Connect with us

DAKSHINA KANNADA

ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ: ಡಾ. ಎಂ.ಎನ್. ರಾಜೇಂದ್ರ ಕುಮಾರ್

Published

on

ಮಂಗಳೂರು: ನಗರದಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನವೆಂಬರ್ 18ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ ಮಂಗಳೂರು ಇದರ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ 70ನೇ ಸಹಕಾರಿ ಸಪ್ತಾಹದ 5ನೇ ದಿನ ಅಂದರೆ ನವೆಂಬರ್ 18ರಂದು ಬೆಳಿಗ್ಗೆ 10 ಗಂಟೆಗೆ ಉರ್ವ ಕ್ರಿಕೆಟ್ ಮೈದಾನದಲ್ಲಿ ಸಹಕಾರಿ ಸಪ್ತಾಹವನ್ನು ಆಚರಿಸುತ್ತಿದ್ದೇವೆ. ಇದರಲ್ಲಿ ವಸ್ತು ಪ್ರದರ್ಶನ ಉದ್ಘಾಟನೆಯನ್ನು ಸ್ಪೀಕರ್‌ ಯು ಟಿ ಖಾದರ್‌ ನೆರವೇರಿಸಲಿದ್ದು, ಸಮಾರಂಭದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ ಎನ್ ರಾಜಣ್ಣ ನೆರವೇರಿಸುವರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡುವರು. ಸಂಸದ ನಳಿನ್‌ ಕುಮಾರ್ ಕಟೀಲು ಅವರು ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ನೀಡಿದರೆ, ಸಹಕಾರಿ ಧ್ವಜಾರೋಹಣವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ನೆರವೇರಿಸುವರು.

ಅಧ್ಯಕ್ಷತೆಯನ್ನು ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ವಹಿಸಲಿರುವರು ಎಂದರು. ಮೆರವಣಿಗೆ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಕಾಮತ್‌ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉತ್ತರ ಕ್ಷೇತ್ರ ಶಾಸಕ ಡಾ ಭರತ್‌ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಸಹಕಾರಿ ಹಾಲು ಉತ್ಪಾದಕರ ಒಕ್ಕುಟದ ಅಧ್ಯಕ್ಷ ಕೆ ಪಿ ಸುಚರಿತ ಶೆಟ್ಟಿ ಉಪಸ್ಥಿತರಿರುವರು.

ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌, ಸಹಕಾರ ಸಂಘಗಳ ನಿಬಂಧಕ ಕ್ಯಾ ಡಾ ಕೆ ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭಾಗವಹಿಸಲಿದ್ದಾರೆ ಎಂದರು. 15,000 ಸಹಕಾರಿಗಳು ಸೇರಿ ಈ ಸಮಾವೇಶವನ್ನು ನಡೆಸುತ್ತಿದ್ದೇವೆ. ಎಸ್ಸಿಡಿಸಿಸಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್ ಮೈದಾನದವರೆಗೆ ಸಾಂಸ್ಕೃತಿಕ ಕಲಾ ಪ್ರಕಾರಗಳ ವಿವಿಧ ಟ್ಯಾಬ್ಲೋಗಳೊಂದಿಗೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ ಉಮೇಶ್‌ ಜಿ, ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ ಜಯಕರ ಶೆಟ್ಟಿ ಇಂದ್ರಾಳಿ, ನಿದೇರ್ಶಕ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರಿದ್ದರು.

DAKSHINA KANNADA

ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

Published

on

ಉಪ್ಪಿನಂಗಡಿ : ಕೋವಿಶೀಲ್ಡ್‌ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂತ ಅಡ್ಡ ಪರಿಣಾಮದ ಬಗ್ಗೆ ಒಪ್ಪಿಕೊಂಡಿದ್ದ ಸೀರಂ ಸಂಸ್ಥೆಯಿಂದ ಭಾರತದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೋವಿಡ್ ಲಸಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಆರೋಗ್ಯವಾಗಿದ್ದ ಯುವಕನೊಬ್ಬ ಹೃದಯಾ*ಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.


ಗಾರೆ ಕೆಲಸ ಮಾಡಿಕೊಂಡು ಆರೋಗ್ಯವಾಗಿದ್ದ 27 ವರ್ಷದ ಜನಾರ್ದನ ಎಂಬ ಯುವಕ ಅಸು ನೀಗಿದ್ದಾನೆ. ಉಪ್ಪಿನಂಗಡಿ ಸಮೀಪದ ನಿನ್ನಿಕಲ್ಲು ನಿವಾಸಿಯಾಗಿದ್ದ ಜನಾರ್ದನ ಮೇಸ್ತ್ರಿಯಾಗಿ ಗಾರೆ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೆಲಸಕ್ಕೆ ರಜೆ ಹಾಕಿ ಬಂದಿದ್ದ ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ನಿದ್ರೆಗೆ ಜಾರಿದ ಜನಾರ್ದನ್ ಮತ್ತೆ ಮೇಲೆದ್ದಿಲ್ಲ.

ಇದನ್ನೂ ಓದಿ : ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

ಮಗ ಮಲಗಿದ್ದಾನೆ ಅಂತ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು ಸಂಜೆ ಬಂದು ಮಗನನ್ನು ಎಬ್ಬಿಸಿದಾಗಲೇ ವಿಚಾರ ಗೊತ್ತಾಗಿದೆ. ಕರೆದರೂ ಮಗ ಎದ್ದಿಲ್ಲ ಎಂದು ತಾಯಿ ಮಗನನ್ನು ಅಲುಗಾಡಿಸಿ ಎಚ್ಚರಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ, ಆ ವೇಳೆ ಯಾವುದೇ ರೆಸ್ಪಾನ್ಸ್‌ ಇಲ್ಲದ ಕಾರಣ ತಾಯಿಗೆ ಅನುಮಾನ ಬಂದು ಉಸಿರು ಪರಿಶೀಲಿಸಿದಾಗ ಮಗ ಮೃ*ತಪಟ್ಟಿರುವುದು ಆರಿವಾಗಿದೆ.

