Connect with us

LATEST NEWS

ಸೋಮೇಶ್ವರ ಕಡಲ ಕಿನಾರೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

Published

on

ಉಳ್ಳಾಲ: ಎಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಿನ್ನೆ ನಡೆದಿದೆ.

 

ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರಂತೆ. ನಿನ್ನೆ ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ. ಪವನ್ ಹಾರಿದ್ದನ್ನು ನೋಡಿದ ಈಜು ರಕ್ಷಕರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ರುದ್ರಪಾದೆಯ ಕೆಳಭಾಗದಲ್ಲಿ ತೀವ್ರ ಆಳ ಇರುವುದರಿಂದ ಸುಳಿ ಇದ್ದು ಸಕಾಲದಲ್ಲಿ ರಕ್ಷಣೆ ಸಾಧ್ಯವಾಗಲಿಲ್ಲ.

ಬಳಿಕ ಶವ ಅಲೆಗಳಲ್ಲಿ ತೇಲಿ ಬಂದಿದ್ದನ್ನು ಗಮನಿಸಿದ ತಂಡ  ಕಡಲಿನ ಅಬ್ಬರ ಜಾಸ್ತಿ ಇದ್ದರೂ  ಗೃಹ ರಕ್ಷಕ ಸಿಬ್ಬಂದಿ ಪ್ರಸಾದ್ ಸುವರ್ಣ, ವೀನುಗಾರರಾದ ಸಾಗರ್, ಕರಾವಳಿ ಕಾವಲು ಪಡೆಯ ಮೋಹನ್, ಸುಜಿತ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ ಸೇರಿ ಅಲೆಗಳೊಂದಿಗೆ ಸೆಣಸಾಡಿ ಮೃತದೇಹವನ್ನ ದಡಕ್ಕೆ ಎಳೆದಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

WATCH VIDEO : ಮತ್ತೆ ಎಡವಿದ ಸಿಎಂ… ಹೆಲಿಕ್ಯಾಪ್ಟರ್‌ನಲ್ಲಿ ಬಿದ್ದು ಗಾಯ…!

Published

on

ಕೋಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಗಾ*ಯಗೊಂಡಿದ್ದಾರೆ. ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವ ಸಂದರ್ಭ ಮಮತಾ ಬ್ಯಾನರ್ಜಿ ಅವರಿಗೆ ಗಾ*ಯವಾಗಿದೆ. ಅವರು ಹೆಲಿಕಾಪ್ಟರ್ ಒಳಗೆ ಎಡವಿ ಬಿದ್ದಿದ್ದಾರೆ. ಸದ್ಯ ಅವರು ಬದ್ದಿರುವ ವೀಡಿಯೋ ವೈರಲ್ ಆಗುತ್ತಿದೆ.


ಮಮತಾ ಬ್ಯಾನರ್ಜಿ ದುರ್ಗಾಪುರದಿಂದ ಅಸನ್ಸೋಲ್‌ಗೆ ತೆರಳುತ್ತಿದ್ದ ವೇಳೆ ಈ ಅವಘ*ಡ ಸಂಭವಿಸಿದೆ. ಅಸನ್ಸೋಲ್​ನಲ್ಲಿ ಅವರು ಟಿಎಂಸಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಅವರನ್ನು ಬೆಂಬಲಿಸಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಮೆಟ್ಟಿಲುಗಳನ್ನು ಸಲೀಸಾಗಿ ಏರಿದ್ದರು. ಆದರೆ, ಒಳಗೆ ಹೋಗುತ್ತಿದ್ದಾಗ ಬ್ಯಾಲೆನ್ಸ್ ಕಳೆದುಕೊಂಡು ಎಡವಿ ಬಿದ್ದಿದ್ದಾರೆ.

ಅವರ ಕಾಲಿಗೆ ಸ್ವಲ್ಪ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅವರ ಭದ್ರತಾ ಸಿಬ್ಬಂದಿ ತಕ್ಷಣವೇ ಅವರಿಗೆ ಸಹಾಯ ಮಾಡಿದರು.

