Connect with us

    FILM

    ಒಟಿಟಿಗೆ ಎಂಟ್ರಿ ಕೊಟ್ಟ ‘ಸ್ತ್ರೀ 2’; ಕಲೆಕ್ಷನ್ ಹೇಗಿದೆ ಗೊತ್ತಾ!?

    Published

    on

    ಮಂಗಳೂರು/ಮುಂಬೈ: ಶ್ರದ್ಧಾ ಕಪೂರ್, ರಾಜ್ಕುಮಾರ್ ರಾವ್, ಪಂಕಜ್ ತ್ರಿಪಾಠಿ ನಟಿಸಿರುವಂತಹ ‘ಸ್ತ್ರೀ 2’ ಸಿನಿಮಾ ಈಗಾಗಲೇ ಗಲ್ಲಾ ಪೆಟ್ಟಿಗೆಯಲ್ಲಿ ಸಕತ್ ಸೌಂಡ್ ಮಾಡಿದೆ. ಕೋಟಿಗಟ್ಟಲೆ ದೋಚಿರುವ ಈ ಚಿತ್ರ ಕಳೆದ ಆಗಸ್ಟ್ನಲ್ಲಿ ಟೆಲಿ ಪರದೆಗೆ ಬಂದಿದ್ದು, ಇಲ್ಲೂ ಬರೋಬ್ಬರಿ 600 ಕೋಟಿಗಳಿಸಿದೆ.


    ‘ಸ್ತ್ರೀ 2’ ಸಿನಿಮಾ ಅಮೇಜಾನ್ ಪ್ರೈಮ್ ವೀಡಿಯೋದಲ್ಲಿ 349 ರೂಪಾಯಿ ಪಾವತಿಸಿ ವೀಕ್ಷಿಸಬಹುದು. ಅಮೇಜಾನ್ ಪ್ರೈಮ್ ವೀಡಿಯೋ ಮೂಲಕ ಸಿನಿಮಾ ನೋಡುವುದಾದರೂ ಪಾವತಿಸಿಯೇ ವೀಕ್ಷಿಸಬೇಕು.
    ಹಿಂದಿ ಭಾಷೆಯಲ್ಲಿ ಮಾತ್ರ ಸಿನಿಮಾನ ನೋಡಬಹುದು. ಚಂದಾದಾರರು ಇದನ್ನು ಉಚಿತವಾಗಿ ವೀಕ್ಷಿಸಬೇಕು ಎಂದರೆ ಮತ್ತಷ್ಟು ದಿನ ಕಾಯಬೇಕು. ಅಲ್ಲಿಯವರೆಗೆ ಹಣ ಪಾವತಿ ಮಾಡಿಯೇ ನೋಡಬೇಕಾಗಿದೆ.


    ಸ್ತ್ರೀ 2 ಸಿನಿಮಾವು ಹಾರರ್ ಕಾಮಿಡಿ ಪ್ರಕಾರದ ಚಿತ್ರವಾಗಿದೆ. ಚಿತ್ರದಲ್ಲಿ ಬರುವ ಪ್ರತೀ ಪಾತ್ರಗಳು ಜನರ ಮನಸೂರೆಗೊಳ್ಳುತ್ತವೆ. ಚಿತ್ರದ ಕಥೆ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.. ಪಾವತಿ ಮಾಡಿ ನೋಡಿದಕ್ಕೂ ಸಾರ್ಥಕವಾಯಿತು ಎಂದು ಹಲವರು ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

    FILM

    ಸೆನ್ಸಾರ್ ಆದೇಶ; ಬಾಲಿವುಡ್‌ನ ಹೊಸ ಚಿತ್ರಕ್ಕೆ 120 ಕಡೆ ಕತ್ತರಿ

    Published

    on

    ಮಂಗಳೂರು/ಪಂಜಾಬ್: ಜಾಬಿ ’95’ ಚಿತ್ರಕ್ಕೆ ಹನಿ ಟ್ರೆಹಾನ್ ನಿರ್ದೇಶನ ಮಾಡಿದ್ದು, ಸೆನ್ಸಾರ್ ಮಂಡಳಿಯವರು 85 ಕಡೆ ಕಟ್ ಮಾಡುವಂತೆ ಹೇಳಿದ್ದರು. ಈಗ ಪರಿಷ್ಕರಣಾ ಸಮಿತಿ ಕೂಡ ಸಿನಿಮಾ ವೀಕ್ಷಣೆ ಮಾಡಿದ್ದು, 120 ದೃಶ್ಯಗಳ ಬಗ್ಗೆ ಅಪಸ್ವರ ತೆಗೆದಿದೆ.


