Connect with us

    DAKSHINA KANNADA

    ‘ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿಯ ಸರ್ಕಾರದ ಆಳ್ವಿಕೆ’-ಯು.ಟಿ ಖಾದರ್

    Published

    on

    ಮಂಗಳೂರು: ಮಡಿಕೇರಿಯಲ್ಲಿ ಪೊನ್ನಂಪೇಟೆಯಲ್ಲಿ ಭಜರಂಗದಳ ಕಾರ್ಯಕರ್ತರಿಗೆ ಆಯುಧ ತರಬೇತಿ ಹಾಗೂ ತ್ರಿಶೂಲ ದೀಕ್ಷೆ ನೀಡಿರುವ ವಿಹೆಚ್‌ಪಿ ಯ ಕಾರ್ಯಕ್ರಮಕ್ಕೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯುಟಿ ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


    ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದುಪರ ಸಂಘಟನೆಯ ಕಾರ್ಯಕರ್ತರಿಗೆ ಬಂದೂಕು ಚಲಾಯಿಸುವ ತರಬೇತಿ ಹಾಗೂ ತ್ರಿಶೂಲ ದೀಕ್ಷೆಯನ್ನು ನೀಡುವ ಮೂಲಕ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ನೇರವಾಗಿ ಕುಮ್ಮಕ್ಕು ನೀಡುತ್ತಿದ್ದು ತಾಲಿಬಾನ್ ಸಂಸ್ಕೃತಿಯನ್ನು ಹುಟ್ಟು ಹಾಕಿದೆ ಎಂದು ಆರೋಪಿಸಿದರು.

    ಶಾಲೆಗಳಲ್ಲಿ ಮಕ್ಕಳಿಗೆ ಪೆನ್ನು ಪುಸ್ತಕ ನೀಡಿ ಉತ್ತಮವಾದ ಶಿಕ್ಷಣವನ್ನು ಕೊಟ್ಟು ದೇಶದ ಸತ್ಪ್ರಜೆಗಳನ್ನಾಗಿ ಮಾಡುವ ಬದಲು ಮಕ್ಕಳಿಗೆ ಶಸ್ತ್ರಾಸ್ತ್ರವನ್ನು ಕಲಿಸುವ ಹಾಗೂ ರೈಫಲ್ ಟ್ರೈನಿಂಗ್ ಕಲಿಸುವುದರ ಹಿಂದಿರುವ ಉದ್ದೇಶವೇನು ಎಂಬುದಕ್ಕೆ ಗೃಹ ಸಚಿವರು ಹಾಗೂ ಶಿಕ್ಷಣ ಸಚಿವರು ರಾಜ್ಯದ ಜನತೆಗೆ ಉತ್ತರ ನೀಡಬೇಕು.

    ಈ ಬಗ್ಗೆ ಯಾರೋ ಶಿಕ್ಷಣ ಸಂಸ್ಥೆಗಳಲ್ಲಿ ಎನ್‌ಸಿಸಿ ಹಾಗೂ ಬೇರೆ ಬೇರೆ ಸೇನಾ ಶಿಕ್ಷಣವನ್ನು ನೀಡುತ್ತಾರಲ್ವ ಅದೇ ರೀತಿ ಇದು ಎನ್ನುತ್ತಾರೆ. ಆದರೆ ಅದಕ್ಕೆ ಸರ್ಕಾರದ ಅಥಾರಿಟಿ ಇದೆ. ಸಂಸ್ಥೆಗಳು ಸರ್ಕಾರದ ಪರ್ಮಿಷನ್ ತೆಗೆದುಕೊಂಡಿರುತ್ತದೆ.

    ಇಂತಹ ಶಿಕ್ಷಣವನ್ನು ಕಲಿಸುವ ಶಿಕ್ಷಣ ಸಂಸ್ಥೆಗಳ ಹಿಂದೆ ಮಕ್ಕಳಲ್ಲಿ ದೇಶ ಪ್ರೇಮವನ್ನು ಬಿತ್ತರಿಸುವ ಉದ್ದೇಶವಿರುತ್ತದೆ. ಇದಕ್ಕೆ ಏನು ಅಥಾರಿಟಿ ಇದೆ? ಅದೇ ಒಂದು ವೇಳೆ ನಾವು ಯೂತ್ ಕಾಂಗ್ರೆಸ್ ವತಿಯಿಂದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸೇವಾದಳದವರಿಗೆ ಇಂತಹ ತರಬೇತಿ ನೀಡಿದರೆ ಅದನ್ನು ಭಯೋತ್ಪಾದನೆ ಎಂದು ಕರೆಯುತ್ತಾರೆ. ದಲಿತ ಸಂಘಟನೆ ಮಾಡುತ್ತಿದ್ದರೆ ಏನೆಲ್ಲಾ ವಿಚಾರಗಳು ಬರುವ ಸಾಧ್ಯತೆ ಇರುತ್ತಿತ್ತು.

