LATEST NEWS
ಭೀಕರ ರಸ್ತೆ ಅಪಘಾತ : ದೇವರ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದ ಐವರು ಸಾವು..!
ತೆಲಂಗಾಣ: ದೇವಸ್ಥಾನಕ್ಕೆ ತೆರಳಿ ವಾಪಸು ಆಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತದಿಂದ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗೂಡದಲ್ಲಿ ನಡೆದಿದೆ.
ಮೃತರು ಮಿರ್ಯಾಲಗುಡ ಮೂಲದವರು ಎಂದು ತಿಳಿದುಬಂದಿದೆ. ಚೆರುಪಳ್ಳಿ ಮಹೇಶ್ (32), ಅವರ ಪತ್ನಿ ಜ್ಯೋತಿ (30), ಪುತ್ರಿ ರಿಷಿತಾ (6), ಸಹೋದರ ಮಹೇಶ್, ಮಹೇಂದರ್ (32), ಲಿಯಾನ್ಸಿ (2) ಮೃತ ದುರ್ದೈವಿಗಳು. ಜ. 26 ರಂದು ಕುಟುಂಬ ಸಮೇತ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಮೋಪಿದೇವಿಯ ದರ್ಶನಕ್ಕೆ ಹೋಗಿದ್ದರು. ಭಾನುವಾರ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಅಡ್ಡಕಿ-ನಾರ್ಕಟಪಲ್ಲಿ ಮುಖ್ಯರಸ್ತೆಯ ಮಿರ್ಯಾಲಗೂಡ ಕೃಷ್ಣ ಮಾನಸ ಕಾಲೋನಿ ಬೈಪಾಸ್ನಲ್ಲಿ ವೇಗವಾಗಿ ಬಂದ ಲಾರಿ ಕಾರಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಎರಡು ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
LATEST NEWS
ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!
ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.
ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ
ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
LATEST NEWS
60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!
ಹೆಚ್ಚಾಗಿ ಮಿಸ್ ವರ್ಲ್ಡ್, ಮಿಸ್ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.
ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.
ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ಅನೇಕರು ಆಕೆ ಮಿಸ್ ಯುನಿವರ್ಸ್ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್ಗಳನ್ನು ಹಾಕುತ್ತಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