DAKSHINA KANNADA
E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ
ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ, ನ್ಯಾಯಾಂಗ ಇಲಾಖೆ ಮಧ್ಯಪ್ರವೇಶಿಸುವಂತೆ ಮಂಗಳೂರು ವಕೀಲರ ಸಂಘದ ಮನವಿ ಮಾಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಕೆ. ಪೃಥ್ವಿರಾಜ್ ರೈ, E-Courts Service ದೇಶದಲ್ಲಿ ನ್ಯಾಯಾಲಯದ ಮಾಹಿತಿ ನೀಡುವ ಅಗತ್ಯ ಡಿಜಿಟಲ್ ಸೇವೆಯಾಗಿದೆ. ಈ ಸೇವೆಯು ಮೊಬೈಲ್ ಅಪ್ಲಿಕೇಶನ್ಗಳ ಮೂಲಕ ಮತ್ತು ನೇರವಾಗಿ ಇ-ಕೋರ್ಟ್ ವೆಬ್ಸೈಟ್ನಿಂದ ಲಭ್ಯವಿದೆ.
ವಕೀಲರು, ದಾವೆದಾರರು, ನ್ಯಾಯಾಂಗ, ಸರ್ಕಾರಕ್ಕೆ ಇದು ಉಪಯುಕ್ತ ಮಾಹಿತಿ ನೀಡುವ ಸೇವೆಯಾಗಿದೆ. ಭಾರತದಾದ್ಯಂತ ನ್ಯಾಯಾಲಯದ ವ್ಯವಸ್ಥೆಗಳಲ್ಲಿ ವಿಚಾರಣೆಗೆ / ಇತ್ಯರ್ಥಕ್ಕೆ ಬಾಕಿ ಉಳಿದಿರುವ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ, ಡೇಟಾವನ್ನು ಪಡೆಯಲು ಅನುಕೂಲವಾಗುತ್ತದೆ.
ಪೊಲೀಸ್ ಮತ್ತು ಕಕ್ಷಿದಾರರ ಹೆಸರು, ವಕೀಲರ ಹೆಸರು, ಕೇಸ್ ಸಂಖ್ಯೆ, ಎಫ್ಐಆರ್ ಸಂಖ್ಯೆ, ನ್ಯಾಯಾಲಯದ ಹೆಸರು ಇತ್ಯಾದಿಗಳನ್ನು ಬಳಸಿಕೊಂಡು ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಇ-ಕೋರ್ಟ್ ಸೇವೆಗಳಲ್ಲಿ ಹುಡುಕಬಹುದು. ವಿವಿಧ ನ್ಯಾಯಾಲಯಗಳಿಂದ ಲಭ್ಯವಿರುವ ಡೇಟಾವನ್ನು ವಕೀಲರು ಇತರ ಮಧ್ಯಸ್ಥಗಾರರು ನಿಯಮಿತವಾಗಿ ಮಾಹಿತಿಯನ್ನು ಪಡೆಯಲು ಡೌನ್ಲೋಡ್ ಮಾಡುತ್ತಾರೆ.
ಪ್ರಕರಣದ ಪ್ರಗತಿಯ ಬಗ್ಗೆ. ಇ-ಕೋರ್ಟ್ ಸೇವೆಗಳ ವೆಬ್ಸೈಟ್ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 07-05- 2021 ರಂತೆ ಡೌನ್ಲೋಡ್ಗಳ ಸಂಖ್ಯೆ 5.81 ಮಿಲಿಯನ್ಗಿಂತಲೂ ಹೆಚ್ಚು ತಲುಪಿದೆ. ಈ ಪ್ರಮುಖ ಸೇವೆ ಭಾರತದ ಸುಪ್ರೀಂ ಕೋರ್ಟ್ನ ಇ- ಸಮಿತಿಯ ಒಡೆತನದಲ್ಲಿದೆ. ಭಾರತ ಸರ್ಕಾರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ರಾಷ್ಟ್ರೀಯ ಮಾಹಿತಿ ಕೇಂದ್ರದಿಂದ ಇ-ಕೋರ್ಟ್ಸ್ ಸರ್ವಿಸ್ ಸೇವೆಯನ್ನು ಹೋಸ್ಟ್ ಮಾಡಿ ಅಭಿವೃದ್ಧಿಪಡಿಸಿರುತ್ತದೆ.
ಇ-ಕೋರ್ಟ್ ಸೇವೆಗಳು ಪ್ರಕರಣಗಳ ಬಗ್ಗೆ ವಾರದ ಎಲ್ಲ ದಿನಗಳಲ್ಲೂ 24X7 ಗಂಟೆಗಳ ಮಾಹಿತಿಯನ್ನು ಒದಗಿಸುವ ಗುರಿಯನ್ನು ಹೊಂದಿವೆ.
ಆದರೆ, ಕಳೆದ ಸುಮಾರು 3-4 ವಾರಗಳಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಸೇವೆ ವಕೀಲರಿಗೆ, ಕಕ್ಷಿದಾರರಿಗೆ ಸಮರ್ಪಕವಾಗಿ ಸಿಗುತ್ತಿಲ್ಲ. ಇತರ ಕೆಲವು ಜಿಲ್ಲೆಗಳಲ್ಲಿ ಯಾವುದೇ ಅಡೆತಡೆಯಿಲ್ಲದೆ ನ್ಯಾಯಾಲಯಗಳು ಸೇವೆಗಳು ಲಭ್ಯವಿವೆ. ಇದೇ ವೇಳೆ, ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿಯೂ ಸೇವೆಗಳಿಗೆ ಸಂಬಂಧಿಸಿದಂತೆ ತೊಂದರೆಯಾಗಿರುವುದು ಕಂಡುಬರುತ್ತದೆ.
ಇ-ಕೋರ್ಟ್ ವೆಬ್ಸೈಟ್ನಲ್ಲಿ ಉಂಟಾದ ಈ ತಾಂತ್ರಿಕ ಸಮಸ್ಯೆಯಿಂದಾಗಿ ಸಾವಿರಾರು ವಕೀಲರು, ಕಕ್ಷಿದಾರರು ಮತ್ತು ಇತರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ.
ನ್ಯಾಯಾಂಗ ವ್ಯವಸ್ಥೆಯಲ್ಲಿ ಇದೊಂದು ಗಂಭೀರ ಸಮಸ್ಯೆಯಾಗಿದ್ದು, ಗೌರವಾನ್ವಿತ ದ.ಕ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಗಮನಕ್ಕೆ ತರಲಾಗಿದೆ ಎಂದು ಮಂಗಳೂರು ವಕೀಲರ ಸಂಘ ತಿಳಿಸಿದೆ.
ಇದೇ ವೇಳೆ, ಮಂಗಳೂರು ವಕೀಲರ ಸಂಘವು ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ಕಾನೂನು ಸಚಿವರು, ನ್ಯ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರ ಗಮನಕ್ಕೆ ಇಮೇಲ್ ಮೂಲಕ ತಂದಿರುತ್ತದೆ.
ಇ-ಕೋರ್ಟ್ಸ್ ಸೇವೆಯಲ್ಲಿ ಉಂಟಾಗಿರುವ ಅಡಚಣೆ ಬಗ್ಗೆ ನಿಖರವಾದ ಕಾರಣಗಳು ಇದುವರೆಗೆ ಗೊತ್ತಾಗಿಲ್ಲ. ಆದರೂ, ವಕೀಲರು ಅನುಭವಿಸುತ್ತಿರುವ ಕಷ್ಟದ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸುವುದು ಅಗತ್ಯವೆಂದು ಮಂಗಳೂರು ವಕೀಲರ ಸಂಘ ಭಾವಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ನ್ಯಾಯಾಂಗ ಇಲಾಖೆ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ತಕ್ಷಣ ಪರಿಹರಿಸಿ ಎಂದು ಮನವಿ ಮಾಡಿದ್ದಾರೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.