BELTHANGADY
ಬೆಳ್ತಂಗಡಿ: ಟೈಲರ್ಸ್ ಅಸೋಸಿಯೇಷನ್ ವತಿಯಿಂದ ಟೈಲರ್ಸ್ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ
ಬೆಳ್ತಂಗಡಿ: ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಟೈಲರ್ಸ್ ವೃತ್ತಿ ಭಾಂದವರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 10 ರಂದು ಬೆಳ್ತಂಗಡಿ ಜೇಸಿ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಬೆಸ್ಟ್ ಫೌಂಡೇಷನ್ ಅಧ್ಯಕ್ಷರು ಹಾಗೂ ತಾಲೂಕಿನ ಯುವ ನಾಯಕರಾದ ರಕ್ಷಿತ್ ಶಿವರಾಮ್ ರವರು ‘ಓದುವ ಮಕ್ಕಳಿಗೆ ಬಡತನ ಅನ್ನೋದು ಅಡ್ಡಿಯಾಗಬಾರದು.ಎಷ್ಟೇ ಕಷ್ಟವಾದರೂ ಪ್ರತಿಯೊಂದು ಮನೆಯ ಮಕ್ಕಳು ಸಹ ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಉದ್ಯೋಗವನ್ನು ಪಡೆಯುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಅಭಿಪ್ರಾಯ ಪಟ್ಟರು.
ಬೆಳ್ತಂಗಡಿ ವಲಯ ಸಮಿತಿಯ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಟೈಲರ್ಸ್ ವೃತ್ತಿ ಭಾಂದವರು ಸಂಘಟನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡಾಗ ಸರಕಾರದ ಸೌಲಭ್ಯ ಪಡೆಯಲು ನೆರವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸಮಿತಿಯ ಅಧ್ಯಕ್ಷ ಜಯಂತ್ ಉರ್ಲಂಡಿ ಗುರುತಿನ ಚೀಟಿ ಬಿಡುಗಡೆ ಮಾಡಿದರು.55 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡಿದ ರಕ್ಷಿತ್ ಶಿವರಾಮ್ ರವರನ್ನು ಟೈಲರ್ಸ್ ವಲಯ ಸಮಿತಿಯಿಂದ ಅಭಿನಂದಿಸಲಾಯಿತು.
ಟೈಲರ್ಸ್ಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರಕಾರದ ಗಮನ ಸೆಳೆಯಲು ಜುಲೈ 26ರಂದು ರಾಜ್ಯಾದ್ಯಂತ ನಡೆಯುವ ಪ್ರತಿಭಟನೆಯ ಮನವಿ ಪತ್ರವನ್ನು ರಕ್ಷಿತ್ ಶಿವರಾಮ್ ಬಿಡುಗಡೆ ಮಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಗೊಧರ್ ಕೆ.,ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ಶಾಂಭವಿ .ಪಿ.ಬಂಗೇರ, ಜಿಲ್ಲಾ ಸಮಿತಿಯ ಸದಸ್ಯರಾದ ಕುಶಾಲಪ್ಪ ಗೌಡ,ವಲಯ ಕಾರ್ಯದರ್ಶಿ ಶಶಿಕಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯರಾದ ವಸಂತ ಟೈಲರ್ ವಿಶ್ವಾಸ್,ನವೀನ್ ಟೈಲರ್,ವಸಂತ ಟೈಲರ್ ಸ್ವಾತಿ,ಪ್ರಶಾಂತ್ ಟೈಲರ್ ಕೊಕ್ಕಡ ಮುಂತಾದ ಗಣ್ಯರು ಮಹಿಳಾ ಟೈಲರ್ಸ್ ವೃತ್ತಿ ಭಾಂದವರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಹರಿಣಿ ಪ್ರಾರ್ಥಿಸಿದರು. ಸುರೇಖಾ ಸ್ವಾಗತಿಸಿದರು. ಕ್ಷೇತ್ರ ಸಮಿತಿಯ ಮಾಜಿ ಕಾರ್ಯದರ್ಶಿ ಸದಾನಂದ ಸಾಲಿಯಾನ್ ಬಳಂಜ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು. ಹರೀಶ್.ಜಿ.ವಿ.ಸವನಾಲ್ ಸಹಕರಿಸಿದರು.
BELTHANGADY
ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪ*ಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.
ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.
BELTHANGADY
ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.
ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು