HomeLATEST NEWSಪರೇಡ್ ಸಮಿತಿ ನಿಯಮ ಉಲ್ಲಂಘಿಸಿದ ರಾಜ್ಯಗಳ ಸ್ತಬ್ದಚಿತ್ರ ನಿರಾಕರಿಸಿದೆ: ಸಚಿವ ಸುನೀಲ್‌ ಕುಮಾರ್‌

ಪರೇಡ್ ಸಮಿತಿ ನಿಯಮ ಉಲ್ಲಂಘಿಸಿದ ರಾಜ್ಯಗಳ ಸ್ತಬ್ದಚಿತ್ರ ನಿರಾಕರಿಸಿದೆ: ಸಚಿವ ಸುನೀಲ್‌ ಕುಮಾರ್‌

ಮಂಗಳೂರು: ಗಣರಾಜ್ಯೋತ್ಸವದ ಪರೇಡ್ ಸಮಿತಿ ನಿಯಮ ಉಲ್ಲಂಘನೆ ಮಾಡಿದ ರಾಜ್ಯಗಳ ಸ್ತಬ್ದಚಿತ್ರಗಳನ್ನು ನಿರಾಕರಿಸಿದೆ. ಇದರಲ್ಲಿ ಕೇರಳವಲ್ಲದೇ ಪಶ್ಚಿಮಬಂಗಾಳ, ತಮಿಳುನಾಡು ರಾಜ್ಯಗಳು ಸೇರಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.


ನಾರಾಯಣ ಗುರು ಸ್ತಬ್ಥ ಚಿತ್ರ ಪ್ರಸ್ತಾವನೆ ತಿರಸ್ಕಾರದ ಬಗ್ಗೆ ಟ್ವೀಟ್‌ ಮಾಡಿದ ಅವರು ‘ಗಣರಾಜ್ಯೋತ್ಸವದ ಪರೇಡ್ ಸಮಿತಿ ನಿಯಮ ಉಲ್ಲಂಘನೆ ಮಾಡಿದ ರಾಜ್ಯಗಳ ಸ್ತಬ್ದಚಿತ್ರಗಳನ್ನು ನಿರಾಕರಿಸಿದೆ.

ಇದರಲ್ಲಿ ಕೇರಳವಲ್ಲದೇ ಪಶ್ಚಿಮ ಬಂಗಾಳ, ತಮಿಳುನಾಡು ರಾಜ್ಯಗಳು ಸೇರಿವೆ ಮೂಲಕ ನಿಯಮಾವಳಿ ಗೊತ್ತಿದ್ದೂ, ಬೇಕೆಂದೇ ತಿರಸ್ಕ್ರೃತಗೊಳ್ಳಲು ಕಮ್ಯುನಿಸ್ಟ್ ಸರ್ಕಾರ ಶಂಕರಾಚಾರ್ಯರ, ಜಟಾಯು, ನಾರಾಯಣ ಗುರುಗಳ ಚಿತ್ರವನ್ನ ವಿವಾದ ಸೃಷ್ಠಿಸಲು ಕಳುಹಿಸಿತ್ತು.

ಮತ್ತೊಂದು ಟ್ವೀಟ್‌ನಲ್ಲಿ, ನಾರಾಯಣ ಗುರುಗಳ ಹೆಸರನ್ನು ಅನಗತ್ಯವಾಗಿ ಪ್ರಸ್ತಾಪಿಸುತ್ತಾ, ಸಮಾಜವನ್ನು ಒಡೆಯುವ ಷಡ್ಯಂತ್ರಗಳು ಕೆಲದಿನಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದೆ.

ಕೇರಳದ ಕಮ್ಯುನಿಸ್ಟ್ ಸರ್ಕಾರ ಉದ್ದೇಶಪೂರ್ವಕವಾಗಿ ನಾರಾಯಣ ಗುರುಗಳ ಹೆಸರನ್ನು ಬಳಸಿಕೊಂಡು ವಿವಾದ ಸೃಷ್ಠಿಸುವ ಕೆಲಸ ಮಾಡಿದೆ ಎಂದಿದ್ದಾರೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...