DAKSHINA KANNADA
ಬೇರ್ಪಟ್ಟ ತಾಯಿಯನ್ನು ಮರಿಗಳೊಂದಿಗೆ ಸೇರಿಸಿ ಪುಟ್ಟ ಮಗಳ ಮೊಗದಲ್ಲಿ ಸಂತೋಷ ತರಿಸಿದ ಸುಳ್ಯದ ಅರಣ್ಯಾಧಿಕಾರಿ..!
ಶ್ವಾನ ಮತ್ತೆ ಮನೆ ಮತ್ತು ಮರಿಗಳನ್ನು ಸೇರಿದ್ದಕ್ಕೆ ಸಾನ್ವಿ ತುಂಬಾ ಖುಷ್ ಆಗಿದ್ದರೆ, ಅಪಘಾತದಲ್ಲಿ ತನ್ನ ಮಕ್ಕಳಿದ್ದ ಬೇರ್ಪಟ್ಟ ತಾಯಿ ಶ್ವಾನವನ್ನು ಮತ್ತೆ ತನ್ನ ಮರಿಗಳೊಂದಿಗೆ ಸೇರಿದ್ದ ಸಂತೃಪ್ತಿ ಅರಣ್ಯಾಧಿಕಾರಿ ಸಂತೋಷ್ ರೈಗೆ.
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾರಿನ ಬಂಪರ್ ಒಳಗೆ ಸಿಲುಕಿ 70 ಕಿಲೋಮೀಟರ್ ಸಾಗಿ ಬದುಕಿ ಬಂದ ಶ್ವಾನವೊಂದರ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.
ತನ್ನ ಮರಿಗಳಿಂದ ಬೇರ್ಪಟ್ಟ ಆ ಶ್ವಾನವನ್ನು ಹೇಗಾದರೂ ಮಾಡಿ ಮತ್ತೆ ಮರಿಗಳೊಂದಿಗೆ ಸೇರಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಜನ ಆಗ್ರಹಿಸಿದ್ದರು.
ಆದರೆ ಈ ಶ್ವಾನವೊಂದರ ಹಿಂದೆ ಇನ್ನೊಂದು ಅವಿನಾಭಾವ ಸಂಬಂಧದ ಕಥೆಯೂ ಇದೆ.
ಬಳ್ಪ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈಯವರ ಅರಣ್ಯ ಇಲಾಖೆಗೆ ಸಂಬಂಧಪಟ್ಟ ಕ್ವಾರ್ಟರ್ಸ್ ಗೆ ಈ ಶ್ವಾನ ದಿನವೂ ಬರ್ತಾ ಇತ್ತು. ಅದಕ್ಕೆ ಸಂತೋಷ್ ರೈ ಮತ್ತವರ ಮಗಳು ಸಾನ್ವಿ ಪ್ರತಿದಿನ ಆಹಾರ ಹಾಕ್ತಾ ಇದ್ದರು.
ನಾಯಿಗೆ ಅಫಘಾತವಾಗಿ ಪುತ್ತೂರು ಸೇರಿದ ನಾಯಿಯನ್ನು ತಂದು ಮರಿಗಳೊಂದಿಗೆ ಸೇರಿಸುವಂತೆ ತಂದೆ ಸಂತೋಷ್ ಅವರಲ್ಲಿ ಮಗಳು ಸಾನ್ವಿ ಪಟ್ಟು ಹಿಡಿದಿದ್ದಳು.
ಮಗಳ ಹಠಕ್ಕೆ ಜೋತು ಬಿದ್ದು ನಾಯಿಗಾಗಿ ಪುತ್ತೂರಿನ ತಮ್ಮ ಪರಿಚಯದವರೊಂದಿಗೆ ವಿಚಾರಣೆ ನಡೆಸಿದ ಸಂದರ್ಬದಲ್ಲಿ ನಾಯಿ ಪುತ್ತೂರಿನ ಮನೆಯೊಂದರ ಬಳಿ ಇರುವ ಬಗ್ಗೆ ಮಾಹಿತಿ ಪಡೆದರು.
ತಕ್ಷಣವೇ ಪುತ್ತೂರಿಗೆ ತೆರಳಿದ ಸಂತೋಷ್ ರೈ ಗೆ ಶ್ವಾನ ಸಿಗದ ಕಾರಣ ಪುತ್ತೂರಿನ ನಗರದಾದ್ಯಂತ ಶ್ವಾನಕ್ಕಾಗಿ ಹುಡುಕಾಟ ನಡೆಸಿದ್ದಾರೆ.
ಹುಡುಕಾಟದ ಬಳಿಕ ಕೊನೆಗೂ ಶ್ವಾನ ಪತ್ತೆಯಾಗಿದೆ. ಶ್ವಾನವನ್ನು ಕಾರಿನಲ್ಲಿ ಕೊಂಡೊಯ್ದ ಅವರು ಮರಿಗಳ ಜೊತೆ ಸೇರಿಸಿದ್ದಾರೆ.
ಶ್ವಾನ ಮತ್ತೆ ಮನೆ ಮತ್ತು ಮರಿಗಳನ್ನು ಸೇರಿದ್ದಕ್ಕೆ ಸಾನ್ವಿ ತುಂಬಾ ಖುಷ್ ಆಗಿದ್ದರೆ, ಅಪಘಾತದಲ್ಲಿ ತನ್ನ ಮಕ್ಕಳಿದ್ದ ಬೇರ್ಪಟ್ಟ ತಾಯಿ ಶ್ವಾನವನ್ನು ಮತ್ತೆ ತನ್ನ ಮರಿಗಳೊಂದಿಗೆ ಸೇರಿದ್ದ ಸಂತೃಪ್ತಿ ಅರಣ್ಯಾಧಿಕಾರಿ ಸಂತೋಷ್ ರೈಗೆ.
DAKSHINA KANNADA
ಡಿ. 14ರಿಂದ 17 ರವರೆಗೆ “ಆಳ್ವಾಸ್ ವಿರಾಸತ್”
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.14ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದು,ಈ ಬಾರಿಯ ವಿರಾಸತ್ ನಲ್ಲಿ ಬೆನ್ನಿದಯಾಲ್, ವಿಜಯಪ್ರಕಾಶ್, ಶ್ರೇಯಾ ಘೋಷಾಲ್ ಸ್ವರ ಮಾಧುರ್ಯ, ಪ್ರತಿನಿತ್ಯ 13 ಗಂಟೆಗಳ ಕಾಲ 750 ಮಳಿಗೆಗಳಲ್ಲಿ ಪ್ರದರ್ಶನ ಹಾಗೂ ಮಾರಾಟಗಳು ನಡೆಯಲಿವೆ. ಭವ್ಯ ಸಾಂಸ್ಕೃತಿಕ ಮೆರವಣಿಗೆ ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪದರ್ಶನ ಮೇಳ, ಚಿತ್ರಕಲಾ ಮೇಳಗಳು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಸ್ಕೌಟ್ಸ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
BELTHANGADY
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.
BELTHANGADY
ಖೋಟ ನೋಟು ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ..!
ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ.
ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ ಆರ್ ಗಾಣಿಗೇರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS6 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA6 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!