FILM
WATCH VIDEO : ಕಾಸರಗೋಡಿನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್
ಕಾಸರಗೋಡು : ಸನ್ನಿಲಿಯೋನ್ ಯಾರಿಗೆ ತಾನೆ ಗೊತ್ತಿಲ್ಲ. ತನ್ನ ಮಾದಕ ನೋಟದಿಂದ, ನಟನೆಯಿಂದ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೋಹಕ ತಾರೆ. ಸದ್ಯ ಅವರು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಚಿತ್ರವೊಂದರ ಶೂಟಿಂಗ್ ಗಾಗಿ ಕಾಸರಗೋಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಸೀತಂಗೋಳಿ ಸಮೀಪದ ಶೇಣಿಯಲ್ಲಿ ಹಿಂದಿ ಚಿತ್ರವೊಂದರ ಶೂಟಿಂಗ್ ನಲ್ಲಿ ಅವರು ಭಾಗಿಯಾಗಿದ್ದಾರೆ. ಹೇಳಿ ಕೇಳಿ ಕಾಸರಗೋಡಿನಲ್ಲಿ ಚಿತ್ರೀಕರಣಕ್ಕೆ ಹೆಸರುವಾಸಿಯಾದ ಸುಂದರ ಪ್ರದೇಶ ಶೇಣಿ. ಇಲ್ಲಿ ಹಲವಾರು ಪರಭಾಷಾ ಚಲನಚಿತ್ರಗಳ ಚಿತ್ರೀಕರಣ ನಡೆದಿದೆ. ಇದೀಗ ಸನ್ನಿ ಲಿಯೋನ್ ಚಿತ್ರದ ಚಿತ್ರೀಕರಣವೂ ನಡೆಯುತ್ತಿದೆ.
ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!
ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಸನ್ನಿಯ ಮಾದಕ ನೋಟವನ್ನ ನೋಡಲು ರಸ್ತೆ ಬದಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.
FILM
ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?
ಬೆಂಗಳೂರು : ಅತ್ತ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಈ ನಡುವೆ ಖ್ಯಾತ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಖಾಸಗಿ ವೀಡಿಯೋವೊಂದು ವೈರಲ್ ಆಗಿದೆ. ಒಂದಷ್ಟು ಅಶ್ಲೀಲ ವೀಡಿಯೋಗಳೂ ಸದ್ದು ಮಾಡುತ್ತಿವೆ.
ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಫೇಮಸ್ ನಟಿ. ಅಲ್ಲದೇ ತೆಲುಗು ಧಾರಾವಾಹಿಗಳಿಗೂ ಲಗ್ಗೆ ಇಟ್ಟಿದ್ದಾರೆ. ಇತ್ತೀಚೆಗೆ ಫೋಟೋಗಳಿಂದ ಭಾರೀ ಸುದ್ದಿಯಾಗುತ್ತಿದ್ದಾರೆ. ಹಾಟ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ಅವರದ್ದೆನ್ನಲಾದ ಖಾಸಗಿ ವೀಡಿಯೋಗಳು ಭಾರೀ ವೈರಲ್ ಆಗಿದೆ. ಫೇಸ್ ಬುಕ್, ವಾಟ್ಸ್ ಆ್ಯಪ್, ಟ್ವಿಟ್ಟರ್ ಖಾತೆಗಳಲ್ಲಿ ಅಶ್ಳೀಲ ಫೋಟೋ, ವೀಡಿಯೋಗಳು ಹರಿದಾಡುತ್ತಿವೆ. ಈ ಬಗ್ಗೆ ಇದೀಗ ಮೌನ ಮುರಿದಿರುವ ನಟಿ ಸ್ಪಷ್ಟನೆ ನೀಡಿದ್ದಾರೆ.
ಏನಂದ್ರು ಜ್ಯೋತಿ ರೈ?
ತಮ್ಮ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಂಡು ಪಡ್ಡೆಗಳ ನಿದ್ದೆಗೆಡಿಸುತ್ತಿದ್ದ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ಬಗ್ಗೆ ಸ್ವತಃ ಜ್ಯೋತಿ ರೈ ಸ್ಪಷ್ಟನೆ ನೀಡಿದ್ದಾರೆ. ಆಘಾತಕ್ಕೊಳಗಾಗಿದ್ದೇನೆ ಎಂದಿದ್ದಾರೆ.
