HomeLATEST NEWS'ಮೊದಲು ಹಿಂಸಿಸುತ್ತಾರೆ, ಮತ್ತೆ ಹಸಿದ ನಾಯಿಗಳಿಗೆ ಎಸೆಯುತ್ತಾರೆ' ತಾಲಿಬಾನಿ ಶಿಕ್ಷೆ ಅನುಭವಿಸಿದ ಮಹಿಳೆಯ ಮಾತು

‘ಮೊದಲು ಹಿಂಸಿಸುತ್ತಾರೆ, ಮತ್ತೆ ಹಸಿದ ನಾಯಿಗಳಿಗೆ ಎಸೆಯುತ್ತಾರೆ’ ತಾಲಿಬಾನಿ ಶಿಕ್ಷೆ ಅನುಭವಿಸಿದ ಮಹಿಳೆಯ ಮಾತು

ನವದೆಹಲಿ: “ಘಜ್ನಿಯಲ್ಲಿ ನಾನು ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ತಾಲಿಬಾನ್​ ಉಗ್ರರು ನನ್ನನ್ನು ಸುತ್ತುವರೆದರು. ನನ್ನ ಐಡಿ ಕಾರ್ಡ್​ ನೋಡಿದ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, ಕ್ರೂರಿಗಳು ನನ್ನ ಕಣ್ಣಿಗೆ ಮಾರಕಾಸ್ತ್ರದಿಂದ ಇರಿದು ಕಣ್ಣು ಕಿತ್ತರು ತಾಲಿಬಾನಿಗಳು ಮೊದಲು ನಮ್ಮನ್ನು ಹಿಂಸಿಸುತ್ತಾರೆ. ಬಳಿಕ ನಮ್ಮ ದೇಹವನ್ನು ನಾಯಿಗಳಿಗೆ ಆಹಾರವಾಗಲು ಎಸೆಯುತ್ತಾರೆ. ನಾನು ಬದುಕಿರುವುದೇ ನನ್ನ ಅದೃಷ್ಟ’ ಇದು ಅಫಘಾನಿನಲ್ಲಿ ನರಕ ಯಾತನೆ ಅನುಭವಿಸಿದ ಖತೇರಾ ಮಾತು.


ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಾಲಿಬಾನಿಗಳಿಂದ ದೌರ್ಜನ್ಯದಿಂದ ಕಣ್ಣು ಕಳೆದುಕೊಂಡ ಮಹಿಳೆಯೊಬ್ಬರು ದೆಹಲಿಗೆ ಬಂದು ಉಗ್ರ ಸಂಘಟನೆಯ ಭಯಾನಕತೆಯನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುತ್ತಾರೆ. ತಾಲಿಬಾನಿಗಳ ದೃಷ್ಟಿಯಲ್ಲಿ ಮಹಿಳೆಯರೆಂದರೆ ಬದುಕುವ, ಉಸಿರಾಡುವ ಜೀವಿಗಳಲ್ಲ. ಕೇವಲ ಮಾಂಸ ತುಂಬಿದ ದೇಹವಷ್ಟೇ. ಮಹಿಳೆಯರನ್ನು ಮನಬಂದಂತೆ ಹಿಂಸಿಸಿ ಕೊಂದು, ಅವರ ದೇಹವನ್ನ ನಾಯಿಗೆ ಎಸೆಯುತ್ತಾರೆ.
ಅಫ್ಘಾನಿಸ್ತಾನದ ಖತೇರಾ ಎಂಬ ಮಹಿಳೆ ತಮ್ಮ ಕಹಿ ನೆನಪುಗಳನ್ನು ಹೇಳುತ್ತಾ ಹೋದರು. ಆಕೆಗೆ ಈ ಶಿಕ್ಷೆ ಅನುಭವಿಸುವ ವೇಳೆ ಎರಡು ತಿಂಗಳ ಗರ್ಭಿಣಿ. ಆಕೆಯ ತಂದೆ ತಾಲಿಬಾನ್​ ಸಂಘಟನೆಯ ಮಾಜಿ ಸದಸ್ಯನಾಗಿದ್ದು, ಆಕೆಯ ಮೇಲೆ ದಾಳಿ ನಡೆಸಲು ಅವರೇ ಪಿತೂರಿ ನಡೆಸಿದ್ದಾರೆ ಎಂದು ಆಕೆ ದೂರಿದಳು.
ಕಳೆದ 20 ವರ್ಷಗಳಲ್ಲಿ ಮಹಿಳೆಯರು ಮತ್ತು ಯುವಕರು ಜೀವನೋಪಾಯಕ್ಕಾಗಿ ಸೂಕ್ತ ಶಿಕ್ಷಣ ಪಡೆಯುತ್ತಿದ್ದರು. ವಿಶ್ವವಿದ್ಯಾಲಯಗಳಲ್ಲಿ ಮಹಿಳೆಯರೇ ತುಂಬಿರುತ್ತಿದ್ದರು. ಆದರೆ ಈಗ ತಾಲಿಬಾನಿಗಳಿಂದ ರಕ್ಷಿಸಲು ಮಹಿಳೆಯರ ಶೈಕ್ಷಣಿಕ ಪ್ರಮಾಣಪತ್ರಗಳನ್ನೇ ಕುಟುಂಬಸ್ಥರು ಸುಡುತ್ತಿದ್ದಾರೆ. ತಾಲಿಬಾನ್ ಉಗ್ರರು ಮಹಿಳೆಯರಿಗೆ ಪುರುಷ ವೈದ್ಯರನ್ನೂ ಭೇಟಿ ಮಾಡಲು ಅವಕಾಶ ನೀಡುವುದಿಲ್ಲ. ವಿದ್ಯಾಭ್ಯಾಸ, ಉದ್ಯೋಗಕ್ಕೂ ಬಿಡುವುದಿಲ್ಲ. ಹೀಗಿದ್ದ ಮೇಲೆ ಅಲ್ಲಿ ಮಹಿಳೆಯರಿಗೆ ಸಾವು ಬಿಟ್ಟು ಬೇರೇನಾದರೂ ಉಳಿದಿದೆಯೇ ಎಂದು ಖತೇರಾ ನೋವು ತೋಡಿಕೊಂಡಿದ್ದಾರೆ.
ಕಾಬೂಲ್​ನಿಂದ ತಪ್ಪಿಸಿಕೊಂಡು ದೆಹಲಿಗೆ ಬಂದಿರುವ ಖತೇರಾ ಇದೀಗ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆಕೆಯ ಪತಿ ಹಾಗೂ ಮಗು ಕೂಡ ದೆಹಲಿಯಲ್ಲಿದ್ದಾರೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...