Connect with us

    BANTWAL

    ಬಂಟ್ವಾಳ : ತ*ಲವಾರು ದಾ*ಳಿ, ಕೊ*ಲೆ ಪ್ರಕರಣ; ಡಿಐಜಿ ಅಮೀತ್ ಸಿಂಗ್ ಪರಿಶೀಲನೆ

    Published

    on

    ಬಂಟ್ವಾಳ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ಮೇಲೆ ತ*ಲವಾರು ದಾಳಿ ನಡೆಸಿ ಕೊ*ಲೆಯತ್ನ ಮಾಡಿರುವ ಪ್ರಕರಣ ಫರಂಗಿಪೇಟೆ ಸಮೀಪದ ಅಮ್ಮೆಮಾರ್‌ ಶಾಲಾ ಬಳಿ ನಡೆದಿದ್ದು, ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅಮ್ಮೆಮಾರಿನ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಉಪಮಹಾನಿರೀಕ್ಷಕ(ಡಿಐಜಿ) ಅಮಿತ್‌ ಸಿಂಗ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಅವರು ಜತೆಗಿದ್ದು, ಮುಂದಿನ ತನಿಖೆಯ ಕುರಿತು ಡಿಐಜಿ ಅವರು ಸಲಹೆ-ಸೂಚನೆಗಳನ್ನು ನೀಡಿದರು. ಘಟನೆಗೆ ಸಂಬಂಧಿಸಿ ಸುಮಾರು 14 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ಡಿವೈಎಸ್‌ಪಿಯವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನೂ ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.

    ತಲವಾರಿ ದಾಳಿಗೆ ಸಂಬಂಧಿಸಿ ಸಿಸಿ ಕ್ಯಾಮರಾ ವಿಡಿಯೋ ಕೂಡ ಇಲಾಖೆಗೆ ಲಭ್ಯವಾಗಿದ್ದು, ದುಷ್ಕರ್ಮಿಗಳ ತಂಡ ತಲವಾರು ಹಿಡಿದು ಬೀಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಈ ಘಟನೆಯನ್ನು ಪೊಲೀಸ್‌ ಇಲಾಖೆ ಮಟ್ಟ ಹಾಕದೇ ಇದ್ದಲ್ಲಿ ಕಾನೂನು ಸುವಸ್ಥೆಗೆ ಹದಗೆಡುವ ಆತಂಕವೂ ಎದುರಾಗಿದ್ದು, ಹೀಗಾಗಿ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿ ಆ*ರೋಪಿಗಳನ್ನು ಮಟ್ಟ ಹಾಕುವ ವಿಶ್ವಾಸ ವ್ಯಕ್ತಪಡಿಸಿದೆ.

    ಅ. 22ರ ರಾತ್ರಿ 11.50ರ ಸುಮಾರಿಗೆ ಘಟನೆ ನಡೆಸಿದ್ದು, ಪೂರ್ವದ್ವೇಷದ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಹಾಗೂ ಇತರರು ಅಮ್ಮೆಮಾರ್‌ ನಿವಾಸಿಗಳಾದ ತಸ್ಲಿಅಂ ಹಾಗೂ ಮಹಮ್ಮದ್‌ ಶಾಕೀರ್‌ನ ಮೇಲೆ ತಲವಾರು ದಾಳಿ ನಡೆಸಿ ಗಂಭೀರ ಗಾ*ಯಗೊಳಿಸಿದ್ದು, ಗಾ*ಯಾಳುಗಳು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BANTWAL

    ದಿ. ಜಯರಾಮ್ ಆಚಾರ್ಯ ನುಡಿ ನಮನ; ಗಣ್ಯರ ಸಂತಾಪ

    Published

    on

    ಮಂಗಳೂರು: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಜಯರಾಮ್ ಆಚಾರ್ಯ ಅವರಿಗೆ ಶೃದ್ಧಾಂಜಲಿ ಹಾಗೂ ನುಡಿ ನಮನ ಸಲ್ಲಿಸಲಾಗಿದೆ. ಉರ್ವಾ ಸ್ಟೋರ್ಸ್‌ನ ತುಳು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಜಯರಾಮ್ ಆಚಾರ್ಯ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಯಕ್ಷಗಾನದ ಹಾಸ್ಯ ಕಲಾವಿದನಾಗಿ ಯಕ್ಷಗಾನ ಕ್ಷೇತ್ರಕ್ಕೆ ಜಯರಾಮ್‌ ಆಚಾರ್ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಮಾತನಾಡಿ ಜಯರಾಮ್ ಆಚಾರ್ಯ ಎಂದೆಂದಿಗೂ ನೆನಪಿಡುವಂತ ವ್ಯಕ್ತಿತ್ವ. ಅವರು ಯಕ್ಷಗಾನದಲ್ಲಿ ಸಲ್ಲಿಸಿದ ಸೇವೆ ಮುಂದಿನ ಪೀಳಿಗೆಗೂ ಆದರ್ಶವಾಗಿದೆ. ಅವರ ಅಗಲುವಿಕೆ ಕೇವಲ ಯಕ್ಷರಂಗಕ್ಕೆ ಮಾತ್ರವಲ್ಲದೆ ಇಡೀ ಕಲಾರಂಗಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ.

    ರಂಗಭೂಮಿ ಕಲಾವಿದ ನಟ ಅರವಿಂದ ಬೋಳಾರ್ ಅವರು ಮಾತನಾಡಿ, ಜಯರಾಮ್ ಆಚಾರ್ಯ ಅವರೊಬ್ಬ ಅಪ್ಪಟ ಹಾಸ್ಯ ಕಲಾವಿದ. ಅವರು ಹಾಸ್ಯದಲ್ಲಿ ಎಂದಿಗೂ ಕೆಟ್ಟ ಪದ ಬಳಸಿದ ಉದಾಹರಣೆಯೇ ಇಲ್ಲ. ಅವರು ನಾಟಕದಲ್ಲಿ ಚಿತ್ರರಂಗದಲ್ಲಿ ಎಲ್ಲಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದಾರೆ. ಅವರೊಂದು ಎಷ್ಟು ದೊಡ್ಡ ಕಲಾವಿದ ಎಂದು ಅವರಿಗೇ ಗೊತ್ತಿರಲಿಲ್ಲ. ಹೀಗಾಗಿ ಅವರು ಎಲ್ಲರೊಂದಿಗೂ ಸಹಜವಾಗಿಯೇ ಬೆರೆಯುತ್ತಿದ್ದು, ಸಲಹೆಗಳನ್ನು ನೀಡುತ್ತಿದ್ದರು. ಅಂತಹ ವ್ಯಕ್ತಿ ಇಂದು ನಮ್ಮೊಂದಿಗಿಲ್ಲವಾದ್ರೂ ಅವರ ಮಾರ್ಗದರ್ಶನ ನಮ್ಮಲ್ಲಿ ಯಾವತ್ತೂ ಇದೆ ಎಂದು ಬಂಟ್ವಾಳ ಜಯರಾಮ್‌ ಆಚಾರ್ಯ ಅವರನ್ನು ನೆನಪಿಸಿಕೊಂಡರು.

    ಯಕ್ಷಗಾನ ಕಲಾವಿದ ಶಿಕ್ಷಕ ಬಾಸ್ಕರ್‌ ರೈ ಕುಕ್ಕುವಳ್ಳಿ ಜಯಾರಾಮ್ ಆಚಾರ್ಯ ಅವರ ಒಡನಾಟದ ದಿನವನ್ನು ಸ್ಮರಿಸಿಕೊಂಡು ಅವರ ಅಗಲುವಿಕೆಗೆ ಸಂತಾಪ ಸೂಚಿಸಿದ್ರು. ಜಯಾರಾಮ್ ಆಚಾರ್ಯ ಅವರ ಭಾಷಾ ಶುದ್ಧಿ ಹಾಗೂ ಅವರ ಹಾಸ್ಯ ಯಕ್ಷಗಾನ ಪ್ರಸಂಗಗಳನ್ನು ವಿಜ್ರಂಭಿಸುವಂತೆ ಮಾಡುತ್ತಿತ್ತು. ಒಬ್ಬ ಹಾಸ್ಯಗಾರನಾಗಿ ತನ್ನ ಎದುರಿಗಿದ್ದ ಪಾತ್ರಧಾರಿಯನ್ನು ಮೇಲೆತ್ತುವ ಕೆಲಸ ಅವರಿಂದ ಆಗುತ್ತಿತ್ತು. ಅಷ್ಟೊಂದು ಪ್ರಭಾವಶಾಲಿಯಾಗಿ ಹಾಸ್ಯಗಾರನ ಪಾತ್ರಕ್ಕೆ ಜಯಾರಾಮ್ ಆಚಾರ್ಯ ಅವರು ಜೀವ ತುಂಬುತ್ತಿದ್ದರು ಎಂದು ಸ್ಮರಿಸಿದ್ರು.

    ದಿವಂಗತ ಜಯರಾಮ್ ಆಚಾರ್ಯ ಅವರ ಅಗಲುವಿಕೆಗೆ ಸಂತಾಪ ಸೂಚಿಸಿದ ಹಲವು ಗಣ್ಯರು, ಯಕ್ಷರಂಗಕ್ಕೆ ಅವರು ಕೊಟ್ಟ ಕೊಡುಗೆಯನ್ನು ಸ್ಮರಿಸಿದ್ದಾರೆ. ಅಗಲಿದ ಜಯರಾಮ್ ಆಚಾರ್ಯ ಅವರನ್ನು ಯಕ್ಷರಂಗ ಎಂದಿಗೂ ಮರೆಯಲಾರದು ಎಂದು ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಧ್ರುವ ಪಟ್ಲ ಫೌಂಡೇಶನ್‌, ತುಳು ನಾಟಕ ಕಲಾವಿದರ ಒಕ್ಕೂಟದಿಂದ ಈ ಶೃದ್ಧಾಂಜಲಿ ನುಡಿನಮನ ಕಾರ್ಯಕ್ರಮ ನಡೆದಿದ್ದು ಹಲವು ಗಣ್ಯರು ಹಾಗೂ ಸದಸ್ಯರು ತಮ್ಮ ನುಡಿನಮನ ಸಲ್ಲಸಿದ್ದಾರೆ.

    Continue Reading

    BANTWAL

    ಬಂಟ್ವಾಳ: ತಂಡದಿಂದ ಇಬ್ಬರು ಯುವಕರಿಗೆ ಮಾರಕಾಸ್ತ್ರಗಳಿಂದ ಹಲ್ಲೆ

    Published

    on

    ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

    ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪೂರ್ವ ದ್ಚೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್ ಯಾನೆ ಮಿಚ್ಚ, ಶರ್ಫುದ್ದೀನ್, ಅಶ್ರಫ್, ರಿಝ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸಿರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಹಲ್ಲೆ ಆರೋಪಿಗಳೆಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

    ಆರೋಪಿಗಳು ತಸ್ಲೀಮ್ ಗೆ ಫೋನ್ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಅಮ್ಮೆಮಾರ್ ಶಾಲೆ ಬಳಿ ಬರುವಂತೆ ಸವಾಲು ಹಾಕಿದ್ದರೆನ್ನಲಾಗಿದೆ. ಅದರಂತೆ ತಸ್ಲೀಮ್ ಅಲ್ಲಿಗೆ ಶಾಕಿರ್ ಜೊತೆ ತೆರಳಿದಾಗ ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    BANTWAL

    ಬಂಟ್ವಾಳ: ಕಾಮಗಾರಿ ಯಂತ್ರ ಡಿ*ಕ್ಕಿ;ಪಾದಚಾರಿಗೆ ಗಾ*ಯ

    Published

    on

    ಬಂಟ್ವಾಳ: ಬಿ.ಸಿ.ರೋಡು – ಅಡ್ಡಹೊಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಗುತ್ತಿಗೆ ಸಂಸ್ಥೆಯ ಯಂತ್ರವೊಂದು ಡಿ*ಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಅ. 21ರಂದು ಮೆಲ್ಕಾರಿನ ಬೋಳಂಗಡಿಯಲ್ಲಿ ನಡೆದಿದೆ.

    ಬೋಳಂಗಡಿ ನಿವಾಸಿ ಪದ್ಮನಾಭ ಶೆಣೈ ಗಾ*ಯಾಳು ಎಂದು ಗುರುತಿಸಲಾಗಿದೆ.

    ಕಾಲಿಗೆ ಗಂ*ಭೀರ ಸ್ವರೂಪದ ಗಾ*ಯವಾಗಿರುವ ಗಾ*ಯಾಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

     

    ಇದನ್ನೂ ಓದಿ: ಬಂಟ್ವಾಳ : ರೈಲ್ವೇ ಹಳಿ ಬದಿ ರುಂ*ಡ – ಮುಂ*ಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃ*ತದೇಹ ಪ*ತ್ತೆ

     

    ಚಾಲಕ ರಾಜಕುಮಾರ ಯಾದವ್‌ ಯಂತ್ರವನ್ನು ಏಕಾಏಕಿ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಪದ್ಮನಾಭರಿಗೆ ಡಿ*ಕ್ಕಿ ಹೊಡೆದಿದೆ.

    ಘಟನೆ ಕುರಿತು ಗಾಯಾಳಿನ ಸಂಬಂಧಿ ಗುರುಪ್ರಸಾದ್‌ ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending