LATEST NEWS
ಆಧುನಿಕ ಔಷಧ ಪದ್ಧತಿಗಳನ್ನು ಟೀಕಿಸಿದ್ದಕ್ಕೆ ಬಾಬಾ ರಾಮ್ದೇವ್ಗೆ ಸುಪ್ರೀಂ ತರಾಟೆ
ಹೊಸದಿಲ್ಲಿ: ಅಲೋಪಥಿಯಂತಹ ಆಧುನಿಕ ಔಷಧ ಪದ್ಧತಿಗಳ ಬಗ್ಗೆ ಹೀಗಳೆಯುವಂತೆ ಮಾತನಾಡಿದ್ದಕ್ಕಾಗಿ ಯೋಗ ಗುರು ಬಾಬಾ ರಾಮ್ದೇವ್ ಅವರನ್ನು ಸುಪ್ರೀಂಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.
“ಬಾಬಾ ರಾಮ್ದೇವ್ ಅವರು ಅಲೋಪಥಿ ವೈದ್ಯರನ್ನು ಏಕೆ ಆರೋಪಿಸುತ್ತಿದ್ದಾರೆ? ಅವರು ಯೋಗವನ್ನು ಜನಪ್ರಿಯಗೊಳಿಸಿದ್ದಾರೆ. ಒಳ್ಳೆಯದು. ಆದರೆ ಅವರು ಬೇರೆ ಪದ್ಧತಿಗಳನ್ನು ಟೀಕಿಸಬಾರದು.
ಅವರು ಅನುಸರಿಸುವುದೆಲ್ಲವೂ ಎಲ್ಲವನ್ನೂ ಗುಣ ಮಾಡುತ್ತದೆ ಎನ್ನುವುದಕ್ಕೆ ಖಾತರಿ ಏನಿದೆ?” ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಪ್ರಶ್ನಿಸಿದ್ದಾರೆ.
‘ತಿಳಿವಳಿಕೆ’ ಇಲ್ಲದ ಹೇಳಿಕೆಗಳನ್ನು ನೀಡಿರುವ ಮತ್ತು ವೈಜ್ಞಾನಿಕ ಔಷಧದ ಗೌರವಕ್ಕೆ ಹಾನಿ ಮಾಡುವ ಮೂಲಕ ಜನರ ದಾರಿ ತಪ್ಪಿಸಿದ ರಾಮ್ದೇವ್ ವಿರುದ್ಧ ಕೇಂದ್ರ ಆರೋಗ್ಯ ಸಚಿವಾಲಯವು ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳಬೇಕು ಮತ್ತು ವಿಚಾರಣೆಗೆ ಒಳಪಡಿಸಬೇಕು ಎಂದು ಐಎಂಎ ಹೇಳಿತ್ತು.
ಆಯುರ್ವೇದ ಕುರಿತು ತಪ್ಪುದಾರಿಗೆ ಎಳೆಯುವಂತಹ ಹೇಳಿಕೆಗಳನ್ನು ನೀಡದಂತೆ ಕಳೆದ ವಾರ, ರಾಮ್ದೇವ್ ಅವರಿಗೆ ದಿಲ್ಲಿ ಹೈಕೋರ್ಟ್ ಸೂಚನೆ ನೀಡಿತ್ತು. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದರೂ ಸೋಂಕಿಗೆ ಒಳಗಾಗಿದ್ದಾರೆ ಎಂದು ರಾಮ್ದೇವ್ ಅವರು ನೀಡಿದ್ದ ಹೇಳಿಕೆ ವಿರುದ್ಧ ವೈದ್ಯರ ವಿವಿಧ ಗುಂಪುಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ನಿರ್ದೇಶನ ನೀಡಿತ್ತು.
DAKSHINA KANNADA
ಪ್ರಜ್ವಲ್ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್ಐಟಿ ವಾರ್ನಿಂಗ್..!
ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BANTWAL
ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!
ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.
ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
WATCH : ಕೋಳಿಗೂ ಯುವತಿಗೂ ನಡುವೆ ಫೈಟ್; ಗೆದ್ದವರು ಯಾರು? ವೀಡಿಯೋ ವೈರಲ್
ಮಂಗಳೂರು : ಇದೊಂತರ ಸೋಶಿಯಲ್ ಮೀಡಿಯಾ ಯುಗ. ಇಲ್ಲಿ ಎಲ್ಲವೂ ವೈರಲ್ ವೈರಲ್. ದಿನನಿತ್ಯ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋಗಳು ಸದ್ದು ಮಾಡುತ್ತಲೇ ಇರುತ್ತವೆ. ಮನುಷ್ಯರದ್ದೇ ಆಗಿರಲಿ, ಪ್ರಾಣಿ, ಪಕ್ಷಿಗಳದೇ ಆಗಿರಲಿ ಇಲ್ಲಿ ಸುದ್ದಿ ಆಗುತ್ತಲೇ ಇರುತ್ತದೆ. ಸದ್ಯ ಅಂತಹುದೇ ವೀಡಿಯೋವೊಂದು ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಕೋಳಿ ಹಾಗೂ ಯುವತಿಯ ನಡುವೆ ಫೈಟ್ ನಡೆದಿದೆ.
