Connect with us

DAKSHINA KANNADA

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ ಶಿಶುವಿಗೆ ಜೀವದಾನ ಮಾಡಿದ ಎಜೆ ಆಸ್ಪತ್ರೆಯ ವೈದ್ಯರ ತಂಡ..!

Published

on

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ ಶಿಶುವಿಗೆ ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಚಿಕತ್ಸೆ ನಡೆಸುವ ಮೂಲಕ ಜೀವದಾನ ಮಾಡಿದೆ.

ಮಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ ಶಿಶುವಿಗೆ ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಚಿಕತ್ಸೆ ನಡೆಸುವ ಮೂಲಕ ಜೀವದಾನ ಮಾಡಿದೆ.

24 ದಿನದ ಈ ಗಂಡು ಮಗು ಸ್ತನ್ಯಪಾನ ಮಾಡುವಾಗ ತೀವ್ರ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದು, ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮಗು ಉಸಿರಾಡಲು ಕಷ್ಟಪಡುತ್ತಾ ಶ್ವಾಸೋಚ್ಚಾಸ ಮಾಡುವಾಗ, ಎದೆಹಾಲು ಕುಡಿಯುವಾಗ ಮೈ ನೀಲಿ ವರ್ಣಕ್ಕೆ ತಿರುಗುತಿತ್ತು.

ಮಗುವನ್ನು ಇಸಿಜಿ ಮೂಲಕ ಪರೀಕ್ಷಿಸಿದಾಗ ಹೃದಯದಿಂದ ಅಶುದ್ದ ರಕ್ತವನ್ನು ಶ್ವಾಸಕೋಶಗಳಿಗೆ ಕಳುಹಿಸುವ ಪಲ್ಮನರಿ ರಕ್ತನಾಳಗಳ ತೀವ್ರ ಒತ್ತಡ ಬೀಳುತ್ತಿರುವುದನ್ನು ತಜ್ಞ ವೈದ್ಯರ ತಂಡ ಪತ್ತೆ ಹಚ್ಚಿತ್ತು.

ಇಎನ್​ಟಿ ಚಿಕಿತ್ಸಕ ಡಾ.ಗೌತಮ್ ಕುಳವರ್ಮ ಅವರು ಶಿಶುವಿನ ಮೂಗಿನಿಂದ ಶ್ವಾಸನಾಳದವರೆಗೆ ಉಸಿರಾಟದ ದಾರಿಯಲ್ಲಿ ತೊಂದರೆಗಳೇನಾದರೂ ಇವೆಯೇ ಎಂದು ಪರೀಕ್ಷಿಸಿದ್ದಾರೆ.

ಅತ್ಯಾಧುನಿಕ ವಿಡಿಯೋ ಎಂಡೋಸ್ಕೋಪಿ ಮೂಲಕ ನೋಡಿದಾಗ ನಾಲಿಗೆಯ ಬುಡದ ಶ್ವಾಸನಾಳದ ಪ್ರವೇಶದ್ವಾರದಲ್ಲಿ ಒಂದು ಸಿಸ್ಟ್ (ನೀರ್ಗುಳ್ಳೆ) ಇರುವುದು ಕಂಡುಬಂದಿದೆ.

ಇದನ್ನು ಎಂಆರ್​ಐ ಸ್ಕ್ಯಾನಿಂಗ್ ಮೂಲಕವೂ ಖಚಿತಪಡಿಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿ ಮಗುವಿಗೆ ಜೀವದಾನ ಮಾಡಿದ್ದಾರೆ.

ಡಾ.ಗೌತಮ್ ಕುಳವರ್ಮ ಅವರು ಅರಿವಳಿಕೆ ತಜ್ಞರಾದ ಡಾ.ಗುರುರಾಜ ತಂತ್ರಿಯವರ ಸಹಕಾರದೊಂದಿಗೆ ಎಂಡೋಸ್ಕೋಪಿ ಮೂಲಕ ಶಸ್ತ್ರಚಿಕಿತ್ಸೆ ನಡೆಸಿ ನೀರ್ಗುಳ್ಳೆಯನ್ನು ಯಶಸ್ವಿಯಾಗಿ ಕತ್ತರಿಸಿ ತೆಗೆದಿದ್ದಾರೆ.

ನಂತರ ಎ ಜೆ ಆಸ್ಪತ್ರೆಯ ಪೆಥಾಲಜಿಸ್ಟ್ ಡಾ.ಸಂಧ್ಯಾ ಇಳಂತೋಡಿ ಅವರು ಈ ಗುಳ್ಳೆಯನ್ನು ಥೈರೋಗ್ಲೋಸಲ್ ಸಿಸ್ಟ್ ಎಂದು ಖಚಿತಪಡಿಸಿದ್ದಾರೆ.


ಡಾ.ಗೌತಮ್ ಕುಳವರ್ಮ ಈ ಬಗ್ಗೆ ಮಾಹಿತಿ ನೀಡಿ, ಈ ರೀತಿಯ ಸಮಸ್ಯೆ ಲಕ್ಷ ಸಂಖ್ಯೆಯಲ್ಲಿ ಇಬ್ಬರು ಮಕ್ಕಳಿಗೆ ಕಾಣಿಸಿಕೊಳ್ಳುತ್ತಿದೆ.

ಇದರಲ್ಲಿ ಶೇ 40 ರಷ್ಟು ಮರಣದ ಅಪಾಯವಿರುತ್ತದೆ. ಶಿಶು ಗರ್ಭಾಶಯದಲ್ಲಿ ಬೆಳವಣಿಗೆಯ ಹಂತದಲ್ಲಿದ್ದಾಗ ಥೈರಾಯ್ಡ್ ಗ್ರಂಥಿಯ ಕೆಲವು ಕೋಶಗಳು ನಾಲಗೆಯ ಬುಡದಲ್ಲಿ ಉಳಿದುಕೊಂಡು ಈ ರೀತಿಯ ಗುಳ್ಳೆ ಉಂಟಾಗುತ್ತದೆ.

ಇದನ್ನು ನಮ್ಮ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ನಿಭಾಯಿಸಿ ಮಗುವಿನ ಜೀವ ಉಳಿಸುವ ಕಾರ್ಯ ಮಾಡಿದೆ ಎಂದರು.

Click to comment

Leave a Reply

Your email address will not be published. Required fields are marked *

DAKSHINA KANNADA

Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!

Published

on

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Trending