Connect with us

    FILM

    ಕೊನೆಗೂ ಮೌನ ಮುರಿದ್ರಾ ಸುಮಲತಾ..! ವೈರಲ್ ಪೋಸ್ಟ್‌ನಲ್ಲಿ ಏನಿದೆ ಗೊತ್ತಾ?

    Published

    on

    ಬೆಂಗಳೂರು/ಮಂಗಳೂರು:  ನಟ ದರ್ಶನ್ ಜೈಲು ಸೇರಿದ ಮೇಲೆ ಸುಮಲತಾ ಅಂಬರೀಶ್ ಮೌನಕ್ಕೆ ಜಾರಿದ್ದರು. ಚಿತ್ರರಂಗದ ಕೆಲವು ಗಣ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರೆ ಇನ್ನು ಕೆಲವರು ಮೌನಕ್ಕೆ ಜಾರಿದ್ದಾರೆ. ಅದರಲ್ಲೂ ದರ್ಶನ್ ಆಪ್ತರು ಎಣಿಸಿಕೊಂಡವರು, ದರ್ಶನ್‌ನಿಂದ ಸಹಾಯ ಪಡೆದುಕೊಂಡವರು ಈಗ ಬೆಂಬಲ ನೀಡುತ್ತಿಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ.

    ದರ್ಶನ್ ನನ್ನ ದೊಡ್ಡ ಮಗ ಎಂದೇ ಕರೆಯುತ್ತಿದ್ದರು ಸುಮಲತಾ. ಇನ್ನು ದರ್ಶನ್ ಕೂಡಾ ಸುಮಲತಾರವರನ್ನು ಮದರ್ ಇಂಡಿಯಾ ಎಂದೇ ಹೇಳುತ್ತಿದ್ದರು. ಇಷ್ಟೆಲ್ಲಾ ಇರುವಾಗ ದರ್ಶನ್ ಕೊಲೆ ಕೇಸ್ ನಲ್ಲಿ ಜೈಲು ಸೇರಿದ ಮೇಲೆ ಸುಮಲತಾ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

    ತಾಯಿಯಾಗುವ ಸಂಭ್ರಮದಲ್ಲಿ ಹರ್ಷಿಕಾ ಪೂಣಚ್ಚ..! ಹೊಸ ಅತಿಥಿ ಆಗಮನ ಯಾವ್ಯಾಗ?

    ಈ ಹಿಂದೆ ಸುಮಲತಾ ಪರ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಸಭೆಯಲ್ಲಿ”ಅಮ್ಮ ಕಣ್ಣು ಮುಚ್ಚಿ ಹಾಳು ಬಾವಿಗೆ ಬೀಳು ಅಂದ್ರೂ ನಾನು ಬೀಳುತ್ತೇನೆ. ಅಮ್ಮ ಏನು ಹೇಳಿದರೂ ಶಿರಸಾವಹಿಸಿ ಪಾಲಿಸುವುದು ನನ್ನ ಹಾಗೂ ನನ್ನ ತಮ್ಮನ ಕೆಲಸ. ಅಷ್ಟೊಂದು ಗಾಢವಾದ ಬಾಂಧವ್ಯವಿದೆ ಆ ಮನೆಗೂ ನನಗೂ” ಎಂದು ಹೇಳಿದ್ದರು. ಆದರೆ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ಸುಮಲತಾ ಯಾಕೆ ಅವರ ಪರ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅಭಿಮಾನಿಗಳು ಬೇಸರ ಹೊರ ಹಾಕಿದ್ದರು.

    ಇದೀಗ ಸುಮಲತಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್‌ ಭಾರೀ ವೈರಲ್ ಆಗುತ್ತಿದೆ. ಭಗವದ್ಗೀತೆಯಲ್ಲಿದ್ದ ಕೃಷ್ಣನ ಸಾಲುಗಳನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. “ಎಲ್ಲವೂ ಸರಿ ಹೋಗುವ ಮೊದಲು ಬಹಳಷ್ಟು ತಪ್ಪಾಗುತ್ತದೆ. ಕೇವಲ ನಂಬಿಕೆ ಇರಲಿ” ಎನ್ನುವ ಸಾಲುಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನಟ ದರ್ಶನ್ ಗೆ ಬಂದಿರುವ ಸಂಕಷ್ಟಕ್ಕೆ ಪರೋಕ್ಷವಾಗಿ ಸುಮಲತಾ ಈ ಪೋಸ್ಟ್ ಮಾಡಿದ್ದಾರೆ ಎಂದು ಹಲವರು ಅಂದುಕೊಂಡಿದ್ದಾರೆ.