ವೀಡಿಯೋದಲ್ಲಿ ಏನಿದೆ?
ವೀಡಿಯೋ ಆರಂಭದಲ್ಲಿ ಯುವತಿಯೊಬ್ಬಳು ತನ್ನಷ್ಟಕ್ಕೆ ಬರುತ್ತಿರುವುದನ್ನು ಕಾಣಬಹುದು. ಈ ವೇಳೆ, ಪಕ್ಕದಲ್ಲಿದ್ದ ಕೋಳಿ ಸುಖಾಸುಮ್ಮನೆ ಆಕೆಯ ಕಾಲಿಗೆ ಬಂದು ಕುಕ್ಕುತ್ತದೆ. ಇದರಿಂದ ಕೋಪಗೊಂಡ ಯುವತಿ ಆ ಕೋಳಿಗೆ ಒದೆಯುತ್ತಾಳೆ. ಅದು ಮತ್ತೆ ಅಟ್ಯಾಕ್ ಮಾಡಲು ಬಂದಾಗ, ಕೈಯಿಂದ ಚೆನ್ನಾಗಿ ಬಾರಿಸುತ್ತಾಳೆ. ಆದರೆ, ಆ ಕೋಳಿ ಹೆದರಿ ಓಡುವುದಿಲ್ಲ. ಬದಲಿಗೆ ಅದು ಮತ್ತೆ ದಾಳಿ ನಡೆಸುತ್ತದೆ.
ಆಗ ಕೋಪದಲ್ಲಿ ಯುವತಿ ಅದಕ್ಕೆ ಒಂದೇಟು ಬಾರಿಸುತ್ತಾಳೆ. ಅವಳಿಗೆ ಇದರಿಂದ ಸಿಟ್ಟು ಬರುತ್ತದೆ. ಅದನ್ನು ಎತ್ತಿ ನೆಲಕ್ಕೆ ಕುಕ್ಕುತ್ತಾಳೆ. ಅಯ್ಯೋ ಓಡೋಗ್ಹೋಣ ಅಂತ ಯೋಚಿಸದ ಕೋಳಿ ಮತ್ತೆ ಅಟ್ಯಾಕ್ ಗೆ ಬರುತ್ತದೆ. ಆಗ ಆಕೆ ತಿರುಗಿಸಿ ತಿರುಗಿಸಿ ಎಸೆಯುತ್ತಾಳೆ. ಆದರೆ, ಅದು ಮತ್ತೆ ಎದ್ದು ಬರುತ್ತೆ. ಆಕೆ ಅಲ್ಲೇ ಸಿಕ್ಕಿದ ವಸ್ತುವಿನಿಂದ ಹೊಡೆಯುತ್ತಾಳೆ.
ಇದನ್ನೂ ಓದಿ : ತಾಯಿಯನ್ನು ಕೊಂ*ದ ಮಗನಿಗೆ ವಿಶಿಷ್ಟ ಶಿಕ್ಷೆ; ಅಪರೂಪದ ಆದೇಶ ನೀಡಿದ ಹೈಕೋರ್ಟ್
ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದಿದೆ. ವೀಡಿಯೋ ನೋಡಿದವರು ಕಮೆಂಟ್ಸ್ ಮಾಡುತ್ತಿದ್ದು, ಚಿಕನ್ ವರ್ಸಸ್ ಚಿಕ್ ಎಂದು ಕಮೆಂಟ್ಸ್ ಮಾಡಿದ್ದಾರೆ. ಸೋಲೊಪ್ಪಿಕೊಳ್ಳಬೇಡ ಕೋಳಿ, ನೀನು ಆಕೆಯನ್ನು ಸೋಲಿಸಬಲ್ಲೆ, ಎಂತಹ ಫೈಟ್ ಇದು, ಚಿಕನ್ ಟಕ್ಕರ್ ಎಂದು ಕಮೆಂಟ್ಸ್ ಮಾಡುತ್ತಿದ್ದಾರೆ.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು