Thursday, March 23, 2023

ನವೆಂಬರ್ ತಿಂಗಳಾಂತ್ಯಕ್ಕೆ ಸುರತ್ಕಲ್ ಟೋಲ್‌ಗೇಟ್ ತೆರವು-ಸಚಿವ ಸುನಿಲ್

ಉಡುಪಿ: ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ಟೋಲ್‌ ಗೇಟ್ ತೆರವು ಕಾರ್ಯ ಅಂತಿಮ ಹಂತದಲ್ಲಿದ್ದು, ನವೆಂಬರ್ ತಿಂಗಳಾಂತ್ಯಕ್ಕೆ ಟೋಲ್‌ಗೇಟ್ ತೆರವು ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್ ಹೇಳಿದರು.


ಅಕ್ಟೋಬರ್ 18ರಂದು ಸುರತ್ಕಲ್‌ ಎನ್‌ಐಟಿಕೆ ಟೋಲ್‌ಗೇಟ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಟೋಲ್‌ಗೇಟ್‌ ತೆರವಿಗೆ ಭಾರೀ ಪ್ರತಿಭಟನೆ ನಡೆಸಿದ್ದರು.

ಅದಕ್ಕೂ ಮುನ್ನ ಪ್ರತಿಭಟನಾಕಾರರು ಈ ಹೋರಾಟವನ್ನು ಕೈಬಿಡಬೇಕೆಂದು ಸಂಸದ ನಳಿನ್‌ ಕುಮಾರ್ ಕಟೀಲು ಹೇಳಿದ್ದರು.

ಟೋಲ್‌ಗೇಟ್ ತೆರವಿಗೆ ಇನ್ನೂ 20 ದಿನಗಳ ಕಾಲಾವಕಾಶ ಕೊಡೋಣ ಎಂದು ಹೇಳಿದ್ದರು. ಆದರೆ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನಿಲ್ ಕುಮಾರ್ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.

ಇಂದು ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ.

ನನಗಿರುವ ಮಾಹಿತಿ ಪ್ರಕಾರ ನವೆಂಬರ್ ಅಂತ್ಯಕ್ಕೆ ತೆರವಾಗಲಿದೆ ಎಂದು ಹೇಳಿದ್ದಾರೆ. ಇವರ ಹೇಳಿಕೆಗೂ, ಸಂಸದರ ಹೇಳಿಕೆಗೂ ಅಜಗಜಾಂತವಿರುವುದು ಜನಪ್ರತಿನಿಧಿಗಳ ಒಳಗೇ ಸಮನ್ವಯತೆ, ಮಾಹಿತಿ ಕೊರತೆ ಇರುವುದು ಕಾಡುತ್ತಿದೆ.

20 ದಿನಗಳ ಕಾಲಾವಕಾಶದ ಹೊರತೂ ಟೋಲ್‌ಗೇಟ್‌ ತೆರವು ಮಾಡಲು ಹೆದ್ದಾರಿ ಪ್ರಾಧಿಕಾರ ಮುಂದಾಗದೇ ಇದ್ದಲ್ಲಿ ತಾನೇ ಖುದ್ದಾಗಿ ಪ್ರತಿಭಟನೆಗೆ ಇಳಿಯುವುದಾಗಿ ನಳಿನ್‌ ಹೇಳಿದ್ದರು.

ಮಾಜಿ ಕಾರ್ಪೋರೇಟರ್ , ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ವಿರುದ್ದ ಅಶ್ಲೀಲ ಟ್ರೋಲ್ ಕುರಿತು ಕೇಳಲಾದ ಪ್ರಶ್ನೆಗೆ ಸಚಿವರು, ‘ನೋ ಕಮೆಂಟ್ಸ್’ ಎಂದು ನುಣುಚಿಕೊಂಡರು.

 

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...