ಪಾಕ್ ಪರ ಘೋಷಣೆ ಕೂಗುವವರನ್ನು ಎನ್ ಕೌಂಟರ್ ಮಾಡಬೇಕು: ಶಾಸಕ ಸುನಿಲ್ ಕುಮಾರ್
ಪಾಕ್ ಪರ ಘೋಷಣೆ ಕೂಗುವವರನ್ನು ಎನ್ ಕೌಂಟರ್ ಮಾಡಬೇಕು: ಶಾಸಕ ಸುನಿಲ್ ಕುಮಾರ್
ಕಾರ್ಕಳ: ಪಾಕ್ ಪರ ಘೋಷಣೆ ಕೂಗುವವರಿಗೆ ಎನ್ ಕೌಂಟರ್ ನಿಂದಲೇ ಉತ್ತರ ನೀಡಬೇಕೆಂದು ಶಾಸಕ ಸುನಿಲ್ ಕುಮಾರ್ ಕಾರ್ಕಳ ಹೇಳಿದ್ದಾರೆ.
ಬಿಜೆಪಿ ಯುವಮೋರ್ಚಾದಿಂದ ಕಾರ್ಕಳದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿ ಮಾತನಾಢಿದ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಎನ್ಕೌಂಟರ್ ಮಾಡಬೇಕು. ಪ್ರಕರಣದ ತನಿಖೆ ಮಾಡುವ ಹಾಗೂ ಆರೋಪಿಗಳನ್ನು ವಿಚಾರಣೆ ಮಾಡುವ ಅಗತ್ಯವೇ ಇಲ್ಲ. ಭಾರತದಲ್ಲಿ ಹುಟ್ಟಿ ಬೆಳೆದವರು ಪಾಕ್ ಪರ ಘೋಷಣೆ ಕೂಗುತ್ತಾರೆ. ಕೈಯಲ್ಲಿ ರಾಷ್ಟ್ರಧ್ವಜ, ಮನಸ್ಸಲ್ಲಿ ಪಾಕ್ ಜಪ. ಸಿಎಎ ವಿರೋಧಿ ಹೋರಾಟಗಾರರಲ್ಲಿ ಪಾಕ್ ಪರ ಭಾವನೆಗಳಿವೆ. ಈ ಪೈಕಿ ಇಬ್ಬರ ಭಾವನೆ ಬಹಿರಂಗಗೊಂಡಿದೆ.
ಭಾರತದಲ್ಲಿ ಈ ವರೆಗೆ ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ಸಿಗುತ್ತಿತ್ತು. ನಕ್ಸಲರನ್ನು ಬೆಂಬಲಿಸುವ ಎಡಪಂಥೀಯ ಚಿಂತನೆಯ ಯುವತಿ ಅಮೂಲ್ಯ ಆಗಿದ್ದಾಳೆ. ದೇಶದಲ್ಲಿ ಅಭದ್ರತೆ, ಅಶಾಂತಿ ಸೃಷ್ಟಿಸಲು ಈ ರೀತಿಯ ಹೇಳಿಕೆ ನೀಡಲಾಗಿದೆ. ಇದರ ಹಿಂದಿರುವ ಷಡ್ಯಂತ್ರಗಳು ಬಯಲಾಗಬೇಕು. ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರ ಮೇಲೂ ಮೊಕದ್ದಮೆ ದಾಖಲಾಗಲಿ ಎಂದರು. ಮಾತ್ರವಲ್ಲದೆ ನಮ್ಮ ಊರುಗಳಲ್ಲೂ ಮಿನಿ ಪಾಕಿಸ್ತಾನ ನಿರ್ಮಾಣವಾಗಿದೆ ಅಂತ ಸುನಿಲ್ ಕುಮಾರ್ ಆತಂಕ ವ್ಯಕ್ತಪಡಿಸಿದರು.
BELTHANGADY
ರಸ್ತೆ ದಾಟುವ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ..!! ಪಾದಾಚಾರಿ ಮೃ*ತ್ಯು
ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ ಶೇಖರ್ ಬಂಗೇರ ಹೇರಾಜೆ(65 ವ) ಮೃ*ತಪಟ್ಟವರು.
