Connect with us

    LATEST NEWS

    ಹಾಸ್ಟೆಲ್‌ನಲ್ಲಿ ಹೊಡೆದಾಟ: 2 ಪೊಲೀಸರಿಗೆ ಗಾಯ-7 ದಿನದೊಳಗೆ ತೆರವುಗೊಳಿಸುವಂತೆ ಶಾಸಕರ ಸೂಚನೆ

    Published

    on

    ಮಂಗಳೂರು: ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟಕ್ಕೆ ಕಾರಣವಾಗಿರುವ ಹಾಸ್ಟೆಲ್‌ ಸ್ಥಳಾಂತರಕ್ಕೆ ಸ್ಥಳೀಯರು ಇದೀಗ ಪಟ್ಟು ಹಿಡಿದಿದ್ದು, 7 ದಿನದೊಳಗೆ ಹಾಸ್ಟೆಲ್‌ ಸ್ಥಳಾಂತರಿಸುವಂತೆ ಶಾಸಕರು ಸೂಚನೆ ನೀಡಿದ್ದು, ಇಲ್ಲದಿದ್ದರೆ ನಾನೇ ಮುಂದೆ ನಿಂತು ಕ್ರಮ ಕೈಗೊಳ್ಳುವುದಾಗಿ ಸಂಸ್ಥೆಯ ಮುಖ್ಯಸ್ಥರಿಗೆ ಎಚ್ಚರಿಸಿದ್ದಾರೆ.


    ನಿನ್ನೆ ರಾತ್ರಿ ಮಂಗಳೂರಿನ ಗುಜ್ಜರಕೆರೆಯ ಮಾರ್ಗನ್ಸ್‌ಗೇಟ್ ಬಳಿ ಇರುವ ನಗರದ ಖಾಸಗಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ವಾಸ ಮಾಡುತ್ತಿರುವ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಹೊಡೆದಾಟ ನಡೆದಿತ್ತು. ಈ ವೇಳೆ ಇಲ್ಲಿಗೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಮತ್ತು ಪೊಲೀಸರು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಒಟ್ಟು ಐದು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡರೆ, ಗಾಯಗೊಂಡ ಇಬ್ಬರು ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ.
    ಹಾಸ್ಟೆಲ್‌ನಲ್ಲಿ ನಿರಂತರವಾಗಿ ವಿದ್ಯಾರ್ಥಿಗಳ ಹೊಡೆದಾಟ ನಡೆಯುತ್ತಿರುವುದು ಹಾಗೂ ಸ್ಥಳೀಯರಿಗೆ ಇದರಿಂದ ಕಿರಿಕಿರಿ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಹಾಸ್ಟೆಲನ್ನು ಕೂಡಲೇ ಮುಚ್ಚುವಂತೆ ಆಗ್ರಹಿಸಿ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

    ಘಟನಾ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗು ಬಂದೋಬಸ್ತ್‌ ಏರ್ಪಡಿಸಿದ್ದರು. ಇಲ್ಲಿನ ಹಾಸ್ಟೆಲ್‌ನಲ್ಲಿ ನಿರಂತರವಾಗಿ ಹೊಡೆದಾಟ ನಡೆಯುತ್ತಿದ್ದು, ವಸತಿ ಪರಿಸರದಲ್ಲಿನ ಮಕ್ಕಳಿಗೆ, ಹೆಂಗಸರಿಗೆ ಭಾರೀ ಸಮಸ್ಯೆ ಆಗುತ್ತಿದೆ ಎಂದು ಕಮಿಷನರ್ ಅವರಿಗೆ ಸ್ಥಳೀಯರು ಮನವರಿಕೆ ಮಾಡಿದರು. ಇಲ್ಲಿನ ಹುಡುಗರು ಸ್ಥಳೀಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದು, ದೀಪಾವಳಿ ಸಮಯದಲ್ಲಿ ಮಧ್ಯರಾತ್ರಿಯವರೆಗೂ ಪಟಾಕಿ ಸಿಡಿಸಿ ಸ್ಥಳೀಯರಿಗೆ ಕಿರಿಕಿರಿ ಮಾಡಿದ್ದಾರೆ.

