Connect with us

    DAKSHINA KANNADA

    ಬೆಳ್ಳಾರೆ ಮುಸ್ಲೀಂ ಯುವಕನ ಮೇಲೆ ದಾಳಿ ಪ್ರಕರಣ : ಎಂಟು ಮಂದಿ ಆರೋಪಿಗಳ ಬಂಧನ..!

    Published

    on

    ಸುಳ್ಯ : ಬೆಳ್ಳಾರೆಯಲ್ಲಿ ಮುಸ್ಲೀಂ ಯುವಕನ ಮೇಲೆ ನಡೆದ ಮಾರಣಾಂತಿಕ ದಾಳಿ ಸಂಬಂಧ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

    ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು ಘಟನೆ ನಡೆದ 24 ಗಂಟೆಗಳಲ್ಲಿ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಲು ಯಶಸ್ವಿಯಾಗಿದ್ದಾರೆ.

    1).ಅಭಿಲಾಷ್ 2) ಸುನೀಲ್, 3) ಸುಧೀರ್, 4) ಶಿವ, 5) ರಂಜಿತ್, 6) ಸದಾಶಿವ 7) ಜಿಮ್ ರಂಜಿತ್, 8) ಭಾಸ್ಕರ ಬಂಧಿತ ಆರೋಪಿಗಳಾಗಿದ್ದು ಎಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದಾರೆ.

    ಇವರ ವಿರುದ್ಧ ಕಲಂ: 143, 147, 323, 324, 307 ಜೊತೆಗೆ 149 ಐಪಿಸಿ ಸೆಕ್ಷನ್‌ನಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯ ಹಿನ್ನೆಲೆ :ಜು 19ರಂದು ರಾತ್ರಿ 11 ಗಂಟೆ ಸುಮಾರಿಗೆ ಬೆಳ್ಳಾರೆಯ ಕಳಂಜ ಗ್ರಾಮದ ವಿಷ್ಣು ನಗರ ಎಂಬಲ್ಲಿ ಈ ಘಟನೆ ನಡೆದಿತ್ತು.

    ಮಸೂದ್ ತಿಂಗಳ ಹಿಂದೆಯಷ್ಟೇ ಕಾಸರಗೋಡಿನಿಂದ ಕಳಂಜದಲ್ಲಿರುವ ಅಜ್ಜ ಅಬ್ಬು ಎಂಬವರ ಮನೆಗೆ ಬಂದು ನೆಲೆಸಿದ್ದು, ಇಲ್ಲೇ ಸ್ಥಳೀಯವಾಗಿ ಕೂಲಿ ಕೆಲಸ ಮಾಡಿ ಕೊಂಡಿದ್ದರೆನ್ನಲಾಗಿದೆ.

    ಮಂಗಳವಾರ ಸಂಜೆ ವಿಷ್ಣು ನಗರದಲ್ಲಿ ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಲು ಮಸೂದ್ ತೆರಳಿದ್ದು, ಈ ವೇಳೆ ಅಲ್ಲಿ ಸಮೀಪದ ಅಂಗಡಿಯ ಬಳಿ ಮೈ ತಾಗಿತು ಎಂಬ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಮಾತಿನ ಚಕಮಕಿ, ಹೊಡೆದಾಟ ನಡೆದಿದೆ ಎನ್ನಲಾಗಿದೆ.

    ಈ ವೇಳೆ ಸುಧೀರ್‌ಗೆ ಮಸೂದ್ ಬಾಟಲಿ ತೋರಿಸಿ ಜೀವ ಬೆದರಿಕೆ ಹಾಕಿದ್ದರೆನ್ನಲಾಗಿದೆ.

