chikkamagaluru
ಟ್ರ್ಯಾಕ್ಟರ್ಗೆ ಅಳವಡಿಸಿದ್ದ ಟ್ಯಾಂಕ್ ಕಳಚಿ ಪಿಕ್ಅಪ್ ವಾಹನಕ್ಕೆ ಢಿಕ್ಕಿ..!
ಚಿಕ್ಕಮಗಳೂರು: ಟ್ರ್ಯಾಕ್ಟರ್ಗೆ ಅಳವಡಿಸಿದ್ದ ಟ್ಯಾಂಕ್ ಕಳಚಿ ಪಿಕ್ಅಪ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಕುದುರೆ ಮುಖ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ತಿರುವಿನಲ್ಲಿ ವೇಗವಾಗಿ ಬಂದ ಟ್ರ್ಯಾಕ್ಟರ್ನಿಂದ ಕಳಚಿದ ಟ್ಯಾಂಕ್ ರಸ್ತೆಗೆ ಉರುಳಿ ಬಿದ್ದಿದೆ. ಟ್ಯಂಕ್ ಕಳಚಿ ಬಿದ್ದರೂ ಟ್ರ್ಯಾಕ್ಟರ್ ಏನು ಆಗದೆ ಮುಂದೆ ಸಾಗಿದೆ. ಈ ವೇಳೆ ಎದುರಗಡೆಯಿಂದ ಬರುತ್ತಿದ್ದ ಪಿಕ್ ವಾಹನ ಚಾಲಕ ತಕ್ಷಣ ತನ್ನ ವಾಹನವನ್ನು ಎಡಕ್ಕೆ ತೆಗೆದುಕೊಂಡಿದ್ದಾನೆ. ಪಿಕ್ ವಾಹನ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಆತ ಯಾವುದೇ ಗಾಯವಾಗದೆ ಪಾರಾಗಿದ್ದಾನೆ. ಪಿಕ್ಅಪ್ ವಾಹನಕ್ಕೆ ಸಣ್ಣ ಡ್ಯಾಮೇಜ್ ಆಗಿದೆ. ಹೆಚ್ಚಿನ ತಿರುವು ಇರುವ ಈ ರಸ್ತೆಯಲ್ಲಿ ಸ್ಥಳಿಯರಿಗೆ ಅಪಾಯಕಾರಿ ಸ್ಥಳಗಳ ಅರಿವು ಇರುವ ಕಾರಣ ಸ್ಥಳಿಯ ಪಿಕ್ಅಪ್ ವಾಹನ ಚಾಲಕ ಬಚಾವ್ ಆಗಿದ್ದಾನೆ.
chikkamagaluru
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಟಿಎಂ ಮೆಷಿನ್ಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಐ.ಜಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ನ ಎಟಿಎಂ ಗೆ ಭಾನುವಾರ(ಎ.21) ಮಧ್ಯರಾತ್ರಿ ಬೆಂಕಿ ತಗುಲಿದೆ.
ಎಟಿಎಂ ಕೊಠಡಿಯಲ್ಲಿ ಅಳವಡಿಸಿದ್ದ ಎಸಿಯಲಲ್ಲಿ ವಿದ್ಯುತ್ ಸರ್ಕ್ಯೂಟ್ ಸಂಭವಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದರಿಂದ ಎಟಿಎಂ ಮೆಷಿನ್ ಹಾಗೂ ಹಣ ತುಂಬಿಸುವ ಮೆಷಿನ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ಮೆಷಿನ್ನಲ್ಲಿದ್ದ 5.ಲಕ್ಷ ರೂಪಾಯಿ ಸುಟ್ಟು ಕರಕಲಾಗಿ ಹೋಗಿದೆ. ಎಟಿಎಂ ಮೆಷಿನ್ ಮೇಲಿನ ಭಾಗದಲ್ಲಿ ಕರ್ನಾಟಕ ಬ್ಯಾಂಕ್ ಇದ್ದು ಅದೃಷ್ಟವಶಾತ್ ಭಾರೀ ಅಪಾಯ ತಪ್ಪಿದಂತಾಗಿದೆ.
READ MORE..; ಮಲ್ಪೆ ಬೀಚ್ನಲ್ಲಿ ಮುಳುಗಿ ಯುವಕ ಮೃತ್ಯು.. ಮಂಡ್ಯ ಯುವಕನ ದುರಂತ ಅಂತ್ಯ..!
ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್ ಅಗ್ನಿಶಾಮಕ ದಳಕ್ಕೆ ತಿಳಿಸಿದೆ. ಮಾಹಿತಿ ಬಂದ ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
chikkamagaluru
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!
ಮಂಗಳೂರು : ಬಿಸಿಲಿನ ಬೇಗೆಯಿಂದ ಭೂಮಿಯೇ ಬಾಯಿಬಿಟ್ಟಂತಾಗಿದ್ದು, ನೀರಿಗಾಗಿ ಜನರ ಹಾಹಾಕಾರ ಮುಗಿಲು ಮುಟ್ಟಿತ್ತು. ಜಾನುವಾರುಗಳು ಪ್ರಾಣಿ ಪಕ್ಷಿಗಳದ್ದಂತು ಹೇಳ ತೀರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದೊಂದು ವಾರದಿಂದ ಇದಕ್ಕೆ ಬ್ರೇಕ್ ನೀಡಿ ವರುಣನ ಸಿಂಚನದಿಂದ ಕೆಲವೊಂದೆಡೆ ಜನರು ನೆಮ್ಮದಿ ಕಂಡಿದ್ರು. ಆದ್ರೆ ಗುರುವಾರ (ಎ.11) ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ವಿಜಯಪುರ, ಕಲಬುರಗಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಿದೆ.