    ಆದರೆ ಯಾರು ಯಾರನ್ನೋ ಕರೆದುಕೊಂಡು ಎಲ್ಲೆಲ್ಲೋ ಈ ಥರ ತರಬೇತಿ ನೀಡಿದ್ರೆ ಇದಕ್ಕೆ ಯಾರ ಪರ್ಮಿಷನ್ ಆಗಿದೆ. ಇದನ್ನು ಸರ್ಕಾರ ಶೀಘ್ರವಾಗಿ ಗಣನೆಗೆ ತೆಗೆದುಕೊಳ್ಳಬೇಕು. ಇದನ್ನು ಮಾಡಿಸುತ್ತಿರುವ ಸಂಘಟನೆಯ ಉದ್ದೇಶವೇನು ಎಂಬುವುದರ ಬಗ್ಗೆ ಹಾಗೆಯೇ ಸರ್ಕಾರ ಭವಿಷ್ಯದ ಉದ್ದೇಶದಲ್ಲಿ ತನಿಖೆ ಮಾಡಬೇಕಾದ್ದು ಕರ್ತವ್ಯ.

    ಆದರೆ ಇದನ್ನು ಮೌನವಾಗಿ ಕೂತು ನೋಡುತ್ತಿರುವ ಶಿಕ್ಷಣ ಇಲಾಖೆಯ ಸಚಿವರು, ಗೃಹಸಚಿವರು ಪರೋಕ್ಷವಾಗಿ ಇದಕ್ಕೆ ಬೆಂಬಲ ಕೊಟ್ಟಂತಹ ರೀತಿಯಲ್ಲಿ ಕಾಣುತ್ತಿದೆ ಎಂದು ಕಿಡಿಕಾರಿದರು.

    ಪ್ರಸ್ತುತ ಇರುವ ರಾಜ್ಯ ಸರ್ಕಾರದ ಬಗ್ಗೆ ಮಾತನಾಡಿ ‘ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಶಾಲೆ ನಿರ್ಮಾಣ ಆಗಿಲ್ಲ. ಅದೇ ರೀತಿ ಜಿಲ್ಲೆಯಲ್ಲಿ ಪ್ರೈಮರಿ ಬಿಡಿ ಅಂಗನವಾಡಿ ಕೂಡಾ ಆಗಿಲ್ಲ. ಅದೇ ರೀತಿ ರಾಜ್ಯದಲ್ಲಿ ಒಂದೇ ಒಂದು ಡಿಗ್ರಿ ಕಾಲೇಜು ನಿರ್ಮಾಣ ಆಗಿಲ್ಲ, ವಿದ್ಯಾರ್ಥಿಗಳಿಗೆ ಬೇಕಾಗುವ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೂಡಾ ಸರಿಯಾಗಿ ಆಗ್ತಾ ಇಲ್ಲ.

    ಸಮವಸ್ತ್ರದ ಬಗ್ಗೆ ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಅದೇ ರೀತಿ ಪಠ್ಯ ಪುಸ್ತಕಗಳು ಕೂಡಾ ಸರಿಯಾಗಿ ಬರ್ತಾ ಇಲ್ಲ. ಮಕ್ಕಳ ಶಿಕ್ಷಣಕ್ಕೆ ಪೂರಕವಾದದ್ದು ಏನೂಮಾಡದೆ ಬರೀ ಇಂತಹ ಕೆಲಸ ಮಾಡುತ್ತಿರುವುದು ಎಷ್ಟು ಸರಿ? ಉದ್ಯೋಗ ಸಿಕ್ಕಿಲ್ಲ ಎಂದು ಒಬ್ಬ ಸೋದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಅಂದ್ರೆ ಇದಕ್ಕೆ ಏನು ಕಾರಣ. ಸರ್ಕಾರ ಜನ ವಿರೋಧಿ ನೀತಿ ಜಾರಿಗೆ ತಂದಿದೆ ಈ ಬಗ್ಗೆ ಸರ್ಕಾರ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.

    ಇನ್ನು ರೈಫಲ್ ಶಿಕ್ಷಣದ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಾ ಕಲಿಕೆಯ ಹಂತದಲ್ಲಿ ರೈಫಲ್ ಟ್ರೈನಿಂಗ್ ಕೊಡ್ಲಿಕ್ಕೆ, ಗನ್ ಹಿಡಿದುಕೊಂಡು ಸುತ್ತಾಡಿಕೊಂಡು ಹೋಗಲು ಇದೇನು ಬಿಹಾರವೋ ಅಥವಾ ಗುಜರಾತ್ ರಾಜ್ಯವೋ..? . ನಾಳೆ ಇನ್ನೊಬ್ಬರು ಬರುತ್ತಾರೆ, ಹೀಗೇ ಮಾಡುತ್ತಾರೆ. ಒಂದು ವೇಳೆ ಆತ್ಮ ರಕ್ಷಣೆ ಉದ್ದೇಶದಲ್ಲಿ ಕೊಡುವುದಾದರೆ ಇಡೀ ಸ್ಕೂಲ್ ಸೆಲೆಬಸ್‌ನಲ್ಲಿ ಎಲ್ಲರಿಗೂ ಕೊಡ್ಲಿ. ಅದಕ್ಕಂತಲೇ ಸೀಮಿತ ಅವಧಿ ಇಡಲಿ.

    ಆಯ್ದ ಮಕ್ಕಳಿಗೆ ಮಾತ್ರ ಯಾಕೆ. ಬಡವರ ಮಕ್ಕಳಿಗೆ ಕೂಡಾ ಇರಲಿ. ಅದ್ಯಾಕೆ ಬೇಡ ಇದನ್ನೆಲದಲ ಕೇಳೋರು ಯಾರೂ ಇಲ್ಲವೇ ಎಂದು ಪ್ರಶ್ನಿಸಿದರು.

    ಗೃಹಸಚಿವರಿಗೂ ಕಂಟ್ರೋಲ್ ಇಲ್ಲ, ಶಿಕ್ಷಣ ಸಚಿವರಿಗೂ ಕಂಟ್ರೋಲ್ ಇಲ್ಲ. ಸ್ವಸ್ಥ ಸಮಾಜದ ಉದ್ದೇಶವನ್ನಿಟ್ಟುಕೊಂಡು ಸರ್ಕಾರ ತಾಯಿ ಹೃದಯದಿಂದ ಎಲ್ಲರನ್ನು ಒಂದೇ ರೀತಿಯಲ್ಲಿ ನೋಡಬೇಕು. ಈ ವಿಷಯಕ್ಕೆ ಸಂಬಂಧಿಸಿ ಸೂಕ್ತ ಕ್ರಮ ಕೈಗೆತ್ತಿಕೊಂಡು ಸರ್ಕಾರ ಜನರಿಗೆ ಸ್ಪಷ್ಟನೆ ನೀಡಬೇಕು’ ಎಂದು ಹೇಳಿದರು.

    ಇನ್ನು ಮೊನ್ನೆ ತಾನೇ ಧಾರ್ಮಿಕ ಕಾರ್ಯಕ್ರಮದಲ್ಲಿ ‘ನನಗೆ ಮುಸ್ಲಿಂರ ಮತ ಬೇಡ, ಹಿಂದೂಗಳ ಮತವಷ್ಟೇ ಸಾಕು’ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಹೇಳಿಕೆ ಖಂಡಿಸಿ ಪ್ರತಿಕ್ರಿಯಿಸಿ ‘ಎಂಡೋಸಲ್ಫಾನ್ ಪೀಡಿತರನ್ನು ಮುಂದೆ ನಿಲ್ಲಿಸಿ ಚುನಾವಣೆ ಗೆದ್ದು, ಇದೀಗ ಎಂಡೋಸಲ್ಫಾನ್ ಪೀಡಿತರನ್ನು ಕೇಳುವ ಗತಿಯಿಲ್ಲದಂತಾಗಿದೆ.

    ನಾನು‌ ಆರೋಗ್ಯ ಸಚಿವನಾಗಿದ್ದಾಗ ತಂದಿರುವ ಯೋಜನೆ ಬಿಟ್ಟರೆ, ಅದಕ್ಕೆ ಹೊಸ ಯೋಜನೆ ಜೋಡಣೆಯಾಗಿಲ್ಲ. ಅಲ್ಲದೆ ನನ್ನ ಯೋಜನೆಯೂ ಸಮರ್ಪಕವಾಗಿ ಅನುಷ್ಠಾನವೂ ಆಗಿಲ್ಲ. ಎಂಡೋಸಲ್ಫಾನ್ ಪೀಡಿತ ಮಕ್ಕಳನ್ನು ಫ್ರೀಡಂ ಪಾರ್ಕ್ ಗೆ ಕೊಂಡೊಯ್ದು ಪ್ರತಿಭಟನೆ ಮಾಡಿದ ಅವರು, ಶಾಸಕನಾದ ಬಳಿಕ ಅವರಿಗೇನಾದರೂ ಮಾಡಿದ್ದಾರೆಯೇ? ಪರಿಪಕ್ವವಲ್ಲದ ಇಂತಹ ಮಾತಿಗೆ ನಾನು ಪ್ರತಿಕ್ರಿಯೆ ಮಾಡೋದಿಲ್ಲ.

    ಚೀಪ್ ಪಾಲಿಟಿಕ್ಸ್, ಅವರವರ ರಾಜಕೀಯ ಅವರವರದ್ದು. ಬೆಳ್ತಂಗಡಿಯ ಜನತೆ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ. ಯಾರು ಅವರಿಗೆ ಓಟ್ ಕೊಟ್ಟಿದ್ದಾರೆ ಅವರ ಕೆಲಸವಾದರೂ ಹರೀಶ್ ಪೂಂಜಾ ಮಾಡಲಿ ಎಂದು ಖಾರವಾಗಿ ನುಡಿದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending