DAKSHINA KANNADA
ಬ್ರಿಟೀಷರ ಕಾಲದಲ್ಲಿದ್ದ ಯಕ್ಷಗಾನ ಸಂಘದ ಸಾಧನೆ ದಾಖಲಾರ್ಹ-ರವಿಚಂದ್ರ ಶೆಟ್ಟಿ
Published
2 years agoon
By
Adminಮಂಗಳೂರು: ಬ್ರಿಟಿಷರ ಆಳ್ವಿಕೆಯ ಕಾಲದಲ್ಲೂ ಇದ್ದ ಯಕ್ಷಗಾನ ಸಂಘ ಎನ್ನುವುದು ನಿಜಕ್ಕೂ ಆಶ್ಚರ್ಯದ ವಿಚಾರ. ಅಗಲಿದ ಕಲಾವಿದರ ಸಂಸ್ಮರಣೆ, ಹಿರಿಯ ಕಲಾವಿದರ ಸಂಮಾನ ನಿಜಕ್ಕೂ ಅಭಿನಂದನೀಯ. ಇನ್ನಷ್ಟು ಕೀರ್ತಿ ಈ ಸಂಘಕ್ಕೆ ಸಿಗಲಿ ಎಂದು ಹೋಪ್ ಕಾಮ್ಸ್, ಮಂಗಳೂರು ಇದರ ಪ್ರಬಂಧಕ ರವಿಚಂದ್ರ ಶೆಟ್ಟಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ, ವಾಗೀಶ್ವರೀ ಯಕ್ಷಗಾನ ಸಂಘದ ಶತಮಾನೋತ್ಸವದ 23ನೆಯ ಸರಣಿಯ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.
ಕೀರ್ತಿಶೇಷ ಕಾವೂರು ಕೇಶವ ಇವರ ಸಂಸ್ಮರಣೆಯನ್ನು ಅಶೋಕ್ ಬೋಳೂರು ನಿರ್ವಹಿಸಿದರು. ಹಲವು ಪ್ರಸಂಗಗಳನ್ನು ರಚಿಸಿ, ಹಲವು ಕಲಾವಿದರನ್ನು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಪ್ರಖ್ಯಾತ ಸ್ತ್ರೀ ವೇಷಧಾರಿಯಾಗಿ, ಮೇಳಗಳ ಸಂಚಾಲಕರಾಗಿ ಯಕ್ಷಗಾನ ಕ್ಷೇತ್ರಕ್ಕೆ ಕೇಶವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಸುಬ್ರಹ್ಮಣ್ಯ ಹೊಳ್ಳ, ಶಕ್ತಿನಗರ ಇವರ ಅಭಿನಂದನೆಯನ್ನು ಶಿವಪ್ರಸಾದ್ ಪ್ರಭು ಮಾಡಿದರು. ವೇಷಧಾರಿಯಾಗಿ ಹಲವು ಮೇಳಗಳಲ್ಲಿ ದುಡಿದು ಇತ್ತೀಚಿಗೆ ಮುಖ ವರ್ಣಿಕೆಯ ವೃತ್ತಿಯಲ್ಲಿ ಕಲಾ ಸೇವೆಯನ್ನು ಮಾಡುತ್ತಿದ್ದಾರೆ.
ನಮ್ಮ ಸಂಘದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಮಾಡುತ್ತಿರುವ ಹೊಳ್ಳರನ್ನು ಸಂಮಾನಿಸುವುದು ಸಂತೋಷದ ವಿಷಯ ಎಂದರು.
