Connect with us

KADABA

ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ನಾಪತ್ತೆ-ಗಂಡನಿಂದ ಪೊಲೀಸರಿಗೆ ದೂರು

Published

on

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯೆಯೊಬ್ಬರು ನಾಪತ್ತೆಯಾಗಿರುವುದರ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್‌ ಎಂಬವರ ಪತ್ನಿ ಭಾರತಿ ಮೂಕಮಲೆ (33) ನಾಪತ್ತೆಯಾಗಿರುವ ಮಹಿಳೆ.


ಅವರು ಅಕ್ಟೋಬರ್ 29ರಂದು ಕಾಣೆಯಾಗಿದ್ದಾರೆ. ಈ ಬಗ್ಗೆ ಭಾರತಿ ಅವರ ಪತಿ ದೂರು ನೀಡಿದ್ದಾರೆ.
ಅಕ್ಟೋಬರ್ 29 ರಂದು ಸಂಜೆ ಮನೆಗೆ ಬಂದಾಗ ಭಾರತಿ ಮನೆಯಲ್ಲಿ ಇರಲಿಲ್ಲ,

ಮಕ್ಕಳಲ್ಲಿ ವಿಚಾರಿಸಿದಾಗ ಅವರು ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್‌ ಸ್ವೀಚ್‌ ಆಫ್‌ ಆಗಿತ್ತು.

ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ

Published

on

ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್‌ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

DAKSHINA KANNADA

ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ!

Published

on

ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಆಗಿ ಜಯಣ್ಣ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದರು.

ಇದಕ್ಕೂ ಮೊದಲು ಸೋಮವಾರ ಪೇಟೆ ತಾಲೂಕ ಪಂಚಾಯತ್ ನಲ್ಲಿ ಅವರು ಇಒ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲಿರುವಾಗಲೇ ಇವರ ವಿರುದ್ಧ ಅಕ್ರಮ ಆಸ್ತಿಗಳಿಕೆಯ ದೂರು ದಾಖಲಾಗಿದ್ದು, ಆ ವಿಚಾರದ ತನಿಖೆಗೆ ಇಂದು ಕಡಬದಲ್ಲಿ ವಿಚಾರಣೆ ನಡೆಸಿದ್ದಾರೆ.
ಸೋಮವಾರಪೇಟೆಯ ಮನೆ, ಕಡಬದ ಕಚೇರಿ ಹಾಗೂ ಕಡಬದಲ್ಲೇ ಇರುವ ಜಯಣ್ಣ ಅವರ ಬಾಡಿಗೆ ಮನೆ ಮೇಲೆ ಏಕ ಕಾಲಕ್ಕೆ ದಾಳಿ ಮಾಡಲಾಗಿದೆ.

ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಜಯಣ್ಣ ಅವರ ವಿಚಾರಣೆ ನಡೆಸುತ್ತಿದ್ದಾರೆ.

Continue Reading

LATEST NEWS

Trending