    ಸಿನಿಮಾ ನೋಡಿದ ಬಳಿಕ ಸೆನ್ಸಾರ್ ಮಂಡಳಿಯವರು 10 ಕಡೆ ಕತ್ತರಿ ಹಾಕಲು ಹೇಳಿರುವುದು ಸಾಕಷ್ಟು ಚರ್ಚೆ ಆಗುತ್ತಿದೆ. ದಿಲ್ಜಿತ್ ದೋಸಾಂಜ್ ನಟನೆಯ ‘ಪಂಜಾಬ್ ’95’ ಚಿತ್ರದ ಬಗ್ಗೆ ಸೆನ್ಸಾರ್ ಮಂಡಳಿಯವರು ವಿರೋಧ ವ್ಯಕ್ತ ಪಡಿಸಿದ್ದಾರೆ.
    ‘ಪಂಜಾಬಿ ’95’ ಚಿತ್ರಕ್ಕೆ ಹನಿ ಟ್ರೆಹಾನ್ ನಿರ್ದೇಶನ ಮಾಡಿದ್ದಾರೆ. ರೋನಿ ಸ್ಕ್ರೂವಾಲಾ ನಿರ್ಮಿಸಿದ್ದಾರೆ. ನೈಜ ಘಟನೆಗಳನ್ನು ಇದು ಆಧರಿಸಿದ್ದು, ಮಾನವ ಹಕ್ಕುಗಳ ಕಾರ್ಯಕರ್ತ ಜಸ್ವಂತ್ ಸಿಂಗ್ ಖಲ್ರಾ ಅವರ ಕಥೆಯಾಧರಿತ ಸಿನಿಮಾವಾಗಿದೆ. ಪಂಜಾಬ್‌ನ ದಂಗೆಯ ಅವಧಿಯಲ್ಲಿ ನಡೆದ ಕೊಲೆ ಹಾಗೂ ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಜಸ್ವಂತ್ ಪ್ರಯತ್ನಿಸಿದ್ದರು.
    ಜಸ್ವಂತ್ ಸಿಂಗ್ ಖಲ್ರಾ ಎಂದು ಬಿಂಬಿಸಲಾದ ನಾಯಕನ ಮರುನಾಮಕರಣ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದು ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದು, ಈ ಪಾತ್ರಕ್ಕೆ ಸಟ್ಲೆಜ್ ಎಂದು ಹೆಸರು ಇಡುವಂತೆ ಮಂಡಳಿ ಸೂಚಿಸಿದೆ. ‘ಖಲ್ರಾ ಅವರು ಸಿಖ್ ಸಮುದಾಯದಲ್ಲಿ ಪೂಜ್ಯ ವ್ಯಕ್ತಿಯಾಗಿದ್ದಾರೆ. ಅವರ ಹೆಸರನ್ನು ಮರುನಾಮಕರಣ ಮಾಡುವುದು ಅವರ ಪರಂಪರೆಗೆ ಅಗೌರವವಾಗುತ್ತದೆ’ ಎಂದು ತಂಡದವರು ವಾದಿಸಿದ್ದಾರೆ.
    ಪಂಜಾಬ್ ’95’ ಟೈಟಲ್​ ತೆಗೆಯುವಂತೆಯೂ ಸೂಚಿಸಲಾಗಿದೆ. ಈ ಟೈಟಲ್ ಸಾರ್ವಜನಿಕರ ಮೇಲೆ ಸಾಕಷ್ಟು ಪ್ರಭಾವ ಬೀರಬಹುದು ಎಂದು ಸೆನ್ಸಾರ್ ಮಂಡಳಿ ಅಭಿಪ್ರಾಯಪಟ್ಟಿದೆ. ಸಿನಿಮಾ ಉದ್ದಕ್ಕೂ ಪಂಜಾಬ್ ಹಾಗೂ ಜಿಲ್ಲೆಗಳ ಹೆಸರನ್ನು ಉಲ್ಲೇಖ ಮಾಡಬಾರದು ಎಂದು ಮಂಡಳಿ ಹೇಳಿದೆ. ಕೆನಡಾ ಮತ್ತು ಯುಕೆ ಉಲ್ಲೇಖಗಳು ಸೂಕ್ತವಲ್ಲವೆಂದು ಪರಿಗಣಿಸಲಾಗಿದ್ದು, ತೆಗೆದುಹಾಕುವಂತೆ ತಿಳಿಸಿದ್ದಾರೆ.