ಗುರುವಾರ (ಮಾ.28) ರಾತ್ರಿ ಶೇಖರ್ ಬಂಗೇರ ರವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀ*ರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಅವರು ಸಾವನ್ನಪ್ಪಿದ್ದಾರೆ. ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ(19ವ) ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮೃತಪಟ್ಟ ಶೇಖರ್ ಬಂಗೇರ ಹೇರಾಜೆ ವಿಜಯ ಬ್ಯಾಂಕ್ ಮಾಜಿ ಉದ್ಯೋಗಿ, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ರಾಘವೇಂದ್ರ ಮಠದ ಕೋಶಾಧಿಕಾರಿ, ಗುರುನಾರಾಯಣ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.
ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
LATEST NEWS
238 ಬಾರಿ ಸೋತ ಅಭ್ಯರ್ಥಿ ಮತ್ತೆ ಲೋಕಸಭಾ ಅಖಾಡಕ್ಕೆ!
ಮಂಗಳೂರು ( ಮೆಟ್ಟೂರು ) : ಚುನಾವಣೆ ಅಂದ ಮೇಲೆ ಅಭ್ಯರ್ಥಿ ಹೇಗಾದ್ರೂ ಗೆಲ್ಲಲೇ ಬೇಕು ಅಂತ ಪ್ರಯತ್ನ ಮಾಡ್ತಾನೆ. ಹಾಗಂತ ಎರಡು ಮೂರು ಸ್ಪರ್ಧೆ ಮಾಡಿ ಗೆಲುವು ಸಿಕ್ಕಿಲ್ಲಾ ಅಂದ್ರೆ ಸುಮ್ಮನೆ ಮನೇಲಿ ಕೂರ್ತಾನೆ. ಆದ್ರೆ ಅದೊಂದು ಅಭ್ಯರ್ಥಿ ಮಾತ್ರ ಚುನಾವಣೆಯಲ್ಲಿ ಬರೋಬ್ಬರಿ 238 ಬಾರಿ ಸ್ಪರ್ಧೆ ಮಾಡಿ ಸೋತರೂ ಮತ್ತೆ ಈ ಬಾರಿ ಲೋಕಸಭಾ ಚುನಾವಣ ಕಣಕ್ಕೆ ಇಳಿದಿದ್ದಾರೆ.
ಚುನಾವಣೆಗೆ ನಿಲ್ಲೋದೇ ಸೋಲೋದಿಕ್ಕೆ ಅನ್ನೋ ರೀತಿ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಮೂಲಕ 65 ವಯಸ್ಸಿನ ಪದ್ಮರಾಜನ್ ಎಂಬವರು ಈ ಭಾರಿ ಮತ್ತೆ ಕಣಕ್ಕಿಳಿದಿದ್ದಾರೆ.
ಚುನಾವಣೆಯಲ್ಲಿ ಭಾಗವಹಿಸುವುದು ಮುಖ್ಯ!
ತಮಿಳುನಾಡಿನ ಮೆಟ್ಟೂರು ವಿಧಾನಸಭಾ ಕ್ಷೇತ್ರದಿಂದ 1988 ರಲ್ಲಿ ಚುನಾವಣೆಯಲ್ಲಿ ಪದ್ಮರಾಜನ್ ತಮ್ಮ ಮೊದಲ ಸ್ಪರ್ಧೆ ಆರಂಭಿಸಿದ್ದಾರೆ. ಸಾಮಾನ್ಯ ಟೈರ್ ರಿಪೇರಿ ಅಂಗಡಿ ಮಾಲೀಕರಾಗಿರುವ ಕೆ. ಪದ್ಮರಾಜನ್ ಅಂದಿನಿಂದ ಇಂದಿನವರೆಗೆ ಸರಿ ಸುಮಾರು 238 ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಚುನಾವಣೆಯ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಕಟ್ಟಿದ ಲಕ್ಷಾಂತರ ರೂಪಾಯಿ ಠೇವಣಿಯನ್ನೇ ಇವರು ಕಳೆದುಕೊಂಡಿದ್ದಾರೆ. ಆದರೆ ಅದೆಷ್ಟೇ ಸಲ ಸೋತರು.. ಠೇವಣಿ ಕಳೆದುಕೊಂಡರು ಕೂಡ ಇವರ ತಲೆ ಕೆಡಿಸಿಕೊಂಡಿಲ್ಲ.