ನಾನು ಅಪರಿಚಿತ ವ್ಯಕ್ತಿಗಳಿಂದ ಈ ಸಂದೇಶಗಳನ್ನು ಸ್ವೀಕರಿಸಿ ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಖ್ಯಾತಿ ಮತ್ತು ನನ್ನ ಕುಟುಂಬದ ಪ್ರತಿಷ್ಠೆಗೆ ಅಪಾಯದಲ್ಲಿರುವುದರಿಂದ ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಸರಿಯಾದ ಮತ್ತು ತ್ವರಿತ ಕ್ರಮವನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ. ಅಲ್ಲದೆ, ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ. ನಿಮ್ಮ ಪರಿಶೀಲನೆ ಮತ್ತು ತನಿಖೆಗಾಗಿ ನಾನು ಎಲ್ಲಾ ಬಳಕೆದಾರರ ಯೂಸರ್ ಐಡಿಗಳನ್ನು ಲಗತ್ತಿಸಿದ್ದೇನೆ.
ಈ ‘ಅಜ್ಞಾತ ಬಳಕೆದಾರರ’ ವಿರುದ್ಧ ಈ ಕೆಳಗಿನ ಅಪರಾಧಗಳನ್ನು ಮಾಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66 (ಇ) ಅಡಿಯಲ್ಲಿ ಖಾಸಗಿತನದ ಉಲ್ಲಂಘನೆಗಾಗಿ ಶಿಕ್ಷೆ. ಮಾಹಿತಿ ತಂತ್ರಜ್ಞಾನ ಕಾಯಿದೆ, 2000, 2000 ರ ಸೆಕ್ಷನ್ 67 ರ ಅಡಿಯಲ್ಲಿ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸಲು ಅಥವಾ ರವಾನಿಸಿದ ಕಾರಣ ಶಿಕ್ಷೆ, ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 (ಎ) ಅಡಿಯಲ್ಲಿ ಲೈಂಗಿಕ ಕ್ರಿಯೆಯನ್ನು ಒಳಗೊಂಡಿರುವ ವಸ್ತುಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಪ್ರಕಟಿಸಿದ ಕಾರಣ ಶಿಕ್ಷೆ ಮತ್ತು ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 509 ರ ಅಡಿಯಲ್ಲಿ ಮಹಿಳೆಯ ಘನತೆಯನ್ನು ಅವಮಾನಿಸುವ ಉದ್ದೇಶದಿಂದ ಪದಗಳು ಅಥವಾ ಕೆಲಸ ಮಾಡಿರುವ ಕಾರಣ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ತೆಲುಗು ನಿರ್ದೇಶಕನ ಕೈ ಹಿಡಿದ ಜ್ಯೋತಿ:
ಜ್ಯೋತಿ ರೈ ತೆಲುಗು ನಿರ್ದೇಶಕ ಸುಕುಮಾರ್ ಪೂರ್ವಜ್ ಅವರೊಂದಿಗೆ ಸಹ ಜೀವನ ನಡೆಸುತ್ತಿದ್ದ ಬಗ್ಗೆ ಗಾಸಿಪ್ ಹರಿದಾಡುತ್ತಿತ್ತು. ಆದದ ಬಳಿಕ ವಿವಾಹವಾಗಿರುವ ಬಗ್ಗೆ ಸ್ವತಃ ತಿಳಿಸಿ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ನಟಿ ಜ್ಯೋತಿ ರೈ ತನ್ನ 20 ನೇ ವಯಸ್ಸಿನಲ್ಲಿ ಮೊದಲ ಮದುವೆಯಾಗಿದ್ದರು. ನಂತರ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಆಕೆಗೆ 11 ವರ್ಷದ ಮಗನಿದ್ದಾನೆ.
