Connect with us

    DAKSHINA KANNADA

    ಕರಾವಳಿಯಲ್ಲಿ ಯಕ್ಷಗಾನ ಮೇಳ, ಕಂಬಳಕ್ಕೆ ಸುಪ್ರೀಂ ಶಾಕ್-ಸಾಂಸ್ಕೃತಿಕ ಟೂರಿಸಂಗೆ ಬೀಳುತ್ತಾ ಪೆಟ್ಟು..!

    Published

    on

    ಮಂಗಳೂರು: ತುಳುನಾಡಿನಲ್ಲಿ ನಡೆಯುವ  ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ಆದೇಶದಿಂದ ತಲ್ಲಣಗೊಳ್ಳುವಂತೆ ಮಾಡಿದೆ. ಇದರಿಂದ ಮೇಳದ ಯಜಮಾನರು, ಕಂಬಳ ಸಂಘಟಕರು ಗೊಂದಲದಲ್ಲಿ ಸಿಲುಕಿದ್ದಾರೆ.

    ಕಾಂತಾರ ಸಿನಿಮಾ ಹಳ್ಳಿಯಿಂದ ದಿಲ್ಲಿಯವರೆಗೆ ಸದ್ದು ಮಾಡುತ್ತಿದೆ. ಇದರಿಂದಾಗಿ ಈ ಬಾರಿ ತುಳುನಾಡಿನ ಕಂಬಳ, ಕೋಲ, ನೇಮಗಳಿಗೆ ಜನರ ಮನಸ್ಸಿನಲ್ಲಿ ಇನ್ನಿಲ್ಲದ ಮಾನ್ಯತೆ ದೊರೆತಿದೆ.


    ಸುಪ್ರೀಂ ಕೋರ್ಟ್‌ ಶಬ್ಧಮಾಲಿನ್ಯ ನಿಯಮವನ್ನು ಎತ್ತಿಹಿಡಿದಿದ್ದು, 2005ರ ನಿಯಮವನ್ನು ಪಾಲಿಸುವಂತೆ ಖಡಕ್‌ ಆದೇಶ ನೀಡಿದೆ. ಈ ನಿಯಮದ ಪ್ರಕಾರ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧವಿದ್ದು, ಇದು ಕರಾವಳಿ ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ದೊಡ್ಡ ಹೊಡೆತ ಬಿದ್ದಿದೆ.

    ಸುಪ್ರೀಂ ಕೋರ್ಟ್ ಉಲ್ಲೇಖಿಸಿರುವ ನಿಯಮವನ್ನು ಪಾಲಿಸಿಕೊಂಡು ಯಕ್ಷಗಾನ, ಉತ್ಸವ, ಕಂಬಳ ನಡೆಸುವುದು ಕಷ್ಟ ಎನ್ನುತ್ತಾರೆ ಸಂಘಟಕರು.

    ಇನ್ನು ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿರುವ ಯಕ್ಷಾಭಿಮಾನಿಗಳು ‘ರಾಜ್ಯ ಸರಕಾರ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ನಿಬಂಧನೆಗೊಳಪಟ್ಟು ಧ್ವನಿವರ್ಧಕ ಬಳಸುವಂತೆ ಗ್ರೀನ್‌ ಸಿಗ್ನಲ್ ನೀಡಿದೆ.

    ಆದರೆ ಯಕ್ಷಗಾನ, ಕಂಬಳ, ಜಾತ್ರೆ, ಉತ್ಸವ ಸೀಸನ್‌ ಈ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ಇದಕ್ಕೆ ಸರಕಾರ ಯಾವುದೇ ಮಾರ್ಗಸೂಚಿ ನೀಡದಿರುವುದು ಜಿಲ್ಲಾಡಳಿತಕ್ಕೂ ಬಿಸಿತುಪ್ಪವಾಗಿದೆ. ಈ ಉತ್ಸವಗಳ ಮೇಲೆ ಹೊಡೆತ ಬಿದ್ದರೆ ಕರಾವಳಿಯ ಸಾಂಸ್ಕೃತಿಕ ಟೂರಿಸಂಗೂ ಹಿನ್ನಡೆಯಾಗಲಿದೆ’ ಎಂದಿದ್ದಾರೆ.

    1 Comment

    1 Comment

    1. ARUN

      07/11/2022 at 10:12 AM

      first they started to ban azan and other Religion practice which coming from long back , now they suffer , think before act policy is suitable in this case , we love mangalore culture but simply they started pulling other religion leg

    Leave a Reply

    Your email address will not be published. Required fields are marked *

    DAKSHINA KANNADA

    ಶ್ವೇತಾ ಜ್ಯುವೆಲರ್ಸ್‌ನ ಮಾಲಿಕ ಅಶೋಕ್ ಶೇಟ್‌ ನಿ*ಧನ

    Published

    on

    ಮಂಗಳೂರು : ಶ್ವೇತಾ ಜ್ಯುವೆಲರ್ಸ್‌ನ ಮಾಲಿಕರಾಗಿರುವ ಎಂ. ಅಶೋಕ್ ಶೇಟ್ ಇಂದು ಬೆಳಿಗ್ಗೆ (ಜ,22) ಸುಮಾರು 10 ಗಂಟೆಗೆ ಸ್ವ ಗೃಹದಲ್ಲಿ ನಿ*ಧನರಾಗಿದ್ದಾರೆ.

