DAKSHINA KANNADA
ವೈರಲ್ ಆಯ್ತು ತಂದೂರಿ ಐಸ್ಕ್ರೀಮ್!
ಐಸ್ಕ್ರೀಮ್ ಅನ್ನು ಇಷ್ಟಪಡದವರು ಯಾರೂ ಇಲ್ಲ. ಇದನ್ನು ಕೋನ್, ಸ್ಕೂಪ್, ಬಾರ್ ರೀತಿಯಲ್ಲಿ ಸವಿಯಬಹುದು. ಇನ್ನು ವೆನಿಲಾ ಐಸ್ಕ್ರೀಮ್, ಸ್ಟ್ರಾಬೆರಿ, ಚಾಕೋಲೆಟ್, ಪಿಸ್ತಾ ಹೇಳುತ್ತಾ ಹೋದರೆ ವೆರೈಟಿ ವೈರೆಟಿ ಐಸ್ಕ್ರೀಮ್ಗಳ ದೊಡ್ಡ ಪಟ್ಟಿಯೇ ಇದೆ. ಬಗೆಬಗೆಯ ಐಸ್ಕ್ರೀಮ್ಗಳು ಒಂದು ಕಡೆಯಾದರೆ, ಇಲ್ಲೊಂದು ವಿಶೇಷ ಬಗೆಯ ಐಸ್ಕ್ರೀಮ್ ಇದೆ.
ವೈರಲ್ ಆಯ್ತು ತಂದೂರಿ ಐಸ್ಕ್ರೀಮ್:
ಹೌದು… ಈ ಐಸ್ಕ್ರೀಮ್ನ ಹೆಸರು ತಂದೂರಿ ಐಸ್ಕ್ರೀಮ್. ಇತ್ತೀಚಿನ ದಿನಗಳಲ್ಲಿ ಫುಡ್ ಮೇಲಿನ ಪ್ರಯೋಗಗಳು ಹೆಚ್ಚಾಗುತ್ತಿವೆ. ಐಸ್ಕ್ರೀಮ್ ಮತ್ತು ಚಾಕಲೇಟ್ ದೋಸೆ, ಜಾಮೂನ್ ದೋಸೆ, ದಹಿ ಮ್ಯಾಗಿ, ಓರಿಯೊ ಪಕೋಡಾ, ಚಾಕೊಲೇಟ್ ರೈಸ್ ಬೌಲ್, ಡ್ರೈ ಫ್ರೂಟ್ ಆಮ್ಲೆಟ್, ವೋಡ್ಕಾ ಆಲೂ ಪರಾಠ, ಡಿಸೇಲ್ ಪರೋಟ ಹೀಗೆ ವಿಚಿತ್ರ ಕಾಂಬಿನೇಷನ್ನ ಆಹಾರಗಳು, ಖಾದ್ಯ ತಿಂಡಿಗಳಲ್ಲಾಗುವ ಹೊಸ ಪ್ರಯೋಗಗಳ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದವು. ಇಂಟರ್ನೆಟ್ನಲ್ಲಿ ಇಂತಹ ಹೊಸ ಪ್ರಯೋಗಗಳು ಕಾಣ ಸಿಗುತ್ತಲೇ ಇರುತ್ತವೆ. ಈಗ ಸದ್ಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿರುವುದು ಹಾಟ್ ಹಾಟ್ ತಂದೂರಿ ಐಸ್ಕ್ರೀಮ್.
ಗ್ರಿಲ್ ಮೇಲೆ ಬೇಯುತ್ತಿದೆ ಐಸ್ಕ್ರೀಮ್:
ಬಿಸಿಲಿನ ಬೇಗೆ ತಣಿಸಿಕೊಳ್ಳಲು, ತಂಪಾಗಿರಲು ಐಸ್ಕ್ರೀಮ್ ತಿನ್ನೋದು ಸರಿ. ಆದರೆ ಈ ಐಸ್ಕ್ರೀಮ್ ನೋಡಿದರೆ ಬೇಸಿಗೆಯಲ್ಲಿ ತಿನ್ನೋದೆ ಕಷ್ಟ ಎನಿಸಿದೆ. ಗ್ರಿಲ್ ಮೇಲೆ ಬೇಯುತ್ತಿರುವ ಐಸ್ಕ್ರೀಮ್ ಈಗ ವೈರಲ್ ಆಗಿದೆ.
ಈ ತಂದೂರಿ ಐಸ್ಕ್ರೀಮ್ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೆಯಾಗಿದೆ. ವೀಡಿಯೊದಲ್ಲಿ ಒಬ್ಬ ವ್ಯಕ್ತಿಯು ನಾಲ್ಕು ಐಸ್ ಕ್ರೀಮ್ ಬಾರ್ಗಳನ್ನು ತೆಗೆದುಕೊಂಡಿದ್ದಾನೆ. ಅದರಲ್ಲಿ ಎರಡು ಚಾಕೊಲೇಟ್ ಫ್ಲೇವರ್ಗಳು ಮತ್ತು ಇತರ ಎರಡು ವೆನಿಲ್ಲಾ ಫ್ಲೇವರ್ಗಳು.
ಈ ನಾಲ್ಕು ಐಸ್ಕ್ರೀಮ್ ಬಾರ್ಗಳನ್ನು ಆ ವ್ಯಕ್ತಿ ಸೀದಾ ಬಿಸಿ ಬಿಸಿ ಕೆಂಡದಲ್ಲಿ ಉಗಿ ಹಾಯುತ್ತಿರುವ ಗ್ರಿಲ್ ಮೇಲೆ ಇರಿಸುತ್ತಾನೆ. ಆಮೇಲೆ ಸ್ವಲ್ಪ ಹೊತ್ತಿನ ಬಳಿಕ ಆ ಐಸ್ಕ್ರೀಮ್ ಮೇಲೆ ಕಲರ್ಫುಲ್ ಆಗಿರುವ ಒಂದಿಷ್ಟು ಸಿಂಪರಣೆಗಳನ್ನು ಹಾಕಿ ಆ ಐಸ್ಕ್ರೀಮ್ ಬಾರ್ಗಳನ್ನು ಅಲಂಕರಿಸುತ್ತಾನೆ.
ಫುಡ್ಬಿ..ಯುಎನ್ಕೆ ಎಂಬ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋಗೆ “ತಂದೂರಿ ಚಾಕೊ-ಬಾರ್” ಎಂದು ಕ್ಯಾಪ್ಷನ್ ನೀಡಲಾಗಿದೆ.
DAKSHINA KANNADA
ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.
ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.
DAKSHINA KANNADA
ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ
ಮಂಗಳೂರು: ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.
- ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
- ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
- ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ. - ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
- ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.
DAKSHINA KANNADA
ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಸ್ವರ್ಣಪಾದುಕೆ ಸಮರ್ಪಣೆ
ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶೃಂಗೇರಿ ಶಾರದಾಪೀಠದ ವತಿಯಿಂದ 40 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಗಿದೆ.
ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು 1974 ರಲ್ಲಿ ಸನ್ಯಾಸ ಸ್ವೀಕರಿಸಿದ್ದು, 2024 ಕ್ಕೆ 50 ವರ್ಷಗಳಾಗುತ್ತಿವೆ. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇವಳದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನು ಜೂ.19 ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಅವರು ನೀಡಿರುತ್ತಾರೆ.
Read More..; ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕ್ರಿಕೆಟಿಗ ಮಯಂಕ್ ಅಗರವಾಲ್ ಭೇಟಿ