ಎಲ್ಲಾ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವನ್ನು ಬಯಸುತ್ತಾರೆ. ಆದರೆ ನಾನು ಹಾಗೆ ಅಲ್ಲ ನನಗೆ ಚುನಾವಣೆಯಲ್ಲಿ ಭಾಗವಹಿಸುವುದೇ ಮುಖ್ಯ ಅಂತಾರೆ ಪದ್ಮರಾಜನ್. ಏಪ್ರಿಲ್ 19 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಸಂಸದೀಯ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.
ಕಿಂಗ್ ಆಫ್ ದಿ ಎಲೆಕ್ಷನ್ ಬಿರುದು :
ಸ್ಥಳೀಯಾಡಳಿತದ ಚುನಾವಣೆಯಿಂದ ಹಿಡಿದು ರಾಷ್ಟ್ರಪತಿ ಚುನಾವಣೆಗೂ ಇವರು ಸ್ಪರ್ಧೆ ಮಾಡಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಘಟಾನುಘಟಿ ನಾಯಕರುಗಳಾದ ಅಟಲ್ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ, ರಾಹುಲ್ ಗಾಂಧಿ ಹೀಗೆ ಅನೇಕರ ವಿರುದ್ಧ ಇವರು ಸ್ಪರ್ಧೆ ಮಾಡಿ ಸೋತಿದ್ದಾರೆ. ಹೀಗಾಗಿ ಇವರಿಗೆ ಕಿಂಗ್ ಆಪ್ ದಿ ಎಲೆಕ್ಷನ್ ಅಂತಾನೂ ಬಿರುದು ಸಿಕ್ಕಿದೆ.
ಸೋತರೂ ಗೆಲುವು :
ನಿರಂತರ ಚುನಾವಣೆಯಲ್ಲಿ ಸೋತಿರುವ ಪದ್ಮರಾಜನ್ ಅವರು ಒಂದು ವಿಚಾರದಲ್ಲಿ ಗೆಲುವು ಸಾಧಿಸಿದ್ದಾರೆ. ಕಳೆದ ಮೂವತ್ತೈದು ವರ್ಷಗಳಿಂದ ಸೋಲುವ ಮೂಲಕ ಈ ಗೆಲುವು ತಂದುಕೊಂಡಿದ್ದಾರೆ. ಸೋಲಿನ ಮೂಲಕವೇ ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ಸೇರಿಸಿಕೊಳ್ಳುವ ಮೂಲಕ ಆ ಗೆಲುವು ಇವರಿಗೆ ಸಿಕ್ಕಿದೆ.
ಈ ಬಾರಿ ಮತ್ತೆ ಲೊಕಸಭಾ ಚುನಾವಣೆಯ ಕಣಕ್ಕಿಳಿದಿರುವ ಪದ್ಮರಾಜನ್ ಅವರು ನನಗೆ ಸೋಲಿನಲ್ಲೇ ಖುಷಿ ಇದೆ. ಹಾಗೊಂದು ವೇಳೆ ಎಲ್ಲಿಯಾದ್ರೂ ಜನ ನನ್ನನ್ನು ಗೆಲ್ಲಿಸಿದ್ರೆ ಹೃದಯಾಘಾತವಾಗಿ ಉಸಿರೇ ನಿಂತು ಹೋಗಬಹುದು ಎಂದು ತಮಾಷೆಯಾಗಿ ಹೇಳುತ್ತಾರೆ. ಹೀಗಾಗಿ ನನ್ನ ಉಸಿರು ಇರಬೇಕು ಅಂದ್ರೆ ನಾನು ಸದಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಹಾಗೂ ಸೋಲಬೇಕು ಅಂತಾರೆ.
LATEST NEWS
ಪ್ರಧಾನಿ ಕಾರಿನ ನೋಂದಣಿಯನ್ನು ವಿಸ್ತರಿಸಲು ಅಸಾಧ್ಯ ಎಂದ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ; ಕಾರಣ ಏನು?
ನವದೆಹಲಿ : ಪ್ರಧಾನಿ ಕಾರಿನ ನೋಂದಣಿಯನ್ನು ವಿಸ್ತರಿಸಲು ಅಸಾಧ್ಯ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ( NGT ) ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದ ಮೂರು ಡಿಸೇಲ್ ಕಾರುಗಳ ನೋಂದಣಿ ವಿಸ್ತರಿಸುವಂತೆ ಎಸ್ಪಿಜಿ (SPG) ಮನವಿ ಸಲ್ಲಿಸಿತ್ತು.
ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಹೇಳಿದ್ದೇನು?
