Connect with us

    LATEST NEWS

    ತಾಂತ್ರಿಕ ದೋಷ: ಸರೋವರಕ್ಕೆ ಬಿದ್ದ ವಿಮಾನ-19ಮಂದಿ ದುರಂತ ಅಂತ್ಯ…

    Published

    on

    ತಾಂಜೇನಿಯಾ: ಪ್ರಯಾಣಿಕ ವಿಮಾನವೊಂದು ತಾಂತ್ರಿಕ ದೋಷ ಹಾಗೂ ಹವಾಮಾನ ವೆಪರೀತ್ಯದಿಂದ ಭೂಸ್ಪರ್ಶದ ವೇಳೆ ಪತನಗೊಂಡು ಸರೋವರಕ್ಕೆ ಬಿದ್ದು 19 ಮಂದಿ ಸಾವನ್ನಪ್ಪಿ, ಉಳಿದವರೂ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ತಾಂಜೇನಿಯದಲ್ಲಿ ನಡೆದಿದೆ.


    ತಾಂಜೇನಿಯಾದ ಈ ವಿಮಾನವು ತಾಂಜೇನಿಯಾದ 43 ಪ್ರಯಾಣಿಕರನ್ನು ಹೊತ್ತು ದಾರ್ ಎ ಸಲಾಂ ನಿಂದ ಬುಕಾಬು ಎಂಬಲ್ಲಿಗೆ ಹೊರಟು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ಅವಘಡ ಸಂಭವಿಸಿದೆ.

    ಘಟನೆ ಬಗ್ಗೆ ಮಾಹಿತಿ ನೀಡಿದ ಏರ್ ಲೈನ್ಸ್ ಅಧಿಕಾರಿಗಳು ಪ್ರೆಸೆಷನ್ಸ್ ಏರ್ ಲೈನ್ಸ್ ಗೆ ಸೇರಿದ ವಿಮಾನ ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷ ಹಾಗೂ ಹವಾಮಾನ ವೆಪರೀತ್ಯದಿಂದ ಸರೋವರಕ್ಕೆ ಬಿದ್ದು ಅಪಘಾತಕ್ಕೆ ಈಡಾಗಿದೆ ಎಂದು ತಿಳಿಸಿದ್ದಾರೆ.


    ಬುಕಾಬು ವಿಮಾನ ನಿಲ್ದಾಣದತ್ತ ಆಗಮಿಸುತ್ತಿದ್ದ ವಿಮಾನ 100 ಮೀಟರ್ ಎತ್ತರದಲ್ಲಿದ್ದಾಗ ತಾಂತ್ರಿಕ ದೋಷದಿಂದ ಪತನಗೊಂಡಿದೆ.

    ಕೂಡಲೇ ಕಾರ್ಯಪ್ರವೃತರಾದ ರಕ್ಷಣಾ ಸಿಬ್ಬಂದಿ ವಿಮಾನದಲಿದ್ದ ಉಳಿದ 24 ಮಂದಿ ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ.

    LATEST NEWS

    ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ*ಲ್ಟಿ; ಓರ್ವ ಸಾ*ವು, ಹಲವರ ಸ್ಥಿತಿ ಗಂಭೀ*ರ

    Published

    on

    ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪ*ಲ್ಟಿಯಾಗಿರುವ ಘಟನೆ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃ*ತಪಟ್ಟಿದ್ದಾನೆ. ನೆಲಮಂಗಲದ ಚಂದನ್‌ (26) ಮೃ*ತ ಯುವಕ.

    ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪ*ಲ್ಟಿಯಾಗಿದೆ.  ಕೊಡುಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯ ಜಿಲ್ಲೆಯ ಯೋಗೇಶ್‌ ಎಂಬವರಿಗೆ ಗಂ*ಭೀರ ಗಾ*ಯವಾಗಿದೆ.

    ಇದನ್ನೂ ಓದಿ : ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್​? ನಿಜಾನಾ ಎಂದು ಕೇಳಿದ್ದಕ್ಕೆ ಎಂಜಾಯ್​ ಮಾಡಿ ಎಂದ ಕಿರಾತಕ ಬೆಡಗಿ

    ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿತ್ತು. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Continue Reading

    LATEST NEWS

    ಪೊಳಲಿ ಸೇತುವೆ ಬಂದ್: ಮಂಗಳವಾರ ಗ್ರಾಮಸ್ಥರಿಂದ ಪ್ರತಿಭಟನೆ

    Published

    on

    ಮಂಗಳೂರು: ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸೇತುವೆಯ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಪೊಳಲಿ – ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು ಯಂತ್ರದ ಮೂಲಕ ಪರಿಶೀಲನೆ ನಡೆಸಿ ಎರಡು ತಿಂಗಳಾದ್ರೂ ಏನಾಗಿದೆ ಎಂಬ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಇದರಿಂದ ತೊಂದರೆಗೆ ಒಳಗಾಗಿರುವ ಅಮ್ಮುಂಜೆ , ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು ಮತ್ತು ಸುತ್ತಮುತ್ತಲಿನ ಜನ ಸಭೆ ನಡೆಸಿದ್ದಾರೆ. ಜನರ ಸಮಸ್ಯೆಗೆ ಸ್ಪಂದನೆಯೇ ನೀಡದ ಜನಪ್ರತಿಧಿಗಳು, ಹಾಗೂ ಅಧಿಕಾರಿಗಳ ವಿರುದ್ಧ ಅಕ್ಟೋಬರ್ 15 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಪೊಳಲಿಯ ರಾಮಕೃಷ್ಣ ತಪೋವನ ರಾಜರಾಜೇಶ್ವರಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಾಚೈತನ್ಯನಂದ ಸ್ವಾಮೀಜಿ , ಪೊಳಲಿ ಅಡ್ಡೂರು ಫಲ್ಗುಣಿ ಹೋರಾಟ ಸಮಿತಿಯ ಅಧ್ಯಕ್ಷ ವೆಂಕಟೇಶ್ ನಾವುಡ, ಚಂದ್ರಹಾಸ್ ಪಲ್ಲಿಪಾಡಿ, ಜಯರಾಮಕೃಷ್ಣ ಪೊಳಲಿ, ನೂಯಿ ಬಾಲಕೃಷ್ಣ ರಾವ್, ಅಬೂಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದು ಹೋರಾಟದ ಬಗ್ಗೆ ಜನಾಭಿಪ್ರಾಯ ಪಡೆದುಕೊಂಡಿದ್ದಾರೆ.

    Continue Reading

    LATEST NEWS

    ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

    Published

    on

    ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
    ಮೃತ ವಿದ್ಯಾರ್ಥಿಯು ಮೊಹಮ್ಮದ್ ಜಹೀದ (12) ಎಂದು ಗುರುತಿಸಲಾಗಿದೆ.


    ಕಳೆದ 4 ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲಿಕ್ ದಿನಾರ್ ಮದರಸ ಹಾಸ್ಟೇಲ್‌ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆಯನ್ನು ಮುಗಿಸಿ ಅ.11 ರಂದು ಹಾಸ್ಟೇಲ್‌ಗೆ ಮರಳಿದ್ದಾನೆ.

    ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದನ್ನು ಗಮನಿಸಿ ಹಾಡುಕಿದಾಗ ಹಾಸ್ಟೇಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಾಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.

    ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10.40 ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಾಲಕನಿಗೆ ಹಾಸ್ಟೇಲ್‌ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೇಲ್‌ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ನ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದದೆ.

    Continue Reading

    LATEST NEWS

    Trending