LATEST NEWS
ಉಡುಪಿ: ಒಂಟಿ ಜೀವನದಿಂದ ಬೇಸತ್ತು ನೇಣಿಗೆ ಶರಣು
ಉಡುಪಿ: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ ಸಮೀಪದ ಹಾವಂಜೆಯ ದೊಂಪದ ಕುಮೇರಿ ನಿವಾಸಿ ಡಾ ಎಂ ರಾಘವೇಂದ್ರ ರಾವ್ ನೇಣಿಗೆ ಶರಣಾಗಿದ್ದಾರೆ.
ಒಂಟಿ ಜೀವನದಿಂದ ಬೇಸತ್ತು ಇವರು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಪ್ರಸ್ತುತ ಆರೂರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದ ಮೊಕ್ತೇಸರಾಗಿದ್ದ ಇವರ ಪತ್ನಿ ಒಂದು ತಿಂಗಳ ಹಿಂದೆ ಸಾವನ್ನಪ್ಪಿದ ಬಳಿಕ ಒಂಟಿ ಜೀವನ ನಡೆಸುತ್ತಿದ್ದರು.
ಒಂಟಿ ಜೀವನದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ವಯೋ ಸಹಜ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಕೂಡಾ ಇವರು ಬಳಲುತ್ತಿದ್ದರು.
ಮನೆಯ ಕೋಣೆಯ ಜಂತಿಗೆ ಸೀರೆ ಬಿಗಿದು ಕುತ್ತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದು, ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
FILM
ಮಲಯಾಳಂ ನಟಿ ‘ಕನಕಲತಾ’ ಇನ್ನಿಲ್ಲ
ತಿರುವನಂತಪುರಂ/ಮಂಗಳೂರು: ಮಲಯಾಳಂ ನಟಿ ಕನಕಲತಾ(63 ವ) ತಿರುವನಂತಪುರಂ ಜಿಲ್ಲೆಯ ಮಲಯಿಂಕೀಝುನಲ್ಲಿರುವ ತಮ್ಮ ನಿವಾಸದಲ್ಲಿ ಎ.06ರಂದು ಅನಾರೋಗ್ಯದಿಂದಾಗಿ ನಿಧನರಾದರು. ಇವರು ಪಾರ್ಕಿನ್ಸನ್ ಮತ್ತು ಆಲ್ಝೈಮರ್ ಕಾಯಿಲೆಯಿಂದ ಬಳಲುತ್ತಿದ್ದರು.
300 ಚಲನಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ:
ಕಳೆದ ವರ್ಷ ಅವರ ಸಹೋದರಿ ವಿಜಯಮ್ಮ ಅವರು ಕನಕಲತಾ ಅವರ ಅನಾರೋಗ್ಯವನ್ನು ಬಹಿರಂಗಪಡಿಸಿದ್ದರು. ಆಗಸ್ಟ್ 2022 ರಲ್ಲಿ, ವೈದ್ಯರು MRI ಸ್ಕ್ಯಾನ್ ಮೂಲಕ ಬುದ್ಧಿಮಾಂದ್ಯತೆಯನ್ನು ಪತ್ತೆಹಚ್ಚಿದ್ದರು. ರಂಗಭೂಮಿಯಲ್ಲಿ ಹಿನ್ನೆಲೆ ಹೊಂದಿರುವ ಕನಕಲತಾ ಸುಮಾರು 300 ಚಲನಚಿತ್ರಗಳು ಮತ್ತು ಹಲವಾರು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. “ಒರು ಯಾತ್ರಾಮೊಳಿ,” “ಗುರು,” “ಕಿಲುಕಿಲ್ ಪಂಬರಂ,” “ಪಾರ್ವತಿ ಪರಿಣಯಂ,” “ತುಂಪೋಲಿ ಕಡಪ್ಪುರಂ,” “ಆದ್ಯತೆ ಕಣ್ಮಣಿ,” “ಎಫ್.ಐ.ಆರ್.,” “ಆಕಾಶಗಂಗಾ,” “ಅನಿಯತಿಪ್ರವು,” “ಅಂಚರಕಲ್ಯಾಣಂ,” “ದೋಸ್ತ್,” ಮಾಯಿಲ್ಪೀಲಿಕ್ಕಾವು,” ಮತ್ತು “ಮಂತ್ರಮೋತಿರಂ”, ಇವುಗಳು ಅವರ ಜನಪ್ರಿಯ ಚಲನಚಿತ್ರಗಳಾಗಿದೆ.
ಮುಂದೆ ಓದಿ..; ಹೆಣ್ಣು ಮಕ್ಕಳು ಕನಿಷ್ಠ 25 ದಾಟಿದ ಮೇಲೆ ಮದುವೆಯಾಗಿ; ಮಿಲನಾ ನಾಗರಾಜ್
“ಪೂಕ್ಕಳಂ” ಚಿತ್ರ ಅವರು ನಟಿಸಿರುವ ಕೊನೆಯ ಚಿತ್ರವಾಗಿದೆ. ಆದರೆ, ಆಕೆಯ ಆರೋಗ್ಯ ಹದಗೆಟ್ಟಿದ್ದರಿಂದ ಸಿನಿಮಾ ಮತ್ತು ಧಾರಾವಾಹಿಗಳೆರಡರಿಂದಲೂ ಹಿಂದೆ ಸರಿಯಬೇಕಾಯಿತು. “ಅಮ್ಮ” ಸಂಸ್ಥೆಯ ಆರ್ಥಿಕ ನೆರವು ಮತ್ತು ಚಲನಚಿತ್ರ ಅಕಾಡೆಮಿಯ ಬೆಂಬಲವು ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರ ನೀಡಿತ್ತು ಎನ್ನಲಾಗಿದೆ.
DAKSHINA KANNADA
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
LATEST NEWS
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
ಮಂಗಳೂರು ( ಕನ್ಯಾಕುಮಾರಿ ) : ಮದುವೆ ಸಮಾರಂಭಕ್ಕೆಂದು ಕನ್ಯಾಕುಮಾರಿಗೆ ತೆರಳಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಅಸು ನೀಗಿದ್ದಾರೆ. ಮದುವೆಗೆ ತೆರಳಿದ್ದ ಸ್ನೇಹಿತರು ಲೇಮುರ್ ಬೀಚ್ನಲ್ಲಿ ಈಜಲು ಇಳಿದಾಗ ಈ ಧುರ್ಘಟನೆ ಸಂಭವಿಸಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಸಮುದ್ರಲ್ಲಿ ಈಜಲು ಹೋಗಿದ್ದು ಮೂವರನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ. ಎಲ್ಲರೂ ತಿರುಚಿನಪಳ್ಳಿಯಲ್ಲಿರುವ ಎಸ್ಆರ್ಎಂ ಮೆಡಿಕಲ್ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ. ತಂಜಾವೂರಿನ ಚಾರುಕವಿ, ನೇಯ್ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್, ದಿಂಡಿಗಲ್ನ ಪ್ರವೀಣ್ ಸ್ಯಾಮ್ ಹಾಗೂ ಆಂದ್ರದ ವೆಂಕಟೇಶ್ ನೀರುಪಾಲದ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದಾರೆ. ಇಂಟರ್ನ್ಗಳಾಗಿದ್ದ ಕರೂರಿನ ನೇಶಿ, ಥೆಂಗಿಯ ಪ್ರಿಯಾಂಕಾ ಹಾಗೂ ಮದುರೈನ ಶರಣ್ಯ ಎಂಬ ಯುವತಿಯರನ್ನು ರಕ್ಷಿಸಲಾಗಿದೆ
ನಿಶೇಧವಿದ್ರೂ ಸಮುದ್ರಕ್ಕೆ ಪ್ರವೇಶ ಮಾಡಿದ್ದರು
ಖಾಸಗಿ ಬೀಚ್ ಆಗಿರೋ ಲೆಮುರ್ ಬೀಚ್ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಲಾಗಿತ್ತು. ಇನ್ನು ಭಾನುವಾರದಂದು ಸಮುದ್ರದಲ್ಲಿ ಭಾರಿ ಅಲೆಗಳು ಇದ್ದ ಕಾರಣ ಯಾರೂ ಸಮುದ್ರಕ್ಕೆ ಇಳಿಯಬಾರದು ಅನ್ನೋ ಎಚ್ಚರಿಕೆ ನೀಡಲಾಗಿತ್ತು. ಹೀಗಿದ್ರೂ ಇವರು ಸಮುದ್ರಕ್ಕೆ ಹೇಗೆ ಹೋದ್ರು ಅನ್ನೋದು ತನಿಖೆ ನಡೆಸಲಾಗುತ್ತಿದೆ. ಮದುವೆಗೆ ಬಂದಿದ್ದ ಸ್ನೇಹಿತರೆಲ್ಲ ಬೇರೆ ಬೇರೆ ಗುಂಪುಗಳಾಗಿ ಚದುರಿ ಹೋಗಿದ್ದು, ಈ ಎಂಟು ಜನ ವಿದ್ಯಾರ್ಥಿಗಳು ಸಮುದ್ರ ಕಿನಾರೆ ಬಂದು ಸಮುದ್ರಕ್ಕೆ ಇಳಿದಿದ್ದಾರೆ.
ಕೋರ್ಸು ಮುಗಿಸುವ ಹಂತದಲ್ಲಿ ನಡೆಯಿತು ದುರ್ಘಟನೆ
ಈ ವಿದ್ಯಾರ್ಥಿಗಳ ಕೋರ್ಸ್ ಇನ್ನೇನು ಕೆಲವೇ ದಿನಗಳಲ್ಲಿ ಮುಗಿದು ಎಲ್ಲರೂ ವೈದ್ಯರಾಗುವ ಕನಸು ಕಾಣುತ್ತಿದ್ದರು. ಯಾವ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಮಾಡಬೇಕು, ಯಾವ ನಗರಕ್ಕೆ ಹೋದರೆ ಸೂಕ್ತ ಎಂಬ ಕುರಿತು ಅವರ ಮಧ್ಯೆಯೇ ಚರ್ಚೆ ನಡೆಯುತ್ತಿತ್ತು. ಅವರ ಪೋಷಕರು ಕೂಡ ನೂರಾರು ಕನಸು ಕಂಡಿದ್ದರು. ಆದರೆ, ಮದುವೆಗೆ ಹೋದವರು, ಮದುವೆ ಮುಗಿಸಿ ನೇರ ಮನೆಗೆ ಬಂದಿದ್ರೆ ಎಲ್ಲವೂ ಎನಿಸಿದಂತೆ ನಡೆಯುತ್ತಿತ್ತು. ಆದ್ರೆ ವಿಧಿ ಇವರ ಎಲ್ಲಾ ಕನಸುಗಳನ್ನ ಕಿತ್ತುಕೊಂಡಿದೆ.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು