bangalore
ಪರಿಷತ್ನಲ್ಲಿ 17 ಸದಸ್ಯರ ಪ್ರಮಾಣ ವಚನ..!
ಬೆಂಗಳೂರು : ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸದಸ್ಯರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ನೂತನ ಸದಸ್ಯರಿಗೆ ಮುಖ್ಯಮತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕಾನೂನು ಹಾಗೂ ಸಂಸದೀಯ ಸಚಿವ ಹೆಚ್ಕೆ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಒಟ್ಟು 17 ಸದಸ್ಯರು ನೂತನವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ಗೆ 11 ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ 6 ಮಂದಿ ಆಯ್ಕೆಯಾಗಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾದವರು
ಕಾಂಗ್ರೆಸ್ನಿಂದ ಐವನ್ ಡಿಸೋಜಾ, ಕೆ ಗೋವಿಂದರಾಜು, ಜಗದೇವ್ ಗುತ್ತೆದಾರ್, ಬಲ್ಕಿಸ್ ಬಾನು, ಎನ್ ಎಸ್ ಭೋಸರಾಜ್, ಯತೀಂದ್ರ ಸಿದ್ದರಾಮಯ್ಯ, ಎ ವಸಂತ ಕುಮಾರ್, ಬಿಜೆಪಿಯಿಂದ ಎನ್ ರವಿಕುಮಾರ್, ಸಿಟಿ ರವಿ, ಮುಳೆ ಮಾರುತಿರಾವ್, ಜೆಡಿಎಸ್ನಿಂದ ಜವರಾಯಿಗೌಡ ಆಯ್ಕೆಯಾಗಿದ್ದಾರೆ.
ಶಿಕ್ಷಕ ಹಾಗೂ ಪಧವಿದರ ಕ್ಷೇತ್ರದಿಂದ ಆಯ್ಕೆಯಾದವರು
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಗೆದ್ದ ಚಂದ್ರಶೇಖರ್ ಬಸವರಾಜ್ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ರಾಮೋಜಿಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಡಿ ಟಿ ಶ್ರೀನಿವಾಸ್, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಎಸ್ಎಲ್ ಭೋಜೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ನ ಕೆ ವಿವೇಕಾನಂದ ಪ್ರಮಾಣ ವಚನ ಸ್ವೀಕರಿಸಿದರು.
bangalore
ಗೋಬಿ ಮಂಚೂರಿ ಆಯ್ತು..! ಈಗ ಚಿಕನ್ ಕಬಾಬ್, ಫಿಶ್ ಫುಡ್ ಮೇಲೆ ಕಣ್ಣು…!
ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.
ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.
bangalore
ಬೆಂಗಳೂರು ನಮ್ಮ ಮೆಟ್ರೋದಲ್ಲಿ ಕಪಲ್ ‘ರೊಮ್ಯಾನ್ಸ್..’! ಪ್ರಿಯತಮಗೆ ಚುಂಬಿಸಿದ ಯುವತಿ.!!ವೀಡಿಯೋ ವೈರಲ್
ಬೆಂಗಳೂರು: ಅಗಾಗ ದೆಹಲಿ ಮೆಟ್ರೋದಲ್ಲಿ ಪ್ರೇಮಿಗಳ ಆಲಿಂಗನದ ವೀಡಿಯೋ ವೈರಲ್ ಆಗುತ್ತಲೇ ಇದೆ. ಇದೀಗ ಬೆಂಗಳೂರಿನಲ್ಲಿಯೂ ಇಂಥದ್ದೇ ಒಂದು ಘಟನೆ ಮರುಕಳಿಸಿದೆ. ಕಪಲ್ಸ್ ಇಬ್ಬರು ಒಬ್ಬರನೊಬ್ಬರು ತಬ್ಬಿಕೊಂಡು ರೊಮ್ಯಾನ್ಸ್ ಮಾಡುತ್ತಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು ನಮ್ಮ ಮೆಟ್ರೋದ ಬಾಗಿಲಿನ ಬಳಿ ಯುವತಿ-ಯವಕರಿಬ್ಬರೂ ನಿಂತುಕೊಂಡಿದ್ದು ಒಬ್ಬರನೊಬ್ಬರು ತಬ್ಬಿಕೊಂಡಿದ್ದಾರೆ. ಯುವತಿ ಯುವಕನ ಕೆನ್ನೆಗೆ ಮುತ್ತು ನೀಡಿದ್ದಾಳೆ. ಈ ದೃಶ್ಯವನ್ನು ಮೆಟ್ರೋದಲ್ಲಿದ್ದ ಪ್ರಯಾಣಿಕರೋರ್ವರ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಈ ವಿಡಿಯೋವನ್ನು KPSB 52 ಎಂಬ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ‘ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ’ ಎಂದು ಪ್ರಶ್ನಿಸಿದ್ದಾರೆ. ಇನ್ನು ಮೆಟ್ರೋದಲ್ಲಿದ್ದ ಇತರ ಪ್ರಯಾಣಿಕರು ಈ ಜೋಡಿಯ ರೋಮ್ಯಾನ್ಸ್ನಿಂದಾಗಿ ಮುಜುಗರಕ್ಕೊಳಗಾಗಿದ್ದಾರೆ.
Read More..; 15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!
ದೆಹಲಿಯಲ್ಲೂ ನಡೆದಿತ್ತು ಈ ಘಟನೆ:
ಈ ಹಿಂದೆ ದೆಹಲಿಯ ಮೆಟ್ರೋ ಸ್ಟೇಷನ್ ನಲ್ಲಿ ದಂಪಂತಿ ರೊಮ್ಯಾನ್ಸ್ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿತ್ತು. ದಂಪತಿ ಮೈಮರೆತು ರೋಮ್ಯಾನ್ಸ್ ಮಾಡಿಕೊಂಡು ತಮ್ಮದೇ ಲೋಕದಲ್ಲಿ ಮುಳುಗಿ ಹೋಗಿದ್ದರು. ಅಲ್ಲದೇ ಇಬ್ಬರೂ ಲಿಪ್ಲಾಕ್ ಕೂಡಾ ಮಾಡಿದ್ದಾರೆ. ದಂಪತಿಯ ಸರಸಸಲ್ಲಾಪವನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬ ವೀಡಿಯೋ ಮಾಡಿದ್ದಾನೆ. ಇನ್ನು ದೆಹಲಿಯಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು ಜನರನ್ನು ಮುಜುಗರಕ್ಕೆ ಒಳಪಡಿಸುತ್ತಿದೆ. ಈ ಬಗ್ಗೆ ಮೆಟ್ರೋ ಆಡಳಿತ ಮಂಡಳಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದರೂ ಜನರು ಮಾತ್ರ ಕ್ಯಾರೇ ಅನ್ನುತ್ತಿಲ್ಲ.
bangalore
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.
ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.
ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
- LATEST NEWS6 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- LATEST NEWS3 days ago
ಪ್ರೀತಂ ಗೌಡ ಸೇರಿ ನಾಲ್ವರ ಮೇಲೆ ಎಫ್ಐಆರ್..! ಪ್ರಜ್ವಲ್ ಗೆ ಮತ್ತೊಂದು ಸಂಕಷ್ಟ
- DAKSHINA KANNADA4 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- LATEST NEWS7 days ago
ನಟ ದರ್ಶನ್ ಅಭಿಮಾನಿಯ ವಿರುದ್ಧ ಬಿತ್ತು ಕೇಸ್