Connect with us

    BANTWAL

    ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

    Published

    on

    ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

    ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್ ಕುಲಾಲ್ ತಪ್ಪೊಪ್ಪಿಕೊಂಡಿದ್ದಾನೆ.

    ಬಂಟ್ವಾಳದಲ್ಲಿ ನಿನ್ನೆ ಬರ್ಬರವಾಗಿ ಹತ್ಯೆಯಾದ ಚಿತ್ರ ನಟ ಸುರೇಂದ್ರ  ಬಂಟ್ವಾಳ ಪ್ರಕರಣವನ್ನು ಭೇದಿಸಲು ಪೊಲೀಸರು ಪ್ರತ್ಯೇಕ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.

    ಈ ಮಧ್ಯೆ ಸುರೇಂದ್ರ‌ನ  22 ವರ್ಷ ಜೊತೆಗಿದ್ದ ಅಪ್ತ ಸತೀಶ್ ಸ್ವತಃ ತಾನೇ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದು,  ಉಡುಪಿಯಲ್ಲಿ ನಡೆದ ಕಿಶನ್ ಹೆಗ್ಡೆ ಕೊಲೆಗೆ ರಿವೆಂಜ್ ಇದು ಎಂದು ಸ್ವಷ್ಟಪಡಿಸಿದ್ದಾನೆ.

    ನಾನು ಎರಡು ದಿನದಲ್ಲಿ ಪೊಲೀಸರಿಗೆ ಶರಣಾಗುವುದಾಗಿ ಆಡಿಯೋ ಮಾಡಿ ಹೇಳಿಕೆ ನೀಡಿದ್ದಾನೆ. ನಾವು ಈಗ ಕಾರವಾರದಲ್ಲಿದ್ದೇವೆ.

    ನಮಗೆ ಏನೂ ಮಾಡಬೇಕು ಎಂದು ತೋಚದೆ ಇಲ್ಲಿ ಬಂದಿದ್ದೇವೆ.‌ಇನ್ನೂ ಒಂದೆರಡು ದಿವಸದಲ್ಲಿ ಪೊಲೀಸರಿಗೆ ಶರಣಾಗತಿ ಆಗುತ್ತೇವೆ ಎಂದು 2 ನಿಮಿಷ 17 ಸೆಕೆಂಡ್ ಮಾತನಾಡಿ ಆಡಿಯೋ ವೈರಲ್ ಮಾಡಿದ್ದಾನೆ.

    ನಿನ್ನೆ ಬಂಟ್ವಾಳದ ಬಿ.ಸಿ ರೋಡ್ ನಲ್ಲಿದ್ದಂತ ಸುರೇಂದ್ರ ಬಂಟ್ವಾಳ ಅವರನ್ನು ಅವರದ್ದೇ ಫ್ಲಾಟ್ ನಲ್ಲಿ ಬರ್ಬರವಾಗಿ ಕೊಲೆ ಗೈಯ್ಯಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೊಲೆಯ ಆರೋಪಿಗಾಗಿ ಬಲೆ ಕೂಡ ಬೀಸಿದ್ದರು.

    ಇದರ ಮಧ್ಯೆ ಇಂದು ಪೊಲೀಸರಿಗೆ ಆಡಿಯೋ ಸಂದೇಶವೊಂದನ್ನು ಕಳುಸಿರಿವಂತ ಕೊಲೆ ಆರೋಪಿ ಸತೀಶ್ ಕುಲಾಲ್ ಎಂಬಾತ, ಸುರೇಂದ್ರ ಬಂಟ್ವಾಳ ಅವರನ್ನು ಕೊಲೆ ಗೈದಿದ್ದು ನಾನೆ. ಈ  ಆಡಿಯೋ ಮೂಲಕ ತುಳು ನಟ ಸುರೇಂದ್ರ ಕೊಲೆ ಮಾಡಿದ್ದು ಸತೀಶ್ ಕುಲಾಲ್ ಎಂಬುದಾಗಿ ಪ್ರಾರ್ಥಮಿಕವಾಗಿ ದೃಢಪಟ್ಟಂತೆ ಆಗಿದೆ.

    BANTWAL

    ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

    Published

    on

    ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

    ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

    ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     

    ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

     

    ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

    ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    BANTWAL

    ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

    Published

    on

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

    ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.

    ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

    ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    Continue Reading

    BANTWAL

    ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

    Published

    on

    ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

    ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

    ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.

    ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

    Continue Reading

    LATEST NEWS

    Trending