BANTWAL
ಉಪ್ಪಿನಂಗಡಿ: ಕೆವೈಸಿ ಅಪ್ಡೇಡ್ ಮಾಡಲು ಹೋಗಿ 7.47 ಲಕ್ಷ ರೂ. ಕಳೆದುಕೊಂಡ ಶಿಕ್ಷಕಿ…!
ಉಪ್ಪಿನಂಗಡಿ: ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕಿನ ಕಸ್ಟಮರ್ ಕೇರ್ಗೆ ಕರೆ ಮಾಡಲು ತಿಳಿಸಿ ಇಂಟರ್ನೆಟ್ ಬ್ಯಾಂಕಿಂಗ್ ಸಿಸ್ಟಮ್ ಮೂಲಕ ವಂಚನಾ ಜಾಲಕ್ಕೆ ಸಿಲುಕಿದ ಶಿಕ್ಷಕಿ 7.47 ಲಕ್ಷ ರೂ ಕಳೆದುಕೊಂಡ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿಯಾಗಿರುವ ಪ್ರಸಕ್ತ ಸರ್ಕಾರಿ ಪ್ರೌಢಶಾಲಾ ಶಿಕ್ಷಕಿಯಾಗಿರುವ ಮಹಿಳೆ ಸಂತ್ರಸ್ತೆ ಜೂ.11 ರಂದು ಈಕೆಯ ಮಗನ ಮೊಬೈಲ್ಗೆ ಎಟಿಎಂ ಕಾರ್ಡ್ ಬ್ಲಾಕ್ ಆಗಿರುವ ಬಗ್ಗೆ ಮೆಸೇಜ್ ಬಂದಿತ್ತು.
ಜೂ.23 ರಂದು 7029216854 ಸಂಖ್ಯೆಯ ನಂಬರ್ನಿಂದ ಕರೆ ಬಂದಿದ್ದು ಮೆಸೇಜ್ನಲ್ಲಿ ಬ್ಯಾಂಕಿನ ಕಸ್ಟಮರ್ ಕೇರ್ ಸಂಖ್ಯೆ 8240871104 ಕ್ಕೆ ಕರೆ ಮಾಡಿ ಕೆವೈಸಿ ಅಪ್ಡೆಟ್ ಮಾಡುವಂತೆ ಸೂಚಿಸಲಾಗಿತ್ತು.
ದೂರುದಾರರ ಮಗ ಕರೆ ಮಾಡಿದಾಗ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ನಿಮ್ಮ ಮನೆಯಲ್ಲಿರುವ ಇನ್ನೊಬ್ಬರ ಎಸ್ಬಿಐ ಖಾತೆ ನಂಬರ್ ಹಾಗೂ ಮೊಬೈಲ್ ನಂಬರ್ನ್ನು ತಿಳಿಸಲು ಸೂಚಿಸಿದ್ದು ಅದರಂತೆ ಮಾಹಿತಿ ನೀಡಲಾಗಿತ್ತು.
ಅದೇ ದಿನ ಕಸ್ಟಮರ್ ಕೇರ್ ಸಂಖ್ಯೆ ಎಂದು ತಿಳಿಸಲಾದ ಸಂಖ್ಯೆಯಿಂದಲೇ ದೂರುದಾರರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಂಖ್ಯೆಗೆ ಕಳುಹಿಸಲಾದ ಓಟಿಪಿ ಸಂಖ್ಯೆ ನಿಡುವಂತೆ ತಿಳಿಸಲಾಗಿತ್ತು. ಬ್ಯಾಂಕಿನವರದ್ದೇ ಕರೆ ಎಂದು ನಂಬಿದ ಶಿಕ್ಷಕಿಯ ಮಗ ಒಟಿಪಿ ನೀಡಿದ್ದಾರೆ.
ಬಳಿಕ ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಲು ತಿಳಿಸಿ ಅಲ್ಲಿ ಏಟಿಎಂ ಕಾರ್ಡ್ ಹಾಕಿ ಇಂಟರ್ನೆಟ್ ಬ್ಯಾಂಕಿಂಗ್ ಅ್ಯಪ್ನಲ್ಲಿ ಅವರು ಹೇಳಿದ ರೀತಿಯಲ್ಲಿ ಮಾಡಿದ್ದಾರೆ.
ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ಬ್ಯಾಂಕಿನಿಂದ ಖಾತೆಯ ಮೊಬೈಲ್ ನಂಬರ್ ಬದಲಾಯಿಸುವ ಬಗ್ಗೆ ವಿಚಾರಿಸಿದಾಗ ಶಿಕ್ಷಕಿಗೆ ತಾವು ಮೋಸ ಹೋಗಿರುವ ಬಗ್ಗೆ ಅರಿವಾಯಿತು.
ಕೂಡಲೇ ಬ್ಯಾಂಕಿಗೆ ಹೋಗಿ ಖಾತೆಯನ್ನು ಪರಿಶೀಲಿಸಿದಾಗ ದೂರುದಾರರ ಬ್ಯಾಂಕ್ ಖಾತೆಗೆ ಜೂ. 23 ರಂದು 8 ಲಕ್ಷ ರೂ ಜಮೆಯಾಗಿದ್ದು ಹಲವು ಬಾರಿ ಟ್ರಾನ್ಸಕ್ಷನ್ ನಡೆಸಿ ಒಟ್ಟು 7.47 ಲಕ್ಷ ರೂ ಮೊತ್ತವನ್ನು ತೆಗೆಯಲಾಗಿದ್ದು ಕಂಡುಬಂದಿತ್ತು.
ಕಂಗಾಲಾದ ಶಿಕ್ಷಕಿ ಪೊಲೀಸ್ ಇಲಾಖಾ ಸೈಬರ್ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿ ವಂಚನಾ ಜಾಲವನ್ನು ಪತ್ತೆ ಹಚ್ಚಲು ವಿನಂತಿಸಿದ್ದಾರೆ.
BANTWAL
Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ
ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.
ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.
124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BANTWAL
Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!
ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್ ರಸ್ಮಾ (18) ಮತ್ತು ಮಹಮ್ಮದ್ ಸಿನಾನ್ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BANTWAL
Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.
ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.