Thursday, March 23, 2023

ಕಾರ್ಕಳದಲ್ಲಿ ಟ್ಯಾಂಕರ್- ಬೈಕ್ ಅಪಘಾತ: ಸವಾರ ಮೃತ್ಯು, ಸಹಸವಾರೆ ಗಾಯ..!

ಕಾರ್ಕಳ: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾರ್ಕಳದ ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಇಂದು ಅಪರಾಹ್ನ ನಡೆದಿದೆ.

ಮೃತರನ್ನು ಮಹಾರಾಷ್ಟ್ರ ಮೂಲದ ವೈಭವ್ ಎಂದು ಗುರುತಿಸಲಾಗಿದೆ.

ಗಾಯಗೊಂಡಿರುವ ಸಹಸವಾರೆ ಕೋಲಾರ ಮೂಲದ ವಿದ್ಯಾರ್ಥಿನಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಿಬ್ಬರು ಮಂಗಳೂರಿನ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

ಇವರು ಬೈಕಿನಲ್ಲಿ ಹೊರನಾಡು ದೇವಸ್ಥಾನಕ್ಕೆ ಹೋಗಿದ್ದು, ವಾಪಾಸ್ಸು ಬರುತ್ತಿದ್ದ ವೇಳೆ ಟ್ಯಾಂಕರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರ ಪೈಕಿ ಸವಾರ ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...