LATEST NEWS
ಕೋವಿಡ್ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಮನವಿ- ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ: ಕೋವಿಡ್ ಲಸಿಕೆಗಳಿಂದ ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು. ಯುನೈಟೆಡ್ ಕಿಂಗ್ಡಮ್ ನಂತಹ ವಿದೇಶಗಳಲ್ಲಿ ಅದೇ ಕಾಳಜಿಯ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದರು.
ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿತ್ತು. ಆರಂಭದಲ್ಲಿ, ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಲಸಿಕೆಗಳು ಜಾಗತಿಕವಾಗಿ ನೆರವು ನೀಡಿವೆ. ಈಗ ಅಂತಹ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತವಲ್ಲ ಎಂದು ಸಿಜೆಐ ಒತ್ತಿ ಹೇಳಿದರು.
ಅರ್ಜಿದಾರರು ನಿಜವಾಗಿಯೂ ನೊಂದಿದ್ದರೆ, ಅವರು ಆರ್ಟಿಕಲ್ 32 ಅರ್ಜಿಗಳನ್ನು ಸಲ್ಲಿಸುವ ಬದಲು ಕ್ಲಾಸ್ ಆಕ್ಷನ್ ಸೂಟ್ಗಳನ್ನು ಸಲ್ಲಿಸಬೇಕು ಎಂದು ಸಿಜೆಐ ಹೇಳಿದರು.
LATEST NEWS
ಗೂಂಡಾ ರಾಜಕಾರಣ ಮಾಡುವ ಮೂಲಕ ಕಾಂಗ್ರೆಸ್ ಅಧಿಕಾರ ಹಿಡಿಯುತ್ತಿತ್ತು : ಡಿ.ವಿ.ಸದಾನಂದಗೌಡ
ಉಡುಪಿ : ಕಾಂಗ್ರೆಸ್ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಮತ್ತು ಡಾನ್ ಮುತ್ತಪ್ಪ ರೈ ಗಳಸ್ಯ ಕಂಟಸ್ಯರಾಗಿದ್ದರು. ಗೂಂಡಾ ರಾಜಕಾರಣ ಮಾಡುವ ಮೂಲಕ ಕಾಂಗ್ರೆಸ್ ಅಧಿಕಾರ ಹಿಡಿಯುತ್ತಿತ್ತು ಎಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಆಯೋಜಿಸಲಾದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ವಿಧಾನ ಪರಿಷತ್ ಉಪಚುನಾವಣೆ ಅಭ್ಯರ್ಥಿ ಕಿಶೋರ್ ಕುಮಾರ್ ಪರ ಮಾತನಾಡಿದ ಡಿ.ವಿ.ಸದಾನಂದ ಗೌಡ ಈ ಹೇಳಿಕೆ ನೀಡಿದ್ದಾರೆ.
ಅಭ್ಯರ್ಥಿ ಕಿಶೋರ್ ಕುಮಾರ್ ಅವರು ನಮ್ಮ ಪುತ್ತೂರಿನವರು. ಇವರ ತಂದೆ ರಾಮಣ್ಣ ಭಂಡಾರಿ. ಕಾಂಗ್ರೆಸ್ ಮಾಜಿ ಸಚಿವರಾಗಿದ್ದ ವಿನಯ್ ಕುಮಾರ್ ಸೊರಕೆಯವರ ಪಕ್ಕದ ಮನೆಯವರು ಕಿಶೋರ್ ಅವರಾಗಿದ್ದಾರೆ. ಒಂದು ಕಾಲಘಟ್ಟದಲ್ಲಿ ಗೂಂಡಾ ರಾಜಕಾರಣ ನಡೆಯುತ್ತಿದ್ದ ಸಮಯವದು. ಕಾಂಗ್ರೆಸ್ ಗೂಂಡಾ ರಾಜಕಾರಣದ ಮೂಲಕ ಅಧಿಪತ್ಯವನ್ನ ರಾಜ್ಯದಲ್ಲಿ ಸ್ಥಾಪಿಸಿತ್ತು.
ಇದನ್ನೂ ಓದಿ : ಯುವತಿಯರೆ ಎಚ್ಚರ : ‘ಮ್ಯಾಟ್ರಿಮೊನಿ’ಯಲ್ಲಿ ಚೆಂದದ ಹುಡುಗಿಯರೇ ಈ ಸರ್ಕಾರಿ ನೌಕರನಿಗೆ ಟಾರ್ಗೆಟ್!
ಭೂಗತ ದೊರೆ ಮುತ್ತಪ್ಪ ರೈ ಮತ್ತು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಒಂದೇ ಗ್ರಾಮದವರಾಗಿದ್ದು, ಇವರ ನಡುವೆ ಗಳಸ್ಯ ಕಂಠಸ್ಯವಿತ್ತು. ಯಾವುದೇ ಚುನಾವಣೆ ಇದ್ದರೂ ಕೂಡ ಗೂಂಡಾ ರಾಜಕಾರಣದ ಮೂಲಕ ಅಧಿಪತ್ಯ ಸ್ಥಾಪನೆ ಮಾಡಲಾಗುತ್ತಿತ್ತು. ಅಂತಹ ಸಮಯದಲ್ಲಿ ಕಿಶೋರ್ ಕುಮಾರ್ ಅವರ ತಂದೆ ರಾಮಣ್ಣ ಭಂಡಾರಿಯವರು ಅದ್ಭುತ ಜನಸಂಘದ ಕಾರ್ಯಕರ್ತರಾಗಿ ಹೊರಹೊಮ್ಮಿದರು ಎಂದು ಅವರು ಶ್ಲಾಘಿಸಿದರು.
LATEST NEWS
ನೈಜೀರಿಯಾ: ತೈಲ ಟ್ಯಾಂಕರ್ ಸ್ಫೋಟಗೊಂಡು 94 ಮಂದಿ ಸಾ*ವು
ನೈಜೀರಿಯಾದಲ್ಲಿ ಸಂಭವಿಸಿದ ಭೀಕರ ದುರಂತ ಸಂಭವಿಸಿದ್ದು, ಇಂಧನ ಟ್ಯಾಂಕರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಕನಿಷ್ಠ 94 ಜನರು ಸಾ*ವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಶ್ವವಿದ್ಯಾಲಯದ ಸಮೀಪವಿರುವ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ಯಾಂಕರ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಜಿಗಾವಾ ರಾಜ್ಯದಲ್ಲಿ ಮಧ್ಯರಾತ್ರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ವಕ್ತಾರ ಲಾವನ್ ಆಡಮ್ ತಿಳಿಸಿದ್ದಾರೆ. “ಸ್ಫೋಟ ಸಂಭವಿಸಿದಾಗ ನಿವಾಸಿಗಳು ಪಲ್ಟಿಯಾದ ಟ್ಯಾಂಕರ್ನಿಂದ ಇಂಧನವನ್ನ ತೆಗೆದುಕೊಳ್ಳುತ್ತಿದ್ದರು, ಆಗ ಭಾರಿ ಬೆಂಕಿ ಹೊತ್ತಕೊಂಡಿದ್ದು, 94 ಜನರು ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ” ಎಂದು ಆಡಮ್ ಹೇಳಿದರು.
LATEST NEWS
ಪುತ್ತೂರು: ಆಟೋರಿಕ್ಷಾದಲ್ಲಿ ಅಕ್ರಮ ಗೋ ಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ
ಪುತ್ತೂರು: ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ಅ.16ರ ಬುಧವಾರ ನಡೆದಿದೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಬಜರಂಗದಳದ ಕಾರ್ಯಕರ್ತರು ಆಟೋ ರಿಕ್ಷಾವನ್ನು ತಡೆದು ಗೋವಿನ ರಕ್ಷಣೆ ಮಾಡಿದ್ದಾರೆ.
ಗೋವನ್ನು ಅಕ್ರಮವಾಗಿ ಪುತ್ತೂರು ಬೈಪಾಸ್ ರಸ್ತೆಯ ಮೂಲಕ ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ಮಹಿಳೆಯರ ಕಾಲಡಿಯಲ್ಲಿ ಇಟ್ಟು ಸಾಗಿಸುತ್ತಿರುವುದರ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಹಿಂಸಾತ್ಮಕ ರೀತಿಯಲ್ಲಿ ಜಾನುವಾರನ್ನು ಮಹಿಳೆಯರ ಕಾಲಡಿಯಲ್ಲಿ ಇಟ್ಟು ಸಾಗಿಸಲಾಗುತ್ತಿತ್ತು. ಅಲ್ಲದೆ ರಿಕ್ಷಾದ ಸೀಟಿನ ಎಡೆಯಲ್ಲಿ ಸಿಲುಕಿಕೊಂಡ ಜಾನುವಾರಿನ ಒಂದು ಕಾಲು ಕೂಡಾ ತುಂಡಾಗಿದ್ದು, ಸಂಘಟನೆ ಕಾರ್ಯಕರ್ತರು ಅತ್ಯಂತ ಜಾಗೃತೆ ವಹಿಸಿ ಅದನ್ನು ರಿಕ್ಷಾದಿಂದ ಹೊರಕ್ಕೆ ಎಳೆದು ತೆಗೆದಿದ್ದಾರೆ.
ಆ ಬಳಿಕ ಜಾನುವಾರು ಸಹಿತ ಆಟೋ ರಿಕ್ಷಾ ಹಾಗೂ ಮಹೆಳೆಯರನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
- FILM4 days ago
ಮಾಲ್ಡೀವ್ಸ್ ದ್ವೀಪದಲ್ಲಿ ಹನಿಮೂನ್..! ಜಾಲಿ ಮೂಡ್ನಲ್ಲಿ ತರುಣ್ ಸುಧೀರ್ ದಂಪತಿ
- FILM5 days ago
ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ
- DAKSHINA KANNADA5 days ago
ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
- BIG BOSS3 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು
Pingback: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ Z ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ - NAMMAKUDLA NEWS - ನಮ್ಮಕುಡ್ಲ ನ್ಯೂಸ್