DAKSHINA KANNADA
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ
ಟಾಟಾ ಕಂಪೆನಿಯ ವಾಹನಗಳ ಅಧಿಕೃತ ಡೀಲರ್ ಆಗಿರುವ ಮಂಗಳೂರಿನ ಬಿಜೈನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ನೂತನ ಟಾಟಾ ನೆಕ್ಸಾನ್ ಮತ್ತು ನೆಕ್ಸಾನ್ ಇ.ವಿ. 3.0 ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭ ನಡೆಯಿತು.
ಮಂಗಳೂರು: ಟಾಟಾ ಕಂಪೆನಿಯ ವಾಹನಗಳ ಅಧಿಕೃತ ಡೀಲರ್ ಆಗಿರುವ ಮಂಗಳೂರಿನ ಬಿಜೈನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ನೂತನ ಟಾಟಾ ನೆಕ್ಸಾನ್ ಮತ್ತು ನೆಕ್ಸಾನ್ ಇ.ವಿ. 3.0 ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭ ನಡೆಯಿತು.
ಟಾಟಾ ವಾಹನಗಳ ಗ್ರಾಹಕ ವರದರಾಜ ಶೆಣೈ, ಶರಣ್ ಚಿಲಿಂಬಿ ಮತ್ತು ಪ್ರಿಯಾ ಮೋನಿಕಾ ಡಿ’ಸೋಜಾ ಆವರು ಈ ನೂತನ ವಾಹನಗಳನ್ನು ಅನಾವರಣಗೊಳಿಸಿದರು.
ಟಾಟಾ ಮೋಟಾರ್ಸ್ ನ ವಿಠಲದಾಸ್ ಅವರು ಹೊಸ ವಾಹನಗಳ ವೈಶಿಷ್ಟ್ಯಗಳನ್ನು ವಿವರಿಸಿ ಅತ್ಯಾಧುನಿಕ ತಾಂತ್ರಿಕತೆ, ವಿನೂತನ ವಿನ್ಯಾಸ, ಇಂಧನ ದಕ್ಷತೆ, ಕಂಫರ್ಟ್ ಇತ್ಯಾದಿ ಎಲ್ಲವೂ ಸೇರಿದಂತೆ ಹೊಸ ಅನುಭವವನ್ನು ಈ ವಾಹನಗಳು ನೀಡುತ್ತವೆ ಎಂದು ಹೇಳಿದರು.
ಗ್ರಾಹಕ ವರದರಾಜ ಶೆಣೈ ಮಾತನಾಡಿ ಟಾಟಾ ವಾಹನಗಳು ಜನಪ್ರಿಯ ಬ್ರಾಂಡ್ ಆಗಿದ್ದು, ನೆಕ್ಸಾನ್ ಕಾರು ಸುರಕ್ಷತೆ ಮತ್ತು ಇಂಧನ ದಕ್ಷತೆಗೆ ಹೆಸರಾಗಿದೆ. ಆಟೋಮ್ಯಾಟ್ರಿಕ್ಸ್ ಉತ್ತಮ ಸರ್ವೀಸ್ ಒದಗಿಸುತ್ತದೆ ಎಂದರು.
ನಾನು ಈ ಹಿಂದೆ ಟಾಟಾ ಪಂಚ್ ಖರೀದಿಸಿದ್ದು, ಈ ವಾಹನದ ಬಗ್ಗೆ ಇದುವರೆಗೆ ಯಾವುದೇ ದೂರು ಇಲ್ಲ.
ಆಟೋಮ್ಯಾಟ್ರಿಕ್ಸ್ ನಿಂದ ಉತ್ತಮ ಸೇವೆ ಲಭಿಸಿದೆ. ಇದೀಗ ಟಾಟಾ ನೆಕ್ಸಾನ್ ಖರೀದಿಸುತ್ತಿದ್ದೇನೆ ಎಂದು ಶರಣ್ ಚಿಲಿಂಬಿ ಹೇಳಿದರು.
2017 ರಲ್ಲಿ ಬಿಡುಗಡೆಯಾಗಿದ್ದ ನೆಕ್ಸಾನ್ ಕಾರು 2020 ರಲ್ಲಿ ಸುಧಾರಣೆ ಕಂಡಿತ್ತು. ದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಮಾರಾಟವಾಗುವ ಎಸ್.ಯು.ವಿ. ಎನಿಸಿರುವ ನೆಕ್ಸಾನ್ ಇದೀಗ ಆಲ್ ನ್ಯೂ ನೆಕ್ಸಾನ್ ಮತ್ತು ನೆಕ್ಸಾನ್ ಇವಿ 3.0 ಸುಧಾರಿತ ಆವೃತ್ತಿಗಳೊಂದಿಗೆ ಮಾರುಕಟ್ಟೆಗೆ ಬಿಡುಗಡೆಯಾಗಿದೆ.
ಆಟೋಮ್ಯಾಟ್ರಿಕ್ಸ್ ಮಳಿಗೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ್, ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರದೀಪ್ ಮಯ್ಯ ಮತ್ತು ಇತರರು ಉಪಸ್ಥಿತರಿದ್ದರು.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
DAKSHINA KANNADA
Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!
ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್