LATEST NEWS
ತನ್ನ ಇಬ್ಬರು ವಿಶೇಷಚೇತನ ಮಕ್ಕಳನ್ನು ಕೋರ್ಟ್ಗೆ ಕರೆತಂದ ಸುಪ್ರೀಂ ಜಡ್ಜ್ ಜಸ್ಟೀಸ್ ಚಂದ್ರಚೂಡ್…!
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ತಮ್ಮ ಇಬ್ಬರು ಅಂಗವಿಕಲ ಸಾಕು ಪುತ್ರಿಯರೊಂದಿಗೆ ಕೋರ್ಟ್ಗೆ ಆಗಮಿಸಿ, ಅವರಿಗೆ ನ್ಯಾಯಾಲಯದ ಕಾರ್ಯಕಲಾಪಗಳನ್ನು ತೋರಿಸಿ ವಿವರಿಸುವ ಮೂಲಕ ಅಲ್ಲಿದ್ದ ನ್ಯಾಯಮೂರ್ತಿಗಳು ಹಾಗೂ ವಕೀಲರಿಗೆ ಅಚ್ಚರಿ ಮೂಡಿಸಿದರು.
ಸಿಜೆಐ ಡಿ.ವೈ. ಚಂದ್ರಚೂಡ್ ಅವರಿಗೆ ಮಾಹಿ (16) ಹಾಗೂ ಪ್ರಿಯಾಂಕಾ (20) ಇಬ್ಬರು ಸಾಕು ಪುತ್ರಿಯರಿದ್ದಾರೆ. ಇವರಿಬ್ಬರೂ ವಿಶೇಷಚೇತನರು. ತಮ್ಮ ತಂದೆಯ ಮುಂದೆ ಅವರು ಸುಪ್ರೀಂ ಕೋರ್ಟ್ ಕಾರ್ಯಕಲಾಪಗಳನ್ನು ನೋಡುವ ಬಯಕೆಯನ್ನು ತಮ್ಮ ತಂದೆ ಮುಂದೆ ವ್ಯಕ್ತಪಡಿಸಿದ್ದರು.
ಮಕ್ಕಳ ಇಂಗಿತವನ್ನು ಪೂರೈಸುವ ಉದ್ದೇಶದಿಂದ ಚಂದ್ರಚೂಡ್ ಅವರು ಮಕ್ಕಳಿಬ್ಬರನ್ನೂ ಬೆಳಗ್ಗೆ 10 ಗಂಟೆಗೆ ಕರೆದುಕೊಂಡು ಬಂದು ಪ್ರೇಕ್ಷಕರ ಗ್ಯಾಲರಿ ಮೂಲಕ ನ್ಯಾಯಾಲಯದ ಕೊಠಡಿ ತೋರಿಸಿ, ಕೋರ್ಟ್ ಕಾರ್ಯ ನಿರ್ವಹಣೆ ಬಗ್ಗೆ ವಿವರಿಸಿದರು.
ಬಳಿಕ ರೂಮ್ ನಂಬರ್ 1ರಲ್ಲಿ ಸಿಜೆಐ ಕೊಠಡಿಗೆ ಕರೆದುಕೊಂಡು ಹೋಗಿ ಕೋರ್ಟ್ ಹೇಗೆ ಕಾರ್ಯ ನಿರ್ವಹಿಸುತ್ತದೆ? ನ್ಯಾಯಮೂರ್ತಿಗಳು ಎಲ್ಲಿ ಕುಳಿತುಕೊಳ್ಳುತ್ತಾರೆ? ವಕೀಲರು ಯಾವ ಸ್ಥಳದಲ್ಲಿ ನಿಂತು ವಾದ ಮಂಡಿಸುತ್ತಾರೆ? ಎಂಬ ಸಂಗತಿಗಳನ್ನು ತಿಳಿಸಿಕೊಟ್ಟರು.
ಎಲೆಕ್ಟ್ರಿಕ್ ಚೇರ್ಗಳಲ್ಲಿ ಕುಳಿತಿದ್ದ ತಮ್ಮ ಇಬ್ಬರು ಹೆಣ್ಣುಮಕ್ಕಳ ಜತೆ ಬೆಳಿಗ್ಗೆ 10.30ಕ್ಕೆ ನ್ಯಾಯಾಂಗದ ಕಾರ್ಯಗಳು ಆರಂಭವಾಗುವುದಕ್ಕೂ ಮುನ್ನ ಆಗಮಿಸಿದ ಚಂದ್ರಚೂಡ್, ವಕೀಲರ ಪ್ರವೇಶ ದ್ವಾರದ ಮೂಲಕ ಕೋರ್ಟ್ ಕೊಠಡಿಗೆ ಕರೆದುಕೊಂಡು ಹೋದರು.
