LATEST NEWS
ಯುವತಿಯನ್ನು 59 ಪೀಸ್ ಮಾಡಿದ ಕಿರಾತಕ ಆತ್ಮ*ಹ*ತ್ಯೆ : ಡೆ*ತ್ನೋಟ್ನಲ್ಲಿದೆ ಕೊ*ಲೆಯ ರಹಸ್ಯ..!
ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ನಡೆದಿದ್ದ ಮಹಾಲಕ್ಷ್ಮಿ ಹ*ತ್ಯೆ ಪ್ರಕರಣದ ಆರೋಪಿ ಒರಿಸ್ಸಾದ ತನ್ನ ಊರಿನ ಸ್ಮಶಾನದಲ್ಲಿ ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾನೆ. ಆತ್ಮ*ಹ*ತ್ಯೆಗೂ ಮುನ್ನ ಡೆ*ತ್ ನೋಟ್ ಬರೆದಿಟ್ಟಿದ್ದು, ಕೊ*ಲೆಗೆ ಕಾರಣವನ್ನೂ ತಿಳಿಸಿ ಹೋಗಿದ್ದಾನೆ. ಮಹಾಲಕ್ಷ್ಮಿಯನ್ನು ಕೊ*ಲೆ ಮಾಡಿ 59 ಪೀಸ್ ಮಾಡಿ ಫ್ರಿಜ್ನಲ್ಲಿ ಇಡಲಾಗಿತ್ತು.
ಬೆಂಗಳೂರು ಮಾತ್ರವಲ್ಲದೆ ಇಡೀ ದೇಶವನ್ನು ಬೆಚ್ಚಿಬೀಳಿಸಿದ ಘಟನೆ ಇದಾಗಿದ್ದು, ದೆಹಲಿಯಲ್ಲಿ ನಡೆದಿದ್ದ ಶೃದ್ಧಾ ವಾಕರ್ ಕೊ*ಲೆ ಪ್ರಕರಣದಂತೆ ಭೀಕರವಾಗಿತ್ತು. ಆರಂಭದಲ್ಲಿ ಈ ಪ್ರಕರಣದಲ್ಲೂ ಅಶ್ರಫ್ ಎಂಬಾತನ ಹೆಸರು ಕೇಳಿ ಬಂದಿತ್ತಾದ್ರೂ ಅಸಲಿ ಕೊ*ಲೆಗಾರ ಮುಕ್ತಿ ರಂಜನ್ ರಾಯ್ ಅನ್ನೋದು ಗೊತ್ತಾಗಿದೆ. ಈತನ ಸುಳಿವು ಪಡೆದು ಒರಿಸ್ಸಾಗೆ ತೆರಳಿದ ಬೆಂಗಳೂರು ಪೊಲೀಸರಿಗೆ ಈತ ಆತ್ಮ*ಹ*ತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
18 ದಿನ ಫ್ರೀಜ್ನಲ್ಲಿತ್ತು ತುಂಡರಿಸಿದ ಮೃ*ತದೇಹ
ಸೆಪ್ಟಂಬರ್ 21 ರಂದು ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ಆರೋಪಿಗಳ ಬೆನ್ನು ಬಿದ್ದಿದ್ದರು. ಹಲವರ ವಿಚಾರಣೆ ಬಳಿಕ ಆರೋಪಿ ಮುಕ್ತಿ ರಂಜನ್ ರಾಯ್ ಮೇಲೆ ಅನುಮಾನ ಬಲವಾಗಿತ್ತು. ಆದ್ರೆ ಪೊಲೀಸರು ಆರೋಪಿಯನ್ನು ಬಂಧಿಸುವ ಮೊದಲೇ ಆತ ಆತ್ಮ*ಹ*ತ್ಯೆಗೆ ಶರಣಾಗಿದ್ದಾನೆ. ಆತ್ಮ*ಹ*ತ್ಯೆಗೂ ಮುನ್ನ ಡೆ*ತ್ ನೋಟ್ ಬರೆದಿದ್ದ ಮುಕ್ತಿ ರಂಜನ್ ರಾಯ್, ಮಹಾಲಕ್ಷ್ಮಿಯ ಕೊ*ಲೆಗೆ ಕಾರಣ ತಿಳಿಸಿದ್ದಾನೆ.