ಸುಬ್ರಹ್ಮಣ್ಯ ಹೊಳ್ಳ, ಸಂಘಕ್ಕೆ ತಾನು ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಂಮಾನಿಸಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ವಿಮರ್ಶಕರ ಸಂಖ್ಯೆ ಪ್ರತಿಯೊಂದು ಕಲಾಪ್ರಕಾರಗಳಲ್ಲಿ ನಾವು ಹೆಚ್ಚಾಗಿ ಕಾಣುತ್ತೇವೆ. ವಿಮರ್ಶೆಯನ್ನೇ ಮಾಡುತ್ತಾ ತಲೆಯ ಮಾಧುರ್ಯವನ್ನು ಸವಿಯುವಲ್ಲಿ ಅವರು ಅಸಮರ್ಥರಾಗುತ್ತಾರೆ.
ಕಲಾಪ್ರಕಾರವನ್ನು ಒಟ್ಟಂದದಲ್ಲಿ ಸವಿಯುವಂತಹ ಮನಸ್ಥಿತಿ ಬಂದಾಗ ಕಲೆಗಳು ಮತ್ತಷ್ಟು ಬೆಳೆಯುವುದಕ್ಕೆ ಕಾರಣವಾಗುತ್ತದೆ. ನೂರು ವರ್ಷಗಳ ಕಾಲ ಕ್ರಿಯಾಶೀಲರಾಗಿ, ನಿರಂತತೆಯನ್ನು ಸಾಧಿಸಿಕೊಂಡು ಸಂಘವನ್ನು ನಡೆಸಿಕೊಂಡು ಬಂದಂತಹ ಸಂಘ ಇದು.
ಸ್ವಾತಂತ್ರ್ಯೋತ್ಸವದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ನೂರು ವರ್ಷಗಳ ಯಕ್ಷಗಾನ ಕಲಾವರ್ಧಕ ಸಂಘದ ಬಗ್ಗೆ ಪತ್ರಿಕೆಯಲ್ಲಿ ಬರೆಯಬೇಕಾದುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ. ಶ್ರಮಿಕರ ರಂಗಭೂಮಿಯೇ ಯಕ್ಷಗಾನ. ಯಕ್ಷಗಾನದಲ್ಲಿ ಗಳಿಸುವಂತಹುದು ಅರಿವು ಮಾತ್ರ.
ಅರಿವು ಸಂಸ್ಕಾರವನ್ನು ನೀಡುತ್ತದೆ ಅದೇ ರೀತಿ ಸಂಸ್ಕೃತಿಯನ್ನು ಬೆಳೆಸುತ್ತದೆ ಅಂತಹ ಒಂದು ಯಕ್ಷಗಾನ ಕಲಾಸಂಘದ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣ ” ಎಂದು ಕಣಿಪುರ ಪತ್ರಿಕೆಯ ಪ್ರಧಾನ ಸಂಪಾದಕ, ಎಂ.ನಾರಾಯಣ ಚಂಬಲ್ತಿಮಾರ್ ತಿಳಿಸಿದರು.
ಬಿ. ಟಿ. ಕುಲಾಲ್ ಸಂಮಾನ ಪತ್ರವನ್ನು ವಾಚಿಸಿದರು.
ಸಂಘದ ಅಧ್ಯಕ್ಷ ಶ್ರೀನಾಥ್ ಪ್ರಭು,ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಸಿ. ಎಸ್, ಭಂಢಾರಿ,ಕೋಶಾಧಿಕಾರಿ ಶಿವಪ್ರಸಾದ್ ಪ್ರಭು, ಪ್ರಧಾನ ಕಾರ್ಯದರ್ಶಿ ಸಂಜಯ ಕುಮಾರ್ ರಾವ್, ಅಶೋಕ್ ಬೋಳೂರು ಉಪಸ್ಥಿತರಿದ್ದರು.
ಶ್ರೀಮತಿ ಶೋಭಾ ಐತಾಳ್ ಕಾರ್ಯಕ್ರಮ ನಿರೂಪಿಸಿದರು.