 

Continue Reading

DAKSHINA KANNADA

ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ

Published

on

ಬಂಟ್ವಾಳ : ಬಾಳ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ ಪರಿಸರದ ನಡುವೆ ಕಂಗೊಳಿಸುತ್ತಿರುವ ಊರಿನ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಶ್ರದ್ಧಾ ಭಕ್ತಿಯ ಕೇಂದ್ರ ಶ್ರೀ ಮಣಿಕಂಠ ಮಂದಿರದ ವಠಾರದಲ್ಲಿರುವ ಸಾನಿಧ್ಯವೇ “ಶ್ರೀ ಕಲ್ಲುರ್ಟಿ ದೈವಸ್ಥಾನ ಕುದ್ರೆಬೆಟ್ಟು”.

ಇಲ್ಲಿ ಶ್ರದ್ಧಾ ಭಕ್ತಿಯಿಂದ ತಾಯಿ ಕಲ್ಲುರ್ಟಿಯಲ್ಲಿ ಪ್ರಾರ್ಥಿಸಿದರೆ, ಭಕ್ತರ ಇಷ್ಟಾರ್ಥಗಳು ಕ್ಷಣಮಾತ್ರದಲ್ಲಿ ಈಡೇರುತ್ತದೆ ಎಂಬ ನಂಬಿಕೆಯಿದೆ. ಈ ಕ್ಷೇತ್ರದಲ್ಲಿ ದಿನೇ ದಿನೇ ಹರಕೆ ಸೇವೆಗಳು, ಅಗೆಲು ಸೇವೆಗಳ ಸಂಖ್ಯೆ ಗಣನೀಯ ಏರುತ್ತಿವೆ. ಸುಮಾರು 15 ವರ್ಷಗಳ ಹಿಂದೆ ಈ ಸಾನಿಧ್ಯದ ಪ್ರತಿಷ್ಠಾ ಕಾರ್ಯಗಳು ನಡೆದಿವೆ.

ಇದೀಗ ಶಿಥಿಲಾವಸ್ಥೆಯಲ್ಲಿರುವ ಈ ಸಾನಿಧ್ಯವನ್ನು ಊರ ಪರ ಊರ ಭಗವತ್ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಮಾಡಲು ನಿರ್ಧರಿಸಿದ್ದು, ಆ ಪ್ರಕಾರ ಜನಶಕ್ತಿ ಸೇವಾ ಟ್ರಸ್ಟ್ (ರಿ )ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ( ರಿ) ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡಿದೆ. ಅಂತೆಯೇ, ಇದೀಗ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನೂತನ ಸಾನಿಧ್ಯ ನಿರ್ಮಿಸಲಾಗಿದ್ದು, ಅದರ ಪುನಃ ಪ್ರತಿಷ್ಠಾ ಮಹೋತ್ಸವ ಶುಕ್ರವಾರ ನಡೆದಿದೆ.

ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಿತು.

ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ನೇಮ ನಡೆಯಿತು. ಇದೇ ಸಂದರ್ಭ ದೈವಸ್ಥಾನದ ಪುನಃ ಪ್ರತಿಷ್ಠಾ ಕಾರ್ಯಕ್ಕಾಗಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರುಗಳು, ಊರಿನ ಪರ ಊರಿನ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.

Continue Reading

DAKSHINA KANNADA

ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

Published

on

ಕಡಬ:  ಹದಿನೈದು ದಿನಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಮೇ.3ರ ಸಂಜೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಇಲ್ಲಿನ ಪರ್ವತಮುಖಿ ನಿವಾಸಿ ಸೋಮಸುಂದರ್(34 ವ)ಮೃತಪಟ್ಟವರು.

death

ಸುಬ್ರಹ್ಮಣ್ಯದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಡಿತ್ತು. ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ವೇಳೆ ಸೋಮಸುಂದರ್‌ರವರಿಗೆ ಸಿಡಿಲು ಬಡೆದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಮುಂಧೆ ಓದಿ..; ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ

10 ದಿನಗಳ ಹಿಂದೆಯಷ್ಟೆ ಏ.18ರಂದು ಮೋಹಿನಿ(ಪವಿತ್ರ) ಎಂಬವರ ಜೊತೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸಭಾಭವನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ವಿಧಿಯಾಟಕ್ಕೆ ಸೋಮಸುಂದರ್ ಬಲಿಯಾಗಿದ್ದಾರೆ. ಹೊಸೋಳಿಕೆ ಪರ್ವತಮುಖಿ ದಿ.ಸಾಂತಪ್ಪ ಗೌಡರ ಪುತ್ರ ಸೋಮಸುಂದರ್ ಪರ್ವತಮುಖಿ ಬಳಿ ಕಾರ್ ವಾಷಿಂಗ್ ಉದ್ಯಮವನ್ನು ನಡೆಸುತ್ತಿದ್ದರು. ಮದುವೆ ಸಂಭ್ರಮ ಮಾಸುವ ಮುನ್ನವೇ ಮನೆಯಲ್ಲಿ ಸಾವಿನ ಛಾಯೆ ಮೂಡಿದೆ. ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.

Continue Reading

LATEST NEWS

Trending