ಅಸನ್ಸೋಲ್ ಗೆ ತೆರಳಿದ ಸಿಎಂ :

ಮಮತಾ ಬ್ಯಾನರ್ಜಿ ಸ್ವಲ್ಪ ಸಮಯದ ಬಳಿಕ ದುರ್ಗಾಪುರದಿಂದ ಅಸನ್ಸೋಲ್ ಗೆ ತೆರಳಿದರು. ಅವರ ಗಾಯ ಅಷ್ಟೊಂದು ಗಂಭೀರವಾಗಿಲ್ಲ. ಅವರು ಅಸನ್ಸೋಲ್‌ನಲ್ಲಿ ಪಕ್ಷದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ಈ ಹಿಂದೆಯೂ ಬಿದ್ದಿದ್ದ ಮಮತಾ :


ಕೆಲವು ದಿನಗಳ ಹಿಂದೆ ಟಿಎಂಸಿ ಮುಖ್ಯಸ್ಥೆ ತನ್ನ ಮನೆಯ ಸ್ನಾನಗೃಹದಲ್ಲಿ ಬಿದ್ದಿದ್ದರಿಂದ ತಲೆಗೆ ಗಾಯವಾಗಿತ್ತು. ಫೋಟೋಗಳು ವೈರಲ್ ಆಗಿದ್ದವು. ಈ ಹಿಂದೆ 2021ರ ವಿಧಾನಸಭಾ ಚುನಾವಣೆ ವೇಳೆ ನಂದಿಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದರು. ಅಲ್ಲಿ ನೆರೆದಿದ್ದ ಜನಜಂಗುಳಿಯಲ್ಲಿ ನಡೆದ ಗಲಾಟೆಯಲ್ಲಿ ಮಮತಾ ಬ್ಯಾನರ್ಜಿ ಅವರ ಕಾಲು ಕಬ್ಬಿಣದ ಕಂಬಕ್ಕೆ ತಗುಲಿತ್ತು. ಪರಿಣಾಮ ಅವರು ಗಾಯಗೊಂಡಿದ್ದರು. ಈ ಘಟನೆಯನ್ನು ಬಿಜೆಪಿಯ ಪಿತೂರಿಯ ಭಾಗ ಎಂದು ಟಿಎಂಸಿ ಆರೋಪಿಸಿತ್ತು.

ಇದನ್ನೂ ಓದಿ  : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಅದೇ ಸಮಯದಲ್ಲಿ, ಜನರ ಸಹಾನುಭೂತಿ ಗಳಿಸಲು ಮಮತಾ ಬ್ಯಾನರ್ಜಿ ಗಾಯಗೊಂಡಂತೆ ನಟಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

ಕಳೆದ ರಾಜ್ಯ  ವಿಧಾನಸಭಾ ಚುನಾವಣೆಯ ಸಮಯದಲ್ಲೂ ಕೂಡಾ ಮಮತಾ ಬ್ಯಾನರ್ಜಿ ಅವರಿಗೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕಾಲು ಫ್ರಾಕ್ಚರ್‌ ಆಗಿದ್ದರೂ ಅದೇ ಕಾಲುಗಳಲ್ಲಿ ರಾಜ್ಯಾಂದ್ಯಂತ ಸಂಚಾರ ಮಾಡಿ ಪ್ರಚಾರ ಮಾಡಿದ್ದರು.

Continue Reading

FILM

WATCH VIDEO : ಕಾಸರಗೋಡಿನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್

Published

on

ಕಾಸರಗೋಡು : ಸನ್ನಿಲಿಯೋನ್ ಯಾರಿಗೆ ತಾನೆ ಗೊತ್ತಿಲ್ಲ. ತನ್ನ ಮಾದಕ ನೋಟದಿಂದ, ನಟನೆಯಿಂದ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೋಹಕ ತಾರೆ. ಸದ್ಯ ಅವರು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಚಿತ್ರವೊಂದರ ಶೂಟಿಂಗ್ ಗಾಗಿ ಕಾಸರಗೋಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಸೀತಂಗೋಳಿ ಸಮೀಪದ ಶೇಣಿಯಲ್ಲಿ ಹಿಂದಿ ಚಿತ್ರವೊಂದರ ಶೂಟಿಂಗ್ ನಲ್ಲಿ ಅವರು ಭಾಗಿಯಾಗಿದ್ದಾರೆ. ಹೇಳಿ ಕೇಳಿ ಕಾಸರಗೋಡಿನಲ್ಲಿ ಚಿತ್ರೀಕರಣಕ್ಕೆ ಹೆಸರುವಾಸಿಯಾದ ಸುಂದರ ಪ್ರದೇಶ ಶೇಣಿ. ಇಲ್ಲಿ ಹಲವಾರು ಪರಭಾಷಾ ಚಲನಚಿತ್ರಗಳ ಚಿತ್ರೀಕರಣ ನಡೆದಿದೆ. ಇದೀಗ ಸನ್ನಿ ಲಿಯೋನ್ ಚಿತ್ರದ ಚಿತ್ರೀಕರಣವೂ ನಡೆಯುತ್ತಿದೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಸನ್ನಿಯ ಮಾದಕ ನೋಟವನ್ನ ನೋಡಲು ರಸ್ತೆ ಬದಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.

 

Continue Reading

FILM

ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

Published

on

ಸಿನಿಮಾ ರಂಗದಲ್ಲಿ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಹೇಳಿಕೊಳ್ಳುತ್ತಲೇ ಇರುತ್ತಾರೆ. ಕಾಸ್ಟಿಂಗ್ ಕೌಚ್ ವಿಚಾರ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಮತ್ತೊಬ್ಬ ನಟಿ ಕಿರುತೆರೆಯಲ್ಲಿ ತನಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ಹೌದು, ಕಿರುತೆರೆ ಖ್ಯಾತ ನಟಿ ಕೃಷ್ಣಾ ಮುಖರ್ಜಿ ಈ ಬಗ್ಗೆ ನೋವು ಹಂಚಿಕೊಂಡಿದ್ದಾರೆ.


ಧಾರಾವಾಹಿಯಿಂದ ಹೊರಬರಲು ಕಾರಣ ತಿಳಿಸಿದ ನಟಿ:

ಕೃಷ್ಣಾ ‘ಯೇ ಹೇ ಮೊಹಾಬತೇ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದರು. ನಾಗಿನ್ 2 ಕೂಡ ಅವರಿಗೆ ಹೆಸರು ತಂದು ಕೊಟ್ಟಿದೆ. ಇದೀಗ ಅವರು ತಮಗಾದ ಕಿರುಕುಳದ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೃಷ್ಣಾ ‘ಶುಭ ಶಗುನ್’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ ಎಂದು ನಟಿ ಆರೋಪಿಸಿದ್ದಾರೆ.


ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿವರವಾಗಿ ಹೇಳಿದ್ದಾರೆ. ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ’ ಎಂದು ಬರೆದುಕೊಂಡಿದ್ದಾರೆ.
‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಬರೆದಿದ್ದಾರೆ. ಅಲ್ಲದೇ, ಕುಂದನ್ ಸಿಂಗ್ ಅವರನ್ನು ಟ್ಯಾಗ್ ಕೂಡಾ ಮಾಡಿದ್ದಾರೆ.

ಮೇಕಪ್ ರೂಂ ಲಾಕ್ ಮಾಡಿದ್ದರು :

ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ’ ಎಂದಿದ್ದಾರೆ ಕೃಷ್ಣಾ.

‘ಪ್ರೊಡಕ್ಷನ್ ಹೌಸ್ ಹಾಗೂ ನಿರ್ಮಾಪಕ ಕುಂದನ್ ಸಿಂಗ್ ಅವರು ನನಗೆ ಕಿರುಕುಳ ನೀಡಿದ್ದಾರೆ. ನನಗೆ ಅಂದು ಅನಾರೋಗ್ಯವಾಗಿತ್ತು. ಜೊತೆಗೆ ಅವರು ಸಂಭಾವನೆಯನ್ನೂ ಕೊಡುತ್ತಿರಲಿಲ್ಲ. ಹೀಗಾಗಿ ನಾನು ಶೂಟ್ ಮಾಡಲ್ಲ ಎಂದೆ. ಇದಕ್ಕಾಗಿ ಅವರು ಮೇಕಪ್​ ರೂಂನಲ್ಲಿ ನನ್ನನ್ನು ಲಾಕ್ ಮಾಡಿದ್ದರು. ನಾನು ಬಟ್ಟೆ ಬದಲಿಸುವಾಗ ಬಾಗಿಲು ಮುರಿಯುವ ರೀತಿಯಲ್ಲಿ ಬಾಗಿಲು ಬಡಿಯುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!


ಕೃಷ್ಣಾ ಪೋಸ್ಟ್ ಗೆ ಹಲವು ಮಂದಿ ಕಮೆಂಟ್ ಮಾಡಿದ್ದು, ನಿಮಗೆ ನ್ಯಾಯ ಸಿಗಲೇಬೇಕು ಎಂದು ಕೆಲವರು ಹೇಳಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಕೆಲವರು ಹೇಳಿದ್ದಾರೆ. ಇದು ಮನಸ್ಸು ಮುರಿಯುವ ವಿಚಾರ ಎಂದು ಕಮೆಂಟ್ ಮಾಡಲಾಗಿದೆ. ಅವರ ಅಭಿಮಾನಿಗಳು ಮಾತ್ರವಲ್ಲದೇ, ಕಲಾವಿದರೂ ಕಮೆಂಟ್ ಗಳನ್ನು ಮಾಡಿ ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುತ್ತಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

 

Continue Reading

LATEST NEWS

Trending