Connect with us

ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳ ಆಶಾಕಿರಣ ತಬಸ್ಸುಮ್‍ಗೆ ಮಂಗಳೂರು ಪ್ರೆಸ್ ಕ್ಲಬ್‍ನ ವರ್ಷದ ಪ್ರಶಸ್ತಿ..!

Published

on

ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳ ಆಶಾಕಿರಣ ತಬಸ್ಸುಮ್‍ಗೆ ಮಂಗಳೂರು ಪ್ರೆಸ್ ಕ್ಲಬ್‍ನ ವರ್ಷದ ಪ್ರಶಸ್ತಿ..!

ಮಂಗಳೂರು: ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳನ್ನು ತಾಯಿಯಂತೆ ಸಲಹುವ ಮೂಲಕ ಮಾನವೀಯ ಸೇವೆ ಮಾಡುತ್ತಿರುವ ತಬಸ್ಸುಮ್ ಅವರು ಮಂಗಳೂರು ಪ್ರೆಸ್ ಕ್ಲಬ್‍ನ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರು ಕೊಣಾಜೆ ಸಮೀಪದ ನಿವಾಸಿ ತಬಸ್ಸುಮ್ ಅವರನ್ನು ಪ್ರೊ.ಬಾಲಕೃಷ್ಣ ಗಟ್ಟಿ, ಡಾ.ವಸಂತ ಕುಮಾರ್ ಪೆರ್ಲ ಮತ್ತು ಡಾ.ನಾಗವೇಣಿ ಮಂಚಿ ನೇತೃತ್ವದ ಆಯ್ಕೆ ಸಮಿತಿಯು 2019ನೇ ವರ್ಷದ ಮಂಗಳೂರು ಪ್ರೆಸ್ ಕ್ಲಬ್‍ನ ಪ್ರಶಸ್ತಿಗೆ ಬುಧವಾರ ಆಯ್ಕೆ ಮಾಡಿದೆ.

ಫೆಬ್ರವರಿ 29ರಂದು ಪ್ರಶಸ್ತಿ ಪ್ರದಾನ:

ಉರ್ವ ರಾಧಾಕೃಷ್ಣ ಮಂದಿರದ ಸಭಾಂಗಣದಲ್ಲಿ 2020ರ ಫೆಬ್ರವರಿ 29ರಂದು ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದು ತಬಸ್ಸುಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ಪ್ರೆಸ್ ಕ್ಲಬ್‍ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಬಸ್ಸುಮ್ ಪರಿಚಯ:

ಎಚ್‍ಐವಿ/ ಏಡ್ಸ್ ಎಂಬುದು ಜಗತ್ತನ್ನು ತಲ್ಲಣಗೊಳಿಸಿರುವ ಮಹಾಮಾರಿಯಾಗಿ ಪರಿಣಮಿಸಿದೆ. ಈ ಸೋಂಕಿಗೆ ಎಷ್ಟೋ ಮಂದಿ ಬಲಿಯಾಗಿದ್ದರೆ, ಇನ್ನೇಷ್ಟೋ ಮಂದಿ ಜೀವನ್ಮರಣ ಹೋರಾಟದಲ್ಲೂ ಇದ್ದಾರೆ. ಅದರಲ್ಲೂ ಯಾವುದೇ ತಪ್ಪು ಮಾಡದ ಅಮಾಯಕ ಮಕ್ಕಳು ಕೂಡಾ ಎಚ್‍ಐವಿ/ ಏಡ್ಸ್‍ಗೆ ಬಲಿಯಾಗಿದ್ದನ್ನು ನಾವು ಕಂಡಿದ್ದೇವೆ.