    FILM

    ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ರಕ್ಷಿತ್ ಶೆಟ್ಟಿ ಭೇಟಿ

    Published

    on

    ಉಡುಪಿ: ಖ್ಯಾತ ನಟ ರಕ್ಷಿತ್‌ ಶೆಟ್ಟಿ ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಪ್ರಾರ್ಥನೆ ನೆರವೇರಿಸಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.

    Udupi: ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ ಕಾಪು ಮಾರಿಗುಡಿ ಸನ್ನಿಧಾನಕ್ಕೆ ಭೇಟಿ

    ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ  ಮಾಹಿತಿಯನ್ನು ನೀಡಿದರು. ನಟ ರಕ್ಷಿತ್ ಶೆಟ್ಟಿ ಕುಟುಂಬಸ್ಥರೊಂದಿಗೆ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭ ರಶ್ಮಿತ್ ನಿಖಿಲ್ ಶೆಟ್ಟಿ ಇವರು ಕಾಪುವಿನ ಅಮ್ಮನ ಸ್ವರ್ಣ ಗದ್ದುಗೆಗೆ 9 ಗ್ರಾಂ ಸ್ವರ್ಣ ಸಮರ್ಪಿಸಿದರು. ರಕ್ಷಿತ್ ಶೆಟ್ಟಿ ಅವರ ತಾಯಿ ರಂಜನಾ ಶ್ರೀಧರ್ ಶೆಟ್ಟಿ ಮತ್ತು ಸಹೋದರ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು.

    Continue Reading

    FILM

    ‘ಪೆಂಡ್ರೈವ್‌’ನಲ್ಲಿ ಬಿಗ್‌ಬಾಸ್‌ ತನಿಷಾ ಕುಪ್ಪಂಡ..!

    Published

    on

    ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮತ್ತೆ ಸೌಂಡ್ ಮಾಡಲಿದೆ ‘ಪೆಂಡ್ರೈವ್’. ಹೌದು, ಈಗಾಗಲೇ ರಾಜ್ಯದಲ್ಲಿ ಎರಡು ಪ್ರಕರಣಗಳು ಭಾರೀ ಸದ್ದು ಮಾಡುತ್ತಿದ್ದೆ. ನಟ ದರ್ಶನ್ ಕೊಲೆ ಕೇಸ್‌ ನಲ್ಲಿ ಜೈಲು ಸೇರಿದ್ದರೆ, ಪ್ರಜ್ವಲ್ ರೇವಣ ಪೆಂಡ್ರೈವ್ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ.

    ಈ ಮಧ್ಯೆ ಕನ್ನಡ ಚಿತ್ರರಂಗದಲ್ಲಿ ಪೆಂಡ್ರೈವ್‌ ಸದ್ದು ಮಾಡಲು ತಯಾರಾಗುತ್ತಿದೆ. ಹೌದು, ವಿಶೇಷ ಅಂದ್ರೆ ತನಿಷಾ ಕುಪ್ಪಂಡ ಈ ಸಿನೆಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಿಗ್‌ ಬಾಸ್ ಸೀಸನ್ 10 ರ ಬಳಿಕ ತನಿಷಾ ಕುಪ್ಪಂಡ ಸೋಷಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿದ್ದಾರೆ. ಹೊಸದಾಗಿ ಬಿಸ್‌ನೆಸ್‌ ಕೂಡಾ ಶುರು ಮಾಡಿದ್ದಾರೆ. ಇದೀಗ ಪೆಂಡ್ರೈವ್‌ ಶೀರ್ಷೆಕೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನೆಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ಸರ್ಕಾರಕ್ಕೆ ತುಳು ಚಿತ್ರ ನಿರ್ಮಾಪಕರ ಮನವಿ: ಸಿಎಂ ಸ್ಪಂದನೆ…!

    ‘ಪೆಂಡ್ರೈವ್’ ಟೈಟಲ್ ಯಾಕೆ?

    ಹಾಗಂತ ಈ ‘ಪೆನ್‌ಡ್ರೈವ್’ ಸಿನಿಮಾಗೂ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಚಿತ್ರತಂಡ ಹೇಳಿದೆ. ಹಾಗಾದ್ರೆ ಸಿನೆಮಾಗೆ ಈ ಟೈಟಲ್ ಇಟ್ಟಿರುವುದಾದರೂ ಯಾಕೆ? ಈ ಸಿನಿಮಾವನ್ನು ಸೆಬಾಸ್ಟಿನ್ ಡೇವಿಡ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಟ್ರೆಂಡಿಂಗ್‌ನಲ್ಲಿರುವ ವಿಷಯಗಳನ್ನು, ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಇವರಿಗೆ ಅನುಭವಿದೆ. ಈ ಕಾರಣಕ್ಕೆ ‘ಪೆನ್‌ಡ್ರೈವ್’ ಟೈಟಲ್ ಇಟ್ಟು ಸಿನಿಮಾ ಮಾಡುವುದಕ್ಕೆ ಹೊರಟಾಗ ಸಿನಿಪ್ರಿಯರಲ್ಲಿ ಗುಮಾನಿ ಮೂಡಿತ್ತು. ಆದರೆ, ಸ್ವತ: ಸಿನೆಮಾ ನಿರ್ದೇಶಕರೇ ಮಾಧ್ಯಮಗಳಿಗೆ ತಮ್ಮ ಸಿನಿಮಾ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನೆಮಾ ಆಗಿದೆ ಎಂದು ಹೇಳಿದ್ದಾರೆ.

    ಪೆನ್‌ಡ್ರೈವ್ ಸಿನೆಮಾವನ್ನು ಲಯನ್ ಆರ್ ವೆಂಕಟೇಶ್ ಮತ್ತು ಲಯನ್ ಎಸ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಸಿನೆಮಾದಲ್ಲಿ ರಾಧಿಕಾ, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಭಾಗ್ಯ, ಗೀತಪ್ರಿಯಾ, ಗೀತಾ ಮೊದಲಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಇನ್ನು ಜು.4 ರಂದು  ಸಿನೆಮಾ ಶೀರ್ಷಿಕೆ ಅನಾವರಣ ಆಗಲಿದ್ದು, ವರ್ತೂರು ಸಂತೋಷ್ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ.

    Continue Reading

    FILM

    ಜೊತೆಯಾಗುತ್ತಿದ್ದಾರೆ ತ್ಯಾಗರಾಜರು…ಇದು ‘ನೀವು ಹಿಂದೆಂದೂ ನೋಡಿರದ ಗ್ರೇಟೆಸ್ಟ್ ಶೋ’!

    Published

    on

    ತಮ್ಮ ನೆಚ್ಚಿನ ನಟರ ಸಿನಿಮಾಗಳು ಸೆಟ್ಟೇರುತ್ತವೆ ಅಂದಾಗ ಅಭಿಮಾಗಳಲ್ಲಿ ಸಂಭ್ರಮ ಮನೆ ಮಾಡುತ್ತೆ. ಅಂತಹುದರಲ್ಲಿ ಜನಪ್ರಿಯ ನಾಯಕರಿಬ್ಬರು ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದಂದ್ರೆ ಹೇಳ್ಬೇಕಾ ಡಬಲ್ ಸಂಭ್ರಮ. ಇದೀಗ ಇಂತಹ ಸಂಭ್ರಮ ಕೊಡ್ತಾ ಇರೋದು ಅಂದ್ರೆ ರಮೇಶ್ ಅರವಿಂದ್ ಹಾಗೂ ಗಣೇಶ್.