DAKSHINA KANNADA
ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್
Published
14 hours agoon
12/01/2025By
NEWS DESK3ಉಳ್ಳಾಲ : ಕೊಣಾಜೆ ದೇರಳಕಟ್ಟೆ ಸಮೀಪದಲ್ಲಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಲವ- ಕುಶ ಜೋಡುಕರೆ ನರಿಂಗಾನ ಜೋಡುಕರೆ ಕಂಬಳೋತ್ಸವಕ್ಕೆ ಶನಿವಾರ ಚಾಲನೆ ದೊರಕಿದ್ದು, ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದರು.
ಸಿಎಂ ಅವರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ಆರತಿ ಬೆಳಗಿ ಸ್ವಾಗತಿಸಲಾಯಿತು. ಸ್ಪೀಕರ್ ಯು ಟಿ ಖಾದರ್ ಸಿಎಂ ಅವರನ್ನು ವೇದಿಕೆಗೆ ಕರೆದುಕೊಂಡು ಬಂದರು. ಸಭಾ ಕಾರ್ಯಕ್ರಮವನ್ನು ಸಿಎಂ ಅವರು ಉದ್ಘಾಟಿಸಿದರು.
ಇದನ್ನೂ ಓದಿ: ನರಿಂಗಾನ ಕಂಬಳದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ; ತುಳುವಿಗೆ ಎರಡನೇ ರಾಜ್ಯಭಾಷೆ ಸ್ಥಾನಮಾನದ ಭರವಸೆ
ಇಂದಿನ ಕಂಬಳ ಕಾರ್ಯಕ್ರಮಕ್ಕೆ ಬಂದಿದ್ದ ನಟಿ ಶಾನ್ವಿ ಶ್ರೀವಾಸ್ತವ್, ಕಂಬಳದ ಓಟವನ್ನು ಬೆರಗುಗಣ್ಣಿನಿಂದ ವೀಕ್ಷಣೆ ಮಾಡಿದರು. ಮಾತ್ರವಲ್ಲದೆ ಕಂಬಳದ ಓಟವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದುಕೊಂಡರು.
ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತೆಂಗಿನಕಾಯಿ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ಎಳನೀರು ಭರ್ಜರಿ ಮಾರಾಟವಾದ ಹಿನ್ನೆಲೆ ತೆಂಗಿನಕಾಯಿ ಕಡಿಮೆಯಾಗಿದ್ದು, ಈ ಹಿನ್ನೆಲೆ ದರ ಏರಿಕೆಯಾಗಿದೆ.
ಈ ಮೊದಲು ಒಂದು ತೆಂಗಿನಕಾಯಿಗೆ 20, 25, 30 ರೂ. ದರ ಇತ್ತು. ಈಗ 65 ರೂ.ವರೆಗೆ ಮಾರಾಟವಾಗುತ್ತಿದೆ. ಕೆಜಿಗೆ 32-33 ಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಈಗ 60 ರೂ.ಗೆ ತಲುಪಿದೆ. ತೆಂಗಿನ ಇಳುವರಿ ಕಡಿಮೆಯಾಗಿದ್ದು, ಎಳನೀರಿಗೂ ಭಾರಿ ಪ್ರಮಾಣದಲ್ಲಿ ಕೊಯ್ದು ಮಾಡುವುದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.
Ancient Mangaluru
ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
Published
15 hours agoon
12/01/2025By
NEWS DESK2ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕುಂಬಳೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಕಂದಮ್ಮನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.
ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎನ್ನಲಾಗಿದೆ.
LATEST NEWS
ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್
60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
ಪಿಲಿಕುಳ ಕಂಬಳ ವಿಚಾರಣೆ ಜನವರಿ 21 ಕ್ಕೆ ಮುಂದೂಡಿಕೆ
ಈ ವಾರ ಬಿಗ್ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿ ಇವರೇ..!
ಮಂಗಳೂರು: ಜ. 31 ರಿಂದ ಫೆ. 2 ರ ತನಕ ತಣ್ಣೀರುಬಾವಿ ಬೀಚ್ ಫೆಸ್ಟಿವಲ್
Trending
- FILM7 days ago
ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
- BIG BOSS2 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- FILM5 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- LATEST NEWS3 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!