LATEST NEWS
ಶಾಲಾ ಗೇಟ್ ಬಳಿ ಬುರ್ಖಾ-ಸ್ಕಾರ್ಫ್ ಬಿಚ್ಚಿಸಿದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಸಿಎಫ್ಐ ಆಗ್ರಹ
ಉಡುಪಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ದುರ್ಬಳಕೆ ನಡೆಸಿಕೊಂಡು ರಾಜ್ಯಾದ್ಯಂತ ಹಲವಾರು ವಿದ್ಯಾರ್ಥಿನಿಯರಿಗೆ ಶಾಲೆಗೆ ನಿರ್ಬಂಧಿಸಲಾಗಿದ್ದು,
ಇದು ಅಸಹ್ಯಕರವಾಗಿದೆ ಹಾಗೂ ಈ ನಿರ್ಬಂಧ ವಿಧಿಸಿದ ಶಿಕ್ಷಕರ ವಿರುಧ್ದ ಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ.
ಉಡುಪಿ ಹಿಜಾಬ್ ಪ್ರಕರಣವು ಹೈಕೋರ್ಟ್ನಲ್ಲಿ ವಿಚಾರಣೆಯಾಗುತ್ತಿದೆ. ಈ ಮಧ್ಯೆ ನ್ಯಾಯಾಲಯವು ಫೆಬ್ರವರಿ 10ರಂದು ಮಧ್ಯಂತರ ಆದೇಶವನ್ನೂ ನೀಡಿದೆ.
ಈ ಆದೇಶವು ದಾವೆ ಹೂಡಿರುವ ವಿದ್ಯಾರ್ಥಿಗಳಿಗೆ ಅಂದರೆ ಉಡುಪಿಯ ಮಹಿಳಾ ಪಿಯು ಕಾಲೇಜು ಹಾಗೂ ಕುಂದಾಪುರದ ಪಿಯು ಕಾಲೇಜು ಮತ್ತು ಸಮವಸ್ತ್ರ ಸಂಹಿತೆ ಮಾಡಿದ ಸಂಸ್ಥೆಗಳಿಗೆ ಮಾತ್ರ ಎಂದು ಆದೇಶದ ಹನ್ನೊಂದನೆ ಅಂಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ.
ಆದರೆ ಇಂದು, ಈ ಮೊದಲೇ ಶಿರವಸ್ತ್ರ ಧರಿಸುತ್ತಿದ್ದ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶಾಲಾಡಳಿತ ಮಂಡಳಿ ಮತ್ತು ಶಿಕ್ಷಕರು ಶಾಲಾ ಆವರಣದ ಮುಂಭಾಗದಲ್ಲೇ ತಡೆದು ಹೆದರಿಸಿ
ಸ್ಕಾರ್ಫ್ ಬಿಚ್ಚುವಂತೆ ಮತ್ತು ಕೆಲ ಮುಸ್ಲಿಂ ಶಿಕ್ಷಕಿಯರನ್ನು ಗೇಟ್ ಬಳಿಯೇ ಬುರ್ಖಾ ಬಿಚ್ಚಿಸುವ ಅಮಾನವೀಯ ಘಟನೆಗಳು ನಡೆದಿದೆ.
ಅಲ್ಲದೇ ಮಹಿಳೆಯರ ಖಾಸಗಿ ವಿಚಾರಗಳನ್ನು ಮಾಧ್ಯಮವೂ ಕೂಡ ಬೇಕಾ ಬಿಟ್ಟಿ ಪ್ರಸಾರ ಮಾಡಿದೆ. ಇನ್ನೊಂದುಕಡೆ ಮಾಧ್ಯಮ ಪ್ರತಿನಿಧಿಗಳು ಪರೀಕ್ಷಾ ಕೊಠಡಿಯೊಳಗೆ ಮತ್ತು ತರಗತಿ,
ಶಿಕ್ಷಕರ ಕೊಠಡಿಯೊಳಗೆ ಅಕ್ರಮ ಪ್ರವೇಶಿಸಿ ವಿದ್ಯಾರ್ಥಿಗಳನ್ನು, ಶಿಕ್ಷಕಿಯರನ್ನು ವಿಡಿಯೋ ಚಿತ್ರೀಕರಿಸಿರುವುದು ಕಂಡುಬಂದಿದೆ.
ರಾಜ್ಯದ ಜನತೆಗೆ ತಪ್ಪು ಸಂದೇಶವನ್ನು ರವಾನಿಸಿದ ಕೆಲ ಮಾಧ್ಯಮಗಳಿಂದ ರಾಜ್ಯದಲ್ಲಿ ಮುಸ್ಲಿಮರು ಆತಂಕದಲ್ಲಿ ಬದುಕುವ ವಾತಾವರಣ ಸೃಷ್ಟಿಸಲಾಗುತ್ತಿದ್ದು ಮಾತ್ರವಲ್ಲದೆ ಮುಸ್ಲಿಂ ವಿದ್ಯಾರ್ಥಿನಿಯರು ಶಾಲೆಗಳಿಗೆ ತೆರಳಲು ಭಯಪಡುತ್ತಿದ್ದಾರೆ.
ಉಚ್ಛ ನ್ಯಾಯಾಲಯವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ರಾಜ್ಯದ ಜನರಿಗೆ ನೈಜ ಮತ್ತು ಸ್ಪಷ್ಟ ಮಾಹಿತಿ ತಲುಪಿಸುವ ಕುರಿತು ಕ್ರಮ ವಹಿಸಿ, ಇಂದು ವಿದ್ಯಾರ್ಥಿನಿಯರನ್ನು ಶಿರವಸ್ತ್ರ ಧರಿಸಿದ ಕಾರಣಕ್ಕೆ ತರಗತಿ
ಮತ್ತು ಪರೀಕ್ಷೆಗಳಿಗೆ ನಿರ್ಬಂಧಿಸಿದ ಸಂಬಂಧಪಟ್ಟ ಶಾಲಾ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
FILM
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.
ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.
ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.
ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.
ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!
ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.
ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM7 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!