    ಘಟನಾ ಸ್ಥಳಕ್ಕೆ ಹಿಂದು ಮುಖಂಡರಾದ ಶರಣ್ ಪಂಪ್ವೆಲ್, ಕಾರ್ಪೋರೇಟರ್ ಭಾನುಮತಿ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೆ ಮಂಗಳೂರು ನಗರ ಪೊಲೀಸ್ ಕಮೀಷನರ್‌ ಆಗಮಿಸಿ ಸ್ಥಳೀಯರ ಅಹವಾಲು ಸ್ವೀಕಾರ ಮಾಡಿದರು.

    ಸ್ಥಳೀಯರೇ ಹೊಡೆದಿದ್ದಾರೆ: ವಿದ್ಯಾರ್ಥಿಗಳ ಆರೋಪ
    ನಿನ್ನೆ ಹಾಸ್ಟೆಲ್‌ ಹುಡುಗರ ಮಧ್ಯೆ ಹೊಡೆದಾಟ ನಡೆದಿತ್ತು. ಸ್ವಲ್ಪ ಹೊತ್ತಾದ ಮೇಲೆ ಪೊಲೀಸರು ಏಕಾಏಕಿ ಹಾಸ್ಟೆಲ್‌ಗೆ ನುಗ್ಗಿ ಲಾಠಿ ಬೀಸಿದ್ದಾರೆ. ಸಿಕ್ಕಸಿಕ್ಕವರನ್ನು ಎಳೆದುಕೊಂಡು ಹೋಗಿದ್ದಾರೆ. ಪೊಲೀಸರ ಜೊತೆಗೆ ಸ್ಥಳೀಯ ಯುವಕರು ಸಹ ಹಾಸ್ಟೆಲ್‌ಗೆ ನುಗ್ಗಿ ಸಿಕ್ಕ ಸಿಕ್ಕವರಿಗೆ ಹೊಡೆದಿದ್ದಾರೆ. ಇದರಿಂದ ಕೆಲವರ ಕೈಕಾಲು ಮುರಿದಿದ್ದು, ನಮಗೆ ಹೊಡೆದ ಸ್ಥಳೀಯರ ಮೇಲೂ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಯೊಬ್ಬ ಮಾಧ್ಯಮಗಳಿಗೆ ಹೇಳಿದ್ದಾನೆ.

    ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಎಂದ ಪೊಲೀಸ್‌ ಕಮೀಷನರ್‌
    ಘಟನೆ ಬಗ್ಗೆ ಮಾಹಿತಿ ಪಡೆಯಲು ಸ್ಥಳಕ್ಕೆ ಬಂದ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಮಾತನಾಡಿ, ನಿನ್ನೆ ನಡೆದ ಗಲಾಟೆ ಪ್ರಕರಣದಲ್ಲಿ 5 ಮಂದಿಯನ್ನು ವಶಕ್ಕೆ ಪಡೆದಿದ್ದು, ಇಬ್ಬರ ಪೊಲೀಸರಿಗೆ ಗಾಯವಾಗಿದೆ. ಘಟನೆ ಬಗ್ಗೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಲಾಗುವುದು. ಘಟನೆ ಬಗ್ಗೆ ಸಿಸಿಟಿವಿ ಹಾಗೂ ಇತರ ಸಾಕ್ಷ್ಯ ಸಂಗ್ರಹಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

    ಓರ್ವ ವಿದ್ಯಾರ್ಥಿ ಸಸ್ಪೆಂಡ್‌ 
    ಕಾಲೇಜಿನ ಪ್ರಾಂಶುಪಾಲೆ ಡಾ.ಪರ್ವದಾವರ್ಧಿನಿ ಮಾತನಾಡಿ, ಈಗಾಗಲೇ ಆದರ್ಶ್‌ ಎಂಬ ವಿದ್ಯಾರ್ಥಿಯನ್ನು ಸಸ್ಪೆಂಡ್‌ ಮಾಡಲಾಗಿದ್ದು, ಘಟನೆ ಬಗ್ಗೆ ಕಾಲೇಜು ಮುಖ್ಯಸ್ಥರು ಸೇರಿ ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕಯಗೊಳ್ಳುತ್ತೇವೆ. ನಮ್ಮ ಮಕ್ಕಳಿಂದಾದ ತಪ್ಪಿಗೆ ಸ್ಥಳೀಯರಿಂದ ಕ್ಷಮೆ ಕೋರುತ್ತೇವೆ ಎಂದರು.

    ಕರ್ನಾಟಕ ಮುರ್ದಾಬಾದ್‌ ಎಂದಿದ್ದ ಕೇರಳ ವಿದ್ಯಾರ್ಥಿಗಳು

    ಕೆಲದಿನಗಳ ಹಿಂದೆ ಇಲ್ಲಿನ ಕೇರಳ ಮೂಲದ ವಿದ್ಯಾರ್ಥಿಗಳು ಕರ್ನಾಟಕ ಮುರ್ದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ದೂರದೂರಿನಿಂದ ಇಲ್ಲಿ ಕಲಿಯಲು ಬಂದು ಇಲ್ಲಿನ ಅನ್ನ ನೀರು ಕುಡಿದು ಕರ್ನಾಟಕ ಮುರ್ದಾಬಾದ್‌ ಎಂದರೆ ಅರ್ಥವಿದೆಯೇ ಎಂದು ಪ್ರಶ್ನಿಸಿದರು.

    ಸ್ಥಳಕ್ಕೆ ಶಾಸಕ ವೇದವ್ಯಾಸ್‌ ಭೇಟಿ
    ಸ್ಥಳೀಯರು ಶಾಸಕರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಶಾಸಕರು ಸಂಸ್ಥೆಯ ಮುಖ್ಯರೊಂದಿಗೆ ಮಾತನಾಡಿ, ಇನ್ನು ಏಳು ದಿನದೊಳಗೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಸ್ಥಳಾಂತರಿಸುವಂತೆ ಸೂಚನೆ ನೀಡಿದರು. ನಿಮ್ಮ ಸಂಸ್ಥೆಯ ಬಗ್ಗೆ ಅಪಾರ ಅಭಿಮಾನವಿದೆ. ಮಂಗಳೂರಿನ ಸರ್ವತೋಮುಖ ಬೆಳವಣಿಗೆಗೆ ನಿಮ್ಮದೂ ಪಾಲಿದೆ ಎಂದರು.
    ನನಗೆ ನನ್ನ ಕ್ಷೇತ್ರದ ಶಾಂತಿ, ಸಾಮರಸ್ಯ ಮುಖ್ಯ ಆದ್ದರಿಂದ ಈ ಘಟನೆಯ ಬಗ್ಗೆ ಪೊಲೀಸ್‌ ಆಯುಕ್ತ, ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದರು.

    ಸೂಕ್ತ ಭದ್ರತೆ ಒದಗಿಸಲು ಸರ್ಕಲ್‌ ಇನ್ಸ್‌ಪೆಕ್ಟರ್‌ಗೆ ಸೂಚನೆ

    ಶಾಸಕ ವೇದವ್ಯಾಸ್‌ ಕಾಮತ್‌ ಸ್ಥಳೀಯ ಸರ್ಕಲ್‌ ಇನ್ಸ್‌ಪೆಕ್ಟರ್‌ ಲೋಕೆಷ್‌ ಎಂಸಿ ಅವರನ್ನು ಸ್ಥಳಕ್ಕೆ ಕರೆಸಿ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ತೆರಳುವವರೆಗೂ ಸ್ಥಳೀಯರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending