DAKSHINA KANNADA
ಮಂಗಳೂರು: ರೈತ ಶಕ್ತಿ ಯೋಜನೆಯಡಿ ರೈತ ಸಹಾಯಧನ
ಮಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚವನ್ನು ಕಡಿಮೆ ಮಾಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದೆ.
ಪ್ರತಿ ಎಕ್ರೆಗೆ 250 ರೂ.ಗಳಂತೆ ಗರಿಷ್ಠ 5 ಎಕ್ರೆಗೆ ಮೀರದಂತೆ 1,250ರೂ. ಗಳವರೆಗೆ ಡಿ.ಬಿ.ಟಿ ಮೂಲಕ ಸಹಾಯಧನ ನೀಡಲು ಯೋಜಿಸಿದ್ದು,
ಈ ಯೊಜನೆಯಡಿ ಸೌಲಭ್ಯ ಪಡೆಯುವ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹಿಡುವಳಿ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಸಹಾಯಧನವನ್ನು ನೀಡಲಾಗುವುದು.
ಪ್ರತಿಯೊಬ್ಬ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಖಡ್ಡಾಯವಾಗಿ ನೋಂದಾಣಿಯಾಗಿ ತಮ್ಮ ಎಲ್ಲಾ ಸರ್ವೇ ನಂಬರ್ಗಳನ್ನು ನೋಂದಣಿ ಮಾಡಿಸಬೇಕು.
ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಾದ ಭೂ ಹಿಡುವಳಿಯ ಆಧಾರದ ಮೇಲೆ ಗರಿಷ್ಠ ಸಹಾಯಧನ ನೀಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
DAKSHINA KANNADA
ದೇವಸ್ಥಾನದಲ್ಲಿ ಚಪ್ಪಲಿ ಕಳೆದುಹೋದರೆ ಒಳ್ಳೆಯದಾ..? ಕೆಟ್ಟದ್ದಾ..?
ಸಾಮಾನ್ಯವಾಗಿ ಎಲ್ಲರೂ ಚಪ್ಪಲಿ ತೆಗೆದುಕೊಳ್ಳುವಾಗ ಕೊಟ್ಟಂತಹ ಗಮನವನ್ನ ಅದನ್ನು ತೆಗೆದುಕೊಂಡು ಆದ ಮೇಲೆ ಯಾರೂ ಅದನ್ನ ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಚಪ್ಪಲಿಯನ್ನ ಇನ್ನು ಮುಂದೆ ನಿರ್ಲಕ್ಷ್ಯ ಮಾಡಬೇಡಿ. ಚಪ್ಪಲಿ ಸಹ ನಮ್ಮ ನಸೀಬನ್ನ ಬದಲಿಸಿ ನಮ್ಮ ಜೀವನದಲ್ಲಿ ಬದಲಾವಣೆಯನ್ನು ತರಬಲ್ಲದು.
ನಾವು ಫ್ಯಾಶನೇಬಲ್ ಆದ್ರೆ ಮಾತ್ರ ಬೇರೆಯವರ ಗಮನವನ್ನು ನಮ್ಮ ಕಡೆಗೆ ಸೆಳೆಯಬಹುದು ಅಂತ ತುಂಬಾ ಜನ ಅಂದುಕೊಂಡು ಇರುತ್ತಾರೆ. ಫ್ಯಾಶನೇಬಲ್ ಬಟ್ಟೆ, ಟ್ರೆಂಡೀ ಶೂ ಅಥವಾ ಚಪ್ಪಲಿಗಳಿರಬಹುದು ಅಥವಾ ಫ್ಯಾಶನೇಬಲ್ ಜ್ಯುವೆಲ್ಲರಿ ಆಗಿರಬಹುದು ಈ ರೀತಿ ಟ್ರೆಂಡಿಯಾಗಿ ಡ್ರೆಸ್ ಮಾಡಿದ್ರೆ ಎಲ್ಲರ ಗಮನ ನಮ್ಮ ಹತ್ತಿರ ತಿರುಗುತ್ತೆ. ಭಾರತೀಯ ಸಂಸ್ಕೃತಿಯಲ್ಲಿ ಮನೆಯೊಳಗೆ ಚಪ್ಪಲಿಯನ್ನು ಹಾಕಿಕೊಂಡು ಹೋಗುವುದು ಸೂಕ್ತವಲ್ಲ. ನಾವು ಚಪ್ಪಲಿಯನ್ನು ಹೊರಗಡೆ ಎಲ್ಲಿಗೂ ಹೋಗುವಾಗಲು ಹಾಕುತ್ತೇವೆ.
ಹೀಗೆ ದೇವಸ್ಥಾನಕ್ಕೆ ಹೋಗುವಾಗ ಚಪ್ಪಲಿಯನ್ನು ಹಾಕಿಕೊಂಡು ಹೋಗುತ್ತೇವೆ. ಕೆಲವೊಂದು ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ತುಂಬಾ ಭಕ್ತಾಧಿಗಳು ಹೋಗುತ್ತಾ ಬರುತ್ತಾ ಇರುತ್ತಾರೆ. ಅಲ್ಲಿ ಚಪ್ಪಲಿಗೆಂದೇ ಸ್ಟ್ಯಾಂಡ್ ಇಟ್ಟಿರುತ್ತಾರೆ. ನಾವು ಹಣ ಕೊಟ್ಟು ನಮ್ಮ ಚಪ್ಪಲಿಯನ್ನ ಅಲ್ಲಿ ಕಾಪಾಡಬಹುದು. ಆದ್ರೆ ಕೆಲವರು ಚಪ್ಪಲಿಯನ್ನು ಹೊರಗಡೇ ಇಟ್ಟು ಹೋಗುತ್ತಾರೆ. ದೇವರ ದರ್ಶನ ಮಾಡಿ ಹೊರಗೆ ಬರುವಾಗ ಆ ಚಪ್ಪಲಿ ಕಾಣುವುದಿಲ್ಲ. ಕೆಲವೊಮ್ಮೆ ರಶ್ ಇರಬೇಕಾದ್ರೆ ತಿಳಿಯದೇ ಜನರು ಹಾಕಿಕೊಂಡು ಹೋಗುತ್ತಾರೆ. ಕೆಲವೊಮ್ಮೆ ಬೇಕುಬೇಕಂತಲೆ ಅದನ್ನು ಕದ್ದುಕೊಂಡು ಹೋಗುತ್ತಾರೆ. ದೇವಸ್ಥಾನಗಳಲ್ಲಿ ಚಪ್ಪಲಿ ಕಳುವಾದ್ರೆ ಅದು ಒಳ್ಳೆಯದೇ ಎನ್ನುವ ನಂಬಿಕೆ ಕೂಡ ಇದೆ.
ಚಪ್ಪಲಿ ಹಾಳತ್ತಾಗಿದ್ದರೆ ಕಳೆದು ಹೋದರೂ ಬೇಜಾರಿಲ್ಲ. ಆದರೆ ಹೊಸತ್ತಾದರೆ ತುಂಬಾ ಬೇಜಾರ್ ಆಗುತ್ತದೆ. ಇಂತ ಸಮಯದಲ್ಲಿ ಕೆಲವರು ಹೇಳುತ್ತಾರೆ ಚಪ್ಪಲಿ ಕಳೆದು ಹೋದರೆ ನಿನ್ನ ದಾರಿದ್ರ್ಯ ಹೋಯಿತು. ಇನ್ನು ಮುಂದಕ್ಕೆ ನಿನಗೆ ಒಳ್ಳೆಯದಾಗುತ್ತದೆ ಎಂದು ಹೇಳುತ್ತಾರೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಭ ಚಿಹ್ನೆ:
ಚಪ್ಪಲಿ ಕಳೆದುಹೋದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಭ ಚಿಹ್ನೆ ಎಂದು ಹೇಳುತ್ತಾರೆ. ಅದರಲ್ಲೂ ವಿಶೇಷವಾಗಿ ಶನಿವಾರ ಚಪ್ಪಲಿ ಕಳೆದುಹೋದರೆ ಪಾದರಕ್ಷೆಯೊಂದಿಗೆ ನಿಮ್ಮ ಶನಿಯು ದೂರವಾಯಿತು ಎಂದು ಅರ್ಥ. ನಮ್ಮ ದೇಹದ ಭಾಗಗಳು ಗ್ರಹಗಳಿಂದ ಪ್ರಭಾವಿತವಾಗಿರುತ್ತದೆ. ಶನಿ ಚರ್ಮ ಮತ್ತು ಪಾದಗಳಲ್ಲಿ ವಾಸಿಸುತ್ತಾನೆ. ಹೀಗೆ ಪಾದರಕ್ಷೆ ಕಳುವಾದ್ರೆ ನಿಮ್ಮ ಸಮಸ್ಯೆ ದೂರವಾಯ್ತು ಎಂದು ಹೇಳುತ್ತದೆ ಜ್ಯೋತಿಷ್ಯ ಶಾಸ್ತ್ರ.
DAKSHINA KANNADA
ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ
ಉಳ್ಳಾಲ : ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾ*ತ ಪ್ರಕರಣಗಳು ಹೆಚ್ಚುತ್ತಿವೆ. ಹೃದಯಾಘಾ*ತ ಸಂಭವಿಸಲು ವಯಸ್ಸಿನ ಇತಿ ಮಿತಿ ಎಂಬುದಿಲ್ಲದಂತಾಗಿದೆ. ಇದೀಗ ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೇ ಹೃದಯಾಘಾ*ತಕ್ಕೀಡಾಗಿ ಸಾ*ವನ್ನಪ್ಪಿರುವ ಘಟನೆ ಮಂಗಳವಾರ ಸಂಭವಿಸಿದೆ.
ಕನೀರುತೋಟ ನಿವಾಸಿ ಜಿತೇಶ್ (28) ಸಾ*ವನ್ನಪ್ಪಿದವರು. ಜಿತೇಶ್ ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದರು. ಯಾವತ್ತೂ ಬೇಗ ಏಳುತ್ತಿದ್ದ ಜಿತೇಶ್ ಇನ್ನೂ ಯಾಕೆ ಎದ್ದಿಲ್ಲ ಎಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ
ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮೃ*ತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
DAKSHINA KANNADA
ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ
ಪುತ್ತೂರು: ಇಲ್ಲಿನ ಮುರ ಎಂಬಲ್ಲಿ ಕಬಕ-ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿರುವ ಘಟನೆ ಎ.23ರಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ.
ಮೃತಪಟ್ಟ ವ್ಯಕ್ತಿಯ ದೇಹ ಹಳಿಯಿಂದ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು ಕಾಲು ತುಂಡಾದ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹ*ತ್ಯೆಯೋ? ಅಥವಾ ರೈಲು ಡಿಕ್ಕಿಯಾಗಿ ಸಂಭವಿಸಿದ ಘಟನೆಯೋ ಅನ್ನುವುದು ತನಿಖೆ ವೇಳೆ ಬೆಳಕಿಗೆ ಬರಲಿದೆ.
ಮುಂದೆ ಓದಿ..; ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
Sitaram Shetty
09/05/2022 at 11:38 AM
Pls detailed form for registration