ಎಚ್‍ಐವಿ ಸೋಂಕಿತ ಮಕ್ಕಳನ್ನು ಅಸ್ಪ್ರಶ್ಯರಂತೆ ಕಾಣುವ, ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುವ ಅಮಾನವೀಯ ಪರಿಸ್ಥಿತಿಯ ಮಧ್ಯೆ, ಸರಕಾರೇತರ ಸ್ವಯಂಸೇವಾ ಸಂಸ್ಥೆಗಳು ಮತ್ತು ಮಾಧ್ಯಮಗಳ ನಿರಂತರ ಜನಜಾಗೃತಿಯಿಂದ ಎಚ್‍ಐವಿ/ ಏಡ್ಸ್ ಸೋಂಕು ಬಾತ ಮಕ್ಕಳನ್ನು ಸಾಕಿ ಸಲಹುವ ಕೆಲಸ ಅಲ್ಲಲ್ಲಿ ನಡೆಯುತ್ತಿದೆ.
ಬಹುತೇಕ ತಂದೆ ತಾಯಿಯನ್ನು ಕಳೆದುಕೊಂಡಿರುವ ಅಂತಹ ಅನಾಥ ಮಕ್ಕಳಿಗೆ ತಾಯಿಯಯಂತೆ ಸಲಹುವ ಮಾನವೀಯ ಕೆಲಸ ಮಾಡುತ್ತಿರುವವರು ತಬಸ್ಸುಮ್.
ಕೊಣಾಜೆ ಸಮೀಪದ ಆರ್ಥಿಕವಾಗಿ ಹಿಂದುಳಿದ ತುಂಬು ಸದಸ್ಯರ ಕುಟುಂಬದ ಅಬ್ದುಲ್ ಸಮದ್ ಮತ್ತು ಖೈರುನ್ನಿಸಾ ದಂಪತಿಯ ಪುತ್ರಿಯೇ ತಬಸ್ಸುಮ್. ಶಾಲೆ ಕಾಲೇಜಿನ ಓದಿನಲ್ಲಿ ಮುಂಚೂಣಿಯಲ್ಲಿ ಮಾತ್ರವಲ್ಲ, ಎಲ್ಲ ಪರೀಕ್ಷೆಗಳಲ್ಲೂ ಪ್ರಥಮ ಸ್ಥಾನವನ್ನೇ ತಬಸ್ಸುಂ ಪಡೆಯುತ್ತಿದ್ದರು. ಜೀವನದಲ್ಲಿ ದೊಡ್ಡ ಸಾಧನೆಗಳನ್ನು ಮಾಡಬೇಕು ಎಂಬ ಕನಸುಗಳಿದ್ದರೂ, ಮನೆಯಿಂದ ಪೂರಕ ಸಹಕಾರ ಸಿಗುತ್ತಿರಲಿಲ್ಲ. ಪದವಿ ತರಗತಿ ಆರಂಭಿಸುವಾಗಲೇ ಮದುವೆ ಮಾಡಿಕೊಡಲಾಗಿತ್ತು.
ಕೌಟುಂಬಿಕ ಜೀವನದ ನಡುವೆ, ಸಮಾಜಕ್ಕೆ ಏನಾದರೊಂದು ಮಾಡಬೇಕು ಎಂಬ ಅವರ ಹಠ ಸಾಧನೆಯಿಂದಲೇ ಇವತ್ತು ಎಚ್‍ಐವಿ/ ಏಡ್ಸ್ ಬಾತ ಹೆಣ್ಮಕ್ಕಳನ್ನು ಸಾಕಿ ಸಲಹುವ ಸ್ನೇಹದೀಪ್ ಸಂಸ್ಥೆ ಕಾರ್ಯಾಚರಿಸುವಂತಾಗಿದೆ. 2011ರಲ್ಲಿ ಅವರು ಸ್ನೇಹ ದೀಪ್ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ.
ತನ್ನ ಗೆಳತಿಯೊಬ್ಬಳು ಏಡ್ಸ್‌ಗೆ ತುತ್ತಾಗಿ ಸಾವನ್ನಪ್ಪಿ, ಅವರ ಮಕ್ಕಳು ಅನಾಥರಾಗಿದ್ದನ್ನು ಕಂಡು ಬಹಳ ಬೇಸರಗೊಂಡಿದ್ದ ಅವರು, ಅಂದೇ ಎಚ್‍ಐವಿ/ ಏಡ್ಸ್ ಪೀಡಿತ ಹೆಣ್ಣು ಮಕ್ಕಳ ಸಂಸ್ಥೆ ಸ್ಥಾಪಿಸುವ ಯೋಜನೆ ಹಾಕಿಕೊಂಡಿದ್ದರು. ಆರಂಭದಲ್ಲಿ ಎಚ್‍ಐವಿ/ ಏಡ್ಸ್ ಬಾತ ಮಕ್ಕಳ ಸೇವೆ ಮಾಡುವ ಸಂಸ್ಥೆಯನ್ನು ಸೇರಿದ್ದ ಅವರು, ಮುಂದೆ ತನ್ನಲ್ಲಿದ್ದ ದುಡ್ಡಿನಿಂದ ಸ್ನೇಹದೀಪ್ ಸಂಸ್ಥೆಯನ್ನು ಹುಟ್ಟುಹಾಕಿದ್ದರು.
ಮಂಗಳೂರಿನ ಬಿಜೈ ಬಳಿ ಕಾರ್ಯಾಚರಿಸುತ್ತಿರುವ ಸ್ನೇಹದೀಪ್‍ನಲ್ಲಿ ಎಚ್‍ಐವಿ/ ಏಡ್ಸ್‍ನಿಂದ ತಂದೆ- ತಾಯಿಗಳನ್ನು ಕಳೆದುಕೊಂಡಿರುವ ಒಂದು ವರ್ಷದಿಂದ 10-15 ವರ್ಷದ ಮಕ್ಕಳಿದ್ದಾರೆ. ಬೀದಿ ಪಾಲಾಗಲಿದ್ದ ಎಷ್ಟೋ ಮಕ್ಕಳಿಗೆ ಮಾತೃವಾತ್ಸಲ್ಯ ನೀಡಿ ಹೊಸ ಬದುಕು ಕಟ್ಟುವ ಕೆಲಸವನ್ನು ತಬಸ್ಸುಮ್ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುತ್ತಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.
ಕೆಲವು ಮಕ್ಕಳ ಜೀವನದ ಅಂತಿಮ ಕ್ಷಣದಲ್ಲಿ ಹತ್ತಿರವಿದ್ದುಕೊಂಡು ತನ್ನ ಸೇವೆ ಮಾಡುತ್ತಿದ್ದಾರೆ. ಒಂದೊಂದು ಮಗುವಿನ ಹಿಂದೆಯೂ ಕಣ್ಣೀರ ಕಥೆಗಳಿವೆ. 19 ಮಕ್ಕಳು ಅವರ ಕೈಯಲ್ಲೇ ಪ್ರಾಣ ಬಿಟ್ಟಿದ್ದು, ಅದನ್ನು ನೆನಪಿಸುವಾಗ ತಬಸ್ಸುಮ್ ದುಃಖ ತಡೆದುಕೊಳ್ಳದೇ ಕಣ್ಣೀರು ಸುರಿಸುತ್ತಾರೆ.
ಕನಿಷ್ಠ ಪಕ್ಷ ಆ ಮಕ್ಕಳಿಗೆ ಪ್ರೀತಿ ವಾತ್ಸಲ್ಯದಿಂದ ಜೀವ ಬಿಡುವ ವ್ಯವಸ್ಥೆ ಮಾಡಿದ ತೃಪ್ತಿ ತಬಸ್ಸುಮ್ ಅವರದ್ದು. ಅಲ್ಲದೆ, ಆಯಾ ಮಕ್ಕಳಿಗೆ ಅವರವರ ಧರ್ಮಕ್ಕನುಗುಣವಾಗಿ ಗೌರವಯುತ ಅಂತಿಮ ಸಂಸ್ಕಾರ ಮಾಡಿಸುವ ಜವಾಬ್ದಾರಿ ನಿರ್ವಹಿಸಿ ಕೃತಜ್ಞರಾಗುತ್ತಿದ್ದಾರೆ. ಎಲ್ಲ ಧರ್ಮದ ಮಕ್ಕಳನ್ನೂ ಜಾತಿ, ಧರ್ಮದ ಭೇದವಿಲ್ಲದೆ, ಪ್ರೀತಿ, ಆದರದಿಂದ ಸಲಹುತ್ತಿದ್ದಾರೆ.
ಸ್ನೇಹದೀಪ್‍ನಲ್ಲಿ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳ 26 ಮಕ್ಕಳು ಇದ್ದಾರೆ. ಅವರಿಗೆ ಶಿಕ್ಷಣ, ಊಟ, ವಸತಿ, ಆರೋಗ್ಯದ ಸೇವೆಯನ್ನು ತನ್ನ ಮೂವರು ಸಿಬ್ಬಂದಿಗಳ ಜತೆ ತಬಸ್ಸುಮ್ ಮಾಡಿಸುತ್ತಿದ್ದಾರೆ. ಎಲ್ಲ ಮಕ್ಕಳು ಕೂಡಾ ತಬಸ್ಸುಮ್ ಅವರನ್ನು ತಾಯಿಯಂತೆ, ಸ್ನೇಹದೀಪ್ ಸಂಸ್ಥೆಯನ್ನು ಸ್ವಂತ ಮನೆಯಂತೆ ಕಾಣುತ್ತಿದ್ದಾರೆ. ತಬಸ್ಸುಮ್ ಅವರು ಅಂಗಡಿಯೊಂದನ್ನು ನಡೆಸುತ್ತಿದ್ದು, ಅದರಿಂದ ಬಂದ ಆದಾಯವನ್ನು ಸ್ನೇಹದೀಪ ಸಂಸ್ಥೆಗೆ ಖರ್ಚು ಮಾಡುತ್ತಿದ್ದಾರೆ. ಜತೆಗೆ ಸ್ಥಳೀಯ ಸಹೃದಯಿ ದಾನಿಗಳಿಂದ ಸಹಾಯ ಪಡೆದು ಸಂಸ್ಥೆ ನಡೆಸುತ್ತಿದ್ದಾರೆ.
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಸಂಸ್ಥೆಗೆ ದಾನಿಗಳಿಂದ ನೆರವು ಪಡೆಯುತ್ತಿದ್ದಾರೆ. ಅನೇಕ ಕಷ್ಟದ ಸಂದರ್ಭಗಳು ಬಂದರೂ, ಅದನ್ನು ಎದೆಗುಂದದೆ ನಿಭಾಯಿಸಿಕೊಂಡು ಸ್ನೇಹ ದೀಪ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ವಿಡಿಯೋಗಾಗಿ..

Click to comment

Leave a Reply

Your email address will not be published. Required fields are marked *

FILM

ಕಿರುತೆರೆಯಿಂದ ಹಿರಿತೆರೆಗೆ ಲಗ್ಗೆ ಇಟ್ಟ ‘ಪಾರು’ ಧಾರಾವಾಹಿ ನಟ ‘ಆದಿ’!

Published

on

ಕನ್ನಡ ಕಿರುತೆರೆಯಲ್ಲಿ ಸದ್ದು ಮಾಡಿದ್ದ ಧಾರಾವಾಹಿಗಳಲ್ಲಿ ‘ಪಾರು’ ಕೂಡಾ ಒಂದು. ಆದಿ – ಪಾರು ಪ್ರೇಮಕಥೆ, ಅಖಿಲಾಂಡೇಶ್ವರಿ ಎಂಬ ಹಿರಿಮೆ ಎಲ್ಲವೂ ಧಾರಾವಾಹಿಯ ಜೀವಾಳವಾಗಿತ್ತು. ಈ ಧಾರಾವಾಹಿಗೆ ಸಿಕ್ಕಾಪಟ್ಟೆ ಅಭಿಮಾನಿಗಳು ಇದ್ದಾರೆ.

ಕಿರುತೆರೆಯಲ್ಲಿ ಸುಮಾರು ಆರು ವರ್ಷಗಳ ಈ ಧಾರಾವಾಹಿ ಪ್ರಸಾರವಾಗಿದೆ. ಈ ಧಾರಾವಾಹಿಯಲ್ಲಿ ಪಾರು ಪಾತ್ರದಿಂದ ಮೋಕ್ಷಿತಾ ಪೈ ತಮ್ಮ ಸಹಜ ಅಭಿನಯದಿಂದ ಗಮನ ಸೆಳೆದಿದ್ದರು. ಹಾಗೆಯೇ ಆದಿ ಪಾತ್ರದಿಂದ ನಟ ಶರತ್ ಪದ್ಮನಾಭ್ ಕೂಡ ಅಭಿಮಾನಿಗಳನ್ನು ಗಳಿಸಿದ್ದಾರೆ.

ಜೀ ಕನ್ನಡದಲ್ಲಿ ಬರುತ್ತಿದ್ದ ಪಾರು ಸೀರಿಯಲ್ ಈಗ ಅಂತ್ಯ ಕಂಡಿದೆ. ಈ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಅಂದರೆ ಶರತ್ ಪದ್ಮನಾಭ್ ಹಿರಿತೆರೆ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಬೆಳ್ಳಿಪರದೆ ಮೇಲೆ ‘ಆದಿ’

ಹೌದು, ನಟ ಶರತ್ ಪದ್ಮನಾಭ್ ನಾಯಕನಾಗಿ ಬೆಳ್ಳಿ ಪರದೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಹೆಸರು ‘ಅನಿಮಾ’. ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ನಿರ್ದೇಶಕ ವರ್ಧನ್ ಎಂ ಎಚ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ‘ಅನಿಮಾ’ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.

ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗುತ್ತಿದ್ದು, ಅನಿಮಾ ಸಿನಿಮಾದ ಚಿತ್ರೀಕರಣ ಕೊನೆ ಹಂತದಲ್ಲಿದೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಎನ್ನಲಾಗಿದೆ. ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗಲೇ ಶೂಟಿಂಗ್ ನಡೆಸಲಾಗುತ್ತಿದೆ.

ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ. ಸಿನಿಮಾ ಪೋಸ್ಟರ್ ಅನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟ ಶರತ್ ಪದ್ಮನಾಭ್ ಹಂಚಿಕೊಂಡಿದ್ದಾರೆ.


” ಅನಿಮಾ, ನಮ್ಮ ಸಿನಿಮಾ, ನಿಮ್ಮ ಸಿನಿಮಾ ಆಗುವ ಮೊದಲ ಹೆಜ್ಜೆ!! Presenting you the title poster of our movie !! ಒಂದು ರೋಚಕವಾದ ಕಥೆಯನ್ನು ಹೇಳಲು ಆದಷ್ಟು ಬೇಗ ಬರ್ತಾ ಇದೀವಿ !! ನಮ್ಮ ತಂಡಕ್ಕೆ ನಿಮ್ಮ ಬೆಂಬಲವಿರಲಿ” ಎಂದು ಮನವಿ ಮಾಡಿಕೊಂಡಿದ್ದಾರೆ.

ಅನುಷಾ ಕೃಷ್ಣ ನಾಯಕಿ

ಅನಿಮಾ ಚಿತ್ರದಲ್ಲಿ ಶರತ್ ಪದ್ಮನಾಭ್ ಗೆ ನಾಯಕಿಯಾಗಿ ಅನುಷಾ ಕೃಷ್ಣ ಜೊತೆಯಾಗಿದ್ದಾರೆ. ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಎನ್ ಕೆ ರಾಜ್ ಛಾಯಾಗ್ರಹಣ, ವಿರಾಜ್ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್ ಸಂಗೀತ ಚಿತ್ರಕ್ಕಿದೆ.

Continue Reading

LATEST NEWS

ಆಭರಣ ಪ್ರಿಯರಿಗೆ ನಿರಾಸೆ….ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ…!

