Connect with us

    LATEST NEWS

    ಸುಪ್ರೀಂ ಕೋರ್ಟ್‌ ನ ಯೂಟ್ಯೂಬ್ ಚಾನೆಲ್ ಹ್ಯಾಕ್

    Published

    on

    ನವದೆಹಲಿ: ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್ ಹ್ಯಾಕ್‌ ಆಗಿದೆ. ಯುಎಸ್ ಮೂಲದ ಕಂಪನಿ ರಿಪ್ಪಲ್ ಲ್ಯಾಬ್ಸ್ ಅಭಿವೃದ್ಧಿಪಡಿಸಿದ ಕ್ರಿಪ್ಟೋಕರೆನ್ಸಿಯನ್ನು ಪ್ರಚಾರ ಮಾಡುವ ವೀಡಿಯೋಗಳು ಚಾನೆಲ್‌ ನಲ್ಲಿ ಬರುತ್ತಿವೆ.

    ‘ಬ್ರ್ಯಾಡ್‌ ಗಾರ್ಲಿಂಗ್‌ ಹೌಸ್‌: ರಿಪ್ಲೆ ರೆಸ್ಪೋಂಡ್‌ ಟು ದಿ SEC’s 2 ಮಿಲಿಯನ್‌ ಡಾಲರ್‌ ಫೈನ್‌! XRP PRICE PREDICTION ಶೀರ್ಷಿಕೆಯೊಂದಿಗೆ ಖಾಲಿ ವೀಡಿಯೋ ಪ್ರಸ್ತುತ ಹ್ಯಾಕ್ ಮಾಡಿದ ಚಾನಲ್‌ನಲ್ಲಿ ಲೈವ್ ಆಗಿದೆ.

    ಸಾಂವಿಧಾನಿಕ ಪೀಠಗಳ ಮುಂದೆ ಪಟ್ಟಿ ಮಾಡಲಾದ ಪ್ರಕರಣಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿರುವ ವಿಷಯಗಳ ನೇರ ವಿಚಾರಣೆಗಳನ್ನು ಸ್ಟ್ರೀಮ್ ಮಾಡಲು ಸುಪ್ರೀಂ ಕೋರ್ಟ್ YouTube ಅನ್ನು ಬಳಸುತ್ತಿದೆ.

    LATEST NEWS

    ನಾಲ್ಕನೇ ಮಗುವೂ ಹೆಣ್ಣಾಯಿತೆಂದು ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದ ತಂದೆ

    Published

    on

    ಮಂಗಳೂರು/ ಇಟ್ವಾ: ಹೆಣ್ಣು ಮಕ್ಕಳು ಹುಟ್ಟಿದರೆ ಮನೆಗೆ ಲಕ್ಷ್ಮಿ ಬಂದಳು ಎಂಬ ಸಂಭ್ರಮ ಹೆಚ್ಚಿನ  ಮನೆಗಳಲ್ಲಿ ಇರುತ್ತದೆ. ಭೇಟಿ ಬಚಾವೋ, ಭೇಟಿ ಪಡಾವೋ ಎಂಬುದಾಗಿ ಸರ್ಕಾರ ಹೆಣ್ಣು ಮಕ್ಕಳ ಬಗ್ಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ, ಹೆಣ್ಣು ಮಕ್ಕಳ ಬಗೆಗಿನ ತಾತ್ಸಾರ ಕಡಿಮೆ ಆಗಿಲ್ಲ ಎಂಬುದಕ್ಕೆ ಉತ್ತರಪ್ರದೇಶದಲ್ಲಿ ನಡೆದ ಈ ಘಟನೆ ಸಾಕ್ಷಿ.

    ನಾಲ್ಕನೇ ಮಗುವೂ ಹೆಣ್ಣಾಯಿತು ಎಂಬ ಕಾರಣಕ್ಕೆ ತಂದೆಯೇ ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದಿರುವ ಕ್ರೂ*ರ ಘಟನೆ ನಡೆದಿದೆ. ಇಟ್ವಾ ಎಂಬಲ್ಲಿ ಈ ಕ್ರೌ*ರ್ಯ ನಡೆದಿದೆ.