ಬಳಿಕ ತಮ್ಮ ಚೇಂಬರ್ಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಸಿಬ್ಬಂದಿಗೆ ತಮ್ಮ ಮಕ್ಕಳನ್ನು ಪರಿಚಯಿಸಿದರು. ಕಳೆದ ನವೆಂಬರ್ 9ರಂದು ಚಂದ್ರಚೂಡ್ ಅವರು ಸಿಜೆಐಗೆ ಅಧಿಕಾರ ಸ್ವೀಕರಿಸಿದ್ದು, ಎರಡು ವರ್ಷ ಅವರು ಈ ಹುದ್ದೆಯಲ್ಲಿ ಇರಲಿದ್ದಾರೆ.
ನ್ಯಾ. ಚಂದ್ರಚೂಡ್ ಅವರಿಗೆ ಇಬ್ಬರು ಗಂಡುಮಕ್ಕಳಿದ್ದಾರೆ. ಅಭಿನವ್ ಬಾಂಬೆ ಹೈಕೋರ್ಟ್ ವಕೀಲರಾಗಿದ್ದರೆ, ಮತ್ತೊಬ್ಬ ಮಗ ಚಿಂತನ್ ಲಂಡನ್ನ ಬ್ರಿಕ್ ಕೋರ್ಟ್ ಚೇಂಬರ್ಸ್ನಲ್ಲಿ ವಕೀಲರಾಗಿ ಕೆಲಸ ಮಾಡುತ್ತಿದ್ದಾರೆ.
ಇನ್ನು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ನ್ಯಾಯಮೂರ್ತಿ ಚಮದ್ರಚುಡ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ‘ಸಿಜೆಐ ಅವರು ತಮ್ಮ ಇಬ್ಬರು ಸಾಕು ಹೆಣ್ಣುಮಕ್ಕಳನ್ನು ಕೋರ್ಟ್ಗೆ ಕರೆದುಕೊಂಡು ಬಂದಿದ್ದು ಪ್ರಶಂಸಾರ್ಹ. ಕೋರ್ಟ್ ಅನ್ನು ಮಾನವೀಯಗೊಳಿಸುವುದು ಅದರ ಕುರಿತಾದ ಭಯವನ್ನು ತಗ್ಗಿಸುತ್ತದೆ.
ನಾನು ಒಮ್ಮೆ ಕೋರ್ಟ್ಗೆ ಮಗುವನ್ನು ಕರೆದುಕೊಂಡು ಬಂದಾಗ ಭದ್ರತಾ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಮಕ್ಕಳಿಗೆ ಇಲ್ಲಿ ಪ್ರವೇಶವಿಲ್ಲ ಎಂದಿದ್ದರು” ಎಂದು ಹೇಳಿದ್ದಾರೆ.
FILM
ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್
ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.
ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.
ಬಿಗ್ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್. ಈಗ ಗುಟ್ಟು ರಟ್ಟಾಗಿದೆ.
‘ವರ್ತೂರ ಸಂತೋಷ್ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.
ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಪ್ರೀತಮ್ ಅವರು ಬೈಕ್ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್ ಪಂಪ್ ಕಡೆಯಿಂದ ಸರ್ವಿಸ್ ರೋಡ್ನಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್ ಕೆಟರಿಂಗ್ ಉದ್ಯಮ ನಡೆಸುತ್ತಿದ್ದರು. ಪ್ರೀತಮ್ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- bengaluru6 days ago
ಸಿಂಪಲ್ ಆಗಿ ಮದುವೆಯಾದ ಒಳ್ಳೆ ಹುಡುಗ ಪ್ರಥಮ್
- bangalore6 days ago
ವಿನಯ್ ತರ ದುಷ್ಮಾನ್ ಆದ್ರೂ ಓಕೆ, ಆದ್ರೆ ಸಂಗೀತಾ ತರ ಪ್ರೆಂಡ್ಸ್ ಬೇಡ..!
- bangalore3 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!