Published

on

ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು(ಮಾ.29)  ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ.

ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.

ಎಷ್ಟಿದೆ ಬೆಲೆ ?
ಸದ್ಯ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 61,700 ರೂಪಾಯಿ ಇದ್ದು, 24 ಕ್ಯಾರೆಟ್​ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 67,310 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 7,750 ರೂಪಾಯಿ ಇದೆ.

ಒಂದು ಗ್ರಾಂ ಚಿನ್ನದ ದರ
22 ಕ್ಯಾರೆಟ್ ಚಿನ್ನದ ದರ – 6,170 ರೂಪಾಯಿ
24 ಕ್ಯಾರೆಟ್ ಚಿನ್ನದ ದರ – 6,731 ರೂಪಾಯಿ

10 ಗ್ರಾಂ ಚಿನ್ನದ ದರ

22 ಕ್ಯಾರೆಟ್ ಆಭರಣ ಚಿನ್ನದ ದರ – 61,700 ರೂಪಾಯಿ
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – 67,310 ರೂಪಾಯಿ

8 ಗ್ರಾಂ ಚಿನ್ನದ ದರ
22 ಕ್ಯಾರೆಟ್ ಆಭರಣ ಚಿನ್ನದ ದರ – 49,360 ರೂಪಾಯಿ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
ಬೆಂಗಳೂರು- 61,700 ರೂಪಾಯಿ
ಚೆನ್ನೈ – 62,500 ರೂಪಾಯಿ
ಮುಂಬೈ – 61,700 ರೂಪಾಯಿ
ಕೇರಳ -61,700 ರೂಪಾಯಿ
ಕೋಲ್ಕತ್ತಾ – 61,700 ರೂಪಾಯಿ
ಜೈಪುರ್ -61,850 ರೂಪಾಯಿ
ಭುವನೇಶ್ವರ್- 61,700 ರೂಪಾಯಿ
ಅಹ್ಮದಾಬಾದ್- 61,750 ರೂಪಾಯಿ
ಲಕ್ನೋ – 61,850 ರೂಪಾಯಿ
ನವದೆಹಲಿ – 61,850 ರೂಪಾಯಿ

ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ಬೆಂಗಳೂರು-7,750 ರೂಪಾಯಿ
ಚೆನ್ನೈ- 8,050 ರೂಪಾಯಿ
ಮುಂಬೈ-7,750 ರೂಪಾಯಿ
ಕೋಲ್ಕತ್ತಾ-7,750 ರೂಪಾಯಿ
ನವದೆಹಲಿ-7,750 ರೂಪಾಯಿ

Continue Reading

LATEST NEWS

ಏಪ್ರಿಲ್ 3 ರ ವರೆಗೆ ಭಾರೀ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ?

Published

on

ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್‌ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?

ಮಾರ್ಚ್ 29 ಮತ್ತು 30 ರಂದು ಪಶ್ಚಿಮ ಹಿಮಾಲಯ ಪ್ರದೇಶದ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಮಾರ್ಚ್ 29 ರಿಂದ 31 ರ ವರೆಗೆ ವಾಯುವ್ಯ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಸಾಧರಾಣ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?

ಚಂಡಮಾರುತದ ಪರಿಣಾಮವಾಗಿ, ಬಿಹಾರದ, ದಕ್ಷಿಣ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 3ರ ವರೆಗೆ ಆರ್ದ್ರ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಬಿಹಾರ ಮತ್ತು ಜಾರ್ಖಂಡ್‌ಗಳು ಮುಂದಿನ ಕೆಲವು ದಿನಗಳವರೆಗೆ ಮಳೆ ಸಾಧ್ಯತೆ ಇದೆ.

ಮಾರ್ಚ್ 31 ರಂದು ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳ ವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

ಇದಲ್ಲದೆ, ಅರುಣಾಚಲ ಪ್ರದೇಶದದಲ್ಲಿ ಏಪ್ರಿಲ್ 1 ರಂದು ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Continue Reading

LATEST NEWS

Trending