    ನೆಲಕ್ಕೆ ಬಡಿದು ಕೊಂದ ಪಾಪಿ!

    30 ವರ್ಷದ ಬಬ್ಲು ದಿವಾಕರ್​ ಈ ಕೃ*ತ್ಯ ಎಸಗಿದ ತಂದೆ.  ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ಹೆಣ್ಣು ಮಕ್ಕಳ ಬಳಿಕ ದಿವಾಕರ್​ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ. ಆದರೆ, ನಾಲ್ಕನೇ ಮಗುವೂ ಹೆಣ್ಣಾಯಿತು. ಇದರಿಂದ ಕೋಪಗೊಂಡ ಆತ ಭಾನುವಾರ(ಸೆ.15) ತಿಂಗಳ ಶಿಶುವನ್ನು ನೆಲಕ್ಕೆ ಎಸೆದಿದ್ದಾನೆ.

    ಮೊದಲ ಹೆಂಡತಿಯಿಂದ ಈಗಾಗಲೇ ಎರಡು ಹೆಣ್ಣು ಮಕ್ಕಳ ತಂದೆಯಾಗಿರುವ ದಿವಾಕರ್​ ಇದೇ ಕಾರಣದಿಂದ ಎರಡನೇ ಮದುವೆಯಾಗಿದ್ದ. ಎರಡನೇ ಹೆಂಡತಿಗೂ ಮೊದಲ ಮಗು ಹೆಣ್ಣಾಗಿತ್ತು. ಇದೀಗ ಎರಡನೇ ಮಗುವೂ ಹೆಣ್ಣಾಗಿದೆ. ಒಂದು ತಿಂಗಳ ಹಿಂದೆ ಮಗು ಜನಿಸಿದ್ದು, ಭಾನುವಾರ ಮಗು ತಾಯಿಯ ಮಡಿಲಲ್ಲಿ ಮಲಗಿತ್ತು. ಈ ವೇಳೆ ಡ ದಿವಾಕರ್​ ತಾಯಿಯಿಂದ ಮಗುವನ್ನು ಕಸಿದು, ನೆಲಕ್ಕೆ ಬಡಿದಿದ್ದಾನೆ. ತಕ್ಷಣಕ್ಕೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಗು ಅದಾಗಲೇ ಗಂಭೀ*ರ ಗಾ*ಯದಿಂದ ಮೃ*ತಪಟ್ಟಿತ್ತು.

    ಇದನ್ನೂ ಓದಿ : ಹನಿಟ್ರ್ಯಾಪ್ : ಸುಂದರಿ ಮನೆಗೆ ಕರೆದಳೆಂದು ಹೋಗಿ 40 ಲಕ್ಷ ಕಳೆದುಕೊಂಡ ಉದ್ಯಮಿ

    ಇದೀಗ ಹೆಂಡತಿ ನೀಡಿರುವ ದೂರಿನ ಆಧಾರದ ಮೇಲೆ. ಬಿಎನ್​ಎಸ್​ ಸೆಕ್ಷನ್​ 105ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    LATEST NEWS

    ಮಂಗಳೂರು: ಮೂರು ದಿನದ ಬಿಎನ್‌ಐ ಬಿಗ್ ಬ್ರ್ಯಾಂಡ್ ಎಕ್ಸ್‌ಪೋ-2024ಗೆ ಚಾಲನೆ

    Published

    on

    ಮಂಗಳೂರು: ಉದ್ಯಮಿಗಳ ಮತ್ತು ವೃತ್ತಿಪರರ ಸಂಘಟನೆ ಬಿಸ್‌ನೆಸ್‌ ನೆಟ್‌ವರ್ಕ್ ಇಂಟರ್ ನ್ಯಾಶನಲ್‌ – ಬಿಎನ್ಐ ಮಂಗಳೂರು ಮತ್ತು ಉಡುಪಿ ವತಿಯಿಂದ ಬಿಗ್ ಬ್ರಾಂಡ್ಸ್ ಎಕ್ಸ್‌ಪೊ – 2024 ಪ್ರದರ್ಶನ ಇಂದು ಮಂಗಳೂರಿನ ಡಾ. ಟಿ.ಎಂ.ಎ. ಪೈ ಇಂಟರ್ ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ ನಲ್ಲಿ ಆರಂಭಗೊಂಡಿತು. ಮೂರು ದಿನಗಳ ಕಾಲ ನಡೆಯುವ ಎಕ್ಸ್‌ಪೋವನ್ನು ರಿಬ್ಬನ್ ಕತ್ತರಿಸುವ ಮೂಲಕ ಸ್ಪೀಕರ್ ಯು ಟಿ ಖಾದರ್ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಖಾದರ್‌, ಇಂತಹ ಎಕ್ಸ್‌ಪೋಗಳು ನಮ್ಮ ರಾಜ್ಯ, ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆಯನ್ನು ನೀಡಲು ಸಾಧ್ಯವಾಗುತ್ತದೆ. ಆರ್ಥಿಕವಾದ ಚಲನವಲನಗಳು ಎಲ್ಲಿ ಹೆಚ್ಚಾಗಿ ಆಗುತ್ತದೆಯೋ ಅಲ್ಲಿ ಉದ್ಯೋಗಾವಕಾಶ, ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಎಕ್ಸ್‌ಪೋ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ನುಡಿದರು.

    ಬಿಎನ್‌ಐ ಎಕ್ಸ್‌ಪೋದಲ್ಲಿ ವಿಶೇಷ ಪುರವಣಿಯನ್ನು ಕೂಡಾ ಬಿಡುಗಡೆಗೊಳಿಸಲಾಯಿತು. ಶಾಸಕ ವೇದವ್ಯಾಸ ಕಾಮತ್ ಇದನ್ನು ಬಿಡುಗಡೆಗೊಳಿಸಿದರು. ಈ ಬಗ್ಗೆ ಮಾತನಾಡಿದ ಅವರು, 125ಕ್ಕೂ ಹೆಚ್ಚಿನ ಮಳಿಗೆಗಳು ಈ ಎಕ್ಸ್‌ಪೋ ಯಶಸ್ವಿಯಾಲೆಂದು ಹಾರೈಸಿದರು. ಇಂತಹ ಎಕ್ಸ್‌ಪೋಗಳ ಪ್ರದರ್ಶನಗಳಿಗೆ ಸರಕಾರ ಪ್ರೋತ್ಸಾಹ ನೀಡಬೇಕು. ಆರ್ಥಿಕತೆಯ ವಿಚಾರದಲ್ಲಿ ಮುಂಚೂಣಿ ನಗರವಾಗಿರುವ ಮಂಗಳೂರಿನಲ್ಲಿ ಇಂತಹ ಎಕ್ಸ್‌ಪೋ ಮಾಡಲು ಪ್ರತ್ಯೇಕ ವ್ಯವಸ್ಥೆ ಆಗಬೇಕು ಎಂದರು.

    ಬಿಎನ್‌ಐ ಕಾರ್ಯ ನಿರ್ವಾಹಕ ನಿರ್ದೇಶಕ ಗಣೇಶ್ ಶರ್ಮಾ ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳು, ಆಟೋಮೊಬೈಲ್‌. ಆಭರಣಗಳು, ವಿಮೆ, ಗಾರ್ಮೆಂಟ್ಸ್‌, ಐಟಿ ಉತ್ಪನ್ನಗಳು, ಸಾಫ್ಟ್‌ವೇರ್‌, ಕಚೇರಿ ಮತ್ತು ಗೃಹ ಪೀಠೋಪಕರಣಗಳು, ಆಹಾರ ಉತ್ಪನ್ನಗಳು ಸೇರಿದಂತೆ 120 ಕ್ಕೂ ಆಧಿಕ ಉದ್ಯಮಗಳ ವ್ಯಾಪಕ ಶ್ರೇಣಿಯ ಉತ್ಪನ್ನಗಳ ಪ್ರದರ್ಶನ ಇರುತ್ತದೆ ಎಂದರು.

    ಬಿಎನ್‌ಐ ಸದಸ್ಯರಾಗಿರುವ ಹಾಗೂ ಎಕ್ಸ್‌ಪೋದಲ್ಲಿ ಪಾಲ್ಗೊಂಡ ಉದ್ಯಮಿಗಳನ್ನು ಇದೇ ವೇಳೆ ಗೌರವಿಸಲಾಯಿತು. ವಿವಿಧ ಕಂಪೆನಿಗಳಿಂದ ನೀಡಲಾಗುತ್ತಿರುವ ಆಫರ್‌ಗಳನ್ನು ಪ್ರಕಟಿಸಲಾಯಿತು. ಮಂಗಳೂರು- ಉಡುಪಿ ಜಗತ್ತಿನ ಉದ್ಯಮಿಗಳ ಸಂಘಟನೆ ಬಿಸ್‌ನೆಸ್‌ ನೆಟ್‌ವರ್ಕ್ ಇಂಟರ್ ನ್ಯಾಶನಲ್‌ ನ ಭಾಗವಾಗಿದ್ದು, ನೂರಕ್ಕೂ ಅಧಿಕ ವಿವಿಧ ವ್ಯಾಪಾರ- ಉದ್ಯಮ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ 310 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಈ ವರ್ಷದ ಎಕ್ಸ್‌ಪೊ ಈ ಸರಣಿಯ 3 ನೇ ಆವೃತ್ತಿಯಾಗಿದೆ. ಕಾರ್ಯಕ್ರಮದಲ್ಲಿ ಎಕ್ಸ್ಪೋ ಅಧ್ಯಕ್ಷ ಮೋಹನ್ ರಾಜ್‌, ಬಿಎನ್ ಐ ಸದಸ್ಯ ಮಹೇಶ್ ಶೆಟ್ಟಿ, ನಿರ್ದೇಶಕ ಸುನಿಲ್ ದತ್ ಪೈ, ಪ್ರಜ್ವಲ್ ಶೆಟ್ಟಿ, ಡಾ. ಸಚಿನ್ ನಡ್ಕ , ಪ್ರೀತಿ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು. ಪ್ರದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು, ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆ ತನಕ ತೆರೆದಿರುತ್ತದೆ.

    Continue Reading

    bangalore

    ಹನಿಟ್ರ್ಯಾಪ್ : ಸುಂದರಿ ಮನೆಗೆ ಕರೆದಳೆಂದು ಹೋಗಿ 40 ಲಕ್ಷ ಕಳೆದುಕೊಂಡ ಉದ್ಯಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದ ಮೂಲಕ ಮೋಸ ಹೋಗುವವರ ಸಂಖ್ಯೆ ಹೆಚ್ಚುತ್ತಿದೆ. ಫೇಕ್ ಅಕೌಂಟ್ ಗಳ ಮೋಸದ ಜಾಲಕ್ಕೆ ಬಿದ್ದು ಲಕ್ಷಗಟ್ಟಲೆ ಕಳೆದುಕೊಳ್ಳುವವರಿಗೇನೂ ಕೊರತೆಯಿಲ್ಲ. ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಇಲ್ಲಿ ಉದ್ಯಮಿಯೊಬ್ಬರು ಹೆಣ್ಣಿನ ಹೆಸರಿನಲ್ಲಿ ನಡೆದ ಮಹಾಜಾಲಕ್ಕೆ ಬಲಿಯಾಗಿದ್ದಾರೆ.