    Continue Reading

    FILM

    ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ “ಸ್ವಾತಂತ್ರ್ಯ ವೀರ್ ಸಾವರ್ಕರ್” ಸಿನೆಮಾ

    Published

    on

    ಮುಂಬೈ/ಮಂಗಳೂರು: ಬಾಲಿವುಡ್ ನಟ ರಣ್‌ದೀಪ್‌ ಹೂಡಾ ನಟಿಸಿ ನಿರ್ದೇಶಿಸಿರುವ ಸ್ವಾತಂತ್ರ್ಯ ವೀರ್‌ ಸಾವರ್ಕರ್‌ ಸಿನಿಮಾವೂ ಅಧಿಕೃತವಾಗಿ 2025ರ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದ್ದು, ಈ ಸಿನಿಮಾದಲ್ಲಿ ರಣ್‌ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ ನಟಿಸಿದ್ದಾರೆ.

    savarkar

    ಸಂದೀಪ್ ಸಿಂಗ್ ಅವರು ಈ ಸಿನಿಮಾದ ನಿರ್ಮಾಣ ಮಾಡಿದ್ದು, ಈ ಸಿನಿಮಾವೀಗ ಆಸ್ಕರ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ಖುಷಿಯ ವಿಚಾರವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್  ಮಾಡಿ ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

    2025ರ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ‘ಲಾಪತಾ ಲೇಡಿಸ್’ ಚಿತ್ರ

    ಕೆಲ ವಾರಗಳ ಹಿಂದಷ್ಟೇ ರಣ್‌ದೀಪ್ ಹೂಡಾ ಅವರಿಗೆ ಮುಂಬೈನಲ್ಲಿ ಪ್ರತಿಷ್ಠಿತ ಸ್ವಾತಂತ್ರ್ಯವೀರ ಸಾವರ್ಕರ್‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯ್ತು. ಸ್ವಾತಂತ್ರ್ಯ ಹೋರಾಟಗಾರ ಜೀವನಚರಿತ್ರೆಯನ್ನು ಅದ್ಭುತವಾಗಿ ತೆರೆಗೆ ತಂದಿದ್ದಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಭಾರತದ ಯುವ ಸಮೂಹದಲ್ಲಿ ಸಾಕಷ್ಟು ಪ್ರಭಾವ ಬೀರಿದ್ದ ವಿವಾದಿತ ಹಾಗೂ ಪ್ರಭಾವಶಾಲಿ ನಾಯಕ ವೀರ್ ಸಾವರ್ಕರ್ ಆಗಿದ್ದಾರೆ. ಮಾರ್ಚ್‌ 22 ರಂದು ಹಿಂದಿ ಹಾಗೂ ಮಾರಾಠಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾಗಿತ್ತು.

    Continue Reading

    FILM

    ಲೈಂಗಿಕ ದೌರ್ಜನ್ಯ ಆರೋಪ; ಮಲಯಾಳಂ ನಟ, ರಾಜಕಾರಣಿ ಮುಕೇಶ್ ಬಂಧನ

    Published

    on

    ಕೇರಳ/ಮಂಗಳೂರು: ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ  ಕಾರಣವಾಗಿತ್ತು. ಇದೀಗ ಮತ್ತೊಂದು ಹಂತ ತಲುಪಿದ್ದು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ರಾಜಕಾರಣಿ ಮುಕೇಶ್  ಅವರನ್ನು ಬಂಧಿಸಲಾಗಿದೆ.
    ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಕೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ. ದೌರ್ಜನ್ಯ  ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ. ಬಂಧಿಸಿ ನಂತರ ಬಿಡುಗಡೆ ಮಾಡುವ ಮಾಹಿತಿಯೂ ಇದೆ. ಒಟ್ಟಿನಲ್ಲಿ ಮುಕೇಶ್ ಬಂಧನ ಇತರರಲ್ಲಿ ಆತಂಕ ಸೃಷ್ಟಿ ಮಾಡಿದೆ.
    ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಂದ ಕೂಡಲೇ ಚಲನಚಿತ್ರ ನೀತಿ ಸಮಿತಿ ರಾಜಿನಾಮೆ ಸಲ್ಲಿಸಿದ್ದಾರೆ. ಇನ್ನು ಮಲಯಾಳಂ ಚಿತ್ರರಂಗದ ನಟರುಗಳಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಇಡವೆಲ್ ಬಾಬು, ಚಂದ್ರಶೇಖರನ್ ಸೇರಿದಂತೆ ಹಲವರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.
    Continue Reading

    LATEST NEWS

    Trending