ಸು*ಟ್ಟು ಕರಕಲಾಗುವಂತ ಪರಿಸ್ಥಿತಿಯಲ್ಲಿದ್ದ ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ ಇನ್ನು ವಿಜಯಪುರ ತಾಲೂಕಿನಲ್ಲೂ ಧಾರಕಾರ ಮಳೆ ಸುರಿದಿದ್ದು, ಒಂದೇ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಸಿಡಿಲಿನ ಅರ್ಭಟಕ್ಕೆ ಜನ ಮನೆಯಿಂದ ಹೊರ ಬಾರದೆ ಮನೆಯಲ್ಲೇ ಆಶ್ರಯ ಪಡೆದುಕೊಂಡಿದ್ದಾರೆ. ಆದ್ರೂ 16 ವರ್ಷ ಬಾಲಕ ಹಾಗೂ ಇಂಡಿ ತಾಲೂಕಿನ ಮಸಳಿ ಗ್ರಾಮದಲ್ಲಿ ಜಮೀನು ಕೆಲಸ ಮಾಡುತ್ತಿದ್ದ 45 ವರ್ಷದ ರೈತ ಸೋಮಶೇಖರ್ ಪಟ್ಟಣಶೆಟ್ಟಿ ಸಿಡಿಲು ಬಡಿದು ಮೃ*ತಪಟ್ಟಿದ್ದಾರೆ.
ಇದನ್ನೂ ಓದಿ..; ‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
ಇನ್ನು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಜಿಲ್ಲೆಯ ಕೆರಮಕ್ಕಿ, ಬೈಗೂರು,ಹಂರವಳ್ಳಿ, ಆವುತಿ ಪರಿಸರದಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಕಾಫಿ ಬೆಳೆಗಾರರು ಸಂತಸಗೊಂಡಿದ್ದಾರೆ.
chikkamagaluru
ಉಡುಪಿ-ದ.ಕ ಜಿಲ್ಲೆಯಲ್ಲಿ ಸಂಭ್ರಮದ ರಂಜಾನ್ ಆಚರಣೆ: ಇಂದೇ ಸರ್ಕಾರಿ ರಜೆ ಘೋಷಸಿದ ಜಿಲ್ಲಾಡಳಿತ
ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ನಿನ್ನೆ(ಎ.9) ಚಂದ್ರದರ್ಶನವಾಗಿದ್ದ ಹಿನ್ನಲೆಯಲ್ಲಿ ದ.ಕ.ಜಿಲ್ಲೆ, ಉಡುಪಿ ಸೇರಿದಂತೆ ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎ.10ರಂದು ರಮ್ಜಾನ್ ಆಚರಿಸಲು ದ.ಕ ಜಿಲ್ಲಾ ಖಾಝಿ ಹಾಗೂ ಹಾಸನ ಚಿಕ್ಕಮಗಳೂರು ಜಿಲ್ಲೆಯ ಸಂಯುಕ್ತ ಖಾಘಿ ಅವರು ಕರೆ ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಈ ಜಿಲ್ಲೆಗಳಲ್ಲಿ ರಮ್ಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.
ಮಂಗಳೂರಿನ ಬಾವುಟ ಗುಡ್ಡದ ಈದ್ಗಾದಲ್ಲಿ ಸಾಮೂಹಿಕ ನಮಾಜ್ ಮಾಡುವ ಮೂಲಕ ಹಬ್ಬದ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಹಲವಾರು ಪ್ರಮುಖರು ಈದ್ಗಾದ ನಮಾಜ್ನಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಮಾತನಾಡಿದ ಸ್ಪೀಕರ್ ಖಾದರ್ ಅವರು ಎಲ್ಲಾ ಜನತೆಗೆ ರಮ್ಜಾನ್ ಹಬ್ಬದ ಶುಭಾಶಯ ತಿಳಿಸಿದ್ದಾರೆ. ವಿಶೇಷವಾಗಿ ಈಸ್ಟರ್, ಯುಗಾದಿ ಹಾಗೂ ರಮ್ಜಾನ್ ಮೂರು ಹಬ್ಬಗಳು ಒಟ್ಟೊಟ್ಟಿಗೆ ಬಂದಿರುವ ಕಾರಣ ಇದೊಂದು ವಿಶೇಷ ಸನ್ನಿವೇಶವಾಗಿ ಅವರು ಪರಿಗಣಿಸಿದ್ದಾರೆ. ಎಲ್ಲಾ ಹಬ್ಬಗಳ ಸಂದೇಶ ಸಾಮರಸ್ಯವನ್ನು ಸಾರಿದ್ದು, ನಮ್ಮ ಜಿಲ್ಲೆಯಿಂದ ಅಂತಹ ಸಾಮರಸ್ಯ ಇಡೀ ದೇಶಕ್ಕೆ ಸಾರುವಂತಾಗಲಿ ಎಂದು ಹೇಳಿದ್ದಾರೆ.
ಇನ್ನು ಅಧಿಕೃತವಾಗಿ ರಮ್ಜಾನ್ ಹಬ್ಬದ ಸರ್ಕಾರಿ ರಜೆ ನಾಳೆ ಇದ್ದು , ಇಂದು ಹಬ್ಬ ಆಚರಿಸುತ್ತಿರುವ ಕಡೆಗಳಲ್ಲಿ ಇಂದೇ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸ್ಪೀಕರ್ ಖಾದರ್ ಅವರ ಮನವಿ ಪುರಸ್ಕರಿಸಿ ಈ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಇಂದು ಹಬ್ಬ ಆಚರಿಸುತ್ತಿರುವ ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಇರಲಿದೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM5 days ago
ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?