Connect with us

    bangalore

    ಏನಾಶ್ಚರ್ಯ! ನಿದ್ದೆ ಮಾಡಿ 9 ಲಕ್ಷ ಗೆದ್ದ ಬೆಂಗಳೂರಿನ ಯುವತಿ

    Published

    on

    ಮಂಗಳೂರು/ಬೆಂಗಳೂರು : ಬೆಂಗಳೂರು ಮೂಲದ ಇನ್ವೆಸ್ಟ್ಮೆಂಟ್ ಬ್ಯಾಂಕರ್ ಒಬ್ಬರು ಹೆಚ್ಚು ನಿದ್ದೆ ಮಾಡುವ ಕನಸನ್ನು ಲಾಭದಾಯಕವಾಗಿ ಪರಿವರ್ತಿಸಿಕೊಂಡು 9 ಲಕ್ಷ ರೂಪಾಯಿಗಳನ್ನು ಗೆದ್ದು, ಫುಲ್ ಫೇಮಸ್ ಆಗಿದ್ದಾರೆ. ‘ವೇಕ್ಫಿಟ್’ ಎಂಬ ಬೆಂಗಳೂರಿನ ಸ್ಮಾರ್ಟ್ಅಪ್ ಸಂಸ್ಥೆಯ ಸ್ಲೀಪ್ ಇಂಟರ್ನ್ಶಿಪ್ ಕಾರ್ಯಕ್ರಮದ ಮೂರನೇ ಸೀಸನಲ್ಲಿ ಸಾಯಿಶ್ವರಿ ಪಾಟೀಲ್ ‘ಸ್ಲೀಪ್ ಚಾಂಪಿಯನ್’ ಎಂಬ ಬಿರುದನ್ನು ಪಡೆದಿದ್ದಾರೆ.


    ಏನಿದು ಸ್ಪರ್ಧೆ?
    ಕಾರ್ಯಕ್ರಮದ ಇತರ 12 ಸ್ಲೀಪ್ ಇಂಟರ್ನ್ಗಳಲ್ಲಿ ಸಾಯಿಶ್ವರಿ ಪಾಟೀಲ್ ಕೂಡ ಒಬ್ಬರಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯು ಪ್ರತಿ ರಾತ್ರಿ ಎಂಟರಿಂದ ಒಂಬತ್ತು ಗಂಟೆಗಳ ಕಾಲ ಸಂಪೂರ್ಣವಾಗಿ ನಿದ್ರೆ ಮಾಡಬೇಕಾಗಿತ್ತು.
    ಪ್ರತಿಯೊಬ್ಬರಿಗೂ ತಮ್ಮ ನಿದ್ರೆಯ ಮಾದರಿಗಳನ್ನು ಮೇಲ್ವಿಚಾರಣೆ ಮಾಡಲು ಪ್ರೀಮಿಯಂ ಹಾಸಿಗೆ ಮತ್ತು ಕಾಂಟ್ಯಾಕ್ಟ್ಲೆಸ್ ಸ್ಲೀಪ್ ಟ್ರ್ಯಾಕರ್ಗಳನ್ನು ಒದಗಿಸಲಾಗಿತ್ತು. ಇಂಟರ್ನ್ಗಳು ತಮ್ಮ ನಿದ್ರೆಯ ಅಭ್ಯಾಸವನ್ನು ಹೆಚ್ಚಿಸಲು ಅನುಭವಿ ನಿದ್ರೆ ಮಾರ್ಗದರ್ಶಕರ ನೇತೃತ್ವದಲ್ಲಿ ಕಾರ್ಯಾಗಾರಗಳಿಗೆ ಹಾಜರಾಗಿದ್ದರು.
    ಯಾಕೆ ಈ ಸ್ಪರ್ಧೆ?
    ಜಡ ಜೀವನಶೈಲಿಯಿಂದಾಗಿ ಜನರು, ವಿಶೇಷವಾಗಿ ಯುವಕರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಿಗೆ ಒಡ್ಡಿಕೊಳ್ಳುವುದು, ಯಾವುದೇ ಪೌಷ್ಟಿಕ ಆಹಾರ ಮತ್ತು ನಿದ್ರೆಯ ತೀವ್ರ ಕೊರತೆಯು ಯುವ ವಯಸ್ಕರಲ್ಲಿ ಒಂದು ಪ್ರವೃತ್ತಿಯಾಗಿದ್ದು, ಇದು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.
    ಇಂಟರ್ನ್ಗಳಿಗೆ ಸ್ಟೈಫಂಡ್ನೊಂದಿಗೆ ಪ್ರೋತ್ಸಾಹಿಸುವ ಮೂಲಕ ನಿದ್ರೆಯೊಂದಿಗೆ ಭಾರತದ ಸಂಬಂಧವನ್ನು ಪುನರುಜ್ಜೀವನಗೊಳಿಸಲು ವೇಕ್ಫಿಟ್ ಕಂಪನಿ ಸ್ಪರ್ಧೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

    Click to comment

    Leave a Reply

    Your email address will not be published. Required fields are marked *

    bangalore

    ಹೆಸರು ಬದಲಿಸಿಕೊಂಡು ಬೆಂಗಳೂರಲ್ಲಿ ವಾಸವಿದ್ದ ಪಾಕಿಸ್ತಾನಿ ಕುಟುಂಬ ಅರೆಸ್ಟ್

    Published

    on

    ಮಂಗಳೂರು / ಬೆಂಗಳೂರು :  ಪಾಕಿಸ್ತಾನದ ವ್ಯಕ್ತಿಯೊಬ್ಬ ತನ್ನ ಕುಟುಂಬದೊಂದಿಗೆ ಆನೇಕಲ್‌ ಬಳಿಯ ಜಿಗಣಿಯಲ್ಲಿ ವಾಸವಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಜಿಗಣಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಇತ್ತೀಚೆಗಷ್ಟೇ ಎನ್​ಐಎ ಅಧಿಕಾರಿಗಳು ಜಿಗಣಿಯಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಈಗ ಇಲ್ಲಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಪಾಕಿಸ್ತಾನದ ವ್ಯಕ್ತಿ ವಾಸ್ತವ್ಯವಿದ್ದ ವಿಚಾರ ಗೊತ್ತಾಗಿದೆ. ಒಟ್ಟು ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ರಷೀದ್ ಸಿದ್ದಿಕಿ ಅಲಿಯಾಸ್​ ಶಂಕರ್ ಶರ್ಮಾ, ಆಯುಷಾ ಅನಿಫ್ ಅಲಿಯಾಸ್​ ಆಶಾ ಶರ್ಮಾ, ಮೊಹಮ್ಮದ್ ಹನೀಫ್ ಅಲಿಯಾಸ್​ ರಾಮ್ ಬಾಬಾ ಶರ್ಮಾ, ರುಬೀನಾ ಅಲಿಯಾಸ್​ ರಾಣಿ ಶರ್ಮಾ ಬಂಧಿತರು. ಹೆಸರು ಬದಲಿಸಿಕೊಂಡು ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    ಪಾಕ್ ನಿಂದ ಬಾಂಗ್ಲಾ, ಭಾರತದತ್ತ:

    ಪಾಕಿಸ್ತಾನದಲ್ಲಿದ್ದಾಗ ಧರ್ಮದ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಈತ ಪಾಕಿಸ್ತಾನ ತೊರೆದಿದ್ದ. ಬಳಿಕ ಬಾಂಗ್ಲಾದೇಶದ ಢಾಕಾದಲ್ಲಿ ಕೆಲವು ಸಮಯದವರೆಗೆ ನೆಲೆಸಿದ್ದ. ಕೊನೆಗೆ ಅಲ್ಲಿಯೇ ಒಬ್ಬ ಮಹಿಳೆಯನ್ನು ಮದುವೆ ಮಾಡಿಕೊಂಡಿದ್ದ. ಇದಾದ ನಂತರ ಆತ ತನ್ನ ಹಾಗೂ ಮಕ್ಕಳೊಂದಿಗೆ ಮತ್ತೆ 2014ರಲ್ಲಿ ದೆಹಲಿಗೆ ಬಂದಿದ್ದ ಎನ್ನಲಾಗಿದೆ.

    ಅಲ್ಲಿ ಕೆಲವರ ಸಹಾಯದಿಂದ ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ಸೇರಿದಂತೆ ಇನ್ನಿತರ ದಾಖಲೆಗಳನ್ನು ಮಾಡಿಸಿಕೊಂಡು, ಕುಟುಂಬದೊಂದಿಗೆ ಬೆಂಗಳೂರಿನ ಜಿಗಣಿಗೆ ಬಂದು ನೆಲೆಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಧರ್ಮದ ವಿಚಾರವಾಗಿಯೇ ರಷೀದ್‌ನನ್ನು ಪಾಕಿಸ್ತಾನದಿಂದ ಹೊರದಬ್ಬಲಾಗಿತ್ತು. ಬಳಿಕ ಬಾಂಗ್ಲಾದಿಂದ ನೇಪಾಳಕ್ಕೆ ಹೋಗಿದ್ದಾಗ ಅಲ್ಲಿನ ಧಾರ್ಮಿಕ ಸಂಸ್ಥೆಗೆ ಸೇರಿಕೊಂಡು, ಧರ್ಮ ಪ್ರಚಾರದಲ್ಲಿ ನಿರತನಾಗಿದ್ದ. ಅಲ್ಲಿನ ಧರ್ಮಗುರು ಸೂಚನೆ ಮೇರೆಗೆ ಧರ್ಮಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದಿದ್ದ ಎನ್ನಲಾಗಿದೆ.

    ಇದನ್ನೂ ಓದಿ : 500ರ ನೋಟಿನಲ್ಲಿ ಗಾಂಧಿ ಜಾಗದಲ್ಲಿ ನಟ ಅನುಪಮ್‌ ಖೇರ್‌..!?

    ಬೆಂಗಳೂರಿಗೆ ಬಂದಿದ್ದ ರಷೀದ್‌ ಮೊದಲಿಗೆ ಇಬ್ಬರನ್ನು ಪರಿಚಯ ಮಾಡಿಕೊಂಡು ಅವರನ್ನೂ ಧರ್ಮ ಸಂಸ್ಥೆಗೆ ಸೇರ್ಪಡೆ ಮಾಡಿಕೊಂಡಿದ್ದ. ಅವರ ಸಹಕಾರದಿಂದಲೇ ಜಿಗಣಿಯಲ್ಲಿ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಂಡಿದ್ದ. ಕೊನೆಗೆ ಜಿಗಣಿಯಲ್ಲಿ ಮನೆ ಮಾಡಿಕೊಂಡು ಡೆಲಿವರಿ ಬಾಯ್‌ ಕೆಲಸ ಕೂಡ ಮಾಡುತ್ತಿದ್ದ. ಬಿರಿಯಾನಿ ತಯಾರಿಸಿ ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

    ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಈತನ ಮೇಲೆ ಕಣ್ಣಿಟ್ಟು ಚಲನವಲನ ಗಮನಿಸುತ್ತಿತ್ತು. ಬಳಿಕ ಗುಪ್ತಚರ ಅಧಿಕಾರಿಗಳೇ ರಷೀದ್ ಜಿಗಣಿಯಲ್ಲಿ ವಾಸವಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನು ಆಧರಿಸಿ ಜಿಗಣಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ಕೊನೆಗೆ ಇಡೀ ಕುಟುಂಬವನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    bangalore

    ಅಮಾನವೀಯ ಘಟನೆ : ಮಣ್ಣಿನಲ್ಲಿ ಜೀವಂತ ಹೂತಿದ್ದ ಗಂಡು ಮಗು ಪತ್ತೆ

    Published

    on

    ಮಂಗಳೂರು/ಬೆಂಗಳೂರು : ನಮ್ಮಲ್ಲಿ ಅದೆಷ್ಟೋ ಮಂದಿಗೆ ಮಕ್ಕಳಿಲ್ಲದ ಕೊರಗು ಇದೆ. ಮಗುವಿಗಾಗಿ ಅದೆಷ್ಟೋ ಹರಕೆ ಹೊರುತ್ತಾರೆ. ಆದರೆ, ಬೆಂಗಳೂರಿನಲ್ಲಿ ಅಮಾನವೀಯ ಕೃ*ತ್ಯ ನಡೆದಿದೆ. ಹುಟ್ಟಿದ ಒಂದೇ ದಿನಕ್ಕೆ ಹಸುಗೂಸನ್ನು ಜೀವಂ*ತವಾಗಿ ಮಣ್ಣಲ್ಲಿ ಹೂತಿಟ್ಟಿರುವ ಘಟನೆ ನಡೆದಿದೆ.

     

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಕತ್ರಿಗುಪ್ಪೆ ದಿನ್ನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನೀಲಗಿರಿಯ ತೋಪಿನಲ್ಲಿ ನಿರ್ಜನ ಪ್ರದೇಶದಲ್ಲಿ ಮಗುವನ್ನು ಜೀವಂ*ತವಾಗಿ ಹೂತು ಹಾಕಲಾಗಿದೆ. ಇಂದು (ಸೆ. 30) ಆಟೋ ಚಾಲಕರು ಬಹಿರ್ದೆಸೆಗೆ ತೆರಳಿದ್ದ ವೇಳೆ ಮಗು ಅಳುವ ಶಬ್ದ ಕೇಳಿದ್ದರಿಂದ ವಿಚಾರ ಬೆಳಕಿಗೆ ಬಂದಿದೆ.

    ಇದನ್ನೂ ಓದಿ : ಕೇಕ್ ನಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆ

    ಕೂಡಲೇ ಮಗುವನ್ನು ರಕ್ಷಿಸಿದ ಸ್ಥಳೀಯರು, ಮಕ್ಕಳ ರಕ್ಷಣಾ ವೇದಿಕೆಗೆ ಹಾಗೂ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.  ಮಗುವಿಗೆ ಸಣ್ಣ ಪುಟ್ಟ ಗಾ*ಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    Continue Reading

    bangalore

    ಲಾರಿ – ಆಟೋ ಮುಖಾಮುಖಿ ಡಿಕ್ಕಿ; ಯುವತಿ ದುರ್ಮರಣ

    Published

    on

    ಮಂಗಳೂರು/ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಲಾರಿ -ಆಟೋ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ.


    ಕೇರಳ ಮೂಲದ ಶಾಲಿನಿ ಮೃತ ದುರ್ದೈವಿ. ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದರು. ಮೆಜೆಸ್ಟಿಕ್ ಗೆ ತೆರಳಬೇಕಾಗಿದ್ದ ಶಾಲಿನಿ, ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಚಾಲಕ ಇಮ್ರಾನ್ ನನ್ನು ಸಂಪರ್ಕಿಸಿದ್ದಾರೆ.
    ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ನಿಂದ ಮೆಜೆಸ್ಟಿಕ್ ನತ್ತ ಆಟೋ ಸಾಗುತ್ತಿತ್ತು. ಈ ವೇಳೆ ಸಿಗ್ನಲ್ ಜಂಪ್ ಮಾಡಿ ಆಟೋಗೆ ಲೋಡ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಲಿನಿ ಇಹಲೋಕ ತ್ಯಜಿಸಿದ್ದಾರೆ. ಅಪಘಾತದ ರಭಸಕ್ಕೆ ಆಟೋ ಛಿದ್ರವಾಗಿದೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


    ನಿದ್ರೆ ಮಂಪರಿನಲ್ಲಿ ಅಪಘಾತ:
    ಅಪಘಾತದ ಬಳಿಕ ಕಾಲ್ಕಿತ್ತಿದ್ದ ಚಾಲಕನನ್ನು ಟ್ರಾಫಿಕ್ ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸರಿಂದ ಅಭಿ ಎಂಬಾತನ ಬಂಧನವಾಗಿದ್ದು, ವಿಚಾರಣೆ ವೇಳೆ ನಿದ್ರೆ ಮಂಪರಿನಲ್ಲಿ ಅಪಘಾತ ಆಯಿತು ಎಂದು ಹೇಳಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ

    Continue Reading

    LATEST NEWS

    Trending