ಡೆ*ತ್ ನೋಟ್ನಲ್ಲಿ ಏನಿದೆ ?
ಸೆಪ್ಟಂಬರ್ 3 ರಂದು ತನ್ನ ಪ್ರೇಯಸಿ ಮಹಾಲಕ್ಷ್ಮಿಯ ಹ*ತ್ಯೆ ಮಾಡಿದ್ದಾಗಿ ಆರೋಪಿ ಬರೆದುಕೊಂಡಿದ್ದಾನೆ. ಆ ದಿನ ಆಕೆಯ ಮನೆಗೆ ಹೋದಾಗ ವ್ಯಯಕ್ತಿಕ ವಿಚಾರವಾಗಿ ಜಗಳ ನಡೆದಿದ್ದು ಆಕೆ ನನಗೆ ಹ*ಲ್ಲೆ ನಡೆಸಿದ್ದಳು. ಇದರಿಂದ ಕೋಪಗೊಂಡು ಆಕೆಯನ್ನು ಕೊಂ*ದಿರುವುದಾಗಿ ಹೇಳಿದ್ದಾನೆ. ಬಳಿಕ ದೇಹವನ್ನು ಅಕ್ಸೋ ಬ್ಲೇಡ್ ಸಹಾಯದಿಂದ 59 ತುಂಡು ಮಾಡಿ ಫ್ರಿಜ್ನಲ್ಲಿ ಇರಿಸಿದ್ದಾಗಿ ಬರೆದಿದ್ದಾನೆ. ಬಳಿಕ ದೇಹವನ್ನು ಫ್ರಿಜ್ನಲ್ಲಿ ಇರಿಸಿ ಸಾಕ್ಷ್ಯ ನಾಶ ಮಾಡಲು ಬಾತ್ ರೂಮನ್ನು ಅಸಿಡ್ನಿಂದ ತೊಳೆದು ಶುಚಿಗೊಳಿಸಿದ್ದಾಗಿ ಡೆತ್ ನೋಟ್ನಲ್ಲಿ ಬರೆದಿದ್ದಾನೆ.
ಒರಿಸ್ಸಾದ ಫಂಡಿ ಗ್ರಾಮದ ನಿವಾಸಿಯಾದ ರಂಜನ್ ಎರಡು ದಿನಗಳ ಹಿಂದೆಯಷ್ಟೇ ಊರಿಗೆ ತಲುಪಿದ್ದ. ಮನೆಯಲ್ಲಿ ಸ್ವಲ್ಪ ಹೊತ್ತು ಇದ್ದು ರಾತ್ರಿ ಸ್ಕೂಟಿಯಲ್ಲಿ ತನ್ನ ಲ್ಯಾಪ್ಟಾಪ್ ತೆಗೆದುಕೊಂಡು ಎಲ್ಲೋ ಹೋಗಿದ್ದ. ಆ ಬಳಿಕ ಎಲ್ಲಿ ಹೋದ ಅನ್ನೋದು ಯಾರಿಗೂ ಗೊತ್ತಿರಲಿಲ್ಲ. ಈ ವೇಳೆ ಕುಳೆಪಾದ ಎಂಬ ಸ್ಮಶಾನದಲ್ಲಿ ಮರವೊಂದರಲ್ಲಿ ಆತನ ಮೃ*ತ ದೇಹ ಪತ್ತೆಯಾಗಿದೆ .
LATEST NEWS
ಪ್ರಜಾಪ್ರಭುತ್ವದ ದೇಗುಲದಲ್ಲೇ ಅ*ತ್ಯಾ*ಚಾರ ಮಾಡಿದ್ರಾ ಮುನಿರತ್ನ..!?
ಬೆಂಗಳೂರು : ಜಾತಿ ನಿಂದನೆ ಹಾಗೂ ಕೊ*ಲೆ ಬೆದರಿಕೆ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲು ಪಾಲಾಗಿದ್ದ ಶಾಸಕ ಮುನಿರತ್ನ ಸದ್ಯ ಅ*ತ್ಯಾಚಾರ ಪ್ರಕರಣದಲ್ಲಿ ಆ*ರೋಪಿಯಾಗಿ ಎಸ್ಐಟಿ ವಶದಲ್ಲಿದ್ದಾರೆ. ಇದೀಗ ಅ*ತ್ಯಾಚಾರ ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತನ್ನ ಮೇಲೆ ವಿಧಾನ ಸೌಧ ಹಾಗೂ ವಿಕಾಸ ಸೌಧದಲ್ಲೇ ಮನಿರತ್ನ ಅ*ತ್ಯಾಚಾರ ಮಾಡಿದ್ದಾಗಿ ಹೇಳಿದ್ದಾರೆ. ಸಂತ್ರಸ್ತೆಯ ಈ ಹೇಳಿಕೆಯಿಂದ ಶಾಸಕ ಮುನಿರತ್ನ ವಿರುದ್ಧ ಜನಾಕ್ರೋಶ ತೀವ್ರಗೊಂಡಿದೆ.
ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯುವ ವಿಧಾನ ಸೌಧದ ಮೂರನೇ ಮಹಡಿ ಹಾಗೂ ವಿಕಾಸ ಸೌಧದ ಮುನಿರತ್ನ ಕಚೇರಿಯಲ್ಲಿ ತನ್ನ ಮೇಲೆ ಅ*ತ್ಯಾಚಾರ ನಡೆಸಲಾಗಿದೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಜನರು ಶಾಸಕ ಮುನಿರತ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲ ಕಾರ್ಯಕರ್ತರು ವಿಕಾಸ ಸೌಧದ ಬಳಿ ಅರ್ಚಕರನ್ನು ಕರೆತಂದು ಶುದ್ಧೀಕರಣ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ವೇಳೆ ಅನುಮತಿ ಪಡೆಯದೆ ವಿಕಾಸ ಸೌಧಕ್ಕೆ ತೆರಳಲು ಯತ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮುನಿರತ್ನ ವಿಚಾರವಾಗಿ ಹಲವು ಸ್ಫೋ*ಟಕ ವಿಚಾರಗಳು ಬಹಿರಂಗವಾಗುತ್ತಿದ್ದು, ತನ್ನ ನೀಚ ಕೃ*ತ್ಯಕ್ಕೆ ಅದೆಂತಾ ಕೀಳು ಮಟ್ಟಕ್ಕೆ ಇಳಿದಿದ್ದ ಅನ್ನೋದು ಗೊತ್ತಾಗಿದೆ. ಇದರ ನಡುವೆ ವಿಕಾಸ ಸೌಧ ಹಾಗೂ ವಿಧಾನ ಸೌಧದಲ್ಲೇ ಇಂತಹ ಹೇಯ ಕೃ*ತ್ಯ ನಡೆಸಿದ್ದು ಘೋರ ಅಪ*ರಾಧ ಅಲ್ಲದೆ ಬೇರೆನೂ ಅಲ್ಲ. ಇದೀಗ ಪೊಲೀಸರು ಸಂತ್ರಸ್ತೆಯ ಹೇಳಿಕೆಯ ವಿಚಾರವಾಗಿ ಮುನಿರತ್ನರನ್ನ ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.
DAKSHINA KANNADA
ಐಶ್ವರ್ಯಾ ರೈಗೆ ಆರೋಗ್ಯ ಸಮಸ್ಯೆ..! ಪೋಸ್ಟ್ ವೈರಲ್..!
ಮಂಗಳೂರು : ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ ವಿಚಾರವಾಗಿ ಇತ್ತೀಚೆಗೆ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಸಾಕಷ್ಟು ಸುದ್ದಿಯಾಗಿದ್ದರು. ಐಶ್ವರ್ಯಾ ರೈ ಹಾಗೂ ಅಭಿಶೇಖ್ ಬಚ್ಚನ್ ಡಿವೋರ್ಸ್ ವಿಚಾರವಾಗಿ ದಿನಕ್ಕೊಂದು ಸುದ್ದಿ ಹರಡುತ್ತಿತ್ತು. ಈ ನಡುವೆ ತನ್ನ ಸೌಂದರ್ಯದ ಕಡೆ ಗಮನ ಕೊಡುತ್ತಿದ್ದ ಐಶ್ವರ್ಯಾ ರೈ ಇದೀಗ ತೂಕ ಏರಿಸಿಕೊಂಡ ವಿಚಾರವಾಗಿ ಸುದ್ದಿಯಾಗಿದ್ದಾರೆ.
ಐಷಾರಾಮಿ ಬ್ರಾಂಡ್ ಲೋರಿಯಲ್ನ ಜಾಗತಿಕ ರಾಯಭಾರಿಯಾಗಿರುವ ಐಶ್ವರ್ಯಾ ಇತ್ತೀಚೆಗೆ 2024 ರ ಫ್ಯಾಶನ್ ವೀಕ್ನಲ್ಲೂ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಧರಿಸಿದ್ದ ಕೆಂಪು ಬಣ್ಣದ ಉಡುಗೆ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಸೋಶಿಯಲ್ ಮೀಡಿಯಾದಲ್ಲಿ ಬಾಡಿ ಶೆಮಿಂಗ್ ರೀತಿಯಲ್ಲಿ ನಟಿ ಟ್ರೋಲ್ ಆಗುತ್ತಿದ್ದಾರೆ. ಪೋಸ್ಟ್ ಒಂದರಲ್ಲಿ “ನಾನು ಐಶ್ವರ್ಯ ಅವರನ್ನು ಸಾಕಷ್ಟು ವರ್ಷಗಳಿಂದ ನೋಡುತ್ತಿದ್ದೇನೆ. ಐಶ್ವರ್ಯಾ ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದಾಗಿ ಡಯೆಟ್ಗೆ ಮಾಡುತ್ತಿಲ್ಲ, ಜೊತೆಗೆ ತೂಕ ಇಳಿಸಿಕೊಳ್ಳುವ ಯಾವುದೇ ಔಷಧಿಗಳನ್ನು ಆಕೆ ತೆಗೆದುಕೊಳ್ಳುತ್ತಿಲ್ಲ. ಆದರೆ ನಾನು ಅವರ ಆರೋಗ್ಯ ಸಮಸ್ಯೆಯ ಬಗ್ಗೆ ಬಹಿರಂಗಪಡಿಸುವುದಿಲ್ಲ” ಎಂದು ಬರೆಯಲಾಗಿದೆ. ಆದ್ರೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಡಿಲೀಟ್ ಕೂಡಾ ಮಾಡಲಾಗಿದೆ.
ಐಶ್ವರ್ಯಾ ರೈ ಕುರಿತಾದ ಇಂತಹ ವಿಚಾರಗಳು ಸುದ್ದಿಯಾಗುತ್ತಿರುವುದು ಇದೇನು ಹೊಸದಲ್ಲವಾದ್ರೂ, ಐಶ್ವರ್ಯ ತೂಕ ಹೆಚ್ಚಿಸಿಕೊಂಡಿದ್ದಾರೆ ಅನ್ನೋದು ಕೂಡಾ ಸುಳ್ಳಲ್ಲ. ಇತ್ತೀಚೆಗೆ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಾಗ ಅವರು ದಪ್ಪವಾಗಿ ಕಾಣಿಸಿಕೊಂಡಿದ್ದು ಈ ಎಲ್ಲಾ ಚರ್ಚೆಗಳಿಗೆ ಕಾರಣವಾಗಿದೆ.
DAKSHINA KANNADA
ಮೊಬೈಲ್ ವಿಚಾರಕ್ಕೆ ಗಲಾಟೆ ಕೊ*ಲೆಯಲ್ಲಿ ಅಂತ್ಯ : ಆ*ರೋಪಿ ಅರೆಸ್ಟ್..!
ಮಂಗಳೂರು : ತೋಟಾಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಸಮೀಪ ಸೆಪ್ಟಂಬರ್ 21 ರಂದು ನಡೆದಿದ್ದ ಕೊ*ಲೆ ಪ್ರಕರಣವನ್ನು ಭೇದಿಸುವಲ್ಲಿ ಪಣಂಬೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೊಬ್ಬರ್ಯ ದೈವಸ್ಥಾನದ ಹಿಂಬದಿಯ ಸಮುದ್ರ ಕಿನಾರೆಯ ಬಳಿ ಭಾಗಲಕೋಟೆ ಮೂಲಕ 39 ವರ್ಷದ ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಎಂಬಾತನ ಕೊ*ಲೆ ನಡೆದಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ತೋಟಾ ಬೆಂಗ್ರೆಯ ನಿವಾಸಿಯಾಗಿರುವ ಧರ್ಮರಾಜ್ ಸುವರ್ಣ ಎಂಬಾತನನ್ನು ಬಂಧಿಸಿದ್ದಾರೆ.
ಕೊ*ಲೆ ನಡೆಸಿ ಪರಾರಿಯಾಗಿ ಕೇರಳದ ಕೊಝಿಕೋಡ್ ಜಿಲ್ಲೆಯ ಚೊಂಪಾಳ ಎಂಬಲ್ಲಿ ಆ*ರೋಪಿ ಅಡಗಿಕೊಂಡಿದ್ದ. ಆ*ರೋಪಿಯ ಜಾಡು ಹಿಡಿದು ಹೋದ ಪೊಲೀಸರು ಸೆಪ್ಟಂಬರ್ 26 ನಸುಕಿನ ಜಾವ 3 ಘಂಟೆಗೆ ಆ*ರೋಪಿಯನ್ನು ಬಂಧಿಸಿದ್ದಾರೆ. ಆ*ರೋಪಿ ಹಾಗೂ ಕೊ*ಲೆಯಾದ ಬಸವರಾಜ್ ವಡ್ಡರ್ ಕೆಲ ಸಮಯದಿಂದ ಸ್ನೇಹಿತರಾಗಿದ್ದರು. ಇತ್ತೀಚೆಗೆ ಧರ್ಮರಾಜ್ ಹೊಸ ಮೊಬೈಲ್ ಒಂದನ್ನು ಖರೀದಿ ಮಾಡಿದ್ದು, ಅದನ್ನು ಬಸವರಾಜ್ ವಡ್ಡರ್ ಉಪಯೋಗಕ್ಕೆ ಪಡೆದುಕೊಂಡಿದ್ದ. ಆದ್ರೆ ಮೊಬೈಲ್ ಹಿಂತಿರುಗಿಸದೆ ಸತಾಯಿಸಿದ್ದು, ಮೊಬೈಲ್ ಹಾಳು ಮಾಡಿದ್ದ ಎಂಬುವುದು ಧರ್ಮರಾಜ್ ಕೋಪಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಧರ್ಮರಾಜ್ ಕೋಪದಿಂದ ಮರದ ಸಲಾಕೆಯಿಂದ ಬಸವರಾಜ್ ವಡ್ಡರ್ ಮೇಲೆ ಹ*ಲ್ಲೆ ನಡೆಸಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಬಸವರಾಜ್ ವಡ್ಡರ್ ರ*ಕ್ತಸ್ರಾವದಿಂದ ಮೃ*ತ ಪಟ್ಟಿದ್ದಾಗಿ ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಇದೀಗ ಧರ್ಮರಾಜ್ನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಯನ್ನು ಮುಂದುವರೆಸಿದ್ದಾರೆ.