    ಇದೇ ವಿಚಾರವಾಗಿ ರಾತ್ರಿ 10.30ರ ಸುಮಾರಿಗೆ ಆರೋಪಿಗಳಾದ ಸುನೀಲ್ ಹಾಗೂ ಅಭಿಲಾಷ್ ಎಂಬವರು ದೂರುದಾರ ಇಬ್ರಾಹಿಂ ಶಾನಿಫ್‌ರನ್ನು ಸಂಪರ್ಕಿಸಿ ಸುಧೀರ್ ಮೇಲೆ ಮಸೂದ್ ಹಲ್ಲೆ ನಡೆಸಿದ್ದಾನೆ, ಇದನ್ನು ರಾಜಿ ಮಾತುಕತೆ ಮೂಲಕ ಮುಗಿಸೋಣ. ಅದಕ್ಕಾಗಿ ಮಸೂದ್‌ನನ್ನು ವಿಷ್ಣು ನಗರಕ್ಕೆ ಕರೆದುಕೊಂಡು ಬರುವಂತೆ ಸೂಚಿಸಿದ್ದಾರೆ.

    ಅದರಂತೆ ರಾತ್ರಿ 11 ಗಂಟೆ ಸುಮಾರಿಗೆ ಮಸೂದ್‌ರನ್ನು ಕರಕೊಂಡು ಶಾನಿಫ್ ವಿಷ್ಣು ನಗರಕ್ಕೆ ಬಂದಿದ್ದಾರೆ.

    ಈ ವೇಳೆ ಎಂಟು ಮಂದಿ ಆರೋಪಿಗಳು ಏಕಾಏಕಿ ಮಸೂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆರೋಪಿ ಅಭಿಲಾಷ್ ಸೋಡಾ ಬಾಟಲಿಯಿಂದ ಮಸೂದ್‌ ರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಸೂದನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ : ಬಿಹಾರ ಮೂಲದ ಕಾರ್ಮಿಕ ಆತ್ಮಹತ್ಯೆ

    Published

    on

    ಬಂಟ್ವಾಳ:  ವೈಯಕ್ತಿಕ ಕಾರಣದಿಂದ ‌ಮನನೊಂದು ಬಿಹಾರ ಮೂಲದ ವ್ಯಕ್ತಿಯೋರ್ವ ಬಂಟ್ವಾಳದ ಟಯರ್ ಅಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಬಿಹಾರ ರಾಜ್ಯದ ಮೋತಿಹಾರಿ ನಿವಾಸಿ ಸಂದೀಪ್ ಕುಮಾರ್ ( 20 ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ಮೂರ ವರ್ಷಗಳಿಂದ ತನ್ನ ಮಾವ ಕೆಲಸ ಮಾಡುತ್ತಿದ್ದ ಟಯರ್ ರಿಸೋಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು.

     

    ಇದನ್ನೂ ಓದಿ:  ಪ್ರೀತಿಸಿದ ಯುವಕನ ಜೊತೆಗೆ ಮದುವೆಗೆ ನಿರಾಕರಣೆ.. ಕುಟುಂಬದ 13 ಜನರನ್ನು ವಿಷ ಹಾಕಿ ಕೊಂ*ದ ಯುವತಿ

    ಅಂಗಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಕುರಿತು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಗುರುಪುರ ನದಿಗೆ ಹಾರಿದ್ದ ವ್ಯಕ್ತಿ; ಶವವಾಗಿ ಪತ್ತೆ

    Published

    on

    ಮಂಗಳೂರು:  ಬಡಗ ಎಡಪದವು ಚಟ್ಟೆ ಪಾದೆ ನಿವಾಸಿ ರಮೇಶ್ ಕುಲಾಲ್ (48) ಶನಿವಾರ (ಅ.5) ಗುರುಪುರದ ಫಲ್ಗುಣಿ ನದಿಗೆ ಹಾರಿದ್ದು, ನಿನ್ನೆ (ಅ.7) ಶವ ಪತ್ತೆಯಾಗಿದೆ.


    ಶನಿವಾರ ಸಂಜೆ ರಮೇಶ್ ಮನೆಯಿಂದ ನಾಪತ್ತೆಯಾಗಿದ್ದು, ಸಹೋದರ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರವಿವಾರ ಅವರ ಮೊಬೈಲ್ ಹಾಗೂ ಪಾದರಕ್ಷೆ ಗುರುಪುರ ಸೇತುವೆ ಮೇಲೆ ಪತ್ತೆಯಾಗಿದ್ದ ಕಾರಣ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವುದಾಗಿ ಶಂಕಿಸಲಾಗಿತ್ತು.
    ಎಸ್‌ಡಿಆರ್‌ಡಫ್ ಮತ್ತು ಬಜಪೆ ಪೊಲೀಸರು ನದಿಯ ನೀರಿನಲ್ಲಿ ಶೋಧ ನಡೆಸುತ್ತಿದ್ದರು. ಮಂಗಳೂರಿನ ಇನ್‌ಲ್ಯಾಂಡ್ ಕಂಪನಿಯಲ್ಲಿ ಜೆಸಿಬಿ ಆಪರೇಟರ್ ಆಗಿದ್ದ ರಮೇಶ್ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
    ಬಡಮಿಜಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 169ರ ವಿಸ್ತರಣೆ ಕಾಮಗಾರಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯ ಅನ್ವಯ ಲಭಿಸಿದ ಪರಿಹಾರ ಹನದ ವಿಷಯದಲ್ಲಿ ತಾಯಿ ಮತ್ತು ಸಹೋದರರೊಳಗೆ ಉಂಟಾದ ವಿಆದದಿಂದಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

    Continue Reading

    DAKSHINA KANNADA

    ಅಕ್ರಮ ಹಾಲುಮಡ್ಡಿ ಸಾಗಾಟ: ನಾಲ್ವರು ಆರೋಪಿಗಳ ಬಂಧನ

    Published

    on

    ಪುತ್ತೂರು : ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ಸಾಗಿಸುತ್ತಿದ್ದ ಪ್ರಕರಣವನ್ನು ಪುತ್ತೂರು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು ಬಳಸಿದ ಸಲಕರಣೆ ಹಾಗೂ ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ವಿಟ್ಲ ಸಮೀಪದ ಕೆದಿಲ ನಿವಾಸಿಗಳಾದ ಅಲಿ ಹೈದರ್‌, ಉಮ್ಮರ್‌ ಫಾರೂಕ್‌, ಮಹಮ್ಮದ್‌ ಹಸೈನಾರ್‌ ಮತ್ತು ಉಮ್ಮರ್‌ ಫಾರೂಕ್‌ ಬಂಧಿತ ಆರೋಪಿಗಳು.

    ಇದನ್ನೂ ಓದಿ : ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಶ್ರೀಮುರಳಿ

    ವಿಟ್ಲ ಬಳಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಆರೋಪಿಗಳು ಹಾಲು ಮಡ್ಡಿ ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಈ ದಾಳಿ ಕಾರ್ಯಾಚರಣೆ ನಡೆಸಿದರು. ವಲಯ ಅರಣ್ಯಾಧಿಕಾರಿ ಕಿರಣ್‌ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯಾರಣ್ಯಾಧಿಕಾರಿ ವೀರಣ್ಣ, ಪ್ರಕಾಶ್‌ ಬಿ.ಟಿ., ಗಿರೀಶ್‌ ಎಚ್‌.ಪಿ., ಗಸ್ತು ಅರಣ್ಯಪಾಲಕ ಸತೀಶ್‌ ಡಿ’ಸೋಜಾ, ಚಾಲಕರಾದ ರಾಜೇಶ್‌, ತೇಜ ಪ್ರಕಾಶ್‌ ಮತ್ತು ಸಿಬಂದಿ ಭಾಗವಹಿಸಿದ್ದರು.

     

    Continue Reading

    LATEST NEWS

    Trending