FILM
ಪ್ರತಿಷ್ಟಿತ ಮೆಟ್ ಗಾಲ ಸಮಾರಂಭದಲ್ಲಿ ಮಿಂಚಿದ ಆಲಿಯಾ ಭಟ್; ಆಲಿಯಾ ವಿಶಿಷ್ಟ ಉಡುಗೆಗೆ ಬೆರಗಾದ್ರು ಫ್ಯಾನ್ಸ್
ಜಗತ್ತಿನ ವಿವಿಧ ಮನರಂಜನಾ ಕ್ಷೇತ್ರಗಳಲ್ಲಿ ತೊಡಗಿರುವ ಗಣ್ಯರು ಭಾಗಿಯಾಗುವ ಪ್ರತಿಷ್ಠಿತ ಮೆಟ್ ಗಾಲ ಸಮಾರಂಭದಲ್ಲಿ ಈ ಬಾರಿ ಆಲಿಯಾ ಭಟ್ ತನ್ನ ವಿಶಿಷ್ಟ ಉಡುಗೆಯ ಮೂಲಕ ಗಮನ ಸೆಳೆದಿದ್ದಾರೆ. ಅವರು ಸಬ್ಯಸಾಚಿ ಮುಖರ್ಜಿ ವಿನ್ಯಾಸದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಅವರ ಲುಕ್ಗೆ ಸಾಕಷ್ಟು ಮೆಚ್ಚುಗೆ ಕೇಳಿ ಬಂದಿದೆ. ಅವರ ಸೊಗಸಾದ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ದೇಸಿ ಉಡುಪಿಗೂ ಟ್ರೇನ್ ವಿನ್ಯಾಸ:
ತಿಳಿ ನೀಲಿ, ಬಿಳಿ ಮಿಶ್ರಿತ ಸುಂದರ ಸೀರೆಯಲ್ಲಿದ್ದ ಉದ್ದನೆಯ ಟ್ರೇನ್ ಸೆರಗು ಸೀರೆಗೆ ಮೆರುಗು ನೀಡಿತ್ತು. ಸಾಮಾನ್ಯವಾಗಿ ಗೌನ್ ಗೆ ಇಂತಹ ಟ್ರೇನ್ ವಿನ್ಯಾಸಗೊಳಿಸಲಾಗುತ್ತದೆ. ದೇಸಿ ಉಡುಪಿಗೂ ಟ್ರೇನ್ ವಿನ್ಯಾಸಗೊಳಿಸಿ ಕಂಟೆಂಪರರಿ ಸ್ಪರ್ಶ ನೀಡಬಹುದು ಎಂದು ಆಲಿಯಾ ಭಟ್ ತೋರಿಸಿದ್ದಾರೆ.
‘ಗಾರ್ಡನ್ ಆಫ್ ಟೈಮ್’ ಡ್ರೆಸ್ ಕೋಡ್ ಗೆ ಅನುಗುಣವಾಗಿ ತಿಳಿ ಗುಲಾಬಿ ಎಂಬ್ರಾಯ್ಡರಿ ಹೂವು, ತಿಳಿ ಹಸಿರು ಎಲೆ, ಬಳಿಗಳ್ಳ ವಿನ್ಯಾಸವಿದೆ. ಸೀರೆಗೊಪ್ಪುವ ಹರಳು ಖಚಿತ ಬ್ಲೌಸ್, ಕಿವಿಗೆ ದೊಡ್ಡ ಇಯರಿಂಗ್ಸ್, ಬೈತಲೆಗೆ ಹರಳಿನ ಆಭರಣ ಧರಿಸಿದ್ದು ಮತ್ತಷ್ಟು ಮೆರುಗು ನೀಡಿತ್ತು.
ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!
ಆಲಿಯಾ ಪಾವತಿಸಿದ್ದು ಎಷ್ಟು?
ಮೆಟ್ ಗಾಲಾ ಫ್ಯಾಶನ್ ಹೆಸರಲ್ಲಿ ಪ್ರತಿ ವರ್ಷ ಮೇ ತಿಂಗಳ ಮೊದಲ ಸೋಮವಾರದಂದು ನಡೆಯುವ ನಿಧಿ ಸಂಗ್ರಹಣೆ ಕಾರ್ಯಕ್ರಮವಾಗಿದೆ. ಇಲ್ಲಿ ಭಾಗವಹಿಸುವವರು ಪ್ರತಿ ಟಿಕೆಟ್ಗೆ ಪ್ರತಿ ವ್ಯಕ್ತಿಗೆ USD 75,000 ವೆಚ್ಚವಾಗುತ್ತದೆ, ಇದನ್ನು ಭಾರತೀಯ ಕರೆನ್ಸಿಗೆ ಪರಿವರ್ತಿಸಿದಾಗ ಸುಮಾರು ರೂ. 63 ಲಕ್ಷ ರೂ.ಗಳಾಗುತ್ತವೆ. ಪ್ರತಿ ಸಂಪೂರ್ಣ ಟೇಬಲ್ನ ಬೆಲೆ ಸುಮಾರು USD 350,000, ಇದು ಸುಮಾರು ರೂ. 2 ಕೋಟಿ 92 ಲಕ್ಷವಾಗುತ್ತದೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಯಾವುದೇ ಕಂಪನಿಯ ಮೂಲಕ ಹೋದರೆ, ಅವರ ವೆಚ್ಚವನ್ನು ಆ ಕಂಪನಿಗಳೇ ಭರಿಸುತ್ತವೆ.