    ಪಡೀಲ್ ಕಂಕನಾಡಿ ಲಯನ್ಸ್ ಕ್ಲಬ್‌ನ ಕ್ರಿಯಾಶೀಲ ವ್ಯಕ್ತಿ, ಸದಾ ಮುಖದಲ್ಲಿ ಮುಗುಳ್ನಗು ಹೊಂದಿದ್ದ ಮಂಗಳೂರಿನ ವಿ.ಟಿ. ರೋಡ್ ನಿವಾಸಿ 64 ವರ್ಷದ ಅಶೋಕ್ ಶೇಟ್ ಹೃ*ದಯಾಘಾತದಿಂದ ಮೃತಪಟ್ಟಿದ್ದಾರೆ.

     

    ಇದನ್ನೂ ಓದಿ : ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಬಿಗ್ ಬಾಸ್ ಸ್ಪರ್ಧಿ ಕೀರ್ತಿ ಮತ್ತು ಜೈತ್ರಾ ಕುಂದಾಪುರ: ಆಶೀಶ್‌ ಮೈಕಾಲ

     

    ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದ ಅಶೋಕ್ ಶೇಟ್ ಈ ಹಿಂದೆ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಅವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿ ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ.

    ಮೃ*ತರು ಪತ್ನಿ ಸಂಧ್ಯಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ

    Continue Reading

    DAKSHINA KANNADA

    ತಪ್ಪಿಸಿಕೊಳ್ಳಲು ಯತ್ನಿಸಿದ ಬ್ಯಾಂಕ್ ದರೋಡೆ ಆರೋಪಿ ಕಾಲಿಗೆ ಗುಂಡು..!

    Published

    on

    ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವನಿಗೆ ಪೊಲೀಸರು ಹಾರಿಸಿದ ಗುಂಡು ಕಾಲಿಗೆ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17ರಂದು ನಡೆದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

         ಆರೋಪಿ ರಾಜೇಂದ್ರನ್

    ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸಿ ಕರೆತರಲಾಗಿದ್ದು ಇಂದು ಸ್ಥಳ ಮಹಜರು ನಡೆಸಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಣಿವಣ್ಣನ್‌ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸಿಸಿಬಿ ಇನ್‌ಸ್ಪೆಕ್ಟರ್‌ ರಫೀಕ್‌ ಅವರು ಆತನ ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.

    ಪ್ರಮುಖ ಆರೋಪಿ ಮುರಗಂಡಿ ತೇವರ್

    ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    Continue Reading

    DAKSHINA KANNADA

    ಗೋವುಗಳ ಮೇಲಿನ ಪೈಶಾಚಿಕ ಕೃ*ತ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

    Published

    on

    ಮಂಗಳೂರು : ಬೆಂಗಳೂರಿನ ಚಾಮರಾಜನಗರದಲ್ಲಿ ಹಿಂದುಗಳು ಆರಾಧಿಸುವ ಗೋಮಾತೆಯ ಕೆಚ್ಚಲನ್ನು ಕತ್ತರಿಸಿ ವಿ*ಕೃತಿ ಮೆರೆದಿರುವುದು ಹಾಗೂ ನಂಜನಗೂಡಿನಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ದಾನವಾಗಿ ನೀಡಿದ್ದ ಹಸುವಿನ ಮೇಲೆ ದುಷ್ಟರು ಮಾ*ರಕಾಸ್ತ್ರದಿಂದ ದಾ*ಳಿ ಮಾಡಿ ಹಸುವಿನ ಬಾಲವನ್ನು ಕತ್ತರಿಸಿ ಪೈಶಾಚಿಕ ಕೃ*ತ್ಯ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

    ಪ್ರತಿಭಟನೆಗೆ ವಿಶ್ವ ಹಿಂದು ಪರಿಷತ್‌ ಸೇರಿದಂತೆ ಹಲವು ಹಿಂದು ಪರ ಸಂಘಟನೆಗಳು ಸಾಥ್‌ ನೀಡಿದ್ದವು. ಮೊದಲಿಗೆ ಗೋವಿಗೆ ವಿಶೇಷ ಪೂಜೆ ಮಾಡುವ ಮೂಲಕ ಗೋವನ್ನು ಪೂಜಿಸಲಾಯಿತು.

    ಬಳಿಕ ನಡೆದ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ  ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಗಳು ಪವಿತ್ರ ಎಂದು ಪೂಜಿಸುವ ಗೋವಿನ ಮೇಲೆ ನಿರಂತರವಾಗಿ ದೌರ್ಜ*ನ್ಯ ದಬ್ಬಾಳಿಕೆ ನಡೆಯುತ್ತಿದೆ. ಯಾವುದೇ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಇಲ್ಲಿ ದೇವಸ್ಥಾನಕ್ಕೆ ಹೋಗಿ ಗಂಧಪ್ರಸಾದ ಸ್ವೀಕರಿಸುತ್ತಾರೆ. ಆದರೆ ಗೋವಿನ ಮೇಲೆ ದೌರ್ಜ*ನ್ಯ ನಡೆದಾಗ ತಮ್ಮ ಬಾಯಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.

    ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಶರಣ್ ಪಂಪ್‌ವೆಲ್, ಶಿವಾನಂದ ಮೆಂಡನ್‌, ಗೋಪಾಲ್ ಕುತ್ತಾರ್ ಮೊದಲಾದವರು ಭಾಗಿಯಾಗಿದ್ದರು.

    Continue Reading

    LATEST NEWS

    Trending