    ತ್ಯಾಗರಾಜರ ಸಮಾಗಮ :


    ಇಂದು(ಜು.2) ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟು ಹಬ್ಬ. ಹೀಗಾಗಿ ಹೊಸ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಅದರಲ್ಲಿ ಗಣೇಶ್ – ರಮೇಶ್ ಕಾಂಬಿನೇಷನ್ ಚಿತ್ರದ ಪೋಸ್ಟರ್ ಕೂಡ ಒಂದು. ಈ ಪೋಸ್ಟರ್ ನೋಡಿ ಇಬ್ಬರ ಅಭಿಮಾನಿಗಳಿಗೆ ಸಂತಸವಾಗಿರೋದು ಸುಳ್ಳಲ್ಲ.

    ಕನ್ನಡ ಚಿತ್ರರಂಗದಲ್ಲಿ ‘ತ್ಯಾಗರಾಜ’ ಎಂದೇ ರಮೇಶ್ ಅರವಿಂದ್ ಫೇಮಸ್. ಬ್ಯಾಕ್ ಟು ಬ್ಯಾಕ್ ಹಿಟ್‌ಗಳನ್ನು ಕೊಟ್ಟಿದ್ದ ರಮೇಶ್ ಅರವಿಂದ್ ಪ್ರತಿ ಸಿನಿಮಾದಲ್ಲೂ ನಾಯಕಿಯನ್ನು ಕಳೆದುಕೊಂಡಿದ್ದರು. ಹಾಗಾಗಿ ಅವರನ್ನು ಎಂದು ಕರೆಯಲಾಗುತ್ತಿತ್ತು. ಮುಂಗಾರು ಮಳೆ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ತ್ಯಾಗರಾಜ ಪಟ್ಟ ಸಿಕ್ಕಿತ್ತು. ಇದೀಗ ಇವರಿಬ್ಬರು ಒಂದಾಗುತ್ತಿರೋ ಅಭಿಮಾನಿಗೆ ವ್ಹಾವ್ ಎಂದೆನಿಸಿರೋದು ಸುಳ್ಳಲ್ಲ.

    ಆಸಕ್ತಿದಾಯಕವಾಗಿದೆ ಪೋಸ್ಟರ್ :


    ಇನ್ನು ರಿಲೀಸ್ ಆಗಿರೋ ಪೋಸ್ಟರ್ ಆಸಕ್ತಿ ಹುಟ್ಟು ಹಾಕಿದೆ. ರಮೇಶ್ ಅರವಿಂದ್ ಹಾಗೂ ಗಣೇಶ್ ಅವರ ಯಂಗ್ ಇರುವ ಫೋಟೊಗಳನ್ನು ಬಳಸಲಾಗಿದೆ. ಒಂದು ಕಾಗದದ ಲಕೋಟೆ, ಅದರ ಮೇಲೊಂದು ಪೀಪಿ ಇಡಲಾಗಿದೆ. ವಿದೇಶದ ಸೀಲೊಂದು ಇದೆ. ಹಾಗಾಗಿ ಚಿತ್ರದಲ್ಲೇನೋ ವಿಶೇಷತೆ ಇದೆ ಅನ್ನಿಸುತ್ತೆ. ಆಗಸ್ಟ್ 16ಕ್ಕೆ ಫಸ್ಟ್ ಲುಕ್ ರಿಲೀಸ್ ಆಗುತ್ತೆ ಎಂದಿರುವ ಚಿತ್ರತಂಡ ‘ನೀವು ಹಿಂದೆಂದೂ ನೋಡಿರದ ಗ್ರೇಟೆಸ್ಟ್ ಶೋ’ ಎಂದು ಬರೆದುಕೊಂಡು, ಪೋಸ್ಟರ್ ಹಂಚಿಕೊಂಡಿದೆ.

    ಇದನ್ನೂ ಓದಿ :ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್  

    ಅಂದಹಾಗೆ, ಪುಷ್ಪಕ ವಿಮಾನ, ಇನ್ಸ್‌ಪೆಕ್ಟರ್ ವಿಕ್ರಮ್, ಮಾನ್ಸೂನ್ ರಾಗದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಎ ಆರ್ ಈ ಚಿತ್ರದ ಮೂಲಕ ನಿರ್ದೇಶಕನ ಟೋಪಿ ಹಾಕಿದ್ದಾರೆ.

    Continue Reading

    LATEST NEWS

    Trending