DAKSHINA KANNADA
ಕೊ*ಲೆ ಮಾಡಿ ತಲೆಮರೆಸಿದ್ದ ಆ*ರೋಪಿ; ಎರಡು ವರ್ಷದ ಬಳಿಕ ಬಂಧನ
ಮಂಗಳೂರು: ಕೊಡಗು ಜಿಲ್ಲೆಯ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ 2022ರ ಫೆಬ್ರವರಿ ತಿಂಗಳಿನಲ್ಲಿ ನಡೆದ ಮಹಿಳೆಯ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆ*ರೋಪಿಯನ್ನು ಕೊಡಗು ಪೊಲೀಸರು ಸುಮಾರು ಎರಡು ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸಿದ್ದಾರೆ.
ಟಿ. ಶೆಟ್ಟಿಗೇರಿ ಗ್ರಾಮದ ನಿವಾಸಿ ರಾಜೇಶ್ (42) ಬಂಧಿತ ಆ*ರೋಪಿ. ಅದೇ ಗ್ರಾಮದ ನಿವಾಸಿ ಪ್ರೇಮಾ ಎಂಬಾಕೆಯನ್ನು ಕ*ತ್ತಿಯಿಂದ ಕ*ಡಿದು ಕೊ*ಲೆ ಮಾಡಿದ್ದಲ್ಲದೆ ಜತೆಗಿದ್ದ ಪ್ರೇಮಾ ಅವರ ಸಹೋದರಿ ವೀಣಾ ಅವರ ಮೇಲೂ ಹ*ಲ್ಲೆ ಮಾಡಿ ಗಂ*ಭೀರವಾಗಿ ಗಾಯಗೊಳಿಸಿದ್ದ ಆರೋಪ ರಾಜೇಶ್ ಮೇಲಿತ್ತು. ಆ*ರೋಪಿ ರಾಜೇಶ್ ಮೊದಲಿಗೆ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ಪ್ರೇಮಾ ಅವರನ್ನು ಕೊ*ಲೆ ಮಾಡಲು ಯತ್ನಿಸಿದ್ದ. ಈ ಪ್ರಯತ್ನ ವಿಫಲವಾದಾಗ ಪ್ರೇಮಾ ಅವರು ಟಿ. ಶೆಟ್ಟಿಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅನ್ನು ಬೈಕ್ನಲ್ಲಿ ಹಿಂಬಾಲಿಸಿದ್ದ. ಬಳಿಕ ಪ್ರೇಮಾ ಹಾಗೂ ಅವರ ಸಹೋದರಿ ವೀಣಾ ಅವರು ಬಸ್ನಿಂದ ಇಳಿದು ಹೋಗುತ್ತಿದ್ದಾಗ ರಾಜೇಶ್ ಹಿಂಬಾಲಿಸಿದ್ದ. ‘ನನ್ನ ಮಾವನನ್ನು ಯಾಕೆ ಕೊಂ*ದೆ ಎಂದು ಪ್ರೇಮಾಳನ್ನು ಪ್ರಶ್ನಿಸಿ ಕತ್ತಿ*ಯಿಂದ ಕ*ಡಿದ ಆ*ರೋಪಿ, ವೀಣಾ ಅವರಿಗೆ ಮಾರ*ಣಾಂತಿಕವಾಗಿ ಹ*ಲ್ಲೆ ಮಾಡಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಘಟನೆಯ ಬಳಿಕ ರಾಜೇಶ್ ತಲೆಮರೆಸಿಕೊಂಡಿದ್ದನು.
DAKSHINA KANNADA
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
ಮಂಗಳೂರು; ಕೌನ್ ಬನೇಗಾ ಕರೋಡ್ಪತಿಯಲ್ಲಿ ಭಾಗವಹಿಸಬೇಕೆಂದು ಎರಡು ವರ್ಷದಿಂದ ಮಾಡುತ್ತಿದ್ದ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದಂತಾಗಿದೆ. ಕಳೆದ ಬಾರಿ 0.03 ಸೆಕೆಂಡ್ ಅಂತರದಿಂದ ಜಸ್ಟ್ ಮಿಸ್ ಆಗಿದ್ದು, ಈ ವರ್ಷ ಆ ಸುವರ್ಣಾವಕಾಶ ದೊರೆತು ತಂದೆಯ ಆಸೆಯೂ ನೆರವೇರಿದಂತಾಗಿದೆ.
ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೆಬಿಸಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ 11 ಪ್ರಶ್ನೆಗಳಿಗೆ ಸರಿ ಉತ್ತರ ನೀಡಿದ್ದ ಪಂಪ್ವೆಲ್ ನಿವಾಸಿ ಅಪೂರ್ವ ಶೆಟ್ಟಿ.
ನಿನ್ನೆ (ಸೆ.27) ಅವರ ಕಾರ್ಯಕ್ರಮವು ಪ್ರಸಾರಗೊಂಡಿದ್ದು, ಅಪೂರ್ವ ಶೆಟ್ಟಿಯವರು ಖುಷಿಯಿಂದ ತೇಲಾಡುತ್ತಿದ್ದಾರೆ. ತಾನು ಕೆಬಿಸಿ 16 ರಲ್ಲಿ 11 ಪ್ರಶ್ನೆಗಳಿಗಾದರೂ ಉತ್ತರಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ.
ಪಧವೀದರರಾಗಿರುವ ಅಪೂರ್ವ ಶೆಟ್ಟಿ ಸದ್ಯ ಯುಪಿಎಸ್ಸಿ ತಯಾರಿಯಲ್ಲಿದ್ದಾರೆ.
DAKSHINA KANNADA
ಕೊ*ಲೆಯಲ್ಲಿ ಅಂ*ತ್ಯವಾಯಿತು ಸ್ನೇಹಿತರಿಬ್ಬರ ಜಗಳ; ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಆ*ರೋಪಿ ಅರೆಸ್ಟ್
ಮಂಗಳೂರು: ಮಂಗಳೂರಿನ ತೋಟಾಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಸಮೀಪ ಸೆಪ್ಟಂಬರ್ 21 ರಂದು ನಡೆದಿದ್ದ ಕೊ*ಲೆ ಪ್ರಕರಣವನ್ನು ಭೇದಿಸುವಲ್ಲಿ ಪಣಂಬೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬೊಬ್ಬರ್ಯ ದೈವಸ್ಥಾನದ ಹಿಂಬದಿಯ ಸಮುದ್ರ ಕಿನಾರೆಯ ಬಳಿ ಬಾಗಲಕೋಟೆ ಮೂಲದ 39 ವರ್ಷದ ಬಸವರಾಜ ವಡ್ಡರ್ ಎಂಬಾತನ ಕೊ*ಲೆ ನಡೆದಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ತೋಟಾಬೆಂಗ್ರೆಯ ನಿವಾಸಿಯಾಗಿರುವ ಧರ್ಮರಾಜ್ ಸುವರ್ಣ ಎಂಬಾತನನ್ನು ಬಂಧಿಸಿದ್ದಾರೆ. ಕೊ*ಲೆ ನಡೆಸಿ ಪರಾರಿಯಾಗಿ ಕೇರಳದ ಕೊಝಿಕೋಡ್ ಜಿಲ್ಲೆಯ ಚೊಂಬಾಳ ಎಂಬಲ್ಲಿ ಆರೋಪಿ ಅಡಗಿಕೊಂಡಿದ್ದ.
ಆರೋಪಿ ಹಾಗೂ ಕೊಲೆಯಾದ ಬಸವರಾಜ್ ವಡ್ಡರ್ ಕೆಲ ಸಮಯದಿಂದ ಸ್ನೇಹಿತರಾಗಿದ್ದರು. ಇತ್ತೀಚೆಗೆ ಆರೋಪಿ ಧರ್ಮರಾಜ್ ಖರೀದಿ ಮಾಡಿದ್ದ ಮೊಬೈಲ್ ಫೋನ್ ಪಡೆದುಕೊಂಡಿದ್ದ ಬಸವರಾಜ್ ವಡ್ಡರ್ ಅದನ್ನು ಹಿಂತಿರುಗಿಸಿರಲಿಲ್ಲ. ಅಷ್ಟೇ ಅಲ್ಲದೆ ಮೊಬೈಲ್ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಆರೋಪಿಯು ಮರದ ಸಲಾಕೆಯಿಂದ ಬಸವರಾಜ್ ಮೇಲೆ ಹ*ಲ್ಲೆ ನಡೆಸಿದಾಗ ಆತ ಮೃ*ತ ಪಟ್ಟಿದ್ದ.
DAKSHINA KANNADA
ಐಶ್ವರ್ಯಾ ರೈಗೆ ಆರೋಗ್ಯ ಸಮಸ್ಯೆ..! ಪೋಸ್ಟ್ ವೈರಲ್..!
ಮಂಗಳೂರು : ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ ವಿಚಾರವಾಗಿ ಇತ್ತೀಚೆಗೆ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಸಾಕಷ್ಟು ಸುದ್ದಿಯಾಗಿದ್ದರು. ಐಶ್ವರ್ಯಾ ರೈ ಹಾಗೂ ಅಭಿಶೇಖ್ ಬಚ್ಚನ್ ಡಿವೋರ್ಸ್ ವಿಚಾರವಾಗಿ ದಿನಕ್ಕೊಂದು ಸುದ್ದಿ ಹರಡುತ್ತಿತ್ತು. ಈ ನಡುವೆ ತನ್ನ ಸೌಂದರ್ಯದ ಕಡೆ ಗಮನ ಕೊಡುತ್ತಿದ್ದ ಐಶ್ವರ್ಯಾ ರೈ ಇದೀಗ ತೂಕ ಏರಿಸಿಕೊಂಡ ವಿಚಾರವಾಗಿ ಸುದ್ದಿಯಾಗಿದ್ದಾರೆ.
ಐಷಾರಾಮಿ ಬ್ರಾಂಡ್ ಲೋರಿಯಲ್ನ ಜಾಗತಿಕ ರಾಯಭಾರಿಯಾಗಿರುವ ಐಶ್ವರ್ಯಾ ಇತ್ತೀಚೆಗೆ 2024 ರ ಫ್ಯಾಶನ್ ವೀಕ್ನಲ್ಲೂ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಧರಿಸಿದ್ದ ಕೆಂಪು ಬಣ್ಣದ ಉಡುಗೆ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಸೋಶಿಯಲ್ ಮೀಡಿಯಾದಲ್ಲಿ ಬಾಡಿ ಶೆಮಿಂಗ್ ರೀತಿಯಲ್ಲಿ ನಟಿ ಟ್ರೋಲ್ ಆಗುತ್ತಿದ್ದಾರೆ. ಪೋಸ್ಟ್ ಒಂದರಲ್ಲಿ “ನಾನು ಐಶ್ವರ್ಯ ಅವರನ್ನು ಸಾಕಷ್ಟು ವರ್ಷಗಳಿಂದ ನೋಡುತ್ತಿದ್ದೇನೆ. ಐಶ್ವರ್ಯಾ ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದಾಗಿ ಡಯೆಟ್ಗೆ ಮಾಡುತ್ತಿಲ್ಲ, ಜೊತೆಗೆ ತೂಕ ಇಳಿಸಿಕೊಳ್ಳುವ ಯಾವುದೇ ಔಷಧಿಗಳನ್ನು ಆಕೆ ತೆಗೆದುಕೊಳ್ಳುತ್ತಿಲ್ಲ. ಆದರೆ ನಾನು ಅವರ ಆರೋಗ್ಯ ಸಮಸ್ಯೆಯ ಬಗ್ಗೆ ಬಹಿರಂಗಪಡಿಸುವುದಿಲ್ಲ” ಎಂದು ಬರೆಯಲಾಗಿದೆ. ಆದ್ರೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಡಿಲೀಟ್ ಕೂಡಾ ಮಾಡಲಾಗಿದೆ.
ಐಶ್ವರ್ಯಾ ರೈ ಕುರಿತಾದ ಇಂತಹ ವಿಚಾರಗಳು ಸುದ್ದಿಯಾಗುತ್ತಿರುವುದು ಇದೇನು ಹೊಸದಲ್ಲವಾದ್ರೂ, ಐಶ್ವರ್ಯ ತೂಕ ಹೆಚ್ಚಿಸಿಕೊಂಡಿದ್ದಾರೆ ಅನ್ನೋದು ಕೂಡಾ ಸುಳ್ಳಲ್ಲ. ಇತ್ತೀಚೆಗೆ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಾಗ ಅವರು ದಪ್ಪವಾಗಿ ಕಾಣಿಸಿಕೊಂಡಿದ್ದು ಈ ಎಲ್ಲಾ ಚರ್ಚೆಗಳಿಗೆ ಕಾರಣವಾಗಿದೆ.
- FILM6 days ago
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
- DAKSHINA KANNADA6 days ago
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!
- LATEST NEWS5 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS5 days ago
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