LATEST NEWS
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ನವದೆಹಲಿ: ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಬಾರ್ಬಡೋಸ್ ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ ಕೂಡ ಹಾಜರಿದ್ದರು.
ವಿಶ್ವಕಪ್ ಗೆದ್ದು ಆಗಮಿಸಿದ ಟೀಮ್ ಇಂಡಿಯಾವನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಟೀಮ್ ಇಂಡಿಯಾ ಆಟಗಾರರು ಮುಂಬೈಗೆ ತೆರಳಿದ್ದಾರೆ. ಇಂದು ಸಂಜೆ ಭಾರತ ತಂಡ ವಿಜಯಯಾತ್ರೆ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ದೆಹಲಿಯಿಂದ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ.
LATEST NEWS
ಆಗುಂಬೆ : ಯುವತಿ ನಾಪತ್ತೆ ಕೇಸ್ ಗೆ ಟ್ವಿಸ್ಟ್; ಕೊಳೆತ ಸ್ಥಿತಿಯಲ್ಲಿ ಶ*ವ ಪತ್ತೆ
ಶಿವಮೊಗ್ಗ : ನಾಪತ್ತೆ ಆಗಿದ್ದ ಯುವತಿ ಶ*ವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ (24) ಅವರ ಮೃ*ತದೇಹ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಭೀಕರವಾಗಿ ಕೊಲೆಗೈದು ಅರಣ್ಯ ಪ್ರದೇಶದಲ್ಲಿ ಶವವನ್ನು ಬೀಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ತನ್ನವರ ಶಸ್ತ್ರ ಚಿಕಿತ್ಸೆ ಮಾಡುತ್ತದೆಯಂತೆ ಈ ಜೀವಿ..!
ಖಾಸಗಿ ಸಂಸ್ಥೆಯಲ್ಲಿ ಪೂಜಾ ಕೆಲಸ ಮಾಡುತ್ತಿದ್ದಳು. ಕಳೆದ ಜೂನ್ 30 ರಂದು ಪೂಜಾ ನಾಪತ್ತೆಯಾಗಿದ್ದಳು. ಪ್ರಕರಣ ಸಂಬಂಧ ಆಗುಂಬೆ ಪೊಲೀಸರು ಮಣಿಕಂಠ ಎಂಬಾತನ ವಶಕ್ಕೆ ಪಡೆದುಕೊಂಡಿದ್ದಾರೆ. ವೈಯಕ್ತಿಕ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
ಸಲ್ಮಾನ್ ಖಾನ್ ಜೊತೆ ಹುಟ್ಟುಹಬ್ಬ ಆಚರಿಸಿದ ಧೋನಿ..! ಪತಿಯ ಆಶೀರ್ವಾದ ಪಡೆದ ಸಾಕ್ಷಿ ಧೋನಿ
ಮುಂಬೈ/ಮಂಗಳೂರು: ಭಾರತದ ಕ್ಯಾಪ್ಟನ್ ಕೂಲ್ ಮಹಿ ತನ್ನ 43 ನೇ ಹುಟ್ಟುಹಬ್ಬವನ್ನು ಬಾಲಿವುಡ್ ಬಾದ್ಶಾ ಸಲ್ಮಾನ್ ಖಾನ್ ಜೊತೆ ಆಚರಿಸಿಕೊಂಡಿದ್ದಾರೆ. ಸತತ ಮೂರು ಬಾರಿ ಭಾರತಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ತಂದುಕೊಟ್ಟ ಮಹೇಂದ್ರ ಸಿಂಗ್ ಧೋನಿ ಎಲ್ಲರ ಫೇವರೆಟ್ ಕ್ರಿಕೆಟರ್. ಮೈದಾನದಲ್ಲಿ ಮಾತ್ರವಲ್ಲದೇ ತಮ್ಮ ದೈನಂದಿನ ಜೀವನದಲ್ಲೂ ತುಂಬಾನೇ ಕೂಲ್ ಆಗಿರ್ತಾರಂತೆ ದೋನಿ. ಇದೀಗ ತಮ್ಮ ಹುಟ್ಟುಹಬ್ಬವನ್ನು ಸಲ್ಮಾನ್ ಖಾನ್ ರವರ ಜೊತೆ ಆಚರಿಸಿಕೊಂಡಿದ್ದು ಇವರಿಬ್ಬರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಪೋಸ್ಟ್ ಹಾಕಿ ವಿಶ್ ಮಾಡಿದ ಸಲ್ಮಾನ್
ಸಲ್ಮಾನ್ ಖಾನ್ ತನ್ನ ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಂ ನಲ್ಲಿ ಧೋನಿ ಸಲ್ಮಾನ್ ಜೊತೆಗೆ ಕೇಕ್ ಕತ್ತರಿಸುವ ಫೊಟೋವನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ “ಹ್ಯಾಪಿ ಬರ್ತ್ಡೇ ಕ್ಯಾಪ್ಟನ್ ಸಾಹೇಬ್” ಎಂದು ಬರೆದು ಧೋನಿಯನ್ನು ಟ್ಯಾಗ್ ಮಾಡಿದ್ದಾರೆ.
ಪತಿಯ ಪಾದ ಮುಟ್ಟಿ ಆಶೀರ್ವಾದ ಪಡೆದ ಸಾಕ್ಷಿ ಧೋನಿ
ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಮದುವೆ ಪೂರ್ವ ಸಮಾರಂಭದ ಸಂಗೀತ ಕಾರ್ಯಕ್ರಮದಲ್ಲಿ ಧೋನಿ ಹಾಗೂ ಅವರ ಪತ್ನಿ ಪಾಲ್ಗೊಂಡಿದ್ದರು. ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ನಟ, ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ದಿನ ರಾತ್ರಿ ಪತ್ನಿ ಸಾಕ್ಷಿರವರು ದೋನಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಈ ವೇಳೆ ಸಲ್ಮಾನ್ ಖಾನ್ ಕೂಡಾ ಜೊತೆಗಿದ್ದು ವಿಶ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ ಮೊದಲು ಪತ್ನಿ ಸಾಕ್ಷಿ ತನ್ನಿಸಿದ್ದಾರೆ. ಬಳಿಕ ಸಲ್ಮಾನ್ ಖಾನ್ ಗೆ ಕೇಕ್ ತಿನ್ನಿಸಿದ್ದಾರೆ. ಈ ವೇಳೆ ಧೋನಿ ಪತ್ನಿ ಪತಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದರ ಮೂಲಕ ಭಾರತೀಯ ಸಂಸ್ಕೃತಿ ಮೆರೆದಿದ್ದಾರೆ.
ತಾಯ್ನಾಡಿಗೆ ಬಂದ ಟೀಂ ಇಂಡಿಯಾಗೆ ಭರ್ಜರಿ ಸ್ವಾಗತ..! ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾದ ಮುಂಬೈ
ಅಭಿಮಾನಿಗಳಿಂದ ಕಟೌಟ್ ಹಾಕಿ ಸಂಭ್ರಮಾಚರಣೆ
ಇನ್ನೂ ಮಹೇಂದ್ರ ಸಿಂಗ್ ಧೋನಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಇವರಿಗೆ ಕ್ರಿಕೆಟ್ ಅಭಿಮಾನಿಗಳಿದ್ದಾರೆ. ಇವರನ್ನು ಕ್ರಿಕೆಟ್ ದೇವರೆಂದೂ ಪೂಜಿಸುವವರೂ ಕೂಡಾ ಇದ್ದಾರೆ. ಮಹೇಂದ್ರ ಸಿಂಗ್ ಧೋನಿ ಅವರು ಟೀಮ್ ಇಂಡಿಯಾದ ಬ್ಲೂ ಜೆರ್ಸಿಯಲ್ಲಿ ಬ್ಯಾಟ್ ಹಿಡಿದ ಬರೋಬ್ಬರಿ 52 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದಾರೆ. ಸದ್ಯ ಧೋನಿಯ ಈ ಕಟೌಟ್ ಫೋಟೋವನ್ನು ಅಂತರ್ಜಾಲದಲ್ಲಿ ಕೊಟ್ಯಾಂತರ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಕಳೆದ ಬಾರಿಯೂ ಕೂಡ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ಅಭಿಮಾನಿಗಳು ಧೋನಿಯ 43ನೇ ಜನ್ಮದಿನದ ಗೌರವಾರ್ಥವಾಗಿ 43 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದರು. ಕೇರಳದಲ್ಲಿಯೂ 2018 ರಲ್ಲಿ 35 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದರು.
LATEST NEWS
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿ : ಚಿನ್ನ ಗೆದ್ದ ವಿನೇಶ್ ಫೋಗಟ್
ನವದೆಹಲಿ : ಮ್ಯಾಡ್ರಿಡ್ನಲ್ಲಿ ನಡೆದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ವಿನೇಶ್ ಫೋಗಟ್ ಕೊನೆಯ ಕ್ಷಣದಲ್ಲಿ ವೀಸಾ ಪಡೆದು ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿಗೆ ಪ್ರವೇಶಿಸಿದ್ದರು.
ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ಮರೀರಾ ತ್ಯುಮೆರ್ಕೋವಾ ವಿರುದ್ಧ 10-5 ಅಂಕಗಳ ಭರ್ಜರಿ ಗೆಲುವು ಸಾಧಿಸುವ ಸ್ವರ್ಣ ಪದಕಕ್ಕೆ ಕೊರಳೊಡ್ಡಿದ್ದಾರೆ. ವಿನೇಶ್ ಫೋಗಟ್ ಸೆಮಿಫೈನಲ್ ಪಂದ್ಯದಲ್ಲಿ ಕೆನಡಾದ ಕೇಟಿ ಡುಚಾಕ್ ಅವರನ್ನು 9-4 ಅಂಕಗಳಿಂದ ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿದ್ದರು. ಫೈನಲ್ನಲ್ಲಿಯೂ ಗೆದ್ದು ಬೀಗಿದ್ದಾರೆ.
ಇದನ್ನೂ ಓದಿ : WATCH : ನೋಡು ನೋಡುತ್ತಿದ್ದಂತೆ ಕೆಂಪಾದ ಸಮುದ್ರ…ವೀಡಿಯೋ ವೈರಲ್
ಈ ಹಿಂದೆ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್ ಈಗ 50 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದಾರೆ.
- FILM4 days ago
‘ಪೆಂಡ್ರೈವ್’ನಲ್ಲಿ ಬಿಗ್ಬಾಸ್ ತನಿಷಾ ಕುಪ್ಪಂಡ..!
- DAKSHINA KANNADA5 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
- DAKSHINA KANNADA6 days ago
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
- LATEST NEWS6 days ago
WATCH VIDEO : ಕಣ್ಣಿಗೆ ಬಿತ್ತು ಹಲಸಿನ ಮರ…ಗಜರಾಜ ಹಲಸಿನ ಹಣ್ಣನ್ನು ಹೇಗೆ ಕೊಯ್ದ ಗೊತ್ತಾ!?