈನ್ ಜಾಲದ ಮೂಲಕ ಬಾಡಿಗೆ ಗೆಳತಿಯನ್ನು ಸಂಪಾದಿಸಿಕೊಂಡ ಯುವಕ ಆಕೆಯ ಜೊತೆ ಡೇಟಿಂಗ್ ಹೋಗಿದ್ದಾನೆ. ಹೊಟೇಲ್ ಒಂದರಲ್ಲಿ ಫುಡ್ ಆರ್ಡರ್ ಮಾಡಿ ತಿಂದ ಮೇಲೆ ಬಿಲ್ ನೋಡಿದ ಯುವಕ ಶಾ*ಕ್ ಆಗಿದ್ದಾನೆ. ಇಬ್ಬರು ತಿಂದ ಫುಡ್ ಹಾಗೂ ಡ್ರಿಂಕ್ಸ್ ಬಿಲ್ ರೂ 44000.00 ಆಗಿದ್ದೇ ಯುವಕ ಶಾ*ಕ್ ಆಗಲು ಕಾರಣ.
ಇದನ್ನೂ ಓದಿ : ಫ್ರಿಡ್ಜ್ ಮುಟ್ಟುವ ಮುನ್ನ ಹುಷಾರ್.. ವಿದ್ಯುತ್ ಶಾಕ್ ಹೊಡೆದು ತಾಯಿ-ಮಗಳು ಸಾವು
ಯುವತಿಯ ಜೊತೆ ಡೇಟಿಂಗ್ ಹೋಗಿದ್ದ ಯುವಕ 30 ಎಮ್ಎಲ್ನ 18 ಜಾಗರ್ ಬಾಂಬ್ ಅನ್ನೋ ಡ್ರಿಂಕ್ಸ್ ಹಾಗೂ ಎರಡು ರೆಡ್ ಬುಲ್, ಫ್ರೆಂಚ್ ಫ್ರೈಸ್ ಹಾಗೂ ಉಪ್ಪು ಸಹಿತ ಕಡಲೆಕಾಯಿ, ನಾಲ್ಕು ಚಾಕೋಲೇಟ್ ಟ್ರಫಲ್ ಕೇಕ್ ಆರ್ಡರ್ ಮಾಡಿದ್ದ. ಇದಿಷ್ಟಕ್ಕೇ ಹೊಟೇಲ್ನವರು ರೂ.44829.00 ಬಿಲ್ ನೀಡಿದ್ದಾರೆ.
DAKSHINA KANNADA
ದ.ಕ.ಜಿಲ್ಲೆಯ ನೂತನ ಎಸ್ ಪಿಯಾಗಿ ಯತೀಶ್. ಎನ್ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಎಸ್ಪಿ ಯತೀಶ್ ಎನ್ ಅವರಿಗೆ ಗೌರವ ರಕ್ಷೆ ನೀಡುವ ಮೂಲಕ ಸ್ವಾಗತ ಕೋರಲಾಯಿತು. ಬಳಿಕ ಕಛೇರಿಯಲ್ಲಿ ನಿರ್ಗಮಿತ ಎಸ್ಪಿ ರಿಶ್ಯಂತ್ ಅವರಿಂದ ಯತೀಶ್ ಎನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ರಿಶ್ಯಂತ್ ಅವರಿಗೆ ಬೆಂಗಳೂರು ವೈರ್ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದು, ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯತೀಶ್ ಎನ್ ಅವರನ್ನು ದಕ್ಷಿಣ ಕನ್ನಡ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.
DAKSHINA KANNADA
ಫ್ರಿಡ್ಜ್ ಮುಟ್ಟುವ ಮುನ್ನ ಹುಷಾರ್.. ವಿದ್ಯುತ್ ಶಾಕ್ ಹೊಡೆದು ತಾಯಿ-ಮಗಳು ಸಾವು
ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ದಾರುಣ ಘಟನೆ ನಡೆದಿದ್ದು, ವಿದ್ಯುತ್ ಸ್ಪರ್ಶಿಸಿ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
55 ವರ್ಷದ ಶೈದಾ ಅವರು ಫ್ರಿಡ್ಜ್ನಲ್ಲಿಟ್ಟಿದ್ದ ಮಾವಿನ ಹಣ್ಣು ಹೊರತೆಗೆಯಲು ಹೋಗಿದ್ದರು. ಆಗ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ಗಮನಿಸಿದ ಮಗಳು ಅಮ್ಮನ ರಕ್ಷಣೆಗೆ ಓಡಿ ಬಂದಿದ್ದಾಳೆ. ಈ ವೇಳೆ ಆಕೆಯೂ ವಿದ್ಯುತ್ ಶಾಕ್ ಹೊಡೆದಿದ್ದು, ಮಗಳು ಅಫ್ಸನಾ ಕಾತೂನ್ ಕೂಡ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.
ಮೃತ ವ್ಯಕ್ತಿಯ ಮನೆಯಲ್ಲಿ ಮದುವೆ ಸಮಾರಂಭ ಇತ್ತು. ತಂಗಿಯ ಮದುವೆಯಲ್ಲಿ ಭಾಗಿಯಾಗಲು ತಾಯಿ ಮನೆಗೆ ಅಫ್ಸನಾ ಬಂದಿದ್ದಳು. ಬುಧವಾರ ನಡೆದ ಘಟನೆಯಲ್ಲಿ ತಾಯಿ ಮಗಳು ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಪೊಲೀಸರು ಮನೆಗೆ ಭೇಟಿ ನೀಡಿದ್ದರು. ಆದರೆ ಕುಟುಂಬಸ್ಥರು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದಾರೆ. ಹೀಗಾಗಿ ಪೊಲೀಸರು ಪಂಚನಾಮೆ ನಡೆಸಿ ತಾಯಿ ಹಾಗೂ ಮಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
- DAKSHINA KANNADA6 days ago
ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು
- DAKSHINA KANNADA5 days ago
ಶಿರಾಡಿಘಾಟ್ ನಲ್ಲಿ ಸರಣಿ ಅಪಘಾ*ತ; ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿ*ಕ್ಕಿ
- DAKSHINA KANNADA5 days ago
ಜೀವ ಉಳಿಸಿದ ನಾಯಿಯ ನಿಯತ್ತು ಹಾಗೂ ಯುವಕನ ಸಮಯ ಪ್ರಜ್ಞೆ!
- FILM7 days ago
ಟಿಆರ್ ಪಿನಲ್ಲಿ ಟಾಪ್ 10 ರೊಳಗಿನ ಸ್ಥಾನ ಗಿಟ್ಟಿಸಿಕೊಂಡ ಹೊಸ ಧಾರಾವಾಹಿ; ನಂಬರ್ 1 ಸ್ಥಾನ ಯಾವುದಕ್ಕೆ?