    ಉದ್ಯಮಿ ಗಣೇಶ್ ಎಂಬುವವರಿಗೆ ಕುಟುಂಬ ಎಂಬ ಸೋಷಿಯಲ್ ಮೀಡಿಯಾ ಆ್ಯಪ್ನಲ್ಲಿ ಕಾವ್ಯ ಎಂಬಾಕೆ ಪರಿಚಯವಾಗಿದ್ದು, ಗಣೇಶ್ ಬರೋಬ್ಬರಿ 40 ಲಕ್ಷ ಕಳೆದುಕೊಂಡ ಘಟನೆ ಕುರಿತು ಅಶೋಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ಕಾವ್ಯ ನಾಲ್ಕು ವರ್ಷಗಳ ಹಿಂದೆ ಸಿನಿಮಾ ಮಾಡುವ ವಿಚಾರವಾಗಿ ಪರಿಚಯವಾಗಿದ್ದಾಳಂತೆ. ನಿರ್ದೇಶಕ ಎಸ್.ಆರ್.ಪಾಟೀಲ್ ಗೆ 4.25 ಲಕ್ಷ ಹಣ ಅಗತ್ಯತೆ ಇದೆ ಎಂದು ಹೇಳಿ ಗಣೇಶ್ನಿಂದ ವಸೂಲಿ ಮಾಡಿದ್ದಾಳೆ. ಕೊಟ್ಟ ಹಣ ವಾಪಸ್ಸು ಕೇಳಿದಾಗ ಅವನನ್ನು ರೂಮಿಗೆ ಬರ ಹೇಳಿ, ಒತ್ತಾಯದಿಂದ ಲೈಂಗಿಕ ಕ್ರಿಯೆ ನಡೆಸಿ ಹನಿಟ್ರ್ಯಾಪ್ ಮಾಡಿದ್ದಾಳೆ ಎಂದು ತಿಳಿದುಬಂದಿದೆ.
    ಲಕ್ಷಗಟ್ಟಲೆ ಕಬಳಿಸಿದ ಯುವತಿ :
    ಡೈರೆಕ್ಟರ್ಗೆ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ರೂ, ಹಣ ಪಡೆದಿದ್ದಾಳಂತೆ. ಅದನ್ನು ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದರ ವಿಡಿಯೋ ತೆಗೆದಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಉದ್ಯಮಿಯಿಂದ ಬ್ರಾಸ್ಲೈಟ್, ಚೈನ್ ಅಂತೆಲ್ಲಾ ಸುಮಾರು 40 ಲಕ್ಷ ರೂಪಾಯಿ ಹಣ ಪೀಕಿದ್ದಾಳಂತೆ. ಅಷ್ಟಕ್ಕೆ ಸುಮ್ಮನಾಗದೇ ಕಾರು ಕೊಡಿಸು ಎಂದು ದುಂಬಾಲು ಬಿದ್ದಿದ್ದಾಳಂತೆ. ಇದಕ್ಕೆ ಒಪ್ಪದಿದ್ದಾಗ ಆರೋಪಿ ಮಹಿಳೆ ತನ್ನ ಸ್ನೇಹಿತರಾದ ರವಿ ಮತ್ತು ದಿಲೀಪ್ ಎಂಬವರಿಂದ ಕರೆ ಮಾಡಿಸಿ ಹಣಕ್ಕೆ ಧಮ್ಕಿ ಹಾಕಿಸಿದ್ದಾಳಂತೆ. ಹಣ ಕೊಡದಿದ್ದರೆ ವೀಡಿಯೋಗಳನ್ನ ಟಿವಿಗೆ ಕೊಡೋದಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾಳಂತೆ.
    ಉದ್ಯಮಿ ಗಣೇಶ್ ನೀಡಿದ ದೂರಿನ ಆಧಾರದ ಮೇಲೆ ಕಾವ್ಯ, ದಿಲೀಪ್, ರವಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬೆಂಬತ್ತಿದ್ದಾರೆ.

     

    ಇದನ್ನೂ ಓದಿ: WATCH : ‘ಶೆಡ್ಡಿಗ್ ಬಾ’ ಎಂದ ಹೈಕೋರ್ಟ್ ಜಡ್ಜ್; ವೀಡಿಯೋ ವೈರಲ್

    Continue Reading

    LATEST NEWS

    Trending