“ಈ ಮೂರು ಕಾರುಗಳು ಸಾಮಾನ್ಯವಾಗಿ ಬಳಸಲ್ಪಡದ ವಿಶೇಷ ಉದ್ದೇಶದ ವಾಹನಗಳಾಗಿವೆ. ಈ ವಾಹನಗಳು ಹತ್ತು ವರ್ಷಗಳಲ್ಲಿ ಬಹಳ ಕಡಿಮೆ ಚಲಿಸಿವೆ ಮತ್ತು ಪ್ರಧಾನಿ ಅವರ ಭದ್ರತೆಯ ನಿರ್ದಿಷ್ಟ ಉದ್ದೇಶಕ್ಕಾಗಿ ಅಗತ್ಯವಾಗಿವೆ. ಆದರೆ ಸುಪ್ರೀಂ ಕೋರ್ಟ್ 2018ರ ಅಕ್ಟೋಬರ್ 29ರಂದು ನೀಡಿದ ಆದೇಶದಂತೆ ಆ ವಾಹನಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನವಿಯನ್ನು ತಿರಸ್ಕರಿಸಲಾಗಿದೆ” ಎಂದು ಎನ್ಜಿಟಿ ಹೇಳಿದೆ.
ಎಸ್ಪಿಜಿ ಈ ಕಾರುಗಳಿಗೆ ಅನುಮತಿ ಕೇಳಿದ್ಯಾಕೆ?
ಈ ವಾಹನಗಳ ವಿನ್ಯಾಸ ಮತ್ತು ತಾಂತ್ರಿಕ ಹಾಗೂ ಕಾರ್ಯತಂತ್ರಗಳು ಬಹಳಷ್ಟು ವಿಶೇಷವಾಗಿದೆ. ಇಂತಹ ವಾಹನಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಾಗುವುದಿಲ್ಲ. ಭದ್ರತೆಯ ದೃಷ್ಟಿಯಲ್ಲಿ ವಿಶೇಷವಾಗಿ ವಿನ್ಯಾಸ ಮಾಡಿರುವ ಕಾರಣ ಈ ಕಾರುಗಳಿಗೆ ಇನ್ನೂ ಐದು ವರ್ಷಗಳ ಕಾಲ ನೊಂದಣಿಯನ್ನು ವಿಸ್ತರಿಸಿ ಎಂದು ಎಸ್ಪಿಜಿ ಕೋರಿಕೆ ಸಲ್ಲಿಸಿತ್ತು.
ದೆಹಲಿ ಎನ್ಸಿಆರ್ನಲ್ಲಿನ ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಕ್ರಮವಾಗಿ ಎನ್ಜಿಟಿ ಮತ್ತು ಸುಪ್ರೀಂ ಕೋರ್ಟ್ ಈ ಆದೇಶಗಳನ್ನು ಹೊರಡಿಸಿದ್ದವು. ಎನ್ಜಿಟಿ 2015ರ ಏಪ್ರಿಲ್ನಲ್ಲಿ ದೆಹಲಿ ಎನ್ಸಿಆರ್ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಎಲ್ಲ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. 10 ವರ್ಷಕ್ಕಿಂತ ಹಳೆಯದಾದ ಯಾವುದೇ ಡೀಸೆಲ್ ವಾಹನವನ್ನು ನೋಂದಾಯಿಸದಂತೆ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಇದನ್ನೂ ಓದಿ…238 ಬಾರಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಮತ್ತೆ ಲೋಕಸಭಾ ಅಖಾಡಕ್ಕೆ…!
2013ರಲ್ಲಿ ತಯಾರಿಸಿದ ಮತ್ತು 2014ರ ಡಿಸೆಂಬರ್ನಲ್ಲಿ ನೋಂದಾಯಿಸಲಾದ ಮೂರು ರೆನಾಲ್ಟ್ ಎಂಡಿ -5 (Renault MD-5) ವಿಶೇಷ ಶಸ್ತ್ರಸಜ್ಜಿತ ವಾಹನಗಳು 9 ವರ್ಷಗಳಲ್ಲಿ ಕ್ರಮವಾಗಿ ಸುಮಾರು 6,000 ಕಿ.ಮೀ., 9,500 ಕಿ.ಮೀ. ಮತ್ತು 15,000 ಕಿ.ಮೀ. ಕ್ರಮಿಸಿವೆ.