ಆದರೆ, ವೈಯಕ್ತಿಕವಾಗಿ ಹೋದಾಗ ವ್ಯಕ್ತಿಯೇ ತಮ್ಮ ಟಿಕೆಟ್ಗಾಗಿ ಪಾವತಿಸುತ್ತಾರೆ. ಹೀಗಾಗಿ, ಆಲಿಯಾ ಭಟ್ ಕನಿಷ್ಠ 63 ಲಕ್ಷ ರೂ.ನಿಂದ 2 ಕೋಟಿ ರೂ.ವರೆಗೆ ಈ ಪ್ರದರ್ಶನದಲ್ಲಿ ಭಾಗವಹಿಸಲು ಸ್ವತಃ ಪಾವತಿಸಿದ್ದಾರೆ. ಈ ಬಾರಿ ಆಲಿಯಾ ಎರಡನೇ ಬಾರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
DAKSHINA KANNADA
ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!
ಮಂಗಳೂರು : ತುಳುನಾಡು ದೈವಾರಾಧನೆಯ ನೆಲೆಬೀಡು. ಇಲ್ಲಿ ದೈವಗಳ ಮೇಲೆ ಅತೀವ ನಂಬಿಕೆಯಿದೆ. ನಂಬಿದವರ ಕೈಬಿಡದು ದೈವ ಎಂಬ ನಂಬಿಕೆ ತುಳವರದು. ಸೆಲೆಬ್ರಿಟಿಗಳೂ ದೈವಗಳನ್ನು ನಂಬುತ್ತಾರೆ. ಊರಿಗೆ ಬಂದು ದೈವಗಳಿಗೆ ಕೈ ಮುಗಿಯುತ್ತಾರೆ. ನಟಿ ಶ್ರೀನಿಧಿ ಶೆಟ್ಟಿ ಸಿನಿರಂಗದಲ್ಲಿ ಯಶಸ್ಸು ಬಾಚಿಕೊಳ್ಳುತ್ತಿದ್ದರೂ ಕೂಡ ದೈವಾರಾಧನೆ ಮರೆತಿಲ್ಲ. ಅವರು ತಾವು ಹೊತ್ತ ಹರಕೆಯನ್ನು ಪೂರೈಸಿದ್ದಾರೆ.
ಅಭಯವಿತ್ತ ದೈವ :
ಕೆಜಿಎಫ್ ಖ್ಯಾತಿಯ ಶ್ರೀನಿಧಿ ಶೆಟ್ಟಿ ಅವರ ಹರಕೆಯ ನೇಮೋತ್ಸವ ಕಿನ್ನಿಗೋಳಿಯ ಅವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ನಡೆಯಿತು. ಈ ಹಿಂದೆ ತಾನು ಹರಕೆ ಹೊತ್ತಂತೆ ಸೋಮವಾರ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದ್ದು, ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡರು.
ಇದನ್ನೂ ಓದಿ : ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!
‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿವೆ. ಸದ್ಯ ಶ್ರೀನಿಧಿ ಶೆಟ್ಟಿ ಸಿನಿಮಾಗಳಲ್ಲು ಬಿಝಿ ಆಗಿದ್ದಾರೆ. ಸಕತ್ ಚ್ಯೂಸಿ ಕೂಡ ಆಗಿದ್ದಾರೆ. ಕೆಜಿಎಫ್ 2 ಚಿತ್ರದಲ್ಲೂ ಬಿಝಿ ಆಗಿದ್ದಾರೆ. ಅತ್ತ ತೆಲುಗು ಸಿನಿರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಜೊತೆಗೆ ಕಿಚ್ಚ ಸುದೀಪ್ ಅವರ 47 ನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ.
- DAKSHINA KANNADA6 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- LATEST NEWS6 days ago
ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
- LATEST NEWS6 days ago
ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು
- DAKSHINA KANNADA5 days ago
ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!