Connect with us

BANTWAL

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ : 9 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು- ವಾಹನ -ನಗದು ವಶ..!

Published

on

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ : 9 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು- ವಾಹನ -ನಗದು ವಶ..!

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಭಂಡಾರಿಬೆಟ್ಟುವಿನ ಭಂಡಾರಿಬೆಟ್ಟುವಿನ ವಸತಿ ಸಂಕೀರ್ಣದಲ್ಲಿ ಅ.20 ರಂದು ಸುರೇಂದ್ರ ಬಂಟ್ವಾಳ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಬಂಟ್ವಾಳ ಅಜೆಕಲ ನಿವಾಸಿ ಸತೀಶ್ ಕುಲಾಲ್ , ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್ ಯಾನೆ ಗಿರಿ, ಬಂಟ್ವಾಳ ಕಬ್ಬಿನಹಿತ್ಲು ನಿವಾಸಿ ಪ್ರದೀಪ್ ಕುಮಾರ್ ಯಾನೆ ಪಪ್ಪು,ಬಂಟ್ವಾಳ ಮಂಡಾಡಿ ನಿವಾಸಿ ಶರೀಪ್ ಯಾನೆ ಸಯ್ಯದ್ ಶರೀಪ್ ,ವತ್ಸಿ ವಸತಿ ಸಂಕೀರ್ಣದ ಪಾಲುದಾರ ವೆಂಕಪ್ಪ ಪೂಜಾರಿ ಯಾನೆ ವೆಂಕಟೇಶ ,ಶರಣ್ ಯಾನೆ ಆಕಾಶ್‌ಭವನ ಶರಣ್‌ ,ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ರಾಜೇಶ್,ದಿವ್ಯರಾಜ್,ಅನಿಲ್ ಪಂಪ್‌ವೆಲ್ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ 1 ಬೈಕ್,2 ಕಾರು,ಮೊಬೈಲ್ ಹಾಗೂ ನಗದು 2.50 ಲಕ್ಷ ರೂ. ವನ್ನು ವಶಪಡಿಸಲಾಗಿದ್ದು,ಇನ್ನು ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯನಡೆಯುತ್ತಿದೆ. ಆರೋಪಿಗಳ ಬಂಧನಕ್ಕಾಗಿ ಜಿಲ್ಲೆಯ ವಿವಿಧ ಠಾಣೆಗಳ ನುರಿತ ಸಿಬ್ಬಂದಿಗಳನ್ನೊಳಗೊಂಡ ೫ ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು. ಇನ್ನೂ ತನಿಖೆ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಎಸ್‌ ಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಆರೋಪಿಗಳ ಪೈಕಿ ಸತೀಶ್ ಕುಲಾಲ್ ಮತ್ತು ಗಿರೀಶ್ ಹೆಚ್ಚಿನ ತನಿಖೆಗೆ ಒಳಪಡಿಸಿದಾಗ ಪ್ರದೀಪ್ ಯಾನೆ ಪಪ್ಪು ಕೊಲೇಗೀಡಾದ ಸುರೇಂದ್ರನ ಸ್ನೇಹಿತನಾಗಿದ್ದರು. ಆರೋಪಿ ಪ್ರದೀಪ್ ತನ್ನ ಚಿನ್ನದ ಉದ್ಯಮಕ್ಕಾಗಿ ಸುರೇಂದ್ರನಿಂದ ಸಾಲಪಡೆದಿದ್ದು,ಅದರಲ್ಲಿ 7 ಲಕ್ಷ ರೂ ವಾಪಾಸ್ ನೀಡಲು ಬಾಕಿ ಇತ್ತು.

ಈ ಹಣವನ್ನು ಅತನಿಗೆ ವಾಪಾಸ್ ಕೊಡುವ ವಿಚಾರದಲ್ಲಿ ಈ ಕೃತ್ಯ ನಡೆಸಲಾಗಿದೆ.ಸುರೇಂದ್ರನ ಕೊಲೆಗೆ ಆರೋಪಿ ಪ್ರದೀಪ್ 2 ಲಕ್ಷರೂ.ವನ್ನು ಆಕಾಶ್ ಭವನ ಶರಣ್ ಗೆ ಅತನ ಪರಿಚಿತನ ಮೂಲಕ ಪೂರೈಸಿದ್ದಾನೆ.ಈ ಅಪರಿಚಿತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಆರೋಪಿ ವೆಂಕಪ್ಪ ಕೂಡ ಸುರೇಂದ್ರನಿಂದ ಸಾಲಪಡೆದಿದ್ದು,ಇದನ್ನು ಅತನಿಗೆ ವಾಪಾಸ್ ನೀಡಲು ಬಾಕಿ ಇದೆ.

ಈ ಹಿನ್ನಲೆಯಲ್ಲಿ ಸುರೇಂದ್ರನ ಕೊಲೆಗೆ ಸತೀಶ್ ಗೆ ಮುಂಗಡವಾಗಿ 90 ಸಾ.ರೂ.ನೀಡಿದ್ದು,ಕೃತ್ಯದ ಬಳಿಕ ಹೆಚ್ಚಿನ ಹಣ ನೀಡುವ ಭರವಸೆಯಿತ್ತಿದ್ದ.ಆರೋಪಿ ಶರೀಫ್ ವಯಕ್ತಿಕ ದ್ವೇಷದಿಂದ ಕೃತ್ಯದಲ್ಲಿ ಸಹಕರಿಸಿದ್ದರೆ,ಕಾರಾಗೃಹದಲ್ಲಿದ್ದ ಶರಣ್ ವಯಕ್ತಿಕ ದ್ವೇಷ ವೊಂದಿದ್ದರಿಂದ ಗಿರೀಶನನ್ನು ಪುಸಲಾಯಿಸಿ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರ ತೀರಿಸುವಂತೆ ಪ್ರರೇಪಿಸಿದ್ದಾನೆ ಎಂದು ಪ್ರಕಟಣೆ ತಿಳಿಸಿದೆ.

ಆರೋಪಿಗಳಾದ ದಿವ್ಯರಾಜ್,ಅನಿಲ್ ಪಂಪ್ ವೆಲ್ ನಿಂದ ಕೃತ್ಯಕ್ಕೆ ವಾಹನ ವ್ಯವಸ್ಥೆ ಮಾಡಿದ್ದರೆ,ಕೃತ್ಯದ ಬಳಿಕ ಉಜಿರೆ ಪರಿಸರದಲ್ಲಿ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ವ್ಯವಸ್ಥೆ ಮಾಡಿ ತದನಂತರ ಆರೋಪಿಗಳು ಇಲ್ಲಿಂದ ತಪ್ಪಿಸಿಕೊಳ್ಳಲು ವಾಹನ ವ್ಯವಸ್ಥೆ ಮಾಡಿದ್ದ.

ಆರೋಪಿಗಳ ಪೈಕಿ ದಿವ್ಯರಾಜ್ 2017 ರಲ್ಲಿ ನಡೆದ ಅಶ್ರಫ್ ಕಲಾಯಿ ಹತ್ಯಾ ಪ್ರಕರಣ ಆರೋಪಿಯಾಗಿದ್ದು,ಕೊಲೆಗೀಡಾದ ಕಿಸನ್ ಹೆಗ್ಡೆಯ ಆಪ್ತನಾಗಿದ್ದಾನೆ.

.ಆರೋಪಿ ಶರಣ್ ಕೊಲೆ,ಕೊಲೆಯತ್ನ,ಲೈಂಗಿಕ ದೌರ್ಜನ್ಯ ಸಹಿತ 20 ಕ್ಕು ಅಧಿಕ ಪ್ರಕರಣ ಈತನ ಮೇಲೀದ್ದು,ಸದ್ಯ ಎರಡು ವರ್ಷದಿಂದ ಬೆಂಗಳೂರು ಕಾರಾಗೃಹದಲ್ಲಿದ್ದು ಅಲ್ಲಿದ್ದುಕೊಂಡೇ ಸುರೇಂದ್ರನ ಹತ್ಯೆಗೆ ಸಂಚು ರೂಪಿಸಿದ್ದಾನೆ ಎಂದು ಎಸ್ಪಿ ಲಕ್ಷೀಪ್ರಸಾದ್ ಪ್ರಕಟಣೆ ತಿಳಿಸಿದೆ.

ಹಣಕಾಸು ಮತ್ತು ವಯಕ್ತಿಕ ದ್ವೇಷದಿಂದ ಸುರೇಂದ್ರ ಹತ್ಯೆ ನಡೆಸಲಾಗಿದೆ ಎಂದು ತನಿಖೆಯಿಂದ ಬಯಲಿಗೆ ಬಂದಿದೆ.ಸದ್ಯ 9 ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು,ತನಿಖೆ ಮುಂದುವರಿದೆ.

ಬಂಟ್ವಾಳ ಉಪವಿಭಾಗದಡಿವೈಎಸ್ಪಿ ವೆಲಂಟೈನ್ ಡಿಸೋಜಾ ಪೊಲೀಸ್ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್ ಅವರ ನೇತೃತ್ವದಲ್ಲಿ ಪಿಎಸ್ ಐ ಅವಿನಾಶ್ ಹೆಚ್ ಗೌಡ,ಪ್ರಸನ್ನ ಎಂ.ಸ್ , ಸಂಜೀವ ಕೆ, ನಂದಕುಮಾರ್ , ವಿನೋದ್ ರೆಡ್ಡಿ, ರಾಜೇಶ್ ಕೆ .ವಿ., ಕಲೈಮಾರ್, ಕುಮಾರ್ ಕಾಂಬ್ಳೆ , ಶ್ರೀ ರವಿ ಬಿ ಎಸ್.,ಡಿಸಿಐಬಿ ಪಿಐ ಚೆಲುವರಾಜ್ ಹಾಗೂ ಡಿಸಿಐಬಿ ಸಿಬ್ಬಂದಿಗಳು, ತಾಂತ್ರಿಕ ವಿಭಾಗದ ಸಿಬ್ಬಂದಿಗಳು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending