DAKSHINA KANNADA
ಸುಳ್ಯ : ವೈದ್ಯಕೀಯ ಪರೀಕ್ಷೆಗೆ ಕರೆ ತರಲಾಗಿದ್ದ ಆರೋಪಿ ಪರಾರಿ!
ಸುಳ್ಯ : ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿ ತಪಾಸಣೆಗೆಂದು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆತ ಆಸ್ಪತ್ರೆಯಿಂದಲೇ ಪರಾರಿಯಾಗಿದ್ದಾನೆ. ಇದೀಗ ಸುಳ್ಯ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಲು ಸಹಕಾರ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ತಮಿಳುನಾಡು ಮೂಲದ ಕಾರ್ತಿಕ್ ಪರಾರಿಯಾದ ಆರೋಪಿ.
ಸಂಪಾಜೆಯ ಮನೆಯೊಂದರಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯಾಗಿದ್ದ ಕಾರ್ತಿಕ್ ಸುಳ್ಯ ಪೊಲೀಸರು ಹಲವು ಸಮಯಗಳ ಬಳಿಕ ಬಂಧಿಸಿದ್ದರು. ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ಯಾರೋ ಸುಳಿವು ನೀಡಿದ ಮೇರೆಗೆ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿ ಸುಳ್ಯಕ್ಕೆ ಕರೆದುಕೊಂಡು ಬಂದಿದ್ದರು.
ಇದನ್ನೂ ಓದಿ : ಮಂಗಳೂರು : ಖಾಸಗಿ ಬಸ್ಸಿಗೆ ‘ಇಸ್ರೇಲ್’ ಹೆಸರು; ತೀವ್ರ ಆಕ್ಷೇಪದ ಬಳಿಕ ‘ಜೆರುಸಲೇಂ’ ಎಂದು ಬದಲಾಯಿಸಿದ ಮಾಲಕ
ಆದರೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಾಗಿದ್ದ ಹಿನ್ನೆಲೆಯಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ನಡುವೆ ಆರೋಪಿ ಪೊಲೀಸ್ ಕಾನ್ಸ್ಟೇಬಲ್ಗಳನ್ನು ದೂಡಿ ಹಾಕಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಮರುಬಂಧನಕ್ಕಾಗಿ ಆರೋಪಿಗೆ ಬಲೆ ಬೀಸಿದ್ದಾರೆ.
DAKSHINA KANNADA
ಉಪನ್ಯಾಸಕನಿಂದ ದ್ವೇಷದ ಉಪನ್ಯಾಸ.!? ಅರುಣ್ ಉಳ್ಳಾಲ ವಿರುದ್ದ ಕೇಸ್.!
ಮಂಗಳೂರು : ಆಗ್ನೆಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ದುಡಿಯುತ್ತಿರುವ ಉಪನ್ಯಾಸಕ ಅರುಣ್ ಉಳ್ಳಾಲ ವಿರುದ್ದ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಳ್ಳಾಲದ ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಮಾಡಿದ ದ್ವೇಷದ ಭಾಷಣಕ್ಕೆ ಸಂಬಂಧಿಸಿ ಈ ದೂರು ದಾಖಲಾಗಿದೆ.
ಕಾರ್ಯಕ್ರಮದಲ್ಲಿ ಹಿಂದೂ ಧಾರ್ಮಿಕ ಉಪನ್ಯಾಸ ನೀಡುತ್ತಿದ್ದ ಅರುಣ್ ಉಳ್ಳಾಲ ಅವರು ಕ್ರೈಸ್ತರು ಹಾಗೂ ಮುಸ್ಲಿಂರ ವಿರುದ್ಧ ದ್ವೇಷ ಭಾಷಣ ಮಾಡಿದ್ದರು. ಹಿಂದೂಗಳು ಹಿಂದೂಗಳಿಗೆ ಸೇರಿದ ಶಾಲೆಗೆ ಮಕ್ಕಳನ್ನು ಸೇರಿಸಬೇಕು. ಹಿಂದೂಗಳಿಗೆ ಸೇರಿದ ಹಾಲ್ಗಳಲ್ಲೇ ಮದುವೆ ಆಗಬೇಕು ಎಂಬಿತ್ಯಾದಿ ರೀತಿಯ ಮಾತುಗಳನ್ನು ಆಡಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸಾರ್ವಜನಿಕವಾಗಿ ತೀವ್ರ ಟೀಕೆಗೆ ಗುರಿಯಾಗಿತ್ತು. ಕ್ರಿಶ್ಚಿಯನ್ ಸಂಸ್ಥೆಯಲ್ಲೇ ವಿದ್ಯಾಭ್ಯಾಸ ಮಾಡಿ, ಕ್ರಿಶ್ಚಿಯನ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಅರುಣ್ ಉಳ್ಳಾಲ ಅವರ ಈ ಹೇಳಿಕೆ ಎಷ್ಟು ಸರಿ? ಎಂದು ಜನರು ಪ್ರಶ್ನೆ ಮಾಡಿದ್ದರು. ಅರುಣ್ ಉಳ್ಳಾಲ ಅವರು ಕೆಲಸ ಮಾಡುತ್ತಿರುವ ಆಗ್ನೆಸ್ ಕಾಲೇಜು ಆಡಳಿತ ಮಂಡಳಿ ಇವರನ್ನು ಕೆಲಸದಿಂದ ವಜಾ ಮಾಡಬೇಕೆಂಬ ಒತ್ತಾಯ ಕೂಡ ಮಾಡಲಾಗಿದೆ. ಇದೀಗ ಅರುಣ್ ಉಳ್ಳಾಲರ ಭಾಷಣ ವಿವಾದವಾಗುತ್ತಿದ್ದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : ಸಂಸದ ಕೋಟ ಹೆಸರಿನಲ್ಲಿ ನಕಲಿ ಖಾತೆ; ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು
ಅರುಣ್ ಉಳ್ಳಾಲ ಅವರ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಅರುಣ್ ಗೆ ಬೆಂಬಲ ಸೂಚಿಸಿದ್ದಾರೆ. ನಾವು ನಿಮ್ಮ ಜೊತೆಗೆ ಇದ್ದೇವೆ ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
DAKSHINA KANNADA
ಪುತ್ತೂರು: ಪಿಕಪ್ ಗುದ್ದಿ ರಿಕ್ಷಾ ಪಲ್ಟಿ – ಹಲವರಿಗೆ ಗಾಯ
ಪುತ್ತೂರು: ನಿಧಾನವಾಗಿ ಚಲಿಸುತ್ತಿದ್ದ ರಿಕ್ಷಾಕ್ಕೆ ಹಿಂದಿನಿಂದ ಪಿಕಪ್ ಡಿಕ್ಕಿಯಾಗಿ ಹಲವರಿಗೆ ಗಾಯವಾದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲ್ ಜಂಕ್ಷನ್ನಲ್ಲಿ ನಡೆದಿರುವುದು ತಿಳಿದು ಬಂದಿದೆ.
ಇದನ್ನೂ ಓದಿ; ಉಳ್ಳಾಲ: ನಾಪತ್ತೆಯಾದ ವ್ಯಕ್ತಿ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆ…!
ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ಎದುರಿನ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಉಳ್ಳಾಲ: ನಾಪತ್ತೆಯಾದ ವ್ಯಕ್ತಿ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆ…!
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಇಂದು (ಅ.6) ಪಾಳು ಬಿದ್ದ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದೆ.
ಪ್ರಸಾದ್ (44) ಮೃತ ದುರ್ದೈವಿ. ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಹೇಳಲಾಗಿದೆ. ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು.
ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಇಣುಕಿ ನೋಡಿದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಪ್ರಸಾದ್, ತಾಯಿ, ತಂದೆ, ಇಬ್ಬರು ಸಹೋದರರು ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.
ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು, ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- BIG BOSS6 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- BIG BOSS6 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS2 days ago
ಕನ್ನಡ ಬಿಗ್ಬಾಸ್ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!
- LATEST NEWS5 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್